ಡಿಕೆಶಿ ಹೇಳಿಕೆಗೆ ಖಂಡನೆ


Team Udayavani, Oct 21, 2018, 1:05 PM IST

bid-1.jpg

ಬೀದರ: ಪ್ರತ್ಯೇಕ ಲಿಂಗಾಯತ ಧರ್ಮ ವಿಚಾರದಲ್ಲಿ ಕಾಂಗ್ರೆಸ್‌ ತಪ್ಪು ಮಾಡಿತ್ತು ಎನ್ನುವ ಹೇಳಿಕೆ ನೀಡಿದ ಸಚಿವ ಡಿ.ಕೆ. ಶಿವಕುಮಾರ ಹೇಳಿಕೆಯನ್ನು ಲಿಂಗಾಯತ ಸಮನ್ವಯ ಸಮಿತಿ ಮುಖಂಡರು ಖಂಡಿಸಿದ್ದಾರೆ.

ನಗರದಲ್ಲಿ ಶನಿವಾರ ನಡೆದ ಸುದ್ದಿಗೋಷ್ಠಿಯಲ್ಲಿ ಭಾಲ್ಕಿ ಹಿರೇಮಠ ಸಂಸ್ಥಾನ ಹಾಗೂ ಲಿಂಗಾಯತ ಹೋರಾಟದ ಮುಖಂಡರಾದ ಡಾ.ಬಸವಲಿಂಗ ಪಟ್ಟದೇವರು ಮಾತನಾಡಿ, ಡಿ.ಕೆ. ಶಿವಕುಮಾರ ರಾಜ್ಯದ ಲಿಂಗಾಯತ ಸಮುದಾಯಕ್ಕೆ ಬಹಿರಂಗವಾಗಿ ಕ್ಷಮೆಯಾಚಿಸಬೇಕು. ಬೇರೆ ಧರ್ಮಕ್ಕೆ ಮಾನ್ಯತೆ ದೊರೆತ ಸಂದರ್ಭದಲ್ಲಿ ಮಾತನಾಡದ ಅವರು, ಇದೀಗ ಲಿಂಗಾಯತ ಸಮುದಾಯದ ಬಗ್ಗೆ ಮಾತನಾಡುವ ಅವಶ್ಯಕತೆ ಏನಿತ್ತು? ರಾಜಕೀಯ ಸ್ವಾರ್ಥಕ್ಕೆ ಲಿಂಗಾಯತ ಸಮುದಾಯ ಬಳಕೆ ಮಾಡುತ್ತಿರುವುದು ಸರಿಯಲ್ಲ. ಮಾಡಿದ ತಪ್ಪಿಗೆ ಫಲ ಅನುಭವಿಸುತ್ತಾರೆ ಎಂದರು.

ಈ ಹಿಂದಿನ ಸರ್ಕಾರದಲ್ಲಿ ಸಚಿವರಾಗಿದ್ದ ಡಿಕೆಶಿ ಸಚಿವ ಸಂಪುಟದಲ್ಲಿ ಲಿಂಗಾಯತ ಸಮುದಾಯಕ್ಕೆ ಬೆಂಬಲ ನೀಡಿದ್ದರು. ಇದೀಗ ತಮ್ಮ ಸ್ವಾರ್ಥ ರಾಜಕೀಯಕ್ಕಾಗಿ ಅಥವಾ ಯಾರದೋ ಪ್ರಭಾವಕ್ಕೊಳಗಾಗಿ ಈ ರೀತಿ ಹೇಳಿಕೆ ನೀಡುವುದು ಸರಿಯಲ್ಲ. ಅಂದಿನ ಸರ್ಕಾರ ಲಿಂಗಾಯತ ಸಮುದಾಯದ ಬೇಡಿಕೆಗಳನ್ನು ಸರಳವಾಗಿ ಒಪ್ಪಿಕೊಂಡಿಲ್ಲ. ಅನೇಕ ಹೋರಾಟದಿಂದ ಸರ್ಕಾರ ಸಮುದಾಯದ ಬೇಡಿಕೆಗಳನ್ನು ಆಲಿಸಿ, ಸಮಿತಿ ರಚಿಸಿ ವರದಿ ಪಡೆದ ನಂತರ ಅಲ್ಪಸಂಖ್ಯಾತ ಮಾನ್ಯತೆ ನೀಡುವ ಬಗ್ಗೆ ತೀರ್ಮಾನಕ್ಕೆ ಬರಲಾಗಿತ್ತು.

ಕೇಂದ್ರ ಸರ್ಕಾರಕ್ಕೂ ಪ್ರಸ್ತಾವನೆ ಸಲ್ಲಿಸಲಾಗಿತ್ತು. ಎಲ್ಲ ಸಭೆಗಳಲ್ಲಿ ಡಿಕೆಶಿ ಹಾಜರಿದ್ದು, ಬೆಂಬಲ ಸೂಚಿಸಿದ್ದರು. ಸದ್ಯ ಸಾರ್ವಜನಿಕವಾಗಿ ನೀಡಿದ ಹೇಳಿಕೆಗೆ ಕೂಡಲೇ ಕ್ಷಮೆ ಯಾಚಿಸಬೇಕು. ಅಲ್ಲದೆ, ರಾಜಕೀಯ ಸ್ವಾರ್ಥಕ್ಕಾಗಿ ಲಿಂಗಾಯತ ಸಮುದಾಯದ ಪದ ಬಳಕೆ ಮಾಡಬಾರದು ಎಂದರು. 

ಬಸವ ಸೇವಾ ಪ್ರತಿಷ್ಠಾನದ ಅಕ್ಕ ಅನ್ನಪೂರ್ಣ ಮಾತನಾಡಿ, ಡಿ.ಕೆ. ಶಿವಕುಮಾರ ಮಾನಸಿಕ ಸ್ಥಿರತೆ ಕಳೆದುಕೊಂಡಿದ್ದಾರೆ. ಅವರ ಹಗರಣಗಳನ್ನು ಮುಚ್ಚಿಕೊಳ್ಳಲು ಅಥವಾ ಯಾವುದೋ ಪ್ರಭಾವಕ್ಕೆ ಒಳಗಾಗಿ ಈ ರೀತಿ ಹೇಳಿಕೆ ನೀಡುವುದು ಸರಿಯಲ್ಲ.

ಅದು ರಂಭಾಪುರಿ ಶ್ರೀಗಳ ಕಾರ್ಯಕ್ರಮದಲ್ಲಿ ಡಿಕೆಶಿ ಲಿಂಗಾಯತ ಸಮುದಾಯದ ಬಗ್ಗೆ ಮಾತನಾಡಿರುವುದು ನೋಡಿದರೆ ಅನೇಕ ಅನುಮಾನಗಳು ಹುಟ್ಟುವಂತೆ ಮಾಡಿದೆ. ಡಿಕೆಶಿ ಕೇವಲ ಲಿಂಗಾಯತ ಸಮುದಾಯಕ್ಕೆ ಅವಮಾನಿಸಿಲ್ಲ ಹಿಂದಿನ ಸರ್ಕಾರಕ್ಕೂ ಅವಮಾನಿಸಿದ್ದಾರೆ. ಆದ್ದರಿಂದ ಕೂಡಲೇ ಬಹಿರಂಗ ಕ್ಷಮೆ ಕೇಳಬೇಕು. ಸರ್ಕಾರದ ಪ್ರತಿನಿಧಿಯಾಗಿ ಲಿಂಗಾಯತ ಧರ್ಮದವರ ಭಾವನೆಗಳಿಗೆ ಧಕ್ಕೆ ತರುವ ಕೆಲಸ ಮಾಡಿರುವುದು ಖಂಡನಿಯ ಎಂದರು.

ಲಿಂಗಾಯತ ಸಮುದಾಯದ ವ್ಯಕ್ತಿ ಅಲ್ಲದ ಡಿಕೆಶಿ ಲಿಂಗಾಯತ ಧರ್ಮದ ಬಗ್ಗೆ ಮಾತನಾಡುವುದು ತಪ್ಪು. ಸಿದ್ದರಾಮಯ್ಯ ನೇತೃತ್ವದ ಸರ್ಕಾರ ಲಿಂಗಾಯತ ಸಮುದಾಯದ ವಿವಿಧ ಬೇಡಿಕೆಗಳಿಗೆ ಸ್ಪಂದಿಸುವ ಉತ್ತಮ ಕೆಲಸ ಮಾಡಿದೆ. ಮಾನ್ಯತೆಗಾಗಿ ಸಮಿತಿ ರಚಿಸಿ ವರದಿ ತಯಾರಿಸಿ ಕೇಂದ್ರ ಸರ್ಕಾರಕ್ಕೆ ಶಿಫಾರಸು ಕಳಿಸಿದ್ದಾರೆ ಎಂದರು.

ದೆಹಲಿ ಬಸವ ಮಂಟಪದ ಚನ್ನಬಸವಾನಂದ ಸ್ವಾಮೀಜಿ ಮಾತನಾಡಿ, ಈ ಹಿಂದಿನ ಸರ್ಕಾರದಲ್ಲಿ ಸಚಿಚರಾಗಿದ ಡಿಕೆಶಿ ಪ್ರತ್ಯೇಕ ಲಿಂಗಾಯ ಹೋರಾಟಕ್ಕೆ ಬೆಂಬಲಿಸಿದ್ದು, ಇದೀಗ ತಪ್ಪುಮಾಡಿದೇವೆ ಎಂದು ಹೇಳುತ್ತಿರುವುದು ಖಂಡನೀಯ. ಕೂಡಲೆ ಡಿಕೆಶಿ ಕ್ಷಮೆ ಕೇಳದಿದ್ದರೆ, ಲಿಂಗಾಯತ ಹೋರಾಟದ ಜೊತೆಗೆ ಡಿಕೆಶಿ ವಿರುದ್ಧವೂ ಪ್ರತಿಭಟನೆ ನಡೆಸಲಾಗುವುದು. ಡಿಸೆಂಬರ್‌ ತಿಂಗಳಲ್ಲಿ ದೆಹಲಿಯಲ್ಲಿ ಬೃಹತ್‌ ಪ್ರತಿಭಟನಾ ರ್ಯಾಲಿ ನಡೆಯಲಿದ್ದು, ಪ್ರತ್ಯೇಕ ಲಿಂಗಾಯತ ಧರ್ಮಕ್ಕೆ ಕೇಂದ್ರ ಸರಕಾರ ಒಪ್ಪಿಗೆ ಸೂಚಿಸುವ ನಂಬಿಕೆ ಇದೆ. ಕೇಂದ್ರ ಸರಕಾರ ಸ್ಪಂದಿಸದಿದ್ದರೆ ಎಲ್ಲ ಮುಖಂಡರು ಸೇರಿ ಸಭೆ ನಡೆಸಿ ಮುಂದಿನ ತಿರ್ಮಾನಗಳನ್ನು ತೆಗೆದುಕೊಳ್ಳಲಾಗುವುದು ಎಂದರು.

ಸಿದ್ಧರಾಮ ಬೆಲ್ದಾಳ ಶರಣರು ಮಾತನಾಡಿ, ಡಿಕೆಶಿಗೆ ಕೆಡಗಾಲ ಬಂದತ್ತಿದ್ದು, ಇಂತಹ ಹೇಳಿಕೆ ನೀಡುತ್ತಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದರು. ರಾಜಕೀಯ ಸ್ವಾರ್ಥಕ್ಕೆ ಸಮಾಜ ಬಲಿಪಶುಮಾಡುವುದು ಸರಿಯಲ್ಲ. ವೀರಶೈವ ಲಿಂಗಾಯತ ಪುರಾತನ ಎಂದು ಹೇಳುವವರು ಬೇಕಾದರೆ ಬಹಿರಂಗವಾಗಿ ಚರ್ಚೆಗೆ ಬರಲಿ. ದಾಖಲೆಗಳನ್ನು ನೀಡಲಿ ಎಂದ ಅವರು, ಲಿಂಗಾಯತ ಧರ್ಮಕ್ಕೆ ಬಸವಣ್ಣನವರೆ
ಗುರು ಎಂಬುದರ ದಾಖಲೆಗಳನ್ನು ನೀಡುತ್ತೇನೆ.

ಸತ್ಯ ಅರಿಯದವರು ಸಮಾಜದಲ್ಲಿ ಗೊಂದಲ ಸೃಷ್ಟಿ ಮಾಡುತ್ತಿದ್ದಾರೆ ಎಂದರು. ಬಸವರಾಜ ಧನ್ನೂರ್‌, ರಾಜೇಂದ್ರ ಕುಮಾರ ಗಂದಗೆ, ಬಿ.ಜಿ. ಶೆಟಗಾರ, ಶಿವರಾಜ ಪಾಟೀಲ, ಶ್ರೀಕಾಂತ ಸ್ವಾಮಿ ಇನ್ನಿತರರು ಇದ್ದರು.

ಟಾಪ್ ನ್ಯೂಸ್

Road mishap: ಆಟೋ ರಿಕ್ಷಾ – ಕಂಟೇನರ್ ಅಪಘಾತ; ಓರ್ವ ಮೃತ್ಯು, ನಾಲ್ವರಿಗೆ ಗಾಯ

Road mishap: ಆಟೋ ರಿಕ್ಷಾ – ಕಂಟೇನರ್ ಅಪಘಾತ; ಓರ್ವ ಮೃತ್ಯು, ನಾಲ್ವರಿಗೆ ಗಾಯ

Lok Sabha Polls: ಮಾ. 21 ರಂದು ನನ್ನ ರಾಜಕೀಯ ನಡೆಯ ಬಗ್ಗೆ ನಿರ್ಧಾರ: ಸಂಸದ ಸಂಗಣ್ಣ ಕರಡಿ

Lok Sabha Polls: ಮಾ. 21 ರಂದು ನನ್ನ ರಾಜಕೀಯ ನಡೆಯ ಬಗ್ಗೆ ನಿರ್ಧಾರ: ಸಂಸದ ಸಂಗಣ್ಣ ಕರಡಿ

Sandalwood: ಪ್ರೇಮಲೋಕ-2 ಐವತ್ತಕ್ಕೂ ಹೆಚ್ಚು ಸೆಟ್‌ನಲ್ಲಿ ಶೂಟಿಂಗ್‌!

Sandalwood: ಪ್ರೇಮಲೋಕ-2 ಐವತ್ತಕ್ಕೂ ಹೆಚ್ಚು ಸೆಟ್‌ನಲ್ಲಿ ಶೂಟಿಂಗ್‌!

Patanjali Ads case:‌ಖುದ್ದು ಹಾಜರಾಗಿ- ಬಾಬಾ ರಾಮ್‌ ದೇವ್‌, ಬಾಲಕೃಷ್ಣಗೆ ಸುಪ್ರೀಂ ಸಮನ್ಸ್

Patanjali Ads case:‌ಖುದ್ದು ಹಾಜರಾಗಿ- ಬಾಬಾ ರಾಮ್‌ ದೇವ್‌, ಬಾಲಕೃಷ್ಣಗೆ ಸುಪ್ರೀಂ ಸಮನ್ಸ್

Vande Bharat: 1.5 ವರ್ಷದಲ್ಲಿ ವಂದೇ ಭಾರತ್‌ಗೆ 50 ಬಾರಿ ಕಲ್ಲೆಸೆತ

Vande Bharat: 1.5 ವರ್ಷದಲ್ಲಿ ವಂದೇ ಭಾರತ್‌ಗೆ 50 ಬಾರಿ ಕಲ್ಲೆಸೆತ

Lok Sabha Elections: 10 ಲಕ್ಷ ಮೀರಿ ವಹಿವಾಟು ಮೇಲೆ ಐಟಿ ಕಣ್ಣು

Lok Sabha Elections: 10 ಲಕ್ಷ ಮೀರಿ ವಹಿವಾಟು ಮೇಲೆ ಐಟಿ ಕಣ್ಣು

Crime: ನಿಶ್ಚಿತಾರ್ಥವಾಗಿದ್ದ ಸೊಸೆಯನ್ನೇ ಹತ್ಯೆಗೈದ ಮಾವ

Crime: ನಿಶ್ಚಿತಾರ್ಥವಾಗಿದ್ದ ಸೊಸೆಯನ್ನೇ ಹತ್ಯೆಗೈದ ಮಾವ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-addasd

Bidar:ಜಿಲ್ಲೆಯ ಹಲವೆಡೆ ಬಿರುಗಾಳಿ ಸಹಿತ ಮಳೆ, ತಂಪಾದ ಇಳೆ

BJP FLAG

LS Election; ಮೂರು ದಶಕಗಳ ಕಾಂಗ್ರೆಸ್‌ ಕೋಟೆ ಈಗ ಬಿಜೆಪಿ ನೆಲೆ

1-asdsad

Admission ಪ್ರಚಾರಕ್ಕೆ ವಿದ್ಯಾರ್ಥಿನಿಯರಿಂದ ಡ್ಯಾನ್ಸ್!: ಕಾಲೇಜಿಗೆ ನೋಟಿಸ್

Hospitalized: ಮಾಜಿ ಸಚಿವ ಪ್ರಭು ಚವ್ಹಾಣ್ ಆರೋಗ್ಯದಲ್ಲಿ ಏರುಪೇರು; ಆಸ್ಪತ್ರೆಗೆ ದಾಖಲು

Hospitalized: ಮಾಜಿ ಸಚಿವ ಪ್ರಭು ಚವ್ಹಾಣ್ ಆರೋಗ್ಯದಲ್ಲಿ ಏರುಪೇರು; ಆಸ್ಪತ್ರೆಗೆ ದಾಖಲು

1-qweqweqw

BJP; ತಪ್ಪು ತಿಳುವಳಿಕೆ ಇದ್ದಲ್ಲಿ ಶಾಸಕರಲ್ಲಿ ಕ್ಷಮೆಯಾಚಿಸುತ್ತೇನೆ!: ಸಚಿವ ಖೂಬಾ

MUST WATCH

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

udayavani youtube

ಇಲ್ಲಿ ಗ್ರಾಹಕರನ್ನ ನೋಡಿಕೊಳ್ಳುವ ರೀತಿಗೆ ಎಂಥಹವರೂ ಫಿದಾ ಆಗ್ತಾರೆ

udayavani youtube

ಶ್ರೀ ಪಣಿಯಾಡಿ ಅನಂತಪದ್ಮನಾಭ ದೇವಸ್ಥಾನ,ಪಣಿಯಾಡಿ|

udayavani youtube

Rameshwaram Cafe: ಹೇಗಾಯ್ತು ಸ್ಫೋಟ? ಭಯಾನಕ ಸಿಸಿಟಿವಿ ದೃಶ್ಯ ನೋಡಿ

udayavani youtube

ಅಯೋಧ್ಯೆ ಶ್ರೀ ರಾಮನ ಸೇವೆಯಲ್ಲಿ ಉಡುಪಿಯ ಬೆಳ್ಕಳೆ ಚಂಡೆ ಬಳಗ

ಹೊಸ ಸೇರ್ಪಡೆ

Road mishap: ಆಟೋ ರಿಕ್ಷಾ – ಕಂಟೇನರ್ ಅಪಘಾತ; ಓರ್ವ ಮೃತ್ಯು, ನಾಲ್ವರಿಗೆ ಗಾಯ

Road mishap: ಆಟೋ ರಿಕ್ಷಾ – ಕಂಟೇನರ್ ಅಪಘಾತ; ಓರ್ವ ಮೃತ್ಯು, ನಾಲ್ವರಿಗೆ ಗಾಯ

9-udupi

ಶ್ರೀ ನಿತ್ಯಾನಂದ ಸ್ವಾಮಿ ಮಂದಿರ ಮಠ; ಧ್ಯಾನ ಮಂದಿರ, ಭೋಜನ ಶಾಲೆ ನಿರ್ಮಾಣ ಕಾಮಗಾರಿಗೆ ಚಾಲನೆ

Lok Sabha Polls: ಮಾ. 21 ರಂದು ನನ್ನ ರಾಜಕೀಯ ನಡೆಯ ಬಗ್ಗೆ ನಿರ್ಧಾರ: ಸಂಸದ ಸಂಗಣ್ಣ ಕರಡಿ

Lok Sabha Polls: ಮಾ. 21 ರಂದು ನನ್ನ ರಾಜಕೀಯ ನಡೆಯ ಬಗ್ಗೆ ನಿರ್ಧಾರ: ಸಂಸದ ಸಂಗಣ್ಣ ಕರಡಿ

Bhuvanam gaganam Teaser: ಭುವನಂ ಗಗನಂ ಟೀಸರ್‌ ಬಂತು

Bhuvanam gaganam Teaser: ಭುವನಂ ಗಗನಂ ಟೀಸರ್‌ ಬಂತು

Bharjari Gandu: ಟ್ರೇಲರ್‌ನಲ್ಲಿ ಭರ್ಜರಿ ಗಂಡು

Bharjari Gandu: ಟ್ರೇಲರ್‌ನಲ್ಲಿ ಭರ್ಜರಿ ಗಂಡು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.