ಸಾಹಿತಿಗಳು ಸಮಾಜಮುಖೀಯಾಗಲಿ


Team Udayavani, Oct 22, 2018, 12:08 PM IST

bid-1.jpg

ಬೀದರ: ದಮನಿತರು, ಶೋಷಿತರು, ದಲಿತ, ನಿರ್ಗತಿಕರ ಹಾಗೂ ಧ್ವನಿ ಇಲ್ಲದವರಿಗೆ ಧ್ವನಿಯಾಗಿ ಸಾಹಿತಿಗಳು ಸಮಾಜಮುಖೀಯಾಗಿ ಕಾರ್ಯ ನಿರ್ವಹಿಸಬೇಕು ಎಂದು ಸಾಹಿತಿ ಶಶಿಕಲಾ ವಸ್ತ್ರದ ಹೇಳಿದರು.

ನಗರದ ರಂಗಮಂದಿರದಲ್ಲಿ ಕರ್ನಾಟಕ ನಾಟಕ ಅಕಾಡೆಮಿ ಬೆಂಗಳೂರು, ಜಾನಪದ ಕಲಾವಿದರ ಬಳಗ ಮತ್ತು ರಂಗ ತರಂಗ ಸಾಮಾಜಿಕ ಮತ್ತು ಸಾಂಸ್ಕೃತಿಕ ಟ್ರಸ್ಟ್‌ ಬೀದರ ಸಂಯುಕ್ತ ಆಶ್ರಯದಲ್ಲಿ ಆಯೋಜಿಸಿದ್ದ ನಾಟಕೋತ್ಸವಕ್ಕೆ ವಿಧ್ಯುಕ್ತವಾಗಿ ಚಾಲನೆ ನೀಡಿ ಅವರು ಮಾತನಾಡಿದರು.

ನಾನು 45 ವರ್ಷಗಳಿಂದ ಕನ್ನಡ ಸಾಹಿತ್ಯ ಕ್ಷೇತ್ರದಲ್ಲಿ ಕಥೆ, ಕಾದಂಬರಿ, ಕಾವ್ಯ ಸೇರಿದಂತೆ ಸಾಹಿತ್ಯದ ಹಲವು ಪ್ರಕಾರಗಳಲ್ಲಿ ಕೆಲಸ ಮಾಡಿದ್ದೇನೆ. ಕಾವ್ಯ ಎಲ್ಲರಿಗೂ ಒಗ್ಗುವ ಸಾಹಿತ್ಯವಲ್ಲ. ಸತತ ಅಧ್ಯಯನ ಮಾಡಿ ಹೊಸ ಹೊಸ ಶಬ್ದಗಳ ಸಂಗ್ರಹ ಮಾಡಿದ ಬಳಿಕ ಕಾವ್ಯ ರಚನೆಗೆ ಪೂರಕ ಶಕ್ತಿ ದೊರೆಯುತ್ತದೆ. ತಮ್ಮದಷ್ಟೇ ಅಲ್ಲ, ಬೇರೆಯವರ ಸಾಹಿತ್ಯ ಓದಬೇಕು. ಇದರಿಂದ ಸಾಹಿತಿಗಳಿಗೆ ಹೊಸ ವಿಚಾರಗಳು ಮೂಡುತ್ತವೆ. ಆಗ ಮನಸ್ಸಿನಿಂದ ತನ್ನಿಂದ ತಾನೆ ಕಾವ್ಯ ಹೊರ ಹೊಮ್ಮುತ್ತದೆ ಎಂದರು. 

ಈ ಹಿಂದೆ ವಿರ್ಮಶಕರು ಮಹಿಳಾ ಸಾಹಿತಿಗಳ ಬಗ್ಗೆ ವೈಯಕ್ತಿಕ ವಿಚಾರಗಳನ್ನು ವಿರ್ಮಶೆಯಲ್ಲಿ ಅನಾವಶ್ಯಕವಾಗಿ ಎಳೆದು ತರುತ್ತಿದ್ದರು. ಆದರೆ, ಈಗ ಅದು ಇಲ್ಲ. ಈಗ ಎಲ್ಲ ಬದಲಾಗಿದೆ. ಮಹಿಳಾ ಸಾಹಿತಿಗಳು ಸಶಕ್ತರಾಗಿ ಸಾಹಿತ್ಯ ಕ್ಷೇತ್ರದಲ್ಲಿ ಮುಂಚೂಣಿಯಲ್ಲಿದ್ದಾರೆ. ಸಾಹಿತ್ಯದ ಪ್ರತಿಯೊಂದು ಪ್ರಕಾರಗಳಲ್ಲಿ ಬರೆಯುವ ಹುಮ್ಮಸ್ಸು, ಉತ್ಸಾಹ ಅವರಲ್ಲಿ ಮನೆ ಮಾಡಿದೆ ಎಂದರು.

ಸಾಹಿತಿ ದೇಶಾಂಶ ಹುಡಗಿ ಮಾತನಾಡಿ, ದೇವಿದಾಸ ಚಿಮಕೋಡೆಯವರು ದಲಿತರ ಮಧ್ಯೆ ಬಾಳಿ, ದಲಿತರ ಭಾವನೆಗಳಿಗೆ ಗಾಯನ ಸ್ವರೂಪ ಕೊಟ್ಟು ಹಾಡಿದ ಕಲಾವಿದರು. ಅವರು ಹೊಸ ಹೆಜ್ಜೆ ಮೂಲಕ ಸಾಹಿತ್ಯ ಕ್ಷೇತ್ರದಲ್ಲಿ ಹೆಜ್ಜೆ ಇಟ್ಟಿದ್ದಾರೆ. ಇವರ ಹೆಜ್ಜೆಗಳು ಹೀಗೇ ಅಭಿವೃದ್ಧಿ ಪಥದಲ್ಲಿ ಸಾಗಲ್ಲಿ ಎಂದರು.

ಕಾರ್ಯಕ್ರಮಕ್ಕೆ ಮುನ್ನ ಗದಗ ಜಿಲ್ಲೆಯ ಡಾ| ತೋಂಟದ ಸಿದ್ಧಲಿಂಗ ಸ್ವಾಮಿಜೀಯವರು ನಿಧನಕ್ಕೆ ಎರಡು ನಿಮಿಷ ಮೌನಾಚರಣೆ ಮಾಡಿ ಶ್ರದ್ಧಾಂಜಲಿ ಸಲ್ಲಿಸಲಾಯಿತು. ಇದೇ ವೇಳೆ ದೇವದಾಸ ಚಿಮಕೋಡೆಯವರ ಹೊಸ ಹೆಜ್ಜೆ (ಜನ ಜಾಗೃತಿ ಹಾಡುಗಳು) ಪುಸ್ತಕವನ್ನು ಬಿಡುಗಡೆ ಮಾಡಲಾಯಿತು.

ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಪ್ರಭಾರಿ ಸಹಾಯಕ ನಿರ್ದೇಶಕ ರಾಜಶೇಖರ ವಟಗೆ, ಕರ್ನಾಟಕ ನಾಟಕ ಅಕಾಡೆಮಿಯ ಸದಸ್ಯ ಬಿ.ಸಂದೀಪ ಕಲಬುರಗಿ, ಆಶಾ ಚಿಮಕೊಡೆ, ರಂಗ ತರಂಗ ಸಾಮಾಜಿಕ ಮತ್ತು ಸಾಂಸ್ಕೃತಿಕ ಟ್ರಸ್ಟ್‌ ಅಧ್ಯಕ್ಷ ಎಂ.ಪಿ. ಮುದಾಳೆ, ಕರ್ನಾಟಕ ಜಾನಪದ ಅಕಾಡೆಮಿ ಸದಸ್ಯ ವಿಜಯಕುಮಾರ ಸೋನಾರೆ, ಜಾನಪದ ಕಲಾವಿದರ ಬಳಗದ ಅಂಬರೀಶ ಮಲ್ಲೇಶಿ, ಭಾರತಿ ವಸ್ತ್ರದ, ಪಾರ್ವತಿ ಸೋನಾರೆ, ಫರ್ನಾಂಡೀಸ್‌ ಹಿಪ್ಪಳಗಾಂವ, ಶಂಭುಲಿಂಗ ವಾಲೊಡ್ಡಿ, ಎಂ.ಎಸ್‌. ಮನೋಹರ, ಚಂದ್ರಪ್ಪ ಹೆಬ್ಟಾಳಕರ, ಅರುಣ ಪಟೇಲ, ಮಹೇಶ ಗೋರನಾಳಕರ್‌, ರಾಜಕುಮಾರ ಶೇರಿಕಾರ ಗಾದಗಿ ಸೇರಿದಂತೆ ಅನೇಕರು ಇದ್ದರು.

ಟಾಪ್ ನ್ಯೂಸ್

Lok Sabha Polls: ಮಾ. 21 ರಂದು ನನ್ನ ರಾಜಕೀಯ ನಡೆಯ ಬಗ್ಗೆ ನಿರ್ಧಾರ: ಸಂಸದ ಸಂಗಣ್ಣ ಕರಡಿ

Lok Sabha Polls: ಮಾ. 21 ರಂದು ನನ್ನ ರಾಜಕೀಯ ನಡೆಯ ಬಗ್ಗೆ ನಿರ್ಧಾರ: ಸಂಸದ ಸಂಗಣ್ಣ ಕರಡಿ

Sandalwood: ಪ್ರೇಮಲೋಕ-2 ಐವತ್ತಕ್ಕೂ ಹೆಚ್ಚು ಸೆಟ್‌ನಲ್ಲಿ ಶೂಟಿಂಗ್‌!

Sandalwood: ಪ್ರೇಮಲೋಕ-2 ಐವತ್ತಕ್ಕೂ ಹೆಚ್ಚು ಸೆಟ್‌ನಲ್ಲಿ ಶೂಟಿಂಗ್‌!

Patanjali Ads case:‌ಖುದ್ದು ಹಾಜರಾಗಿ- ಬಾಬಾ ರಾಮ್‌ ದೇವ್‌, ಬಾಲಕೃಷ್ಣಗೆ ಸುಪ್ರೀಂ ಸಮನ್ಸ್

Patanjali Ads case:‌ಖುದ್ದು ಹಾಜರಾಗಿ- ಬಾಬಾ ರಾಮ್‌ ದೇವ್‌, ಬಾಲಕೃಷ್ಣಗೆ ಸುಪ್ರೀಂ ಸಮನ್ಸ್

Vande Bharat: 1.5 ವರ್ಷದಲ್ಲಿ ವಂದೇ ಭಾರತ್‌ಗೆ 50 ಬಾರಿ ಕಲ್ಲೆಸೆತ

Vande Bharat: 1.5 ವರ್ಷದಲ್ಲಿ ವಂದೇ ಭಾರತ್‌ಗೆ 50 ಬಾರಿ ಕಲ್ಲೆಸೆತ

Lok Sabha Elections: 10 ಲಕ್ಷ ಮೀರಿ ವಹಿವಾಟು ಮೇಲೆ ಐಟಿ ಕಣ್ಣು

Lok Sabha Elections: 10 ಲಕ್ಷ ಮೀರಿ ವಹಿವಾಟು ಮೇಲೆ ಐಟಿ ಕಣ್ಣು

Crime: ನಿಶ್ಚಿತಾರ್ಥವಾಗಿದ್ದ ಸೊಸೆಯನ್ನೇ ಹತ್ಯೆಗೈದ ಮಾವ

Crime: ನಿಶ್ಚಿತಾರ್ಥವಾಗಿದ್ದ ಸೊಸೆಯನ್ನೇ ಹತ್ಯೆಗೈದ ಮಾವ

Arrested: 3 ಕೋಟಿ ರೂ. ನಕಲಿ ಡೈಮಂಡ್‌ ತೋರಿಸಿ ವಂಚನೆಗೆ ಯತ್ನ; 4 ಸೆರೆ

Arrested: 3 ಕೋಟಿ ರೂ. ನಕಲಿ ಡೈಮಂಡ್‌ ತೋರಿಸಿ ವಂಚನೆಗೆ ಯತ್ನ; 4 ಸೆರೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-addasd

Bidar:ಜಿಲ್ಲೆಯ ಹಲವೆಡೆ ಬಿರುಗಾಳಿ ಸಹಿತ ಮಳೆ, ತಂಪಾದ ಇಳೆ

BJP FLAG

LS Election; ಮೂರು ದಶಕಗಳ ಕಾಂಗ್ರೆಸ್‌ ಕೋಟೆ ಈಗ ಬಿಜೆಪಿ ನೆಲೆ

1-asdsad

Admission ಪ್ರಚಾರಕ್ಕೆ ವಿದ್ಯಾರ್ಥಿನಿಯರಿಂದ ಡ್ಯಾನ್ಸ್!: ಕಾಲೇಜಿಗೆ ನೋಟಿಸ್

Hospitalized: ಮಾಜಿ ಸಚಿವ ಪ್ರಭು ಚವ್ಹಾಣ್ ಆರೋಗ್ಯದಲ್ಲಿ ಏರುಪೇರು; ಆಸ್ಪತ್ರೆಗೆ ದಾಖಲು

Hospitalized: ಮಾಜಿ ಸಚಿವ ಪ್ರಭು ಚವ್ಹಾಣ್ ಆರೋಗ್ಯದಲ್ಲಿ ಏರುಪೇರು; ಆಸ್ಪತ್ರೆಗೆ ದಾಖಲು

1-qweqweqw

BJP; ತಪ್ಪು ತಿಳುವಳಿಕೆ ಇದ್ದಲ್ಲಿ ಶಾಸಕರಲ್ಲಿ ಕ್ಷಮೆಯಾಚಿಸುತ್ತೇನೆ!: ಸಚಿವ ಖೂಬಾ

MUST WATCH

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

udayavani youtube

ಇಲ್ಲಿ ಗ್ರಾಹಕರನ್ನ ನೋಡಿಕೊಳ್ಳುವ ರೀತಿಗೆ ಎಂಥಹವರೂ ಫಿದಾ ಆಗ್ತಾರೆ

udayavani youtube

ಶ್ರೀ ಪಣಿಯಾಡಿ ಅನಂತಪದ್ಮನಾಭ ದೇವಸ್ಥಾನ,ಪಣಿಯಾಡಿ|

udayavani youtube

Rameshwaram Cafe: ಹೇಗಾಯ್ತು ಸ್ಫೋಟ? ಭಯಾನಕ ಸಿಸಿಟಿವಿ ದೃಶ್ಯ ನೋಡಿ

udayavani youtube

ಅಯೋಧ್ಯೆ ಶ್ರೀ ರಾಮನ ಸೇವೆಯಲ್ಲಿ ಉಡುಪಿಯ ಬೆಳ್ಕಳೆ ಚಂಡೆ ಬಳಗ

ಹೊಸ ಸೇರ್ಪಡೆ

9-udupi

ಶ್ರೀ ನಿತ್ಯಾನಂದ ಸ್ವಾಮಿ ಮಂದಿರ ಮಠ; ಧ್ಯಾನ ಮಂದಿರ, ಭೋಜನ ಶಾಲೆ ನಿರ್ಮಾಣ ಕಾಮಗಾರಿಗೆ ಚಾಲನೆ

Lok Sabha Polls: ಮಾ. 21 ರಂದು ನನ್ನ ರಾಜಕೀಯ ನಡೆಯ ಬಗ್ಗೆ ನಿರ್ಧಾರ: ಸಂಸದ ಸಂಗಣ್ಣ ಕರಡಿ

Lok Sabha Polls: ಮಾ. 21 ರಂದು ನನ್ನ ರಾಜಕೀಯ ನಡೆಯ ಬಗ್ಗೆ ನಿರ್ಧಾರ: ಸಂಸದ ಸಂಗಣ್ಣ ಕರಡಿ

Bhuvanam gaganam Teaser: ಭುವನಂ ಗಗನಂ ಟೀಸರ್‌ ಬಂತು

Bhuvanam gaganam Teaser: ಭುವನಂ ಗಗನಂ ಟೀಸರ್‌ ಬಂತು

Bharjari Gandu: ಟ್ರೇಲರ್‌ನಲ್ಲಿ ಭರ್ಜರಿ ಗಂಡು

Bharjari Gandu: ಟ್ರೇಲರ್‌ನಲ್ಲಿ ಭರ್ಜರಿ ಗಂಡು

Sandalwood: ಪ್ರೇಮಲೋಕ-2 ಐವತ್ತಕ್ಕೂ ಹೆಚ್ಚು ಸೆಟ್‌ನಲ್ಲಿ ಶೂಟಿಂಗ್‌!

Sandalwood: ಪ್ರೇಮಲೋಕ-2 ಐವತ್ತಕ್ಕೂ ಹೆಚ್ಚು ಸೆಟ್‌ನಲ್ಲಿ ಶೂಟಿಂಗ್‌!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.