ರೈತರ ನಿರೀಕ್ಷೆ ಹುಸಿಯಾಗಿಸಿದ ಮಳೆ


Team Udayavani, Oct 23, 2018, 3:22 PM IST

bid-4.jpg

ಬಸವಕಲ್ಯಾಣ: ಎರಡು ವರ್ಷಗಳ ಹಿಂದೆ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ತೊಗರಿ ಮತ್ತು ಸೋಯಾಬಿನ್‌ ಬೆಳೆ ಸಂಪೂರ್ಣವಾಗಿ ನೀರಿನಲ್ಲಿ ತೇಲುವಂತಾಗಿತ್ತು. ಜಾನುವಾರುಗಳಿಗೆ ಮತ್ತು ಕುಡಿಯುವ ನೀರಿಗೆ ಯಾವುದೇ ಸಮಸ್ಯೆ ಆಗಿರಲಿಲ್ಲ. ಆದರೆ ಈ ವರ್ಷ ನಿರೀಕ್ಷೆಗೆ ತಕ್ಕಂತೆ
ಮಳೆ ಬಾರದ ಹಿನ್ನೆಲೆಯಲ್ಲಿ ತಾಲೂಕಿನಲ್ಲಿ ಮತ್ತೆ ಬರ ಆವರಿಸಿಕೊಂಡಂತಾಗಿದೆ.

ಪ್ರಸಕ್ತ ಸಾಲಿನಲ್ಲಿ ತಾಲೂಕು ಮತ್ತು ಹೋಬಳಿ ಮಟ್ಟದಲ್ಲಿ ಮುಂಗಾರು ಮತ್ತು ಹಿಂಗಾರ ಮಳೆ ಉತ್ತಮ ರೀತಿಯಲ್ಲಿ ಆಗಿಲ್ಲ. ಆರಂಭದಲ್ಲಿ ಒಂದೆರಡು ಮಳೆ ಬಿಟ್ಟರೆ, ಕೊಳವೆಬಾವಿ ಮತ್ತು ಹಳ್ಳದಲ್ಲಿ ನೀರು ಹರಿಯುವಂತೆ ಯಾವುದೇ ಮಳೆ ಬಂದಿಲ್ಲ. 

ಮಳೆ ಕೊರತೆಯಿಂದ ಅಂತರ್ಜಲ ಮಟ್ಟ ಕಡಿಮೆಯಾಗಿದ್ದು, ತಾಲೂಕಿನ ಬಹುತೇಕ ಕೆರೆಗಳು, ಕೊಳವೆ ಬಾವಿ ಮತ್ತು ಬಾವಿಗಳಲ್ಲಿ ನೀರು ಬೇಸಿಗೆ ಆರಂಭಕ್ಕೆ ಮುನ್ನವೇ ಖಾಲಿಯಾಗುವ ಹಂತಕ್ಕೆ ತಲುಪಿದೆ. ಈ ಹಿನ್ನೆಲೆಯಲ್ಲಿ ಜಾನುವಾರುಗಳಿಗೆ ಹಾಗೂ ಕುಡಿಯುವ ನೀರಿನ ಸಮಸ್ಯೆ
ಉಲ್ಬಣವಾಗುವ ಸಾಧ್ಯತೆ ಹೆಚ್ಚಾಗಿ ಕಾಣುತ್ತಿದೆ. 

ರೈತ ನೀರಿಕ್ಷೆ ಇಟ್ಟುಕೊಂಡ ಸೋಯಾಬಿನ್‌ ಮತ್ತು ತೊಗರಿ ಬೆಳೆಯಲ್ಲಿ ಸೋಯಾಬಿನ್‌ ಮಾತ್ರ ರೈತರ ಕೈಗೆ ಬಂದಿದೆ. ಆರ್ಥಿಕವಾಗಿ ಸಬಲರಾಗಿ ಮಾಡುವ ತೊಗರಿ ಬೆಳೆ ನೀರಿನ ತೇವಾಂಶ ಕಡಿಮೆಯಿಂದ ಬಹುತೇಕ ಕಡೆ ನೆಲಕಚ್ಚಿದೆ. ಹೂ ಚೆನ್ನಾಗಿ ಹತ್ತಿವೆ. ಆದರೆ ಒಳಗಡೆ ಕಾಯಿ ಕಟ್ಟಿಲ್ಲ. ಇದರಿಂದ ರೈತನ ನಿರೀಕ್ಷೆ ಹುಸಿಯಾದಂತಾಗಿದೆ. 

ಬೇಸಿಗೆ ಆರಂಭಕ್ಕೆ ಮುನ್ನವೇ ಗೋಕುಳ ಮತ್ತು ಕಿಟ್ಟಾ ಗ್ರಾಮದಲ್ಲಿ ಉದ್ಭವಿಸಿರುವ ನೀರಿನ ಸಮಸ್ಯೆ ಬಗೆಹರಿಸುವಂತೆ ರವಿವಾರ ಗ್ರಾಮಸ್ಥರು ಗ್ರಾಮ ಪಂಚಾಯಿತಿ ಎದುರು ಪ್ರತಿಭಟನೆ ನಡೆಸಿದ್ದಾರೆ. ಸರಕಾರ ಈಗಾಗಲೇ ಬಸವಕಲ್ಯಾಣ ಕ್ಷೇತ್ರವನ್ನು ಬರ ಪ್ರದೇಶ ಎಂದು ಘೋಷಣೆ ಮಾಡಿದೆ.

ಹೀಗಾಗಿ ಕೃಷಿ ಇಲಾಖೆ ಮತ್ತು ಕಂದಾಯ ಇಲಾಖೆ ಜಂಟಿಯಾಗಿ ಒಂದು ಸಮೀಕ್ಷೆ ಮಾಡಿ ಸರಕಾರಕ್ಕೆ ಸಮಗ್ರ ವರದಿ ಸಲ್ಲಿಸಲಾಗುವುದು ಎಂದು ತಹಶೀಲ್ದಾರ್‌ ಜಗನ್ನಾಥರೆಡ್ಡಿ ಮಾಹಿತಿ ನೀಡಿದರು.

ಒಟ್ಟಾರೆ ಮಳೆ ಜೂಜಾಟದಿಂದಾಗಿ ಈ ವರ್ಷವೂ ರೈತರು ಮತ್ತು ಸಾರ್ವಜನಿಕರು ಆತಂಕ ಪಡುವಂತ ಸ್ಥಿತಿ ನಿರ್ಮಾಣವಾಗಿದೆ. ಆದ್ದರಿಂದ ಸರಕಾರ ಶೀಘ್ರವಾಗಿ ಸಮೀಕ್ಷೆ ನಡೆಸಿ ಪರಿಹಾರ ನೀಡಬೇಕು ಎಂಬುವುದು ರೈತರ ಆಶಯವಾಗಿದೆ.

ತಾಲೂಕು ಬರ ಪ್ರದೇಶ ಘೋಷಣೆಗೆ ಮಾತ್ರ ಸೀಮಿತವಾಗಬಾರದು. ಬದಲಾಗಿ ತೆಲಂಗಾಣ ಮಾದರಿಯಲ್ಲಿ ಪ್ರತಿ ಎಕರೆಗೆ 10 ಸಾವಿರ ರೂ. ಪರಿಹಾರ ನೀಡಬೇಕು. ಏಕೆಂದರೆ ಹಿಂದೆ ಬರ ಪ್ರದೇಶ ಘೋಷಣೆ ಮಾಡಿದ್ದರು. ಈ ವರೆಗೂ ಕೆಲ ರೈತರಿಗೆ ಪರಿಹಾರ ಬಂದಿಲ್ಲ.
 ಮಲ್ಲಿಕಾರ್ಜುನ ಸ್ವಾಮಿ ರೈತ ಸಂಘದ ಜಿಲ್ಲಾಧ್ಯಕ್ಷ

ಬಸವಕಲ್ಯಾಣ ಕೂಡ ಬರ ಪ್ರದೇಶ ಎಂದು ಸರಕಾರ ಘೋಷಣೆ ಮಾಡಿದೆ. ಹೀಗಾಗಿ ಸರಕಾರದ ಆದೇಶದ ಪ್ರಕಾರ ಸಮೀಕ್ಷೆ ನಡೆಸಿ, ಆದಷ್ಟು ಬೇಗ ವರದಿ ಸಲ್ಲಿಸಲಾಗುವುದು.
 ಜಗನ್ನಾಥರೆಡ್ಡಿ ತಹಶೀಲ್ದಾರ್‌

„ವೀರಾರೆಡ್ಡಿ ಆರ್‌.ಎಸ್‌.

ಟಾಪ್ ನ್ಯೂಸ್

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

1-asasas

Naxal ಬಾಧಿತ ಮತಗಟ್ಟೆಗಳ ಭದ್ರತೆಗೆ ಹೆಚ್ಚುವರಿ ಆದ್ಯತೆ: ಮುಲ್ಲೈ ಮುಗಿಲನ್‌

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

KPCC: ಮೋದಿ, ರಾಜನಾಥ್‌ಸಿಂಗ್‌ ವಿರುದ್ಧ ಕ್ರಮಕ್ಕೆ ಕೆಪಿಸಿಸಿ ದೂರು

KPCC: ಮೋದಿ, ರಾಜನಾಥ್‌ಸಿಂಗ್‌ ವಿರುದ್ಧ ಕ್ರಮಕ್ಕೆ ಕೆಪಿಸಿಸಿ ದೂರು

1-rerwer

IPL; ಸನ್‌ರೈಸರ್ಸ್ ಹೈದರಾಬಾದ್ ವಿರುದ್ಧ ಜಯದ ನಗು ಬೀರಿದ ಆರ್ ಸಿಬಿ

MONEY (2)

Mysuru: ದಾಖಲೆ ಇಲ್ಲದೆ ಸಾಗಿಸುತ್ತಿದ್ದ 89 ಲಕ್ಷ ರೂ. ವಶಕ್ಕೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

12

B.S.Yediyurappa: ಶಾಸಕ ಪ್ರಭು ಚವ್ಹಾಣ ಹೆಸರು ಹೇಳುತ್ತಿದ್ದಂತೆ ಬಿಎಸ್‌ವೈ ಗರಂ

1-wqqwewqe

BJP; ಖೂಬಾ ಮತ್ತೊಮ್ಮೆ ಸಚಿವರಾಗ್ತಾರೆ : ಔರಾದ್ ನಲ್ಲಿ ಯಡಿಯೂರಪ್ಪ ಘೋಷಣೆ

siddaramaiah

Bidar; ನೇಹಾ ಪ್ರಕರಣದಲ್ಲಿ ಬಿಜೆಪಿ ರಾಜಕೀಯ‌ ಮಾಡುವುದು ಸರಿಯಲ್ಲ: ಸಿಎಂ ಸಿದ್ಧರಾಮಯ್ಯ‌

Lok Sabha Election: ಸೀನಿಯರ್‌ ಖೂಬಾಗೆ ಜ್ಯೂನಿಯರ್‌ ಖಂಡ್ರೆ ಸವಾಲು

Lok Sabha Election: ಸೀನಿಯರ್‌ ಖೂಬಾಗೆ ಜ್ಯೂನಿಯರ್‌ ಖಂಡ್ರೆ ಸವಾಲು

16

ನೀತಿ ಸಂಹಿತೆ ನಡುವೆಯೂ ರಾಜ್ಯಕ್ಕೆ ನೆರವು ಎನ್ನುವ ಬಿಜೆಪಿಗೆ ನಾಚಿಕೆ ಇಲ್ಲವೇ? – ಖಂಡ್ರೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

1-asasas

Naxal ಬಾಧಿತ ಮತಗಟ್ಟೆಗಳ ಭದ್ರತೆಗೆ ಹೆಚ್ಚುವರಿ ಆದ್ಯತೆ: ಮುಲ್ಲೈ ಮುಗಿಲನ್‌

1-MB

Note Ban ವೇಳೆ ಮಹಿಳೆಯರು ಮಂಗಳಸೂತ್ರ ಅಡವಿಟ್ಟಾಗ ಮೋದಿ ಮೌನ: ಭಂಡಾರಿ

Exam

Udupi; ಪಿಯುಸಿ ಪರೀಕ್ಷೆ-2 : ನಿಷೇಧಾಜ್ಞೆ ಜಾರಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.