ಭಾಲ್ಕಿ ತಾಲೂಕಿನಲ್ಲಿ ಹಿಂಗಾರು ಬೆಳೆ ನಿರೀಕ್ಷೆಯೂ ಹುಸಿ


Team Udayavani, Nov 13, 2018, 12:05 PM IST

bid-2.jpg

ಭಾಲ್ಕಿ: ಮುಂಗಾರು ಮಳೆ ಕೊರತೆಯಿಂದ ಕಂಗಾಲಾಗಿದ್ದ ತಾಲೂಕಿನ ರೈತರಿಗೆ, ಹಿಂಗಾರು ಬೆಳೆಯನ್ನಾದರೂ ಬೆಳೆಯಬಹುದು ಎನ್ನುವ ನಿರೀಕ್ಷೆಯೂ ಹುಸಿಯಾಗಿದ್ದು, ದಿಕ್ಕು ತೋಚದ ಸ್ಥಿತಿ ಎದುರಾಗಿದೆ.

ತಾಲೂಕಿನ ಬಹುತೇಕ ಕಡೆ ಹಿಂಗಾರು ಬೆಳೆಗೆ ಬೇಕಾಗುವಷ್ಟು ಮಳೆ ಬಾರದೇ ಭೂಮಿ ತೇವಗೊಂಡಿಲ್ಲ. ಖಟಕಚಿಂಚೋಳಿ ಹೋಬಳಿ ವ್ಯಾಪ್ತಿಯ ಏಣಕೂರ, ಡಾವರಗಾಂವ, ಬರದಾಪೂರ, ಭಾಗ್ಯನಗರ, ಕುರುಬಖೇಳಗಿ, ನಾವದಗಿ. ಭಾತಂಬ್ರಾ ಹೋಬಳಿಯ ಸಾಯಗಾಂವ, ಲಖಣಗಾಂವ, ಕಾಕನಾಳ, ಶಿವಣಿ, ಕಾಸರತೂಗಾಂವ, ಹಲಬರ್ಗಾ ಹೋಬಳಿಯ ಕೋಣ ಮೆಳಕುಂದಾ, ಧನ್ನೂರ(ಎಸ್‌), ನಿಟ್ಟೂರ(ಬಿ) ಸೇರಿದಂತೆ ತಾಲೂಕಿನ ಸುಮಾರು ಗ್ರಾಮಗಳಲ್ಲಿ ಕಪ್ಪು ಮಣ್ಣಿನ ಹೊಲಗಳಿದ್ದು, ಈ ಹೊಲಗಳಿಗೆ
ವಾರಕ್ಕೊಮ್ಮೆಯಾದರೂ ನೀರಿನ ಅವಶ್ಯಕತೆ ಇದೆ.

ಬಹುದಿನಗಳಿಂದ ಮಳೆ ಬೀಳದಿರುವುದರಿಂದ ಬಿತ್ತಿದ ಬಿಳಿಜೋಳ ಮೊಳಕೆ ಒಡೆದಿಲ್ಲ. ಮತ್ತು ಬೆಳೆದು ನಿಂತ ಕಡಲೆ ಬೆಳೆ ಹಳದಿ ಬಣ್ಣಕ್ಕೆ ತಿರುಗುತ್ತಿದೆ. ಅಲ್ಲದೇ ಮುಂಗಾರಿನಲ್ಲಿ ಬಿತ್ತಿದ ತೊಗರಿ ಬೆಳೆ ಸಂಪೂರ್ಣ ಒಣಗುತ್ತಿದೆ. ಮಳೆ ಇಲ್ಲದ ಕಾರಣ ನಮಗೆ ತುಂಬಾ ತೊಂದರೆಯಾಗಿದೆ. ದಿಕ್ಕು ತೋಚದಂತಹ ಸ್ಥಿತಿಯಲ್ಲಿದ್ದೇವೆ. ಏನು ಮಾಡಬೇಕೆಂದು ತಿಳಿಯುತ್ತಿಲ್ಲ. ಕೃಷಿ ಕೆಲಸಕ್ಕೆಂದೇ ರೈತರು ಬೇರೆ, ಬೇರೆ ಕಡೆ ಸಾಲ ಮಾಡಿರುತ್ತಾರೆ. ಇಂತಿಷ್ಟು ಅವಧಿಯಲ್ಲಿ ತೀರಿಸಬೇಕಾದ ಜವಾಬ್ದಾರಿ ಇರುತ್ತದೆ.

ಆದರೆ ಸಕಾಲಕ್ಕೆ ಮಳೆಯಾಗಿ ಬೆಳೆ ಬಂದರೆ ಆರ್ಥಿಕ ಸಮಸ್ಯೆ ಇರುವುದಿಲ್ಲ. ಬೇರೆ ಸಂಕಷ್ಟಗಳನ್ನು ನಿವಾರಿಸಿಕೊಳ್ಳಬಹುದು ಎನ್ನುತ್ತಾರೆ ಪ್ರಗತಿಪರ ರೈತ ಅಂಬೆಸಾಂಗವಿ ಗ್ರಾಮದ ಸುನೀಲ ಮಾನಕಾರಿ. ಕೆಲವು ರೈತರು ತಮ್ಮ ಹೊಲದಲ್ಲಿರುವ ಕೊಳವೆ ಬಾವಿ ಮತ್ತು ತೆರೆದ ಬಾವಿಯಲ್ಲಿರುವ ನೀರು ಬಿಳಿಜೋಳ, ತೊಗರಿ ಮತ್ತು ಕಡಲೆಗೆ ಹರಿಸಿ ಅಲ್ಪಸ್ವಲ್ಪ ಬೆಳೆ ಬೆಳೆಯುತ್ತಿದ್ದಾರೆ. ಆದರೆ ಬಾವಿ ಇಲ್ಲದ ರೈತರ ಸ್ಥಿತಿ ಹೇಳತೀರದಂತಾಗಿದೆ ಎನ್ನುತ್ತಾರೆ ನಾವದಗಿ ಗ್ರಾಮದ ರೈತ ರಾಜಪ ಬೆಲೂರೆ. 

ಪಸಕ್ತ ಸಾಲಿನ ಹಿಂಗಾರು ಹಂಗಾಮಿನ ಬಿತ್ತನೆ ಗುರಿ 31,950 ಹೆಕ್ಟೇರ್‌ ಆಗಿದ್ದು, ಇದುವರೆಗೆ 7,500 ಹೆಕ್ಟೇರ್‌ ಮಾತ್ರ ಬಿತ್ತನೆಯಾಗಿದೆ. ಹಿಂಗಾರು ಹಂಗಾಮಿನ ಮಳೆ ಕೊರತೆಯಿಂದ ಶೇ.20 ಬಿತ್ತನೆ ಮಾತ್ರ ಮಾಡಲಾಗಿದೆ. ಇದರಲ್ಲಿ ಬಿಳಿಜೋಳ 500 ಹೆಕ್ಟೇರ್‌, ಕಡಲೆ ಮತ್ತು ಕುಸುಬಿ 5,500 ಹೆಕ್ಟೇರ್‌ ಬಿತ್ತನೆ ಮಾತ್ರ ನಡೆದಿದೆ. ಹಿಂಗಾರು ಹಂಗಾಮಿನ ಸೆಪ್ಟೆಂಬರ್‌ ಮತ್ತು ಅಕ್ಟೋಬರ್‌ ತಿಂಗಳಲ್ಲಿ ನಿರ್ಧಿಷ್ಠ ಗುರಿಯಂತೆ 272 ಎಂ.ಎಂ. ಮಳೆಯಾಗಬೇಕಿತ್ತು. ಆದರೆ ಬರೀ 39 ಎಂ.ಎಂ. ಮಳೆ ಮಾತ್ರ ಆಗಿದೆ. ಒಟ್ಟು ಶೇ. 86 ಮಳೆ ಕೊರತೆಯಾಗಿದೆ. ಹೀಗಾಗಿ ಬಿತ್ತನೆ ಗುರಿ ಕ್ಷೀಣಿಸಿದೆ ಎನ್ನುವುದು ಕೃಷಿ ಇಲಾಖೆಯ ಮಾಹಿತಿ.

ಜಿಲ್ಲೆಯ ಐದು ತಾಲೂಕುಗಳಲ್ಲಿ ಭಾಲ್ಕಿ ತಾಲೂಕಿನಲ್ಲಿಯೇ ಹೆಚ್ಚಿನ ಮಳೆ ಕೊರತೆ ಇದೆ. ಆದರೆ ಜಿಲ್ಲಾಡಳಿತ ಮತ್ತು ಇಲ್ಲಿಯ ಜನಪ್ರತಿನಿಧಿಗಳು ಭಾಲ್ಕಿ ತಾಲೂಕನ್ನು ಬರ ಪಟ್ಟಿಗೆ ಸೇರಿಸದಿರುವುದು ವಿಪರ್ಯಾಸದ ಸಂಗತಿಯಾಗಿದೆ ಎನ್ನುತ್ತಾರೆ ರೈತ ಸಂಘದ ಜಿಲ್ಲಾಧ್ಯಕ್ಷ ಮಲ್ಲಿಕಾರ್ಜುನ ಸ್ವಾಮಿ.

„ಜಯರಾಜ ದಾಬಶೆಟ್ಟಿ

ಟಾಪ್ ನ್ಯೂಸ್

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರಕಾರ ಬದ್ದ: ಸತೀಶ್ ಜಾರಕಿಹೊಳಿ

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರ್ಕಾರ ಬದ್ಧ: ಸತೀಶ್ ಜಾರಕಿಹೊಳಿ

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!

Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್‌ರಿಂದ ಪರಿಶೀಲನೆ

Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್‌ರಿಂದ ಪರಿಶೀಲನೆ

Nagaland Poll: ಬೇಡಿಕೆ ಈಡೇರಿಸಿ- ಆರು ಜಿಲ್ಲೆಗಳಲ್ಲಿ ಒಂದೇ ಒಂದು ಮತದಾನ ನಡೆದಿಲ್ಲ!

Nagaland Poll: ಬೇಡಿಕೆ ಈಡೇರಿಸಿ- ಆರು ಜಿಲ್ಲೆಗಳಲ್ಲಿ ಒಂದೇ ಒಂದು ಮತದಾನ ನಡೆದಿಲ್ಲ!

Manipura: ಮತಗಟ್ಟೆ ಮೇಲೆ ಗುಂಡಿನ ದಾಳಿ… ದಿಕ್ಕಾ ಪಾಲಾಗಿ ಓಡಿದ ಮತದಾರರು

Manipura: ಮತಗಟ್ಟೆ ಮೇಲೆ ಗುಂಡಿನ ದಾಳಿ… ದಿಕ್ಕಾ ಪಾಲಾಗಿ ಓಡಿದ ಮತದಾರರು

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ

Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Bidar; ನಾಮಪತ್ರ ಸಲ್ಲಿಸಲು ಓಡೋಡಿ ಬಂದ ಖೂಬಾ

Bidar; ನಾಮಪತ್ರ ಸಲ್ಲಿಸಲು ಓಡೋಡಿ ಬಂದ ಖೂಬಾ

Bidar ಬಿಜೆಪಿಯ ಹಿರಿಯ ಮುಖಂಡ, ಮಾಜಿ ಶಾಸಕ ರಮೇಶ ಕುಮಾರ್ ಪಾಂಡೆ ನಿಧನ

Bidar ಬಿಜೆಪಿಯ ಹಿರಿಯ ಮುಖಂಡ, ಮಾಜಿ ಶಾಸಕ ರಮೇಶ ಕುಮಾರ್ ಪಾಂಡೆ ನಿಧನ

UPSC Result: ಬೀದರ್ ನ ಮೊಹಮ್ಮದ್ ಅಸೀಮ್‌ ಮುಜತೇಬಾಗೆ 481ನೇ ರ‍್ಯಾಂಕ್‌

UPSC Result: ಬೀದರ್ ನ ಮೊಹಮ್ಮದ್ ಅಸೀಮ್‌ ಮುಜತೇಬಾಗೆ 481ನೇ ರ‍್ಯಾಂಕ್‌

1-eqwewqeqwe

Bidar; ಬಿಜೆಪಿಗೆ ನಾಗಮಾರಪಳ್ಳಿ ಕುಟುಂಬದ ಬೆಂಬಲ

Bidar; ಬಿರುಗಾಳಿ ಸಹಿತ ಭಾರಿ ಮಳೆಗೆ ಅಪಾರ ಹಾನಿ; ಮಾವು ಬೆಳೆಗಾರರಿಗೆ ನಷ್ಟ

Bidar; ಬಿರುಗಾಳಿ ಸಹಿತ ಭಾರಿ ಮಳೆಗೆ ಅಪಾರ ಹಾನಿ; ಮಾವು ಬೆಳೆಗಾರರಿಗೆ ನಷ್ಟ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Davanagere; ಮುಖ್ಯಮಂತ್ರಿ ಜವಾಬ್ದಾರಿಯಿಂದ ಹೇಳಿಕೆ ನೀಡಬೇಕು: ಎಂ.ಪಿ. ರೇಣುಕಾಚಾರ್ಯ

Davanagere; ಮುಖ್ಯಮಂತ್ರಿ ಜವಾಬ್ದಾರಿಯಿಂದ ಹೇಳಿಕೆ ನೀಡಬೇಕು: ಎಂ.ಪಿ. ರೇಣುಕಾಚಾರ್ಯ

ತಂತ್ರಜ್ಞಾನದಿಂದ ಮಾನವ ಜೀವನ ಸುಲಭ: ಸ್ಮಾರ್ಟ್‌ ಸಿಟಿ ಅಧಿಕಾರಿ ಶ್ರೀನಿವಾಸ

ತಂತ್ರಜ್ಞಾನದಿಂದ ಮಾನವ ಜೀವನ ಸುಲಭ: ಸ್ಮಾರ್ಟ್‌ ಸಿಟಿ ಅಧಿಕಾರಿ ಶ್ರೀನಿವಾಸ

Vijayapura; ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಕುಸಿದಿದೆ : ಸಂಸದ ಜಿಗಜಿಣಗಿ

Vijayapura; ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಕುಸಿದಿದೆ : ಸಂಸದ ಜಿಗಜಿಣಗಿ

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರಕಾರ ಬದ್ದ: ಸತೀಶ್ ಜಾರಕಿಹೊಳಿ

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರ್ಕಾರ ಬದ್ಧ: ಸತೀಶ್ ಜಾರಕಿಹೊಳಿ

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.