ಸ್ವಸಹಾಯ ಗುಂಪುಗಳು ದೇಶಕ್ಕೆ ಮಾದರಿ


Team Udayavani, Nov 12, 2018, 11:52 AM IST

gul-4.jpg

ಬೀದರ: ಮಾಜಿ ಸಚಿವ ದಿ| ಗುರುಪಾದಪ್ಪ ನಾಗಮಾರಪಳ್ಳಿ ಅವರು ಡಿಸಿಸಿ ಬ್ಯಾಂಕ್‌ ಮೂಲಕ ಜಿಲ್ಲೆಯಲ್ಲಿ ರಚಿಸಿರುವ ಸ್ವಸಹಾಯ ಗುಂಪುಗಳು ಇಡೀ ದೇಶಕ್ಕೆ ಮಾದರಿಯಾಗಿವೆ ಎಂದು ಜಿಲ್ಲಾ ಉಸ್ತುವಾರಿ ಹಾಗೂ ಸಹಕಾರ ಸಚಿವ ಬಂಡೆಪ್ಪ ಕಾಶೆಂಪೂರ ಹೇಳಿದರು.

ನಗರದ ಡಿಸಿಸಿ ಬ್ಯಾಂಕ್‌ ಕೇಂದ್ರ ಕಚೇರಿಯಲ್ಲಿ ರವಿವಾರ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘಗಳು ಹಾಗೂ ಜಿಲ್ಲೆಯ ಸ್ವಸಹಾಯ ಗುಂಪುಗಳ ಆಶ್ರಯದಲ್ಲಿ ದಿ| ಗುರುಪಾದಪ್ಪ ನಾಗಮಾರಪಳ್ಳಿ ಅವರ 77ನೇ ಜನ್ಮ ದಿನಾಚರಣೆ ಪ್ರಯುಕ್ತ ಆಯೋಜಿಸಿದ್ದ ಸ್ವಸಹಾಯ ಗುಂಪುಗಳ ದಿನಾಚರಣೆ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.

ನಾಗಮಾರಪಳ್ಳಿ ಅವರು ಬೀದರ ಮಾತ್ರವಲ್ಲದೆ ರಾಜ್ಯದ ಸಹಕಾರ ಕ್ಷೇತ್ರದಲ್ಲಿ ಹೊಸ ಸಂಚಲನ ಮೂಡಿಸಿದ್ದರು. ರಾಜಕೀಯ, ಸಹಕಾರ ಕ್ಷೇತ್ರದಲ್ಲಿ ಹಲವು ಹುದ್ದೆಗಳನ್ನು ನಿಭಾಯಿಸಿದ್ದರು. ಹತ್ತು ಹಲವು ಸಂಸ್ಥೆಗಳನ್ನು ಹುಟ್ಟು ಹಾಕಿ ಅವುಗಳ ಬೆಳವಣಿಗೆಗೆ ಕಾರಣರಾಗಿದ್ದರು. ಸಹಕಾರ ಕ್ಷೇತ್ರಕ್ಕೆ ಅವರ ಕೊಡುಗೆ ಅಪಾರವಾಗಿದೆ ಎಂದು ಹೇಳಿದರು.

ರಾಜ್ಯದ 21 ಡಿಸಿಸಿ ಬ್ಯಾಂಕ್‌ಗಳಲ್ಲಿ ಬೀದರ್‌ ಡಿಸಿಸಿ ಬ್ಯಾಂಕ್‌ ಸ್ವಸಹಾಯ ಗುಂಪುಗಳಿಗೆ ಅತಿ ಹೆಚ್ಚು ಸಾಲ ಕೊಡುತ್ತ ಬಂದಿದೆ. ಎಸ್‌ಎಸ್‌ ಜಿಗಳಿಗೆ ಸಾಲ ವಿತರಣೆಯಲ್ಲಿ ಬ್ಯಾಂಕ್‌ ಕಳೆದ ವರ್ಷದವರೆಗೂ ಮೊದಲ ಸ್ಥಾನದಲ್ಲಿತ್ತು. ಈ ವರ್ಷ ಕೋಲಾರ ಮುಂಚೂಣಿಯಲ್ಲಿದೆ. ಹೆಚ್ಚು ಶ್ರಮವಹಿಸಿ ಮತ್ತೆ ಮೊದಲನೆ ಸ್ಥಾನಕ್ಕೆ ಬರಬೇಕು ಎಂದು ಸಲಹೆ ನೀಡಿದರು. ಜಿಲ್ಲೆಯಲ್ಲಿ ಸ್ವಸಹಾಯ ಸಂಘಗಳಿಗೆ ಡಿಸಿಸಿ ಬ್ಯಾಂಕ್‌ ರೂ. 165 ಕೋಟಿ ಸಾಲ ಒದಗಿಸಿದ್ದು, ಸಾಲ ಮರುಪಾವತಿ ಪ್ರಮಾಣ ಶೇ.99ರಷ್ಟು ಇರುವುದು ಪ್ರಶಂಸನೀಯ ವಿಷಯ.

ಸಹಕಾರ ಕ್ಷೇತ್ರದಲ್ಲಿ ಇನ್ನೂ ಹೆಚ್ಚಿನ ಕೆಲಸಗಳು ಆಗಬೇಕಿದೆ. ನೆರೆಯ ಮಹಾರಾಷ್ಟ್ರದಲ್ಲಿ ಸಹಕಾರ ಕ್ಷೇತ್ರದಡಿ ಅತಿ ಹೆಚ್ಚು ಕೆಲಸಗಳನ್ನು ಮಾಡಲಾಗುತ್ತಿದೆ. ಮಹಾರಾಷ್ಟ್ರದಲ್ಲಿ ಸುಮಾರು 200 ಸಹಕಾರ ಸಕ್ಕರೆ ಕಾರ್ಖಾನೆಗಳು ಇವೆ. ಆದರೆ, ರಾಜ್ಯದಲ್ಲಿ 37 ಸಹಕಾರ ಸಕ್ಕರೆ ಕಾರ್ಖಾನೆಗಳು ಮಾತ್ರ ಇವೆ. ಅದರಲ್ಲೂ 30 ಬಂದ್‌ ಆಗಿದ್ದು, ಏಳು ಒದ್ದಾಡುತ್ತಿವೆ. ವ್ಯವಸ್ಥೆಯಲ್ಲಿ ಎಲ್ಲೋ ದೋಷ ಇರುವುದಕ್ಕೆ ಇದು ನಿದರ್ಶನವಾಗಿದೆ ಎಂದರು.

ಸಹಕಾರ ಕ್ಷೇತ್ರದಡಿ ಆಸ್ಪತ್ರೆ, ನ್ಪೋರ್ಟ್ಸ್ ಅಕಾಡೆಮಿ, ಹಾಲು ಮಹಾಮಂಡಳಿ ಮೊದಲಾದ ಸಂಸ್ಥೆಗಳು ಇವೆ. ಸಹಕಾರ ಕ್ಷೇತ್ರದ ಚಟುವಟಿಕೆಗಳು ಇನ್ನಷ್ಟು ವಿಸ್ತರಣೆ ಆಗಬೇಕಿದೆ ಎಂದು ಅಭಿಪ್ರಾಯಪಟ್ಟ ಅವರು, ಕಳೆದ ಬಜೆಟ್‌ನಲ್ಲಿ ಸ್ವಸಹಾಯ ಗುಂಪುಗಳಿಗೆ ಉದ್ಯೋಗ ಸೃಷ್ಟಿಸುವ ಚಟುವಟಿಕೆಗೆ ರೂ. 10 ಲಕ್ಷದ ವರೆಗೆ ಸಾಲ ಒದಗಿಸುವ ಕಾಯಕ ಯೋಜನೆ ಜಾರಿಗೆ ತರಲಾಗಿದೆ. ಈ ವರ್ಷ ಮೂರು ಸಾವಿರ ಗುಂಪುಗಳಿಗೆ ನೆರವು ನೀಡುವ ಗುರಿ ಇದೆ ಎಂದರು.

ಸಹಕಾರ ಕ್ಷೇತ್ರಕ್ಕೆ ಸಾಮಾಜಿಕ ಹೊಣೆಗಾರಿಕೆ ಇದೆ. ಈ ಕ್ಷೇತ್ರದ ಬೆಳವಣಿಗೆಯಾದರೆ ಇತರ ಎಲ್ಲ ಕ್ಷೇತ್ರಗಳಿಗೂ ಅನುಕೂಲವಾಗುತ್ತದೆ. ಸಹಕಾರ ಕ್ಷೇತ್ರದಲ್ಲಿ ಪ್ರಾಮಾಣಿಕವಾಗಿ ಕೆಲಸ ಮಾಡುವವರ ಅವಶ್ಯಕತೆ ಇದೆ. ಹಾಗಾದಲ್ಲಿ ಮಾತ್ರ ಸಹಕಾರ ಸಂಸ್ಥೆಗಳು ಯಶಸ್ವಿಯಾಗಿ ಮುನ್ನಡೆಯಲು ಸಾಧ್ಯವಿದೆ ಎಂದರು.
 
ಡಿಸಿಸಿ ಬ್ಯಾಂಕ್‌ ಅಧ್ಯಕ್ಷ ಉಮಾಕಾಂತ ನಾಗಮಾರಪಳ್ಳಿ ಮಾತನಾಡಿ, ದಿ| ಗುರುಪಾದಪ್ಪ ನಾಗಮಾರಪಳ್ಳಿ ಅವರು ಡಿಸಿಸಿ ಬ್ಯಾಂಕ್‌ ಮೂಲಕ ಜಿಲ್ಲೆಯ ಆರ್ಥಿಕ ಅಭಿವೃದ್ಧಿಗೆ ಶ್ರಮಿಸಿದ್ದನ್ನು ಸ್ಮರಿಸಿದರು. ಬ್ಯಾಂಕ್‌ ಮೂಲಕ ರೈತರಿಗೆ ನೆರವಾಗಿದ್ದರು . ಮಹಿಳಾ ಸಬಲೀಕರಣಕ್ಕಾಗಿ ಸ್ವಸಹಾಯ ಗುಂಪುಗಳನ್ನು ರಚಿಸಿದ್ದರು.

ನಿರುದ್ಯೋಗಿ ಯುವಕ, ಯುವತಿಯರಿಗೆ ಸ್ವ ಉದ್ಯೋಗ ಆರಂಭಿಸಲು ಶಾರದಾ ರುಡ್‌ಸೆಟ್‌ ಮೂಲಕ ಕೌಶಲ ತರಬೇತಿ ನೀಡಿದ್ದಾರೆ. ಜಿಲ್ಲೆಯ ಜನರ ಪ್ರೀತಿ, ವಿಶ್ವಾಸ, ಅಭಿಮಾನಕ್ಕೆ ನಾನು ಹಾಗೂ ನನ್ನ ಸಹೋದರ ಸೂರ್ಯಕಾಂತ ನಾಗಮಾರಪಳ್ಳಿ ಚಿರಋಣಿಯಾಗಿದ್ದೇವೆ. ಜನರ ಸೇವೆಯನ್ನು ನಿರಂತರ ಮುಂದುವರಿಸಲಿದ್ದೇವೆ ಎಂದು ತಿಳಿಸಿದರು. 

ಸಂಸದ ಭಗವಂತ ಖೂಬಾ ಮಾತನಾಡಿ, ದಿ|ಗುರುಪಾದಪ್ಪ ನಾಗಮಾರಪಳ್ಳಿ ಅವರ ಜನ್ಮದಿನವನ್ನು ಸಹಕಾರ ದಿನವನ್ನಾಗಿ ಆಚರಿಸುವಂತೆ ರಾಜ್ಯ ಸರ್ಕಾರಕ್ಕೆ ಮನವಿ ಮಾಡಲಾಗುವುದು ಎಂದು ಹೇಳಿದರು.

ಶಾಸಕ ರಹೀಮ್‌ಖಾನ್‌ ಮಾತನಾಡಿ, ಡಿಸಿಸಿ ಬ್ಯಾಂಕ್‌ನ ಚಟುವಟಿಕೆಗಳಿಗೆ ಎಲ್ಲ ಸಹಾಯ, ಸಹಕಾರ ನೀಡಲಾಗುವುದು ಎಂದು ತಿಳಿಸಿದರು. ಸ್ವಸಹಾಯ ಗುಂಪುಗಳು ಕಷ್ಟದ ಕಾಲದಲ್ಲಿ ಹೇಗೆ ತಮ್ಮ ಕೈಹಿಡಿದವು ಎನ್ನುವ ಕುರಿತು ಐದು ಸ್ವಸಹಾಯ ಸಂಘಗಳ ಸದಸ್ಯೆಯರು ಅನಿಸಿಕೆ ವ್ಯಕ್ತಪಡಿಸಿದರು. 

ನೂಪುರ ನೃತ್ಯ ಅಕಾಡೆಮಿಯ ಕಲಾವಿದರು ಆಕರ್ಷಕ ನೃತ್ಯ ಪ್ರದರ್ಶಿಸಿದರು. ಗುರುಪಾದಪ್ಪ ನಾಗಮಾರಪಳ್ಳಿ ಅವರ ಕುರಿತು ನೃತ್ಯ ರೂಪಕ, ಅವರ ಸಾಧನೆಯ ಹಾಡಿನ ಮೇಲೆ ಮಹಿಳೆಯರು ಪ್ರದರ್ಶಿಸಿದ ಕೋಲಾಟ ಗಮನ ಸೆಳೆದವು. ಡಾ| ಗುರುಪಾದಪ್ಪ ನಾಗಮಾರಪಳ್ಳಿ ಮಲ್ಟಿ ಸುಪರ್‌ ಸ್ಪೆಷಾಲಿಟಿ ಸಹಕಾರ ಆಸ್ಪತ್ರೆಯ ಅಧ್ಯಕ್ಷ ಸೂರ್ಯಕಾಂತ ನಾಗಮಾರಪಳ್ಳಿ, ಜಿಲ್ಲಾ ಪಂಚಾಯಿತಿ ಸದಸ್ಯೆ ಶಕುಂತಲಾ ಬೆಲ್ದಾಳೆ, ಬಸವಕಲ್ಯಾಣ ಎಂಜಿನಿಯರಿಂಗ್‌ ಕಾಲೇಜು ಅಧ್ಯಕ್ಷ ದಿಲೀಪಕುಮಾರ ತಾಳಂಪಳ್ಳಿ, ಗುರುಪಾದಪ್ಪ ನಾಗಮಾರಪಳ್ಳಿ ಸಹಕಾರ ಆಸ್ಪತ್ರೆಯ ನಿರ್ದೇಶಕ ಸಂತೋಷಕುಮಾರ ತಾಳಂಪಳ್ಳಿ, ಪ್ರಥಮ ದರ್ಜೆ ಗುತ್ತಿಗೆದಾರ ಗುರುನಾಥ ಕೊಳ್ಳೂರ, ಡಿಸಿಸಿ ಬ್ಯಾಂಕ್‌ ನಿರ್ದೇಶಕ ರಾಚಪ್ಪ ಪಾಟೀಲ, ವಿಜಯಕುಮಾರ ಪಾಟೀಲ ಗಾದಗಿ, ಮಹಮ್ಮದ್‌ ಸಲೀಮೊದ್ದಿನ್‌ ಉಪಸ್ಥಿತರಿದ್ದರು.

ಟಾಪ್ ನ್ಯೂಸ್

Seat next to parents for children under 12 years on the plane?

DGCA: ವಿಮಾನದಲ್ಲಿ 12 ವರ್ಷದೊಳಗಿನ ಮಕ್ಕಳಿಗೆ ಪೋಷಕರ ಪಕ್ಕ ಆಸನ?

Congress ಗೆದ್ದರೆ ದಲಿತರ ಮೀಸಲು ಮುಸ್ಲಿಂ ಪಾಲು: ಮೋದಿ ಮತ್ತೆ ವಾಗ್ಬಾಣ

Congress ಗೆದ್ದರೆ ದಲಿತರ ಮೀಸಲು ಮುಸ್ಲಿಂ ಪಾಲು: ಮೋದಿ ಮತ್ತೆ ವಾಗ್ಬಾಣ

Dakshina Kannada: 5 ಸಿಎಪಿಎಫ್‌/ಕೆಎಸ್‌ಆರ್‌ಪಿ ತುಕಡಿ, 3,100 ಸಿಬಂದಿ ನಿಯೋಜನೆ

Dakshina Kannada: 5 ಸಿಎಪಿಎಫ್‌/ಕೆಎಸ್‌ಆರ್‌ಪಿ ತುಕಡಿ, 3,100 ಸಿಬಂದಿ ನಿಯೋಜನೆ

Election: ಮಂಗಳೂರು-ಶೋರ್ನೂರು-ಬೆಂಗಳೂರು ಮಧ್ಯೆ ವಿಶೇಷ ರೈಲು

Election: ಮಂಗಳೂರು-ಶೋರ್ನೂರು-ಬೆಂಗಳೂರು ಮಧ್ಯೆ ವಿಶೇಷ ರೈಲು

Udupi-Chikmagalur Lok Sabha constituency: ಯುವ ಮತದಾರರ ಚುನಾವಣೆ ಉತ್ಸಾಹ

Udupi-Chikmagalur: ಯುವ ಮತದಾರರ ಚುನಾವಣೆ ಉತ್ಸಾಹ

ಪರಿಹಾರ ತಾರತಮ್ಯ ಕಾಂಗ್ರೆಸ್‌ನ ನರೇಟಿವ್‌: ಅಣ್ಣಾಮಲೈ

ಪರಿಹಾರ ತಾರತಮ್ಯ ಕಾಂಗ್ರೆಸ್‌ನ ನರೇಟಿವ್‌: ಅಣ್ಣಾಮಲೈ

ಚೌಟರನ್ನು ದಾಖಲೆಯ ಅಂತರದಿಂದ ಗೆಲ್ಲಿಸಿ: ತಮಿಳುನಾಡು ಬಿಜೆಪಿ ಅಧ್ಯಕ್ಷ ಅಣ್ಣಾಮಲೈ

Puttur; ಚೌಟರನ್ನು ದಾಖಲೆಯ ಅಂತರದಿಂದ ಗೆಲ್ಲಿಸಿ: ಅಣ್ಣಾಮಲೈ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

16

ನೀತಿ ಸಂಹಿತೆ ನಡುವೆಯೂ ರಾಜ್ಯಕ್ಕೆ ನೆರವು ಎನ್ನುವ ಬಿಜೆಪಿಗೆ ನಾಚಿಕೆ ಇಲ್ಲವೇ? – ಖಂಡ್ರೆ

Minchu

Rain; ಬೀದರ್,ಕೊಪ್ಪಳದಲ್ಲಿ ಸಿಡಿಲಿನ ಆರ್ಭಟಕ್ಕೆ ಇಬ್ಬರು ಮೃತ್ಯು

Bidar; ಪ್ರೇಯಸಿ ಮದುವೆ ದಿನವೇ ಪ್ರಿಯಕರನ ಶವ ಪತ್ತೆ

Bidar; ಪ್ರೇಯಸಿ ಮದುವೆ ದಿನವೇ ಪ್ರಿಯಕರನ ಶವ ಪತ್ತೆ

rape

Bidar; ಯುವಕನಿಂದ ಅಪ್ರಾಪ್ತ ವಯಸ್ಕಳ ರೇಪ್

Bidar; Will file Defamation case against Khooba: Eshwar Khandre

Bidar; ಖೂಬಾ ವಿರುದ್ಧ ಮಾನನಷ್ಟ ಮೊಕದ್ದಮೆ ಹೂಡುವೆ: ಈಶ್ವರ್ ಖಂಡ್ರೆ

MUST WATCH

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

ಹೊಸ ಸೇರ್ಪಡೆ

Seat next to parents for children under 12 years on the plane?

DGCA: ವಿಮಾನದಲ್ಲಿ 12 ವರ್ಷದೊಳಗಿನ ಮಕ್ಕಳಿಗೆ ಪೋಷಕರ ಪಕ್ಕ ಆಸನ?

Congress ಗೆದ್ದರೆ ದಲಿತರ ಮೀಸಲು ಮುಸ್ಲಿಂ ಪಾಲು: ಮೋದಿ ಮತ್ತೆ ವಾಗ್ಬಾಣ

Congress ಗೆದ್ದರೆ ದಲಿತರ ಮೀಸಲು ಮುಸ್ಲಿಂ ಪಾಲು: ಮೋದಿ ಮತ್ತೆ ವಾಗ್ಬಾಣ

Dakshina Kannada: 5 ಸಿಎಪಿಎಫ್‌/ಕೆಎಸ್‌ಆರ್‌ಪಿ ತುಕಡಿ, 3,100 ಸಿಬಂದಿ ನಿಯೋಜನೆ

Dakshina Kannada: 5 ಸಿಎಪಿಎಫ್‌/ಕೆಎಸ್‌ಆರ್‌ಪಿ ತುಕಡಿ, 3,100 ಸಿಬಂದಿ ನಿಯೋಜನೆ

Election: ಮಂಗಳೂರು-ಶೋರ್ನೂರು-ಬೆಂಗಳೂರು ಮಧ್ಯೆ ವಿಶೇಷ ರೈಲು

Election: ಮಂಗಳೂರು-ಶೋರ್ನೂರು-ಬೆಂಗಳೂರು ಮಧ್ಯೆ ವಿಶೇಷ ರೈಲು

Udupi-Chikmagalur Lok Sabha constituency: ಯುವ ಮತದಾರರ ಚುನಾವಣೆ ಉತ್ಸಾಹ

Udupi-Chikmagalur: ಯುವ ಮತದಾರರ ಚುನಾವಣೆ ಉತ್ಸಾಹ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.