ವಿವಿಧೆಡೆ ಈದ್‌ ಮಿಲಾದ್‌ ಸಂಭ್ರಮ


Team Udayavani, Nov 22, 2018, 11:29 AM IST

bid-1.jpg

ಬೀದರ: ಪ್ರವಾದಿ ಮೊಹಮ್ಮದ್‌ ಪೈಗಂಬರ್‌ ಅವರ ಜನ್ಮದಿನದ ಪ್ರಯುಕ್ತ ಮುಸ್ಲಿಂ ಬಾಂಧವರು ಬುಧವಾರ ಈದ್‌ ಮಿಲಾದ್‌ ಹಬ್ಬವನ್ನು ಸಡಗರ ಸಂಭ್ರಮದಿಂದ ಆಚರಿಸಿದರು. ಹಬ್ಬದ ನಿಮಿತ್ತ ಹೊಸ ನಗರದ ಜಮಿಯಾ ಮಸೀದಿಯಲ್ಲಿ ಕೇಂದ್ರದಲ್ಲಿ ಸಾಮೂಹಿಕ ಪ್ರಾರ್ಥನೆ ಸಲ್ಲಿಸಿದರು. ಪರಸ್ಪರ ಹಬ್ಬದ ಶುಭಾಶಯ ಕೋರಿದರು.

ಹಬ್ಬದ ನಿಮಿತ್ತ ನಗರದ ಗವಾನ್‌ ವೃತ್ತದಿಂದ ಆರಂಭವಾದ ಮೆರವಣಿಗೆ ಶಹಾಗಂಜ್‌, ಅಂಬೇಡ್ಕರ್‌ ವೃತ್ತ, ಮಹಾವೀರ ವೃತ್ತ, ಬಸವೇಶ್ವರ ವೃತ್ತ, ನಯಾ ಕಮಾನ್‌ ಮಾರ್ಗವಾಗಿ ಚೌಬಾರ್‌ ಸಮೀಪದದಲ್ಲಿ ಸಮಾರೋಪಗೊಂಡಿತು. ಮೆರವಣಿಗೆಯಲ್ಲಿ ಸಾವಿರಾರೂ ಸಂಖ್ಯೆಯಲ್ಲಿ ಯುವಕರು ಭಾಗವಹಿಸಿದ್ದರು. ಮೆಕ್ಕಾ ಮದೀನಾ ಸ್ತಬ್ಧಚಿತ್ರದ ಮೆರವಣಿಗೆ ನಡೆಯಿತು. ಯುವಕರು ಬೈಕ್‌ಗಳಿಗೆ ಧಾರ್ಮಿಕ ಧ್ವಜ ಕಟ್ಟಿಕೊಂಡು ನಗರದ ಸಂಚಾರ ನಡೆಸಿದರು. ನಗರದ ವಿವಿಧಡೆ ಬಿಗಿ ಪೊಲೀಸ್‌ ಬಂದೋಬಸ್ತ್ ಮಾಡಲಾಗಿತ್ತು.

ಪ್ರವಾದಿ ಮಹ್ಮದ್‌ ಪೈಗಂಬರ್‌ ಜಯಂತಿ 
ಔರಾದ: ಪ್ರವಾದಿ ಮಹ್ಮದ್‌ ಪೈಗಂಬರ್‌ ಜಯಂತಿ ನಿಮಿತ್ತ ಪಟ್ಟಣದಲ್ಲಿ ಮುಸ್ಲಿಂ ಬಾಂಧವರು ಭವ್ಯ ಮೆರವಣಿಗೆ ನಡೆಸಿದರು. ಜಯಂತಿ ಅಂಗವಾಗಿ ಪ್ರಮುಖ ಬೀದಿ ಬೀದಿಗಳಲ್ಲಿ ಗಂಧದ ಮೆರವಣಿಗೆ ನಡೆಯಿತು.

ಪಟ್ಟಣದ ಕನ್ನಡಾಂಬೆ ವೃತ್ತದಿಂದ ಆರಂಭವಾದ ಮರೆವಣಿಗೆ ಮುಖ್ಯ ರಸ್ತೆ ಮಾರ್ಗವಾಗಿ ತಾಪಂ ಕಚೇರಿ ಹಿಂಭಾಗದಲ್ಲಿನ ವೇದಿಕೆಗೆ ಕರೆದ್ಯೊಯಲಾಯಿತು. ಮೆರವಣಿಗೆಯಲ್ಲಿ ಪಟ್ಟಣ ಸೇರಿದಂತೆ ತಾಲೂಕಿನ ವಿವಿಧ ಗ್ರಾಮದಿಂದ ಬಂದ ಮುಸ್ಲಿಂ ಬಾಂಧವರು ಹಾಗೂ ಶಾಲೆ ಕಾಲೇಜಿನ ಮಕ್ಕಳು ಮತ್ತು ಯುವಕರು ಸಹ ಹೆಚ್ಚಿನ ಸಂಖ್ಯೆಯಲ್ಲಿ ಮೆರವಣಿಗೆಯಲ್ಲಿದ್ದರು. ಕುದುರೆ ಹಾಗೂ ಒಂಟೆಗಳ ಮೆರವಣಿಗೆ ಆಕರ್ಷಣೆಯಾಗಿತ್ತು. ಮಸೀದಿಯಲ್ಲಿ ಖಾಜಿಸಾಬ್‌ ಮಾತನಾಡಿ, ವಿಶ್ವಕ್ಕೆ ಶಾಂತಿ ಸಿಗಲಿ. ಪರಸ್ಪರ ಜಾತಿ, ಜನಾಂಗದ ಮಧ್ಯೆ ಪ್ರೀತಿ, ವಿಶ್ವಾಸ, ವೃದ್ಧಿಸಲು ಅಲ್ಲಾ ದಯೇ  ತೋರುವಂತೆ ಪ್ರಾರ್ಥನೆ ಮಾಡಿದರು. 

ಯುವಕರಿಂದ ಬೈಕ್‌ ರ್ಯಾಲಿ
ಭಾಲ್ಕಿ: ಪಟ್ಟಣ ಸೇರಿದಂತೆ ತಾಲೂಕಿನಾದ್ಯಂತ ಬುಧವಾರ ಮುಸ್ಲಿಂ ಬಾಂಧವರು ಈದ್‌ ಮಿಲಾದ್‌ ಹಬ್ಬ ಸಡಗರ ಸಂಭ್ರಮದಿಂದ ಆಚರಿಸಿದರು. ಪವಿತ್ರ ಈದ್‌ ಮಿಲಾದ್‌ ಅಂಗವಾಗಿ ಪಟ್ಟಣದ ವಿವಿಧ ಮಸೀದಿಗಳಲ್ಲಿ ಮುಸ್ಲಿಂ ಬಾಂಧವರು ಪ್ರಾರ್ಥನೆ ಸಲ್ಲಿಸಿ ಪರಸ್ಪರ ಶುಭಾಶಯ ವಿನಿಮಿಯ ಮಾಡಿಕೊಂಡರು. ಮಿಲಾದ್‌ ಕಮಿಟಿ ವತಿಯಿಂದ ಮೆರವಣಿಗೆ ನಡೆಯಿತು. ಹಳೇ ಪಟ್ಟಣದ ಮೌಲಾಲಿ ಅಲಿ ಅಶೂರ ಖಾನಾ ಮಸೀದಿಯಿಂದ ಆರಂಭಗೊಂಡ ಮೆರವಣಿಗೆ ನಾನಾ ರಸ್ತೆ, ಬೀದಿಗಳಲ್ಲಿ ಸಂಚರಿಸಿತು. ಪವಿತ್ರ ಮೆಕ್ಕಾ ಮದೀನಾ ಪ್ರತಿಕೃತಿ ತಯಾರಿಸಿ ಅಲಂಕರಿಸಿ ಮೆರವಣಿಗೆ ನಡೆಸಿ ಸಂಭ್ರಮಿಸಿದರು.

ಈದ್‌ ಮಿಲಾದ್‌: ಭವ್ಯ ಮೆರವಣಿಗೆ 
ಬಸವಕಲ್ಯಾಣ: ಈದ್‌ ಮಿಲಾದ್‌ ಹಬ್ಬದ ಅಂಗವಾಗಿ ಮುಸ್ಲಿಂ ಬಾಂಧವರಿಂದ ಬುಧವಾರ ನಗರದಲ್ಲಿ ಮೆರವಣಿಗೆ (ಝುಲುಸ್‌) ಕಾರ್ಯಕ್ರಮ ನಡೆಯಿತು. ನಗರದ ಕೋಟೆಯಿಂದ ಆರಂಭವಾದ ಮೆರವಣಿಗೆ ವಿವಿಧ ವೃತ್ತಗಳ ಮೂಲಕ ನಗರದ ಗಾಂಧಿ ವೃತ್ತಕ್ಕೆ ಬಂದು ಕೊನೆಗೊಂಡಿತು. ಶಾಸಕ ಬಿ.ನಾರಾಯಣರಾವ್‌, ಹಜರತ್‌ ಪೀರಪಾಶಾ ಸಾಹೇಬ್‌ ಖಾದೀರ್‌, ಹಜರತ್‌ ಶೇಖ್‌ ಅಹ್ಮದ್‌ ಅಲಿ ಸಾಹೇಬ್‌, ಹಜರತ್‌ ಸುಲ್ತಾನ್‌ ಅಲಿಷಾ ಸಾಹೇಬ್‌, ಹಜರತ್‌ ಖುರ್ಷಿದ್‌ ಅಲಿಶಾ ಸಾಹೇಬ್‌ ಇದ್ದರು.

ಐಎಂಐಯಿಂದ ರಕ್ತದಾನ ಶಿಬಿರ ಭಾಲ್ಕಿ: ಪವಿತ್ರ ಈದ್‌ ಮಿಲಾದ್‌ ಅಂಗವಾಗಿ ಪಟ್ಟಣದ ಜಾಧವ ಆಸ್ಪತ್ರೆಯಲ್ಲಿ ಬುಧವಾರ ರಕ್ತದಾನ ಶಿಬಿರ ನಡೆಯಿತು. ಎಂಐಎಂ ಸಂಘಟನೆ ವತಿಯಿಂದ ನಡೆದ ರಕ್ತದಾನ ಶಿಬಿರದಲ್ಲಿ 50ಕ್ಕೂ ಹೆಚ್ಚು ಮುಸ್ಲಿಂ ಸಮುದಾಯದ ಯುವಕರು ರಕ್ತದಾನ ಮಾಡುವ ಮೂಲಕ ಮಹ್ಮದ್‌ ಪೈಗಂಬರ್‌ ಅವರ ಜನ್ಮದಿನಕ್ಕೆ ವಿಶೇಷ ಕಾಣಿಕೆ ನೀಡಿದರು. ಇದೇ ವೇಳೆ ಜಾಧವ ಆಸ್ಪತ್ರೆಯ ಡಾ| ರಾಜೆಂದ್ರಜಾಧವ ಮಾತನಾಡಿ, ಈದ್‌ ಮಿಲಾದ್‌ ಹಬ್ಬದ ನಿಮಿತ್ತ ಮುಸ್ಲಿಂ ಸಮುದಾಯದ ಯುವಕರು ರಕ್ತದಾನ ಶಿಬಿರ ಹಮ್ಮಿಕೊಂಡಿರುವುದು ಉತ್ತಮ ಕಾರ್ಯ ಎಂದು ಹೇಳಿದರು. ಎಂಐಎಂ ಸಂಘಟನೆ ತಾಲೂಕು ಅಧ್ಯಕ್ಷ ಮಹ್ಮದ್‌ ರಫಿಕ್‌ ಇನಾಮದಾರ್‌, ಶೇಖ್‌ ಅಜರ್‌, ಸಂಜುಕುಮಾರ ಜೋಲದಾಪಕೆ, ಶೇಖ್‌ಖಾಜಾ, ಎಂಡಿ. ಖಲೀಲ್‌, ಶೇಖ್‌ ತಾರುಕಡಾ, ನಾಗೇಶ ಟೊಪಾರೆ, ಸಂಗಶೆಟ್ಟಿ ಟೊಪಾರೆ, ಶೇಖ್‌ ಶಫಿಯೋದ್ದಿನ್‌, ಮಹ್ಮದ್‌ ಹುಸೇನ್‌ ಇನಾಮದಾರ್‌, ಮಹ್ಮದ್‌ ಇರ್ಫಾನ್‌ ಇನಾಮದಾರ್‌, ನರಸಿಂಗರಾವ ತೋರಣೆ ಇದ್ದರು.

ಟಾಪ್ ನ್ಯೂಸ್

Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ

Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್

Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ

Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ

WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್‌ ಮೆಟ್ಟಿಲೇರಿದ ಪ್ರಕರಣ, ಏನಿದು?

WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್‌ ಮೆಟ್ಟಿಲೇರಿದ ಪ್ರಕರಣ, ಏನಿದು?

Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್

Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್

Chitradurga: ಹೃದಯಾಘಾತದಿಂದ ಚುನಾವಣಾ ಕರ್ತವ್ಯದಲ್ಲಿದ್ದ ಶಿಕ್ಷಕಿ ಮೃತ್ಯು…

Chitradurga: ಚುನಾವಣಾ ಕರ್ತವ್ಯದಲ್ಲಿದ್ದಾಗಲೇ ಹೃದಯಾಘಾತಗೊಂಡು ಶಿಕ್ಷಕಿ ಮೃತ್ಯು…

Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ

Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

12

B.S.Yediyurappa: ಶಾಸಕ ಪ್ರಭು ಚವ್ಹಾಣ ಹೆಸರು ಹೇಳುತ್ತಿದ್ದಂತೆ ಬಿಎಸ್‌ವೈ ಗರಂ

1-wqqwewqe

BJP; ಖೂಬಾ ಮತ್ತೊಮ್ಮೆ ಸಚಿವರಾಗ್ತಾರೆ : ಔರಾದ್ ನಲ್ಲಿ ಯಡಿಯೂರಪ್ಪ ಘೋಷಣೆ

siddaramaiah

Bidar; ನೇಹಾ ಪ್ರಕರಣದಲ್ಲಿ ಬಿಜೆಪಿ ರಾಜಕೀಯ‌ ಮಾಡುವುದು ಸರಿಯಲ್ಲ: ಸಿಎಂ ಸಿದ್ಧರಾಮಯ್ಯ‌

Lok Sabha Election: ಸೀನಿಯರ್‌ ಖೂಬಾಗೆ ಜ್ಯೂನಿಯರ್‌ ಖಂಡ್ರೆ ಸವಾಲು

Lok Sabha Election: ಸೀನಿಯರ್‌ ಖೂಬಾಗೆ ಜ್ಯೂನಿಯರ್‌ ಖಂಡ್ರೆ ಸವಾಲು

16

ನೀತಿ ಸಂಹಿತೆ ನಡುವೆಯೂ ರಾಜ್ಯಕ್ಕೆ ನೆರವು ಎನ್ನುವ ಬಿಜೆಪಿಗೆ ನಾಚಿಕೆ ಇಲ್ಲವೇ? – ಖಂಡ್ರೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ

Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್

ಹೆಸ್ಕತ್ತೂರು ಕಟ್ಟಿನಬುಡ: ಕೃಷಿಗೆ ಆಸರೆಯಾಗದ ವಾರಾಹಿ ಕಾಲುವೆ ನೀರು!

ಹೆಸ್ಕತ್ತೂರು ಕಟ್ಟಿನಬುಡ: ಕೃಷಿಗೆ ಆಸರೆಯಾಗದ ವಾರಾಹಿ ಕಾಲುವೆ ನೀರು!

Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ

Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ

WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್‌ ಮೆಟ್ಟಿಲೇರಿದ ಪ್ರಕರಣ, ಏನಿದು?

WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್‌ ಮೆಟ್ಟಿಲೇರಿದ ಪ್ರಕರಣ, ಏನಿದು?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.