ಬೇಸಿಗೆ ಮುನ್ನವೇ ಕುಡಿವ ನೀರಿನ ಸಮಸ್ಯೆ ಉಲ್ಬಣ
Team Udayavani, Nov 18, 2018, 12:06 PM IST
ಭಾಲ್ಕಿ: ಬೇಸಿಗೆ ಪ್ರಾರಂಭವಾಗುವ ಮುನ್ನವೇ ತಾಲೂಕಿನಾದ್ಯಂತ ಕುಡಿಯುವ ನೀರಿಗಾಗಿ ಹಾಹಾಕಾರ ಶುರುವಾಗಿದೆ. ಆರಂಭದಲ್ಲಿ ಉತ್ತಮವಾಗಿದ್ದ ಮುಂಗಾರು ಮಳೆ ನಂತರದ ದಿನಗಳಲ್ಲಿ ಮಳೆ ಕಣ್ಮರೆಯಾಗಿ, ಹಿಂಗಾರು ಮಳೆಯೂ ಬಾರದಿರುವುದರಿಂದ ಜನ ಜಾನುವಾರಗಳು ನೀರಿಗಾಗಿ ಪರಿತಪಿಸುವಂತಾಗಿದೆ.
ಕಳೆದ ಸಾಲಿನಲ್ಲಿ ಉತ್ತಮ ಮಳೆಯಾಗಿ ಎಲ್ಲವೂ ಚನ್ನಾಗಿತ್ತು. ಆದರೆ ಈ ವರ್ಷ ಪ್ರಾರಂಭದ ಜೂನ್, ಜುಲೈ ತಿಂಗಳಲ್ಲಿ ಸ್ವಲ್ಪಮಟ್ಟಿಗೆ ಮಳೆಯಾಗಿದ್ದು ಬಿಟ್ಟರೆ ಇಲ್ಲಿಯ ವರೆಗೆ ಹೇಳಿಕೊಳ್ಳುವಂತಹ ಮಳೆಯಾಗಿಲ್ಲ. ಹೀಗಾಗಿ ಕುಡಿಯುವ ನೀರಿಗಾಗಿ ತಾಲೂಕಿನ ಗ್ರಾಮಸ್ಥರು ಪರದಾಡುವಂತಾಗಿದೆ.
ಚಳಿಗಾಲದಲ್ಲಿಯೇ ಇಷ್ಟು ಸಮಸ್ಯೆಯಾಗಿದೆ. ಇನ್ನು ಬೇಸಿಗೆ ಕಾಲದಲ್ಲಿ ಎಂತಹ ಪರಿಸ್ಥಿತಿ ಉಂಟಾಗಬಹುದು ಎಂದು ಜನರಿಗೆ ಚಿಂತೆ ಕಾಡತೊಡಗಿದೆ.
ತೇಗಂಪೂರ ಗ್ರಾಮದಲ್ಲಿ ಕೆಲವು ವರ್ಷಗಳ ಹಿಂದೆ ಕೊರೆದ ಹತ್ತು ಕೊಳವೆ ಬಾವಿಗಳಿವೆ. ಆದರೆ ಅವು ನೀರಿಲ್ಲದೆ ಬತ್ತಿ ಹೋಗಿವೆ. ಈಚೆಗೆ 3 ಕೊಳವೆ ಬಾವಿಗಳನ್ನು ಕೊರೆಯಲಾಗಿದೆ. ಆದರೆ ಪ್ರಯೋಜನವಾಗಿಲ್ಲ. 700 ಅಡಿ ಆಳದ ವರೆಗೆ ಕೊರೆದರೂ ನೀರು ಲಭ್ಯವಾಗಿಲ್ಲ ಎಂದು
ಹೇಳುತ್ತಾರೆ ತೇಗಂಪೂರ ಗ್ರಾಮದ ನಿವಾಸಿಗರು. ತಾಲೂಕು ಆಡಳಿತದಿಂದ ತೇಗಂಪೂರ ಗ್ರಾಮಕ್ಕೆ ಟ್ಯಾಂಕರ್ ಮೂಲಕ ನೀರು ಪೂರೈಕೆ ಮಾಡಲಾಗುತ್ತಿದ್ದೆ. ಆದರೆ ಕುಟುಂಬವೊಂದಕ್ಕೆ 6 ಕೊಡ ಮಾತ್ರ ನೀರು ಲಭಿಸುತ್ತಿದೆ. ಆದರೆ ಅಗತ್ಯವಿರುವ ಹೆಚ್ಚಿನ ನೀರು ಪಡೆಯಲು ದೂರದ ಹೊಲಗಳಿಗೆ ಮಕ್ಕಳು, ಮಹಿಳೆಯರು ಸೇರಿ ಅಲಿಯಬೇಕಾಗಿದೆ ಎನ್ನುವುದು ಗ್ರಾಮಸ್ಥರ ಅಳಲು.
ಅ.26ರರಿಂದ ತಾಲೂಕಿನ ತೇಗಂಪೂರ ಗ್ರಾಮದಲ್ಲಿ ಮಾತ್ರ ಟ್ಯಾಂಕರ್ ಮೂಲಕ ನೀರು ಸರಬರಾಜು ಮಾಡಲಾಗುತ್ತಿದೆ. ತಾಲೂಕಿನ ಒಟ್ಟು 44 ಗ್ರಾಮಗಳಲ್ಲಿ ನೀರಿನ ತೊಂದರೆ ಇದೆ. ಇವುಗಳಲ್ಲಿ 8 ಗ್ರಾಮಗಳಿಗೆ ಪೈಪ್ಲೈನ್ ಮೂಲಕ ನೀರು ಸರಬರಾಜು ಮಾಡುವ ಬಗ್ಗೆ ತಾಲೂಕು ಆಡಳಿತದಿಂದ ನೀರು ಸರಬರಾಜು ಇಲಾಖೆಗೆ ಮಾಹಿತಿ ನೀಡಲಾಗಿದೆ ಎಂದು ತಹಶೀಲ್ದಾರ್ ಮನೋಹರ ಸ್ವಾಮಿ ಮಾಹಿತಿ ನೀಡಿದ್ದಾರೆ.
ಕುಡಿಯುವ ನೀರಿನ ಸಮಸ್ಯೆ ಶಾಶ್ವತ ಪರಿಹಾರಕ್ಕಾಗಿ ಗ್ರಾಮ ಸಮೀಪದ ಮಹಾದೇವ ಮಂದಿರ ಹತ್ತಿರ 10 ಎಕರೆ ಪ್ರದೇಶದ ಕೆರೆಯನ್ನು ಇನ್ನೂ ಆಳವಾಗಿ ಹೂಳೆತ್ತುವ ಕಾರ್ಯವಾಗಬೇಕು. ಅಲ್ಲದೇ ಕೆರೆಗೆ ತಡೆಗೋಡೆ ನಿರ್ಮಿಸಿ, ತುಂಬಿದ ಕೆರೆಯ ನೀರು ಹರಿದುಹೋಗಲು ಇರುವ ನಾಲೆ, ತಡೆಗೋಡೆ ದುರಸ್ತಿಗೆ ಮುಂದಾಗಬೇಕು ಎನ್ನುವುದು ಗ್ರಾಮಸ್ಥರ ಒತ್ತಾಯ.
ತಾಲೂಕಿನ ಪ್ರತಿ ಗ್ರಾಮಗಳಲ್ಲೂ ಕೆರೆಗಳಿವೆ. ಈ ಕೆರೆಗಳಿಗೆ ಕಾಯಕಲ್ಪ ನೀಡಿದಲ್ಲಿ ಮಳೆ ಅಭಾವದಿಂದ ಉಂಟಾಗುವ ನೀರಿನ ತೊಂದರೆ ತಪ್ಪಿಸಬಹುದು ಎನ್ನುವುದು ಚಿಂತಕರ ಅಭಿಮತವಾಗಿದೆ.
ಜಯರಾಜ ದಾಬಶೆಟ್ಟಿ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Lokayukta; ಬೆಳ್ಳಂಬೆಳಗ್ಗೆ ರಾಜ್ಯದ ವಿವಿಧೆಡೆ ಭ್ರಷ್ಟರ ಬೇಟೆಗಿಳಿದ ಲೋಕಾಯುಕ್ತ
Bidar: 9 ಲಕ್ಷ ರೂ. ಮೌಲ್ಯದ ಕಚ್ಚಾ ಪಾನ್ ಮಸಾಲಾ, 3 ಲಕ್ಷ ರೂ. ಮೌಲ್ಯ ಸೀರೆ ಜಪ್ತಿ
ಹಾಲ್ ಟಿಕೆಟನ್ನೇ ತಿಂದು ಹಾಕಿದ ಕುರಿ… ನೊಂದು ಆತ್ಮಹತ್ಯೆಗೆ ಯತ್ನಿಸಿದ ವಿದ್ಯಾರ್ಥಿನಿ
Bidar; ಖೂಬಾ ಪರ ಆರ್.ಅಶೋಕ್ ನೇತೃತ್ವದಲ್ಲಿ ಬಿಜೆಪಿ ಒಗ್ಗಟ್ಟು ಪ್ರದರ್ಶನ
Loksabha: ಬೀದರ್ ಕ್ಷೇತ್ರಕ್ಕೆ ಸಾಗರ ಖಂಡ್ರೆ ಹೆಸರು ಅಂತಿಮ; ಸಿಎಂ ಭೇಟಿಯಾದ ಈಶ್ವರ್
MUST WATCH
ಹೊಸ ಸೇರ್ಪಡೆ
ಮೈಸೂರು:ಶೃಂಗೇರಿ ಶಂಕರ ಮಠ-ಮಾ. 30ರಿಂದ ಅಭಿನವ ಶಂಕರಾಲಯದ ಶತಮಾನೋತ್ಸವ ಆಚರಣೆ
Delhi: ದುಬಾರಿ ಮರ್ಸಿಡೆಸ್ ಕಾರಿನಲ್ಲಿ ಡ್ರಗ್ಸ್ ಸಾಗಾಟ-ರಾಷ್ಟ್ರಮಟ್ಟದ ಕುಸ್ತಿಪಟು ಬಂಧನ!
Thirthahalli: ರಾಜ್ಯದ 28 ಕ್ಷೇತ್ರವನ್ನೂ ಗೆಲ್ಲಿಸಬೇಕೆಂದು ಜೆಡಿಎಸ್ ಪಕ್ಷದೊಂದಿಗೆ ಮೈತ್ರಿ
Tollywood: ಸಿದ್ಧಾರ್ಥ್ – ಅದಿತಿ ರಾವ್ ಮದುವೆ ಆಗಿಲ್ಲ: ಎಂಗೇಜ್ ಮೆಂಟ್ ಮಾಡಿಕೊಂಡ ಜೋಡಿ
RC 17: ಮತ್ತೆ ಒಂದಾದ ರಂಗಸ್ಥಳಂ ತಂಡ