ಬೇಡಿಕೆ ಈಡೇರಿಸಲು ಶಕ್ತಿಮೀರಿ ಯತ್ನ: ಸಚಿವ ಪಾಟೀಲ


Team Udayavani, Nov 12, 2018, 12:05 PM IST

bid-2.jpg

ಹುಮನಾಬಾದ: ಜನರು ನೀಡಿದ ಅಧಿಕಾರ ಸದ್ಬಳಕೆ ಮಾಡಿಕೊಂಡು ಘಾಟಬೋರಾಳ್‌ ಮುಖಂಡರ ಬಹುತೇಕ ಬೇಡಿಕೆಗಳನ್ನು ಈಡೇರಿಸಲು ಶಕ್ತಿಮೀರಿ ಪ್ರಯತ್ನಿಸುವುದಾಗಿ ಗಣಿ, ಭೂವಿಜ್ಞಾನ ಮತ್ತು ಮುಜರಾಯಿ ಸಚಿವ ರಾಜಶೇಖರ ಪಾಟೀಲ ಹೇಳಿದರು.

ಘಾಟಬೋರಾಳ್‌ ಗ್ರಾಮದಲ್ಲಿ ಗ್ರಾಮ ಪಂಚಾಯಿತಿ, ಪ್ರಕಾಶ ವಿದ್ಯಾಲಯ, ಪಿಕೆಪಿಎಸ್‌, ಹಾಲು ಉತ್ಪಾದಕರ ಸಹಕಾರ ಸಂಘದ ಸಂಯುಕ್ತ ಆಶ್ರಯದಲ್ಲಿ ರವಿವಾರ ಹಮ್ಮಿಕೊಂಡಿದ್ದ ಸಮಾರಂಭದಲ್ಲಿ ಸನ್ಮಾನ ಸ್ವೀಕರಿಸಿ ಮಾತನಾಡಿದ ಅವರು, ಪ್ರಕಾಶ ವಿದ್ಯಾಲಯ ಅಭಿವೃದ್ಧಿಗೆ 20ಲಕ್ಷ ರೂ. ಅನುದಾನ ನೀಡುವುದಾಗಿ ಹೇಳಿದರು.

ಜೀವನದಲ್ಲಿ ಅ ಧಿಕಾರ, ಹಣ ಸೇರಿದಂತೆ ಯಾವುದೂ ಶಾಶ್ವತವಲ್ಲ. ಸಾರ್ವಜನಿಕ ಜೀವನದಲ್ಲಿ ಎಷ್ಟು ವರ್ಷ ಬದುಕಿದ್ದೇವೆ ಎಂಬುದಕ್ಕಿಂತ ಹೇಗೆ ಬದುಕಿದ್ದೇವೆ ಎನ್ನುವುದು ಮುಖ್ಯ. ಬಿಜೆಪಿ ಮುಖಂಡರ ಮಾತಿಗೆ ಮರುಳಾಗದೇ ಸದಾ ಅಭಿವೃದ್ಧಿಗೆ ಆದ್ಯತೆ ನೀಡುವ ಹುಮನಾಬಾದ ಪಾಟೀಲ ಪರಿವಾರಕ್ಕೆ ಬೆಂಬಲ ನೀಡುತ್ತ ಬಂದಿದ್ದೀರಿ. ನಾನು ಎಷ್ಟೇ ಎತ್ತರಕ್ಕೆ ಹೋಗಲಿ, ಆ ಮಟ್ಟಕ್ಕೇರಿಸಲು ಘಾಟಬೋರಾಳ್‌ ಜಿಪಂ ಕ್ಷೇತ್ರ ಸೇರಿದಂತೆ ವಿಧಾನಸಭಾ ಕ್ಷೇತ್ರದ ಮತದಾರ ಪ್ರಭುಗಳೇ ಕಾರಣರು.

ಪ್ರಕಾಶ ವಿದ್ಯಾಲಯದ ಅಧ್ಯಕ್ಷ ಮಾರುತಿರಾವ್‌ ಮುಳೆ ಮಾತನಾಡಿ, ಡಾ| ಪ್ರಕಾಶ ಪಾಟೀಲ ಒಳಗೊಂಡಂತೆ ಸದಾ ನಿಮ್ಮ ಜೊತೆಗಿರುವ ಇತರೆ ಮುಖಂಡರಿಗೆ ಈಗಿನ ಸ್ಥಾನಕಿಂತ ರಾಜ್ಯ ಮಟ್ಟದಲ್ಲಿ ಉನ್ನತ ಸ್ಥಾನಮಾನ ಕೊಡಿಸಬೇಕು ಎಂದು ಸಚಿವ ಪಾಟೀಲ ಅವರಿಗೆ ಮುಳೆ ತಿಳಿಸಿದರು. ಜಿಲ್ಲಾ ಪಂಚಾಯಿತಿ ಉಪಾಧ್ಯಕ್ಷ ಡಾ| ಪ್ರಕಾಶ ಪಾಟೀಲ ಪ್ರಾಸ್ತಾವಿಕ ಮಾತನಾಡಿ, ಕ್ಷೇತ್ರದಲ್ಲಿ ಆಗದೇ ಬಾಕಿ ಉಳಿದ ಕಾರ್ಯಗಳನ್ನು ಶೀಘ್ರ ಕೈಗೆತ್ತಿಕೊಂಡು ಪೂರ್ಣಗೊಳಿಸಬೇಕು ಎಂದರು. ಕಾಂಗ್ರೆಸ್‌ ಮುಖಂಡ ಜ್ಞಾನೇಶ್ವರ ಭೋಸ್ಲೆ ಮಾತನಾಡಿ, ಪಂಚಾಯಿತಿ ವ್ಯಾತಿಯಲ್ಲಿ ಕೈಗೊಂಡ ಅಭಿವೃದ್ಧಿ ಕಾರ್ಯ ಗಮನಿಸಿ ಘಾಟಬೋರಾಳ ಗ್ರಾಮ ಪಂಚಾಯಿತಿಗೆ
ರಾಜ್ಯ ಮಟ್ಟದ ಪುರಸ್ಕಾರ ಕೊಡಿಸುವಲ್ಲಿ ಸಚಿವ ಪಾಟೀಲ ಪ್ರಯತ್ನ ಅಧಿತ್ಯ ಕ ಇದೆ ಎಂದರು.

ವಿಧಾನ ಪರಿಷತ್‌ ಸದಸ್ಯ ಡಾ| ಚಂದ್ರಶೇಖರ ಪಾಟೀಲ, ವಿಯಸಿಂಗ್‌, ಜಿಪಂ ಅಧ್ಯಕ್ಷೆ ಭಾರತೀಬಾಯಿ ಶೇರಿಕಾರ, ಸದಸ್ಯ ಲಕ್ಷ್ಮಣರಾವ್‌ ಬುಳ್ಳಾ, ಬ್ಲಾಕ್‌ ಕಾಂಗ್ರೆಸ್‌ ಅಧ್ಯಕ್ಷ ಅಪ್ಸರಮಿಯ್ಯ, ಗ್ರಾಮೀಣ ಘಟಕ ಅಧ್ಯಕ್ಷ ರಾಜಪ್ಪ ಇಟಗಿ, ಎಸ್‌ಟಿ ಮೋರ್ಚಾ ಅಧ್ಯಕ್ಷ ಪ್ರಕಾಶ ಕಾಡಗೊಂಡ, ಘಾಟಬೋರಾಳ ಗ್ರಾಮ ಪಂಚಾಯಿತಿ ಅಧ್ಯಕ್ಷೆ ಅನುಸುಯಾಬಾಯಿ ಭೋಸ್ಲೆ ಇನ್ನಿತರರು ಇದ್ದರು. ವೇದಿಕೆ ಕಾರ್ಯಕ್ರಮಕ್ಕೂ ಮುನ್ನ ಗ್ರಾಮದ ಗಾಂಧಿ  ವೃತ್ತದಿಂದ ಪ್ರಕಾಶ ವಿದ್ಯಾಲಯವರೆಗೆ ಸಚಿವ ಪಾಟೀಲರನ್ನು ಮೆರವಣಿಗೆಯಲ್ಲಿ ಕರೆತರಲಾಯಿತು.

ಪಿಕೆಪಿಎಸ್‌ ಅಧ್ಯಕ್ಷ ಶಿವರಾಜಿ ರಘು ಸ್ವಾಗತಿಸಿದರು. ಪ್ರಕಾಶ ವಿದ್ಯಾಲಯ ಕಾರ್ಯದರ್ಶಿ ಡಾ| ಪ್ರಕಾಶ ಪಾಟೀಲ ಪ್ರಾಸ್ತಾವಿಕ
ಮಾತನಾಡಿದರು. ಪಂಡತ್‌ ಕೆ.ಬಾಳೂರೆ ನಿರೂಪಿಸಿದರು. ಚಂದ್ರಕಾಂತ ಜೋಕಾರೆ ವಂದಿಸಿದರು.

ಸಹಕಾರ ಸಕ್ಕರೆ ಕಾರ್ಖಾನೆ ಆರಂಭಿಸಿ
ಇಡೀ ಜಿಲ್ಲೆಯಲ್ಲಿ ಘಾಟಬೋರಾಳ್‌ ಜಿಲ್ಲಾ ಪಂಚಾಯಿತಿ ವ್ಯಾಪ್ತಿಯ ಎಲ್ಲ ಗ್ರಾಮ ಸೇರಿ ಪ್ರತೀ ವರ್ಷ 3 ಲಕ್ಷ ಟನ್‌ ಕಬ್ಬು ಬೆಳೆಯುತ್ತೇವೆ. ಜಿಲ್ಲೆಯ ಬಹುತೇಕ ಸಹಕಾರ ಸಕ್ಕರೆ ಕಾರ್ಖಾನೆಗಳ ಸ್ಥಿತಿ ಚಿಂತಾಜನಕವಿದೆ. ಪೂರೈಸಲಾದ ಕಬ್ಬಿಗೆ ಸಕಾಲಕ್ಕೆ ಹಣ ಪಾವತಿಸದೇ ರೈತರನ್ನು ತೀವ್ರ ಸಂಕಷ್ಟಕ್ಕೀಡು ಮಾಡಲಾಗುತ್ತದೆ. ಪರಿಸ್ಥಿತಿ ಗಂಭೀರತೆ ಅರಿತು ಪಾಟೀಲ ಪರಿವಾರ ಘಾಟಬೋರಾಳ್‌ ವ್ಯಾಪ್ತಿಯಲ್ಲಿ ಸಹಕಾರ ಸಕ್ಕರೆ ಕಾರ್ಖಾನೆ ಆರಂಭಿಸಬೇಕು. ರೈತರ ಸಮಸ್ಯೆಗೆ ಶಾಶ್ವತ ಪರಿಹಾರ ಕಂಡುಕೊಳ್ಳಬೇಕು.
 ಪರಮೇಶ್ವರ ಪಾಟೀಲ, ರೈತ ಮುಖಂಡ

ಟಾಪ್ ನ್ಯೂಸ್

1-asasa

PM ಮೋದಿ ಸಾಗುತ್ತಿದ್ದ ವೇಳೆ ‘ಚೊಂಬು’ ತೋರಿಸಲೆತ್ನಿಸಿದ ಮೊಹಮ್ಮದ್ ನಲಪಾಡ್

1-wewqeqwe

Congress ಟ್ಯಾಕ್ಸ್ ಸಿಟಿಯನ್ನು ಟ್ಯಾಂಕರ್ ಸಿಟಿ ಮಾಡಿದೆ: ಬೆಂಗಳೂರಿನಲ್ಲಿ ಮೋದಿ

Kollywood: 18 ವರ್ಷದ ಬಳಿಕ ಪತಿ ಸೂರ್ಯ ಜೊತೆ ನಟಿಸಲಿದ್ದಾರೆ ಜ್ಯೋತಿಕಾ

Kollywood: 18 ವರ್ಷದ ಬಳಿಕ ಪತಿ ಸೂರ್ಯ ಜೊತೆ ನಟಿಸಲಿದ್ದಾರೆ ಜ್ಯೋತಿಕಾ

ಸರ್ವರಿಗೂ ಸಮಪಾಲು ಸಮಬಾಳು ನೀಡಿದ ಕಾಂಗ್ರೆಸ್ ಪಕ್ಷಕ್ಕೆ ಮತ ನೀಡಿ: ಗೀತಾ ಶಿವರಾಜ್ ಕುಮಾರ್

ಸರ್ವರಿಗೂ ಸಮಪಾಲು ಸಮಬಾಳು ನೀಡಿದ ಕಾಂಗ್ರೆಸ್ ಪಕ್ಷಕ್ಕೆ ಮತ ನೀಡಿ: ಗೀತಾ ಶಿವರಾಜ್ ಕುಮಾರ್

1-qeweqwe

Love Jihad ಹೆಸರಲ್ಲಿ ಒಂದು ಗುಂಪಿಗೆ ತರಬೇತಿ: ಜಗದೀಶ್ ಶೆಟ್ಟರ್ ಗಂಭೀರ ಆರೋಪ

1-qweqewqe

Congress ಕೊಟ್ಟಿದ್ದ ಖಾಲಿ ಚೊಂಬನ್ನು ಅಕ್ಷಯಪಾತ್ರೆ ಮಾಡಿದ್ದು ಮೋದಿ: ಎಚ್ ಡಿಡಿ ಕಿಡಿ

Tollywood: ಈ ತಿಂಗಳಿನಲ್ಲಿ ಸೆಟ್ಟೇರಲಿದೆ ಜೂ.ಎನ್‌ ಟಿಆರ್‌ – ಪ್ರಶಾಂತ್‌ ನೀಲ್‌ ಸಿನಿಮಾ

Tollywood: ಈ ತಿಂಗಳಿನಲ್ಲಿ ಸೆಟ್ಟೇರಲಿದೆ ಜೂ.ಎನ್‌ ಟಿಆರ್‌ – ಪ್ರಶಾಂತ್‌ ನೀಲ್‌ ಸಿನಿಮಾ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Bidar; Will file Defamation case against Khooba: Eshwar Khandre

Bidar; ಖೂಬಾ ವಿರುದ್ಧ ಮಾನನಷ್ಟ ಮೊಕದ್ದಮೆ ಹೂಡುವೆ: ಈಶ್ವರ್ ಖಂಡ್ರೆ

Minchu

Bidar; ಬಿರುಗಾಳಿ‌ ಸಹಿತ ಭಾರಿ ಮಳೆ :ಸಿಡಿಲು ಬಡಿದು‌ ರೈತ ಸಾವು

Bidar; ನಾಮಪತ್ರ ಸಲ್ಲಿಸಲು ಓಡೋಡಿ ಬಂದ ಖೂಬಾ

Bidar; ನಾಮಪತ್ರ ಸಲ್ಲಿಸಲು ಓಡೋಡಿ ಬಂದ ಖೂಬಾ

Bidar ಬಿಜೆಪಿಯ ಹಿರಿಯ ಮುಖಂಡ, ಮಾಜಿ ಶಾಸಕ ರಮೇಶ ಕುಮಾರ್ ಪಾಂಡೆ ನಿಧನ

Bidar ಬಿಜೆಪಿಯ ಹಿರಿಯ ಮುಖಂಡ, ಮಾಜಿ ಶಾಸಕ ರಮೇಶ ಕುಮಾರ್ ಪಾಂಡೆ ನಿಧನ

UPSC Result: ಬೀದರ್ ನ ಮೊಹಮ್ಮದ್ ಅಸೀಮ್‌ ಮುಜತೇಬಾಗೆ 481ನೇ ರ‍್ಯಾಂಕ್‌

UPSC Result: ಬೀದರ್ ನ ಮೊಹಮ್ಮದ್ ಅಸೀಮ್‌ ಮುಜತೇಬಾಗೆ 481ನೇ ರ‍್ಯಾಂಕ್‌

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

1-asasa

PM ಮೋದಿ ಸಾಗುತ್ತಿದ್ದ ವೇಳೆ ‘ಚೊಂಬು’ ತೋರಿಸಲೆತ್ನಿಸಿದ ಮೊಹಮ್ಮದ್ ನಲಪಾಡ್

1-qweqeqw

Kalaburagi; ಭಾರೀ ಮಳೆ: ಆಳಂದದಲ್ಲಿ ಸಿಡಿಲು ಬಡಿದು ಬಾಲಕ‌ ಸಾವು

1-aaaa

Udupi: ನಿಟ್ಟೂರಿನಲ್ಲಿ ಬಸ್ ಢಿಕ್ಕಿಯಾಗಿ ಬೈಕ್ ಸವಾರ ದಾರುಣ ಸಾವು

1-wewqeqwe

Congress ಟ್ಯಾಕ್ಸ್ ಸಿಟಿಯನ್ನು ಟ್ಯಾಂಕರ್ ಸಿಟಿ ಮಾಡಿದೆ: ಬೆಂಗಳೂರಿನಲ್ಲಿ ಮೋದಿ

Kollywood: 18 ವರ್ಷದ ಬಳಿಕ ಪತಿ ಸೂರ್ಯ ಜೊತೆ ನಟಿಸಲಿದ್ದಾರೆ ಜ್ಯೋತಿಕಾ

Kollywood: 18 ವರ್ಷದ ಬಳಿಕ ಪತಿ ಸೂರ್ಯ ಜೊತೆ ನಟಿಸಲಿದ್ದಾರೆ ಜ್ಯೋತಿಕಾ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.