ಎಚ್‌ಐವಿ ಸೋಂಕಿತರ ಸಂಜೀವಿನಿ


Team Udayavani, Nov 13, 2018, 11:53 AM IST

bid-1.jpg

ಬಸವಕಲ್ಯಾಣ: ಯಾರೋ ಮಾಡಿದ ತಪ್ಪಿಗೆ ಕಣ್ಣು ತೆರೆಯುವ ಮುನ್ನವೇ ಮಾರಕ ರೋಗಕ್ಕೆ ತುತ್ತಾಗಿ ಅತ್ತ ಸಮಾಜದಿಂದ ಇತ್ತ ಪೋಷಕರಿಂದ ತಿರಸ್ಕಾರಗೊಂಡ ಮಕ್ಕಳಿಗೆ ಕೌಡಿಯಾಳ ಎಸ್‌. ಗ್ರಾಮದ ಸ್ಪರ್ಶ ಕೇರ್‌ ಹೋಮ್‌ ವಿಶೇಷ ಮಕ್ಕಳ ಆರೈಕೆ ಕೇಂದ್ರವು ಸಂಜೀವಿನಿಯಾಗಿ ಕೆಲಸ ಮಾಡುತ್ತಿದೆ.

ರಾಷ್ಟ್ರೀಯ ಹೆದ್ದಾರಿ ಪಕ್ಕದ ಕೌಡಿಯಾಳ ಎಸ್‌. ಗ್ರಾಮದಲ್ಲಿ ಸ್ಪರ್ಶ ಕೇರ್‌ ಹೋಮ್‌ ಎಚ್‌ಐವಿ ಸೋಂಕಿತ ಮಕ್ಕಳನ್ನು
ಮುಖ್ಯವಾಹಿನಿ ತರುವ ಉದ್ದೇಶದಿಂದ ನಾಲ್ಕು ವರ್ಷಗಳಿಂದ ಕಲಿಕೆ ವಾತಾವರಣ ನಿರ್ಮಿಸಿ, ಅನ್ಯ ಮಕ್ಕಳಂತೆ ಪಠ್ಯದ
ಜೊತಗೆ ಪಠ್ಯೇತರ ಚಟುವಟಿಕೆಗಳಲ್ಲೂ ಭಾಗವಹಿಸುವಂತೆ ಪ್ರೋತ್ಸಾಹ ನೀಡುತ್ತಿದೆ. 

ಆರಂಭದಲ್ಲಿ ಕೇವಲ ನಾಲ್ಕು ಜನ ಮಕ್ಕಳಿಂದ ಪ್ರಾರಂಭಗೊಂಡ ಸ್ಪರ್ಶ ಕೇರ್‌ ಹೋಮ್‌ ಸಂಸ್ಥೆಯಲ್ಲಿ ಬೀದರ, ಕಲಬುರಗಿ ಹಾಗೂ ಯಾದಗಿರಿ ಜಿಲ್ಲೆಯ 3 ರಿಂದ 15 ವರ್ಷದ ಒಟ್ಟು ಮೂವತ್ತು ಮಕ್ಕಳಿಗೆ ಭವಿಷ್ಯ ರೂಪಿಸುವ ಆಶ್ರಯ ತಾಣವಾಗಿದೆ.

ಇಂಥಹ ಮಕ್ಕಳ ಆರೈಕೆ ಕೇಂದ್ರಕ್ಕೆ ಸರ್ಕಾರದಿಂದ ಕೇವಲ ಮಾತ್ರೆಗಳನ್ನು ಬಿಟ್ಟು ಯಾವುದೇ ಸಹಕಾರ ಇಲ್ಲ. ಆದರೂ
ಮಕ್ಕಳಿಗೆ ಅನಾಥ ಪ್ರಜ್ಞೆ ಕಾಡದಂತೆ ಬೆಳಗ್ಗೆ ಯೋಗ, ಮಧ್ಯಾಹ್ನ ಹಾಗೂ ಸಂಜೆ ಪೌಷ್ಠಿಕಾಂಶ ಆಹಾರ ನೀಡಲಾಗುತ್ತದೆ. ಆರಂಭದಲ್ಲಿ ಇಲ್ಲಿ ಆಶ್ರಯ ಪಡೆದ ಮಕ್ಕಳು ಸ್ವಾವಲಂಬಿ ಜೀವನ ನಡೆಸುತ್ತಿದ್ದಾರೆ.

ಮನೆಯಲ್ಲಿ ಪ್ರೀತಿ-ಮಮತೆ ಸಿಗದೆ ಇರುವುದರಿಂದ ಹಬ್ಬಗಳು ಬಂದಾಗ ಮಕ್ಕಳು ಮನೆಗೆ ಹೋಗಲು ಹಿಂಜರಿಯುತ್ತಾರೆ. ಆದರೆ ಕೆಲ ಮಕ್ಕಳ ಅಜ್ಜಿಯಂದಿಯರು ಮಾತ್ರ ನೋಡಲು ಮತ್ತು ಕರೆದುಕೊಂಡು ಹೋಗಲುಬರುತ್ತಾರೆ ಎಂದು ಸಂಸ್ಥೆಯ ಫಾದರ್‌ ಬಾಪು ತಿಳಿಸುತ್ತಾರೆ. 
 
ಮಕ್ಕಳ ಕಲ್ಯಾಣ ಕ್ಷೇತ್ರದಲ್ಲಿ ಗಣನೀಯ ಸೇವೆ ಸಲ್ಲಿಸಿದ ವ್ಯಕ್ತಿಗೆ ನೀಡುವ ರಾಜ್ಯ ಪ್ರಶಸ್ತಿಯನ್ನು 2014ರಲ್ಲಿ ಸಂಸ್ಥೆಯ
ಫಾದರ್‌ ಬಾಬು ಅವರಿಗೆ ಕೂಡ ಲಭಿಸಿದೆ. ಹಾಗೂ ಮಕ್ಕಳು ವಿವಿಧ ಸ್ಪರ್ಧೆಗಳಲ್ಲಿ ಭಾಗವಹಿಸಿ ಪ್ರಶಸ್ತಿಗಳನ್ನು ಪಡೆದಿರುವುದು ವಿಶೇಷವಾಗಿದೆ.

ಒಟ್ಟಿನಲ್ಲಿ ಮಾರಕ ರೋಗಕ್ಕೆ ತುತ್ತಾದ ಮಕ್ಕಳಿಗೆ ಶಿಕ್ಷಣ ಜೊತೆಗೆ ಆರೋಗ್ಯದ ಕಾಳಜಿ ವಹಿಸುತ್ತಿರುವ ಸ್ಪರ್ಶ ಕೇರ್‌ ಹೋಮ್‌ ವಿಶೇಷ ಮಕ್ಕಳ ಆರೈಕೆ ಕೇಂದ್ರದ ಸೇವೆ ಇತರೆ ಸಂಸ್ಥೆಗಳಿಗೆ ಮಾದರಿಯಾಗಿದೆ.

ಅನ್ಯರಂತೆ ಇವರು ಜೀವನ ನಡೆಸಲು ಯಾವುದೇ ಸಮಸ್ಯೆ ಇಲ್ಲ. ಹೀಗಾಗಿ ಅವರನ್ನು ಮುಖ್ಯವಾಹಿನಿಗೆ ತರಬೇಕು.
ಮತ್ತು ಅವರು ಸ್ವಾವಲಂಬಿ ಜೀವನ ನಡೆಸಬೇಕು ಎಂಬ ಉದ್ದೇಶದಿಂದ ಈ ಕೇಂದ್ರ ಆರಂಭಿಸಲಾಗಿದೆ.
 ಫಾದರ್‌ ಬಾಪು ಕೌಡಿಯಾಳ ಸ್ಪರ್ಶ ಕೇರ್‌ ಹೋಮ್‌

„ವೀರಾರೆಡ್ಡಿ ಆರ್‌.ಎಸ್‌.

ಟಾಪ್ ನ್ಯೂಸ್

Lok Sabha Election 2024; ನಿಮ್ಮ ಮತವನ್ನು ಮಾರಿಕೊಳ್ಳಬೇಡಿ: ಗಣ್ಯರ ಮನವಿ

Lok Sabha Election 2024; ನಿಮ್ಮ ಮತವನ್ನು ಮಾರಿಕೊಳ್ಳಬೇಡಿ: ಗಣ್ಯರ ಮನವಿ

1-24-thursday

Daily Horoscope: ಉದ್ಯೋಗದಲ್ಲಿ ಮೇಲಧಿಕಾರಿಗಳಿಗೆ ತೃಪ್ತಿ, ಅಪೇಕ್ಷಿತ ಆರ್ಥಿಕ ನೆರವು ಲಭ್ಯ

Modi ಹಸಿ ಸುಳ್ಳು: ಸಿಎಂ ಸಿದ್ದರಾಮಯ್ಯ ಕೆಂಡ; ಒಬಿಸಿ, ಎಸ್‌ಸಿ ಮೀಸಲಾತಿ ಹೇಳಿಕೆಗೆ ವಿರೋಧ

Modi ಹಸಿ ಸುಳ್ಳು: ಸಿಎಂ ಸಿದ್ದರಾಮಯ್ಯ ಕೆಂಡ; ಒಬಿಸಿ, ಎಸ್‌ಸಿ ಮೀಸಲಾತಿ ಹೇಳಿಕೆಗೆ ವಿರೋಧ

Uppinangady ಬಸ್ಸಿನಲ್ಲಿ ಲೈಂಗಿಕ ಕಿರುಕುಳ: ಪ್ರತಿರೋಧಿಸಿದ ವಿದ್ಯಾರ್ಥಿನಿಯ ನಡೆಗೆ ಶ್ಲಾಘನೆ

Uppinangady ಬಸ್ಸಿನಲ್ಲಿ ಲೈಂಗಿಕ ಕಿರುಕುಳ: ಪ್ರತಿರೋಧಿಸಿದ ವಿದ್ಯಾರ್ಥಿನಿಯ ನಡೆಗೆ ಶ್ಲಾಘನೆ

ಹಂತ 1: 14 ಕ್ಷೇತ್ರಗಳ ಬಹಿರಂಗ ಪ್ರಚಾರ ಅಂತ್ಯ: ನಾಳೆ ಮತದಾನ

Lok Sabha Election; ಹಂತ 1: 14 ಕ್ಷೇತ್ರಗಳ ಬಹಿರಂಗ ಪ್ರಚಾರ ಅಂತ್ಯ: ನಾಳೆ ಮತದಾನ

ಅನಂತಸ್ವಾಮಿ ಧಾಟಿಯಲ್ಲೇ ನಾಡಗೀತೆ; ರಾಜ್ಯ ಸರಕಾರದ ಆದೇಶ ಎತ್ತಿಹಿಡಿದ ಹೈಕೋರ್ಟ್‌

ಅನಂತಸ್ವಾಮಿ ಧಾಟಿಯಲ್ಲೇ ನಾಡಗೀತೆ; ರಾಜ್ಯ ಸರಕಾರದ ಆದೇಶ ಎತ್ತಿಹಿಡಿದ ಹೈಕೋರ್ಟ್‌

ಕೈಗೆ ಪಿತ್ರೋಡಾರ್ಜಿತ ಸಂಕಟ! ಬಿಜೆಪಿಗೆ ಸಿಕ್ಕಿದ ಹೊಸ ಅಸ್ತ್ರ ; ಕಂಗೆಟ್ಟ ಕಾಂಗ್ರೆಸ್‌

ಕೈಗೆ ಪಿತ್ರೋಡಾರ್ಜಿತ ಸಂಕಟ! ಬಿಜೆಪಿಗೆ ಸಿಕ್ಕಿದ ಹೊಸ ಅಸ್ತ್ರ ; ಕಂಗೆಟ್ಟ ಕಾಂಗ್ರೆಸ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

16

ನೀತಿ ಸಂಹಿತೆ ನಡುವೆಯೂ ರಾಜ್ಯಕ್ಕೆ ನೆರವು ಎನ್ನುವ ಬಿಜೆಪಿಗೆ ನಾಚಿಕೆ ಇಲ್ಲವೇ? – ಖಂಡ್ರೆ

Minchu

Rain; ಬೀದರ್,ಕೊಪ್ಪಳದಲ್ಲಿ ಸಿಡಿಲಿನ ಆರ್ಭಟಕ್ಕೆ ಇಬ್ಬರು ಮೃತ್ಯು

Bidar; ಪ್ರೇಯಸಿ ಮದುವೆ ದಿನವೇ ಪ್ರಿಯಕರನ ಶವ ಪತ್ತೆ

Bidar; ಪ್ರೇಯಸಿ ಮದುವೆ ದಿನವೇ ಪ್ರಿಯಕರನ ಶವ ಪತ್ತೆ

rape

Bidar; ಯುವಕನಿಂದ ಅಪ್ರಾಪ್ತ ವಯಸ್ಕಳ ರೇಪ್

Bidar; Will file Defamation case against Khooba: Eshwar Khandre

Bidar; ಖೂಬಾ ವಿರುದ್ಧ ಮಾನನಷ್ಟ ಮೊಕದ್ದಮೆ ಹೂಡುವೆ: ಈಶ್ವರ್ ಖಂಡ್ರೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Lok Sabha Election 2024; ನಿಮ್ಮ ಮತವನ್ನು ಮಾರಿಕೊಳ್ಳಬೇಡಿ: ಗಣ್ಯರ ಮನವಿ

Lok Sabha Election 2024; ನಿಮ್ಮ ಮತವನ್ನು ಮಾರಿಕೊಳ್ಳಬೇಡಿ: ಗಣ್ಯರ ಮನವಿ

1-24-thursday

Daily Horoscope: ಉದ್ಯೋಗದಲ್ಲಿ ಮೇಲಧಿಕಾರಿಗಳಿಗೆ ತೃಪ್ತಿ, ಅಪೇಕ್ಷಿತ ಆರ್ಥಿಕ ನೆರವು ಲಭ್ಯ

Modi ಹಸಿ ಸುಳ್ಳು: ಸಿಎಂ ಸಿದ್ದರಾಮಯ್ಯ ಕೆಂಡ; ಒಬಿಸಿ, ಎಸ್‌ಸಿ ಮೀಸಲಾತಿ ಹೇಳಿಕೆಗೆ ವಿರೋಧ

Modi ಹಸಿ ಸುಳ್ಳು: ಸಿಎಂ ಸಿದ್ದರಾಮಯ್ಯ ಕೆಂಡ; ಒಬಿಸಿ, ಎಸ್‌ಸಿ ಮೀಸಲಾತಿ ಹೇಳಿಕೆಗೆ ವಿರೋಧ

Uppinangady ಬಸ್ಸಿನಲ್ಲಿ ಲೈಂಗಿಕ ಕಿರುಕುಳ: ಪ್ರತಿರೋಧಿಸಿದ ವಿದ್ಯಾರ್ಥಿನಿಯ ನಡೆಗೆ ಶ್ಲಾಘನೆ

Uppinangady ಬಸ್ಸಿನಲ್ಲಿ ಲೈಂಗಿಕ ಕಿರುಕುಳ: ಪ್ರತಿರೋಧಿಸಿದ ವಿದ್ಯಾರ್ಥಿನಿಯ ನಡೆಗೆ ಶ್ಲಾಘನೆ

ಹಂತ 1: 14 ಕ್ಷೇತ್ರಗಳ ಬಹಿರಂಗ ಪ್ರಚಾರ ಅಂತ್ಯ: ನಾಳೆ ಮತದಾನ

Lok Sabha Election; ಹಂತ 1: 14 ಕ್ಷೇತ್ರಗಳ ಬಹಿರಂಗ ಪ್ರಚಾರ ಅಂತ್ಯ: ನಾಳೆ ಮತದಾನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.