ವಿದ್ಯಾರ್ಥಿಗಳಿಂದ ಮಾನವ ಸರಪಳಿ


Team Udayavani, Nov 20, 2018, 12:10 PM IST

bid-1.jpg

ಬೀದರ: ಶೌಚಾಲಯ ದಿನಾಚರಣೆ ಅಂಗವಾಗಿ ನಗರದ ನೆಹರೂ ಕ್ರೀಡಾಂಗಣದಲ್ಲಿ ವಿದ್ಯಾರ್ಥಿಗಳು ಏಕಕಾಲಕ್ಕೆ ಒಂದೆಡೆ ಸೇರಿ, ಮಾನವ ಸರಪಳಿ ನಿರ್ಮಿಸಿ, ಶೌಚಾಲಯ ನಿರ್ಮಾಣಕ್ಕೆ ಬದ್ಧರಾಗಿದ್ದೇವೆ ಎಂದು ಪ್ರತಿಜ್ಞಾವಿಧಿ ಸ್ವೀಕರಿಸಿದರು.

ಜಿಲ್ಲಾ ಪಂಚಾಯತ್‌ ಹಾಗೂ ಸ್ವತ್ಛ ಭಾರತ ಮಿಶನ್‌ ಸಂಯುಕ್ತ ಆಶ್ರಯದಲ್ಲಿ ಹಮ್ಮಿಕೊಂಡಿದ್ದ ಕಾರ್ಯಕ್ರಮದಲ್ಲಿ ನಗರದ ಬಹುತೇಕ ಶಾಲಾ-ಕಾಲೇಜುಗಳ ವಿದ್ಯಾರ್ಥಿಗಳು ಭಾಗವಹಿಸಿದ್ದರು. ಮಾನವ ಸರಪಳಿ ನಿರ್ಮಿಸಿದ್ದ ವಿದ್ಯಾರ್ಥಿಗಳಿಗೆ ಜಿಲ್ಲಾಧಿಕಾರಿ ಡಾ| ಎಚ್‌.ಆರ್‌. ಮಹಾದೇವ ಪ್ರತಿಜ್ಞಾವಿಧಿ ಬೋಧಿಸಿದರು. “ನಾನು, ಈ ವಿಶ್ವ ಶೌಚಾಲಯ ದಿನದ ಸಂದರ್ಭದಲ್ಲಿ ಸ್ವತ್ಛ, ಆರೋಗ್ಯಕರ ವಾತಾವರಣ ನಿರ್ಮಾಣಕ್ಕಾಗಿ, ನನ್ನ ಸುತ್ತಲಿನ ಪರಿಸರವು ಸ್ವತ್ಛವಾಗಿರುವಂತೆ ಕಾಳಜಿ ವಹಿಸುತ್ತೇನೆ. ಬಯಲಿನಲ್ಲಿ ಶೌಚ ಮಾಡುವುದಿಲ್ಲ. ಶೌಚಾಲಯ ಬಳಸುತ್ತೇನೆ ಮತ್ತು ಸ್ವತ್ಛವಾಗಿಡುತ್ತೇನೆ. ನೀರನ್ನು ಮಿತವಾಗಿ ಬಳಸುತ್ತೇನೆ. ವ್ಯರ್ಥಮಾಡುವುದಿಲ್ಲ. ಮನೆಯಲ್ಲಿ ಹಸಿ ಕಸ ವಿಂಗಡಿಸಿ ಅಮೂಲ್ಯ ಗೊಬ್ಬರವನ್ನಾಗಿಸುತ್ತೇನೆ ಮತ್ತು ಈ ಮಹತ್ಕಾರ್ಯದಲ್ಲಿ ನನ್ನ ಬಂಧು-ಮಿತ್ರರು, ನೆರೆಹೊರೆಯವರು ಭಾಗವಹಿಸಲು ಅವರನ್ನು ಹುರಿದುಂಬಿಸುವ ಪ್ರಯತ್ನ ಮಾಡುತ್ತೇನೆ’ ಎಂದು ವಿದ್ಯಾರ್ಥಿಗಳಿಗೆ ಪ್ರತಿಜ್ಞೆ ವಿಧಿ ಬೋಧಿಸಲಾಯಿತು.

ಈ ವೇಳೆ ಸಂಸದ ಭಗವಂತ ಖೂಬಾ ಮಾತನಾಡಿ, ನಮ್ಮ ದೇಶದಲ್ಲಿ ಶೌಚಾಲಯಗಳ ನಿರ್ಮಾಣ ವೇಗದ ಗತಿಯಲ್ಲಿ ನಡೆದಿದೆ. ಹೀಗೆ ಪ್ರತಿಯೊಂದು ಹಳ್ಳಿಗಳಲ್ಲಿ ಶೌಚಾಲಯಗಳು ನಿರ್ಮಾಣವಾಗಬೇಕು. ಅಧಿಕಾರಿಗಳು ಗ್ರಾಮಕ್ಕೆ ತೆರಳಿ ಸಭೆ ನಡೆಸಿ ಜನರಲ್ಲಿ ಸ್ವತ್ಛತೆ, ಶೌಚಾಲಯ ನಿರ್ಮಾಣ ಮತ್ತು ಬಳಕೆ ಬಗ್ಗೆ ಅರಿವು ಮೂಡಿಸುವ ಕೆಲಸ ಮಾಡಬೇಕು ಎಂದು ತಿಳಿಸಿದರು.

ಶಾಸಕ ರಹೀಂ ಖಾನ್‌ ಮಾತನಾಡಿ, ಇನ್ನೂ ಅನೇಕ ಗ್ರಾಮಗಳಲ್ಲಿ ಜನರು ಬಯಲು ಬಹಿರ್ದೆಸೆಗೆ ಹೋಗುತ್ತಾರೆ. ಅಂತಹ ಜನರಿಗೆ ಶೌಚಾಲಯ ಬಳಕೆ ಬಗ್ಗೆ ಮೇಲಿಂದ ಮೇಲೆ ಜಾಗೃತಿ ಮೂಡಿಸುವ ಕೆಲಸ ಮಾಡಬೇಕಿದೆ ಎಂದು ಸಲಹೆ ನೀಡಿದರು.

ಜಿಲ್ಲಾ ಪಂಚಾಯತ್‌ ಉಪಾಧ್ಯಕ್ಷ ಡಾ| ಪ್ರಕಾಶ ಪಾಟೀಲ ಮಾತನಾಡಿ, ಮಕ್ಕಳು ನಮ್ಮ ದೇಶದ ಬಹುದೊಡ್ಡ ಸಂಪತ್ತು. ಅವರ ಮೂಲಕ ಕೂಡ ಜಾಗೃತಿ ಮೂಡಿಸಬೇಕಿದೆ. ಮಕ್ಕಳು ಮನೆಯಲ್ಲಿ ಶುಚಿತ್ವದ ಬಗ್ಗೆ ತಮ್ಮ ಪಾಲಕರಿಗೆ ತಿಳಿಸಬೇಕು. ಶೌಚಾಲಯ ನಿರ್ಮಾಣ ಅಭಿಯಾನದಲ್ಲಿ ಪಾಲ್ಗೊಳ್ಳಬೇಕು ಎಂದು ತಿಳಿಸಿದರು.

ಜಿಲ್ಲಾ ಪಂಚಾಯತ್‌ ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ಮಹಾಂತೇಶ ಬೀಳಗಿ ಪ್ರಾಸ್ತಾವಿಕ ಮಾತನಾಡಿ, ಸ್ವತ್ಛ ಭಾರತ ಅಭಿಯಾನವು ಇಡೀ ದೇಶದಲ್ಲಿಯೇ ಜನರ ಗಮನ ಸೆಳೆದಿದೆ. ಶೌಚಾಲಯಗಳನ್ನು ಬರೀ ನಿರ್ಮಿಸಿಕೊಳ್ಳುವುದಷ್ಟೇ ಅಲ್ಲ.  ಅವುಗಳನ್ನು ಬಳಸುವುದು ಅತೀ ಅವಶ್ಯವಿದೆ. ಬೀದರ ಜಿಲ್ಲೆಯಲ್ಲಿ ಶೌಚಾಲಯಗಳ ನಿರ್ಮಾಣದ ವೇಗ ಹೆಚ್ಚಿದೆ ಎಂದು ಹೇಳಿದರು.

ಬೀದರ ಸಹಾಯಕ ಆಯುಕ್ತ ಶಿವಕುಮಾರ ಶೀಲವಂತ, ಜಿಲ್ಲಾ ಪಂಚಾಯತ್‌ ಉಪ ಕಾರ್ಯದರ್ಶಿ ಹಾಗೂ ಸ್ವತ್ಛ ಭಾರತ ಮಿಶನ್‌ನ ನೋಡೆಲ್‌ ಅಧಿಕಾರಿ ಕಿಶೋರಕುಮಾರ ದುಬೆ, ಸಾರ್ವಜನಿಕ ಶಿಕ್ಷಣ ಇಲಾಖೆಯ ಅಧಿಕಾರಿ ಇನಾಯತಲಿ ಶಿಂಧೆ, ಸ್ವತ್ಛ ಭಾರತ ಮಿಷನ್‌ನ ಸಹಾಯಕ ನೋಡೆಲ್‌ ಅಧಿಕಾರಿ ಗೌತಮ ಅರಳಿ, ಪದವಿಪೂರ್ವ ಶಿಕ್ಷಣ ಇಲಾಖೆಯ ಉಪ ನಿರ್ದೇಶಕರು ಸೇರಿದಂತೆ ಇತರೆ ಅಧಿಕಾರಿಗಳು ಭಾಗವಹಿಸಿದ್ದರು.

ಟಾಪ್ ನ್ಯೂಸ್

Award: ಅಮಿತಾಬ್ ಬಚ್ಚನ್, ಎಆರ್ ರೆಹಮಾನ್ ಗೆ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಗೌರವ

Award: ಅಮಿತಾಬ್ ಬಚ್ಚನ್, ಎಆರ್ ರೆಹಮಾನ್ ಗೆ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಗೌರವ

5-harikrishna

LS Polls: ಹಿಂದೂ ಸಂಸ್ಕೃತಿ, ಪರಂಪರೆ ಉಳಿಸಲು ಬಿಜೆಪಿಯೇ ಶಕ್ತಿ: ಹರಿಕೃಷ್ಣ ಬಂಟ್ವಾಳ

3-dinesh

33 ವರ್ಷಗಳಲ್ಲಿ ದ.ಕ. ಜಿಲ್ಲೆಗೆ ಬಿಜೆಪಿ ಸಂಸದರ ಕೊಡುಗೆ ಏನು? ಸಚಿವ ದಿನೇಶ್‌ ಗುಂಡೂರಾವ್‌

Patna: ಪಾಟ್ನಾದಲ್ಲಿ ನಿತೀಶ್ ಕುಮಾರ್ ಪಕ್ಷದ ನಾಯಕನ ಗುಂಡಿಕ್ಕಿ ಹತ್ಯೆ… ಆರೋಪಿಗಳು ಪರಾರಿ

Patna: ಪಾಟ್ನಾದಲ್ಲಿ ನಿತೀಶ್ ಕುಮಾರ್ ಪಕ್ಷದ ನಾಯಕನ ಗುಂಡಿಕ್ಕಿ ಹತ್ಯೆ… ಆರೋಪಿಗಳು ಪರಾರಿ

Ramakrishna Mission: ರಾಮಕೃಷ್ಣ ಮಠ, ಮಿಷನ್‌ನ ಅಧ್ಯಕ್ಷರಾಗಿ ಕನ್ನಡಿಗ ಸ್ವಾಮೀಜಿ ಆಯ್ಕೆ

Ramakrishna Mission: ರಾಮಕೃಷ್ಣ ಮಠ, ಮಿಷನ್‌ನ ಅಧ್ಯಕ್ಷರಾಗಿ ಕನ್ನಡಿಗ ಸ್ವಾಮೀಜಿ ಆಯ್ಕೆ

Sam Pitroda: ಪಿತ್ರೋಡಾ ಹೇಳಿಕೆ, ನಮ್ಮ ಅಭಿಪ್ರಾಯ ಅಲ್ಲ: ಕಾಂಗ್ರೆಸ್‌

Sam Pitroda: ಪಿತ್ರೋಡಾ ಹೇಳಿಕೆ, ನಮ್ಮ ಅಭಿಪ್ರಾಯ ಅಲ್ಲ: ಕಾಂಗ್ರೆಸ್‌

Lok Sabha Election: ಸೀನಿಯರ್‌ ಖೂಬಾಗೆ ಜ್ಯೂನಿಯರ್‌ ಖಂಡ್ರೆ ಸವಾಲು

Lok Sabha Election: ಸೀನಿಯರ್‌ ಖೂಬಾಗೆ ಜ್ಯೂನಿಯರ್‌ ಖಂಡ್ರೆ ಸವಾಲು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Lok Sabha Election: ಸೀನಿಯರ್‌ ಖೂಬಾಗೆ ಜ್ಯೂನಿಯರ್‌ ಖಂಡ್ರೆ ಸವಾಲು

Lok Sabha Election: ಸೀನಿಯರ್‌ ಖೂಬಾಗೆ ಜ್ಯೂನಿಯರ್‌ ಖಂಡ್ರೆ ಸವಾಲು

16

ನೀತಿ ಸಂಹಿತೆ ನಡುವೆಯೂ ರಾಜ್ಯಕ್ಕೆ ನೆರವು ಎನ್ನುವ ಬಿಜೆಪಿಗೆ ನಾಚಿಕೆ ಇಲ್ಲವೇ? – ಖಂಡ್ರೆ

Minchu

Rain; ಬೀದರ್,ಕೊಪ್ಪಳದಲ್ಲಿ ಸಿಡಿಲಿನ ಆರ್ಭಟಕ್ಕೆ ಇಬ್ಬರು ಮೃತ್ಯು

Bidar; ಪ್ರೇಯಸಿ ಮದುವೆ ದಿನವೇ ಪ್ರಿಯಕರನ ಶವ ಪತ್ತೆ

Bidar; ಪ್ರೇಯಸಿ ಮದುವೆ ದಿನವೇ ಪ್ರಿಯಕರನ ಶವ ಪತ್ತೆ

rape

Bidar; ಯುವಕನಿಂದ ಅಪ್ರಾಪ್ತ ವಯಸ್ಕಳ ರೇಪ್

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Award: ಅಮಿತಾಬ್ ಬಚ್ಚನ್, ಎಆರ್ ರೆಹಮಾನ್ ಗೆ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಗೌರವ

Award: ಅಮಿತಾಬ್ ಬಚ್ಚನ್, ಎಆರ್ ರೆಹಮಾನ್ ಗೆ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಗೌರವ

5-harikrishna

LS Polls: ಹಿಂದೂ ಸಂಸ್ಕೃತಿ, ಪರಂಪರೆ ಉಳಿಸಲು ಬಿಜೆಪಿಯೇ ಶಕ್ತಿ: ಹರಿಕೃಷ್ಣ ಬಂಟ್ವಾಳ

3-dinesh

33 ವರ್ಷಗಳಲ್ಲಿ ದ.ಕ. ಜಿಲ್ಲೆಗೆ ಬಿಜೆಪಿ ಸಂಸದರ ಕೊಡುಗೆ ಏನು? ಸಚಿವ ದಿನೇಶ್‌ ಗುಂಡೂರಾವ್‌

Patna: ಪಾಟ್ನಾದಲ್ಲಿ ನಿತೀಶ್ ಕುಮಾರ್ ಪಕ್ಷದ ನಾಯಕನ ಗುಂಡಿಕ್ಕಿ ಹತ್ಯೆ… ಆರೋಪಿಗಳು ಪರಾರಿ

Patna: ಪಾಟ್ನಾದಲ್ಲಿ ನಿತೀಶ್ ಕುಮಾರ್ ಪಕ್ಷದ ನಾಯಕನ ಗುಂಡಿಕ್ಕಿ ಹತ್ಯೆ… ಆರೋಪಿಗಳು ಪರಾರಿ

Ramakrishna Mission: ರಾಮಕೃಷ್ಣ ಮಠ, ಮಿಷನ್‌ನ ಅಧ್ಯಕ್ಷರಾಗಿ ಕನ್ನಡಿಗ ಸ್ವಾಮೀಜಿ ಆಯ್ಕೆ

Ramakrishna Mission: ರಾಮಕೃಷ್ಣ ಮಠ, ಮಿಷನ್‌ನ ಅಧ್ಯಕ್ಷರಾಗಿ ಕನ್ನಡಿಗ ಸ್ವಾಮೀಜಿ ಆಯ್ಕೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.