ಕೆಎಂಎಫ್ಗೆ ಪಾಟೀಲ ನೂತನ ಅಧ್ಯಕ್ಷ
Team Udayavani, Nov 16, 2018, 1:09 PM IST
ಕಲಬುರಗಿ: ತೀವ್ರ ಕುತೂಹಲ ಕೆರಳಿದ್ದ ಕಲಬುರಗಿ-ಬೀದರ-ಯಾದಗಿರಿ ಸಹಕಾರಿ ಹಾಲು ಉತ್ಪಾದಕರ ಒಕ್ಕೂಟ(ಕೆಎಂಎಫ್)ದ ಅಧ್ಯಕ್ಷರ ಚುನಾವಣೆಯಲ್ಲಿ ರಾಮಚಂದ್ರ ಕಲ್ಯಾಣರಾವ (ಆರ್. ಕೆ) ಪಾಟೀಲ ಅವರು ಅವಿರೋಧವಾಗಿ ಅಧ್ಯಕ್ಷರಾಗಿ ಆಯ್ಕೆಯಾಗಿದ್ದಾರೆ.
ನಗರದ ಒಕ್ಕೂಟದ ಕೇಂದ್ರ ಗುರುವಾರ ಕಚೇರಿಯಲ್ಲಿ ನಡೆದ ಚುನಾವಣೆ ಪ್ರಕ್ರಿಯೆಯಲ್ಲಿ ಆರ್.ಕೆ.ಪಾಟೀಲ ಒಬ್ಬರೇ ಅಧ್ಯಕ್ಷ ಸ್ಥಾನಕ್ಕೆ ನಾಮಪತ್ರ ಸಲ್ಲಿಸಿದ್ದರು. ಹಾಗಾಗಿ ಚುನಾವಣಾಧಿಕಾರಿಗಳಾಗಿ ಕಾರ್ಯನಿರ್ವಹಿಸಿದ ಕಲಬುರಗಿ ಸಹಾಯಕ ಆಯುಕ್ತ ಎಂ. ರಾಚಪ್ಪ ಅವರು ಅವಿರೋಧ ಆಯ್ಕೆ ಘೋಷಿಸಿದರು.
ಆಳಂದ ತಾಲೂಕು ಸರಸಂಬಾ ಗ್ರಾಮದ ಹಾಲು ಉತ್ಪಾದಕರ ಸಂಘದ ಸದಸ್ಯತ್ವದಿಂದ ಕಳೆದ ಅಕ್ಟೋಬರ್ 31ರಂದು ನಡೆದ ಒಕ್ಕೂದ ನಿರ್ದೇಶಕರ ಚುನಾವಣೆಯಲ್ಲಿ ನಿರ್ದೇಶಕರಾಗಿ ಆಯ್ಕೆಯಾಗಿ ಈಗ ಅಧ್ಯಕ್ಷರಾಗಿ ಆಯ್ಕೆಯಾಗಿರುವ ಆರ್.ಕೆ. ಪಾಟೀಲ ಅವರು ಆಳಂದ ಕ್ಷೇತ್ರದ ಮಾಜಿ ಶಾಸಕ ಬಿ.ಆರ್. ಪಾಟೀಲ ಅವರ ಸಹೋದರ ಪುತ್ರ.
ಅಧ್ಯಕ್ಷ ಸ್ಥಾನಕ್ಕೆ ಬೀದರ ಜಿಲ್ಲಾ ಉಸ್ತುವಾರಿ ಸಚಿವ ಬಂಡೆಪ್ಪ ಖಾಶಂಪುರ ಹಾಗೂ ರಾಜಶೇಖರ ಪಾಟೀಲ ಅವರ ಸಹೋದದರಾದ ಅನುಕ್ರಮವಾಗಿ ಮಾರುತಿ ಖಾಶೆಂಪುರ ಹಾಗೂ ರೇವಣಸಿದ್ದಪ್ಪ ಪಾಟೀಲ ಅವರ ಹೆಸರು ಪ್ರಬಲವಾಗಿ ಕೇಳಿ ಬಂದಿತ್ತು. ಇದರ ನಡುವೆ ಮಲ್ಲಿಕಾರ್ಜುನ ಬಿರಾದಾರ ಹೆಸರೂ ಮುಂಚೂಣಿಯಲ್ಲಿತ್ತು. ಆದರೆ ಕಳೆದ ಒಂದೂವರೆ ದಶಕದಿಂದ ಕಲಬುರಗಿಗೆ ಅಧ್ಯಕ್ಷ ಸ್ಥಾನ ದೊರಕದ ಹಿನ್ನೆಲೆಯಲ್ಲಿ ಜತೆಗೆ ಸಚಿವರ ಸಹೋದರರಿಗೆ ಮತ್ತೆ ಮಣೆ ಹಾಕಿದರೆ ಬೇರೆಯವರಿಗೆ ಅವಕಾಶ ಇಲ್ಲದಂತಾಗುತ್ತದೆ ಎಂಬುದನ್ನು ಮನಗಂಡು ಆರ್. ಕೆ.ಪಾಟೀಲ ಅವರನ್ನೇ ಒಮ್ಮತದ ಅಭ್ಯರ್ಥಿ ಎಂಬುದಾಗಿ ಕಾಂಗ್ರೆಸ್ ಪಕ್ಷದ ವರಿಷ್ಠರು ಅಂತಿಮಗೊಳಿಸಿದ್ದರಿಂದ ಸುಗಮವಾಗಿ ಅವಿರೋಧ ಆಯ್ಕೆ ನಡೆಯಿತು. ಈ ಮೂಲಕ ಕಲಬುರಗಿ-ಬೀದರ- ಯಾದಗಿರಿ ಸಹಕಾರ ಹಾಲು ಉತ್ಪಾದಕರ ಸಂಘಗಳ ಒಕ್ಕೂಟದಲ್ಲಿ ಕಾಂಗ್ರೆಸ್ ಬೆಂಬಲಿತ ಆಡಳಿತಕ್ಕೆ ಬಂದಂತಾಯಿತು. ಆರ್.ಕೆ. ಪಾಟೀಲ ಕೆಎಂಎಫ್ ಅಧ್ಯಕ್ಷರಾಗಲಿದ್ದಾರೆ ಎಂದು ಉದಯವಾಣಿ ಬುಧವಾರದ ಸಂಚಿಕೆಯಲ್ಲಿಯೇ ಸಮಗ್ರ ವರದಿ ಮಾಡಿದ್ದನ್ನು ಇಲ್ಲಿ ಗಮನಿಸಬಹುದಾಗಿದೆ.
ಸಭೆಯಲ್ಲಿ ಭಾಗವಹಿಸಿದ್ದವರು: ಚುನಾಯಿತ 12 ನಿರ್ದೇಶಕರ ಜತೆಗೆ ಐವರು ಅಧಿಕಾರಿಗಳು ಹಾಗೂ ಸರ್ಕಾರದಿಂದ ನಾಮನಿರ್ದೇಶನರಾದ ಸದಸ್ಯರೊಬ್ಬರು ಸೇರಿ 18 ಸದಸ್ಯರು ಚುನಾವಣೆ ಸಭೆಯಲ್ಲಿ ಪಾಲ್ಗೊಳ್ಳಬೇಕಿತ್ತು. ಆದರೆ ಮೊದಲ
ಬಾರಿಗೆ ನಿರ್ದೇಶಕರಾಗಿ ಚುನಾಯಿತರಾದ ಆಳಂದದ ಸಂತೋಷ ಸುಭಾಷ ಗುತ್ತೇದಾರ, ಸಹಕಾರ ಸಂಘಗಳ ಜಂಟಿ ನಿಬಂಧಕರು ಹಾಗೂ ರಾಷ್ಟ್ರೀಯ ಹೈನು ಅಭಿವೃದ್ಧಿ ಮಂಡಳಿ ಪ್ರತಿನಿಧಿಯವರು ಮಾತ್ರ ಗೈರು ಹಾಜರಾಗಿದ್ದರು. ನಿರ್ದೇಶಕರಾದ ಈರಣ್ಣ ಶಿವಲಿಂಗಪ್ಪ ಝಳಕಿ, ಚಂದ್ರಕಾಂತ ಭೂಸನೂರ, ರೇವಣಸಿದ್ದಪ್ಪ ಪಾಟೀಲ, ಶ್ರೀಕಾಂತ ವೈಜನಾಥ ದಾನಿ, ಬಂಡುರಾವ ಕುಲಕರ್ಣಿ, ದಿವಾಕರರಾವ್ ಜಾಗೀರದಾರ್, ವಿಠಲರೆಡ್ಡಿ ಕೃಷ್ಣಾರೆಡ್ಡಿ, ಮಾರುತಿ ಖಾಶೆಂಪುರ, ಮಲ್ಲಿಕಾರ್ಜುನ ಬಿರಾದಾರ ಹಾಗೂ ಭೀಮರಾವ ಅಮೃತರಾವ್ ಪಾಲ್ಗೊಂಡಿದ್ದರು.
ಇದರ ಜತೆಗೆ ಪಶು ಸಂಗೋಪನಾ ಇಲಾಖೆ ಉಪನಿರ್ದೇಶಕರು, ಕೆಎಂಎಫ್ ಒಕ್ಕೂಟದ ರಾಜ್ಯ ಮಟ್ಟದ ಅಧಿಕಾರಿ, ಕಲಬುರಗಿ ಕೆಎಂಎಫ್ ವ್ಯವಸ್ಥಾಪಕ ನಿರ್ದೇಶಕರು ಹಾಗೂ ಸರ್ಕಾರದಿಂದ ಕಲಬುರಗಿ ಕೆಎಂಎಫ್ ಒಕ್ಕೂಟಕ್ಕೆ ನಾಮನಿರ್ದೇಶನಗೊಂಡಿರುವ ಸಂಗಪ್ಪ ಶಾಮರಾವ ಪಾಟೀಲ ಸಹ ಸಭೆಯಲ್ಲಿ ಪಾಲ್ಗೊಂಡಿದ್ದರು.
ವಿಜಯೋತ್ಸವ: ಆರ್.ಕೆ. ಪಾಟೀಲ ಕೆಎಂಎಫ್ ಅಧ್ಯಕ್ಷರಾಗಿ ಆಯ್ಕೆಯಾಗುತ್ತಿದ್ದಂತೆ ವಿಜಯೋತ್ಸವ ಆಚರಿಸಲಾಯಿತು. ಮಾಜಿ ಶಾಸಕ ಬಿ.ಆರ್. ಪಾಟೀಲ, ನಿರ್ದೇಶಕರು-ಕಾರ್ಯಕರ್ತರು ಪಾಲ್ಗೊಂಡಿದ್ದರು. ಡಿಸಿಸಿ ಬ್ಯಾಂಕ್ ಅಧ್ಯಕ್ಷ ಬಸವರಾಜ ವಾಲಿ, ನಿರ್ದೇಕರಾದ ಸೋಮಶೇಖರ ಗೋನಾಯಕ, ಜಿಪಂ ಸದಸ್ಯ ಅರುಣ ಎಂ. ಪಾಟೀಲ, ಶರಣು ಪಾಟೀಲ ಸೇರಿದಂತೆ ಇತರರು ಶುಭ ಕೋರಿದರು.
ಹೈನೋದ್ಯಮ ಉತ್ತೇಜನಕ್ಕೆ ಕ್ರಮ
ಸಕಾಲಕ್ಕೆ ಮಳೆ ಬಾರದೇ ರೈತರು ಕಷ್ಟ ಅನುಭವಿಸುತ್ತಿರುವುದರಿಂದ ಪರ್ಯಾಯವಾಗಿ ಆರ್ಥಿಕವಾಗಿ ಸ್ವಾವಲಂಬನೆ ರೂಪಿಸುವ ಹೈನೋದ್ಯಮ ಉತ್ತೇಜನಕ್ಕೆ ಕ್ರಮ ಕೈಗೊಂಡು ಹಾಲು ಉತ್ಪಾದನೆಗೆ ಒತ್ತು ನೀಡಲಾಗುವುದು. ಪಕ್ಷದ ವರಿಷ್ಠರು ವಿಶ್ವಾಸವಿಟ್ಟು ಒಕ್ಕೂಟಕ್ಕೆ ಅಧ್ಯಕ್ಷರನ್ನಾಗಿಸಿದ್ದಾರೆ. ಹೀಗಾಗಿ ಎಲ್ಲರ ಸಲಹೆ-ಸೂಚನೆ ಮೇರೆಗೆ ಆರ್ಥಿಕ ಸಬಲತೆ ಹೊಂದುವ ನಿಟ್ಟಿನಲ್ಲಿ ಒಕ್ಕೂಟ ಮುನ್ನಡೆಸಿಕೊಂಡು ಹೋಗಲಾಗುವುದು.
ಆರ್.ಕೆ. ಪಾಟೀಲ, ನೂತನ ಅಧ್ಯಕ್ಷರು, ಕೆಎಂಎಫ್
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bidar:ಜಿಲ್ಲೆಯ ಹಲವೆಡೆ ಬಿರುಗಾಳಿ ಸಹಿತ ಮಳೆ, ತಂಪಾದ ಇಳೆ
LS Election; ಮೂರು ದಶಕಗಳ ಕಾಂಗ್ರೆಸ್ ಕೋಟೆ ಈಗ ಬಿಜೆಪಿ ನೆಲೆ
Admission ಪ್ರಚಾರಕ್ಕೆ ವಿದ್ಯಾರ್ಥಿನಿಯರಿಂದ ಡ್ಯಾನ್ಸ್!: ಕಾಲೇಜಿಗೆ ನೋಟಿಸ್
Hospitalized: ಮಾಜಿ ಸಚಿವ ಪ್ರಭು ಚವ್ಹಾಣ್ ಆರೋಗ್ಯದಲ್ಲಿ ಏರುಪೇರು; ಆಸ್ಪತ್ರೆಗೆ ದಾಖಲು
BJP; ತಪ್ಪು ತಿಳುವಳಿಕೆ ಇದ್ದಲ್ಲಿ ಶಾಸಕರಲ್ಲಿ ಕ್ಷಮೆಯಾಚಿಸುತ್ತೇನೆ!: ಸಚಿವ ಖೂಬಾ
MUST WATCH
ಹೊಸ ಸೇರ್ಪಡೆ
ಆನೆಗೊಂದಿ-ಕಡೆಬಾಗಿಲು ಚೆಕ್ ಪೋಸ್ಟ್ ಬಳಿ 32.95 ಲಕ್ಷ ರೂ.ದಾಖಲೆ ಇಲ್ಲದ ಹಣ ವಶಕ್ಕೆ
Ramanagara ಅಪಘಾತ; ವಿದ್ಯಾರ್ಥಿಗಳ ಪ್ರತಿಭಟನೆ
Telangana: ಜಾರ್ಖಂಡ್ ಗವರ್ನರ್ ಗೆ ಹೆಚ್ಚುವರಿ ಹೊಣೆಗಾರಿಕೆ, ತಮಿಳಿಸೈ ರಾಜೀನಾಮೆ ಅಂಗೀಕಾರ
Road mishap: ಆಟೋ ರಿಕ್ಷಾ – ಕಂಟೇನರ್ ಅಪಘಾತ; ಓರ್ವ ಮೃತ್ಯು, ನಾಲ್ವರಿಗೆ ಗಾಯ
ಶ್ರೀ ನಿತ್ಯಾನಂದ ಸ್ವಾಮಿ ಮಂದಿರ ಮಠ; ಧ್ಯಾನ ಮಂದಿರ, ಭೋಜನ ಶಾಲೆ ನಿರ್ಮಾಣ ಕಾಮಗಾರಿಗೆ ಚಾಲನೆ