ಕುಡಿಯುವ ನೀರು ಪೋಲು ನಿಂತಿಲ್ಲ!


Team Udayavani, Dec 3, 2018, 11:36 AM IST

gul-4.jpg

ಬೀದರ: ಎಲ್ಲ ಜೀವರಾಶಿಗಳಿಗೂ ನೀರು ಅವಶ್ಯಕ. ನೀರಿಲ್ಲದೆ ಯಾರೂ ಬದುಕಲು ಸಾಧ್ಯವಿಲ್ಲ. ಹನಿ ನೀರಿಗೂ ಬೆಲೆ ಇದೆ. ಇಂತಹ ಅಮೂಲ್ಯ ಸಂಪತ್ತು ಅನವಶ್ಯಕವಾಗಿ ಪೋಲಾಗುತ್ತಿದ್ದರೂ ಕೂಡ ಅಧಿಕಾರಿಗಳು ಅಥವಾ ಜನಪ್ರತಿನಿಧಿಗಳು ಗಮನ ಹರಿಸುತ್ತಿಲ್ಲ.

ಎರಡು ತಿಂಗಳಿಂದ ಹಾಲಹಳ್ಳಿ ಸಮೀಪದ ಪಿ.ಜಿ. ಕಾಲೇಜಿನ ಸಮೀಪದ ವಸತಿ ನಿಲಯದ ಹತ್ತಿರ ಕಾರಂಜಾ ಜಲಾಶಯದಿಂದ ಬೀದರ್‌ ನಗರಕ್ಕೆ ಸೇರಬೇಕಿರುವ ಕುಡಿಯುವ ನೀರು ಪ್ರತಿನಿತ್ಯ ಪೋಲಾಗುತ್ತಿದೆ. ಈ ಕುರಿತು ಶನಿವಾರ ಉದಯವಾಣಿಯೊಂದಿಗೆ ಮಾತನಾಡಿದ ಜಿಲ್ಲಾಧಿಕಾರಿಗಳು ಕೂಡಲೇ ನೀರು ಪೋಲಾಗದಂತೆ ನೋಡಿಕೊಳ್ಳಲು ಅಧಿಕಾರಿಗಳಿಗೆ ಸೂಚಿಸಿರುವ ಕುರಿತು ಪ್ರತಿಕ್ರಿಯೆ ನೀಡಿದರು. ಆದರೆ, ರವಿವಾರ ಕೂಡ ಪೋಲಾಗುತ್ತಿರುವ ನೀರು ತಡೆಯಲು ಅಧಿಕಾರಿಗಳು ಕಾಳಜಿ ವಹಿಸಿಲ್ಲ. ಪ್ರತಿ ದಿನದಂತೆ ರವಿವಾರ ಕೂಡ ಸಾವಿರಾರು ಲೀಟರ್‌ ನೀರು ಪೋಲಾಗಿದ್ದು, ಸಧ್ಯ ಜಿಲ್ಲೆಯಲ್ಲಿನ ಅಧಿಕಾರಿಗಳು ಯಾರ ಮಾತಿಗೂ ಸೊಪ್ಪು ಹಾಕುತ್ತಿಲ್ಲ ಎಂಬುದು ಸ್ಪಷ್ಟವಾಗಿದೆ.

ಹನಿ ನೀರು ಅತೀ ಅಮೂಲ್ಯ ಎಂದು ಭಾಷಣ ಮಾಡುವ ಅಧಿಕಾರಿಗಳು ಹಾಗೂ ಚುನಾಯಿತ ರಾಜಕಾರಣಿಗಳು ವಾಸ್ತವದಲ್ಲಿ ಆ ಕೆಲಸ ಮಾಡುತ್ತಿಲ್ಲ. ಕಳೆದ ವಾರ ಅಣದೂರ ಸೇರಿದಂತೆ ವಿವಿಧ ಗ್ರಾಮಗಳ ಜನರು ಸಹಕಾರ ಸಚಿವ ಬಂಡೆಪ್ಪ ಖಾಶೆಂಪುರ್‌ ಅವರನ್ನು ಭೇಟಿಮಾಡಿ, ಪೋಲಾಗುತ್ತಿರುವ ನೀರು ತಮ್ಮ ಗ್ರಾಮಗಳಿಗೆ ಹರಿಸುವಂತೆ ಮನವಿ ಮಾಡಿಕೊಂಡಿದ್ದಾರೆ. ಕಳೆದ ವಾರ ಜಿಲ್ಲಾ ಉಸ್ತುವಾರಿ ಸಚಿವರು ಅಧಿಕಾರಿಗಳಿಗೆ ಕರೆ ಮಾಡಿ ಪೋಲಾಗುತ್ತಿರುವ ನೀರಿನ ಸಮಗ್ರ ವರದಿ ನೀಡುವಂತೆ ಸೂಚಿಸಿದ್ದಾರೆ. ಆದರೆ, ಇಂದಿಗೂ ಅಧಿಕಾರಿಗಳು ಸಚಿವರಿಗೆ ಮಾಹಿತಿ ನೀಡಿಲ್ಲ ಎಂಬುದು ಮೂಲಗಳಿಂದ ತಿಳಿದುಬಂದಿದೆ. ರಾಜಕಾರಣಿಗಳ
ಮಾತಿಗೂ ಜಿಲ್ಲೆಯ ಅಧಿಕಾರಿಗಳು ಸೊಪ್ಪು ಹಾಕುತ್ತಿಲ್ಲ. ಅಧಿಕಾರಿಗಳು ಅಂದಾ ದರ್ಬಾರ್‌ ನಡೆಸುತ್ತಿದ್ದಾರೆ ಎಂದು ಜನರು ಆರೋಪಿಸುತ್ತಿದ್ದಾರೆ.

ನೀರಿನ ಮಹತ್ವ: ಸದ್ಯ ಜಿಲ್ಲೆಯಲ್ಲಿ ಭೀಕರ ಬರಗಾಲ ಎದುರಾಗಿದ್ದು, 400 ಅಡಿ ಆಳದಲ್ಲಿ ಕೂಡ ನೀರು ಸಿಗದ ಸ್ಥಿತಿ  ನಿರ್ಮಾಣಗೊಂಡಿದೆ. ಅನೇಕರು ಕೊಳವೆ ಬಾವಿ ತೋಡಿಸಿ ನೀರು ಸಿಗದೇ ಕಂಗಾಲಾಗಿದ್ದಾರೆ. ಕಾರಂಜಾ ನೀರು ಪೂರೈಕೆ ಮಾಡುವ ಕಡೆಗಳಲ್ಲಿ ಮೂರು ಅಥವಾ ನಾಲ್ಕು ದಿನಗಳಿಗೆ ಒಮ್ಮೆ ನೀರು ಸರಬರಾಜು ಮಾಡಲಾಗುತ್ತಿದೆ. ಅಧಿಕಾರಿಗಳ ಗಮನಕ್ಕೂ ಬಂದರು ಕೂಡ ನೀರು ಪೋಲಾಗುವುದನ್ನು ತಪ್ಪಿಸುವಲ್ಲಿ ವಿಫಲರಾಗಿದ್ದು, ನೀರಿನ ಮಹತ್ವ ಅಧಿಕಾರಿಗಳಿಗೆ ಗೊತ್ತಿಲ್ಲ, ಅಂತಹ ಅಧಿಕಾರಿಗಳನ್ನು ನೀರು ಇಲ್ಲದ ಕಡೆಗೆ ವರ್ಗಾವಣೆ ಮಾಡಿದರೆ ನೀರಿನ ಮಹತ್ವ ಗೊತ್ತಾಗುತ್ತದೆ ಎಂದು ಅಣದೂರ ಗ್ರಾಮಸ್ಥರು ಮಾತನಾಡಿಕೊಳ್ಳುತ್ತಿದ್ದಾರೆ.

ಸದ್ಯ ನೀರು ಪೋಲಾಗುತ್ತಿರುವ ಕಡೆಗಳಲ್ಲಿ ಕಿಡಿಗೆಡಿಗಳು ಯಾವುದೇ ಸಮಸ್ಯೆ ಉಂಟುಮಾಡಿದರೆ, ಜಿಲ್ಲೆಯ ಲಕ್ಷಾಂತರ ಜನ ಜೀವಕ್ಕೆ ಹಾನಿ ಸಂಭವಿಸಬಹುದಾಗಿದೆ. ಹೆದ್ದಾರಿ ಪಕ್ಕದಲ್ಲಿಯೇ ನೀರು ಪೋಲಾಗುತ್ತಿದ್ದು, ನೀರಿನೊಂದಿಗೆ ಚಲ್ಲಾಟ ಆಡಿದರೆ ಅನಾಹುತ ಕಟ್ಟಿಟ್ಟ ಬುತ್ತಿ. ಕಾರಣ ಅಧಿಕಾರಿಗಳ ವಿರುದ್ಧ ಕಠಿಣ ಕ್ರಮಕ್ಕೆ ಜಿಲ್ಲಾ ಉಸ್ತುವಾರಿ ಸಚಿರು ಸರ್ಕಾರಕ್ಕೆ ಶಿಫಾರಸು ಮಾಡುಬೇಕು ಎಂಬುದು ಜನರ ಅಭಿಪ್ರಾಯವಾಗಿದೆ.

ಪೋಲಾಗುತ್ತಿರುವ ನೀರು ತಡೆಯುವ ನಿಟ್ಟಿನಲ್ಲಿ ಅಧಿಕಾರಿಗಳಿಗೆ ಸೂಚಿಸಲಾಗಿದೆ. ಅಧಿಕಾರಿಗಳು ಪರಿಶೀಲಿಸಿ ಸೋಮವಾರ ಸಂಜೆ ವರೆಗೆ ನೀರು ಪೋಲಾಗದಂತೆ ನೋಡಿಕೊಳ್ಳುವುದಾಗಿ ತಿಳಿಸಿದ್ದಾರೆ.
 ಡಾ| ಎಚ್‌.ಆರ್‌. ಮಹಾದೇವ ಜಿಲ್ಲಾಧಿಕಾರಿಗಳು 

ನೀರು ಪೋಲಾಗುತ್ತಿರುವ ಕುರಿತು ಕಳೆದ ವಾರ ಅಣದೂರ ಗ್ರಾಮಸ್ಥರು ಗಮನಕ್ಕೆ ತಂದಿದ್ದಾರೆ. ಅಲ್ಲಿ ಪೋಲಾಗುವ ನೀರು ಗ್ರಾಮಕ್ಕೆ ಹರಿಸಿದರೆ ಗ್ರಾಮದಲ್ಲಿ ನೀರಿನ ಸಮಸ್ಯೆ ಪರಿಹಾರವಾಗುತ್ತದೆ ಎಂದು ತಿಳಿಸಿದ್ದಾರೆ. ಈ ಕುರಿತು ಅಧಿಕಾರಿಗಳಿಗೆ ಪೂರ್ಣ ಮಾಹಿತಿ ನೀಡುವಂತೆ ಅಂದೇ ತಿಳಿಸಿದ್ದೇನೆ. ಯಾವ ಕಾರಣಕ್ಕೆ ನೀರು ಪೋಲಾಗುತ್ತಿದೆ ಯಾರು ಕಾರಣ ಎಂದು ತಿಳಿದುಕೊಂಡು ಯಾವುದೇ ಮುಲಾಜು ಇಲ್ಲದೆ ಕ್ರಮ ಕೈಗೊಳ್ಳಲು ಸರ್ಕಾರಕ್ಕೆ ಶಿಫಾರಸು ಮಾಡಲಾಗುವುದು. ಅಲ್ಲದೆ, ನಾನು ಖುದ್ದು ಸ್ಥಳಕ್ಕೆ ಭೇಟಿನೀಡಿ
ಪರಿಶೀಲನೆ ನಡೆಸುತ್ತೇನೆ.
 ಬಂಡೆಪ್ಪ ಖಾಶೆಂಪುರ ಜಿಲ್ಲಾ ಉಸ್ತುವಾರಿ ಸಚಿವರು

„ದುರ್ಯೋಧನ ಹೂಗಾರ

ಟಾಪ್ ನ್ಯೂಸ್

1-wewqeqwe

Lok Sabha Polls: ಶಿಂಧೆ ಸೇನೆ ಸೇರ್ಪಡೆಯಾದ ಖ್ಯಾತ ನಟ ಗೋವಿಂದ

Lok Sabha Polls: ಚುನಾವಣೆಯಲ್ಲಿ 238 ಬಾರಿ ಸೋತರೂ ಛಲಬಿಡದ ಸರದಾರ.. ಈ ಬಾರಿ ಮತ್ತೆ ಕಣಕ್ಕೆ

Lok Sabha Polls: ಚುನಾವಣೆಯಲ್ಲಿ 238 ಬಾರಿ ಸೋತರೂ ಛಲಬಿಡದ ಸರದಾರ.. ಈ ಬಾರಿ ಮತ್ತೆ ಕಣಕ್ಕೆ

1—-wewqe

Punjab ಮುಖ್ಯಮಂತ್ರಿ ಭಗವಂತ್ ಮಾನ್ ಅವರಿಗೆ ಹೆಣ್ಣು ಮಗುವಿನ ಜನನ

8

ʼAadujeevithamʼ Twitter review: ಪೃಥ್ವಿರಾಜ್‌ ಅಭಿನಯಕ್ಕೆ ಬಹುಪರಾಕ್; ಹೇಗಿದೆ ಸಿನಿಮಾ?

12-baikampady

Fire; ಬೈಕಂಪಾಡಿ ಕೈಗಾರಿಕಾ ಪ್ರದೇಶದಲ್ಲಿ ಅಗ್ನಿ ಅವಘಡ

Delhi: ದುಬಾರಿ ಮರ್ಸಿಡೆಸ್‌ ಕಾರಿನಲ್ಲಿ ಡ್ರಗ್ಸ್‌ ಸಾಗಾಟ-ರಾಷ್ಟ್ರಮಟ್ಟದ ಕುಸ್ತಿಪಟು ಬಂಧನ!

Delhi: ದುಬಾರಿ ಮರ್ಸಿಡೆಸ್‌ ಕಾರಿನಲ್ಲಿ ಡ್ರಗ್ಸ್‌ ಸಾಗಾಟ-ರಾಷ್ಟ್ರಮಟ್ಟದ ಕುಸ್ತಿಪಟು ಬಂಧನ!

11-

Thirthahalli: ರಾಜ್ಯದ 28 ಕ್ಷೇತ್ರವನ್ನೂ ಗೆಲ್ಲಿಸಬೇಕೆಂದು ಜೆಡಿಎಸ್ ಪಕ್ಷದೊಂದಿಗೆ ಮೈತ್ರಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-aaaa

Lokayukta; ಬೆಳ್ಳಂಬೆಳಗ್ಗೆ ರಾಜ್ಯದ ವಿವಿಧೆಡೆ ಭ್ರಷ್ಟರ ಬೇಟೆಗಿಳಿದ ಲೋಕಾಯುಕ್ತ

Raw paan masala worth Rs 9 lakh, saree worth Rs 3 lakh seized in Bidar

Bidar: 9 ಲಕ್ಷ ರೂ. ಮೌಲ್ಯದ ಕಚ್ಚಾ ಪಾನ್ ಮಸಾಲಾ, 3 ಲಕ್ಷ ರೂ. ಮೌಲ್ಯ ಸೀರೆ ಜಪ್ತಿ

ಹಾಲ್ ಟಿಕೆಟನ್ನೇ ತಿಂದು ಹಾಕಿದ ಕುರಿ… ನೊಂದು ಆತ್ಮಹತ್ಯೆಗೆ ಯತ್ನಿಸಿದ ವಿದ್ಯಾರ್ಥಿನಿ

ಹಾಲ್ ಟಿಕೆಟನ್ನೇ ತಿಂದು ಹಾಕಿದ ಕುರಿ… ನೊಂದು ಆತ್ಮಹತ್ಯೆಗೆ ಯತ್ನಿಸಿದ ವಿದ್ಯಾರ್ಥಿನಿ

1-qwewqe

Bidar; ಖೂಬಾ ಪರ ಆರ್.ಅಶೋಕ್ ನೇತೃತ್ವದಲ್ಲಿ ಬಿಜೆಪಿ ಒಗ್ಗಟ್ಟು ಪ್ರದರ್ಶನ

ಬೀದರ್ ಕ್ಷೇತ್ರಕ್ಕೆ ಸಾಗರ ಖಂಡ್ರೆ ಹೆಸರು ಅಂತಿಮ; ಸಿಎಂ -ಡಿಸಿಎಂ ಭೇಟಿಯಾದ ಈಶ್ವರ್

Loksabha: ಬೀದರ್ ಕ್ಷೇತ್ರಕ್ಕೆ ಸಾಗರ ಖಂಡ್ರೆ ಹೆಸರು ಅಂತಿಮ; ಸಿಎಂ ಭೇಟಿಯಾದ ಈಶ್ವರ್

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

1-wewqeqwe

Lok Sabha Polls: ಶಿಂಧೆ ಸೇನೆ ಸೇರ್ಪಡೆಯಾದ ಖ್ಯಾತ ನಟ ಗೋವಿಂದ

Lok Sabha Polls: ಚುನಾವಣೆಯಲ್ಲಿ 238 ಬಾರಿ ಸೋತರೂ ಛಲಬಿಡದ ಸರದಾರ.. ಈ ಬಾರಿ ಮತ್ತೆ ಕಣಕ್ಕೆ

Lok Sabha Polls: ಚುನಾವಣೆಯಲ್ಲಿ 238 ಬಾರಿ ಸೋತರೂ ಛಲಬಿಡದ ಸರದಾರ.. ಈ ಬಾರಿ ಮತ್ತೆ ಕಣಕ್ಕೆ

1—-wewqe

Punjab ಮುಖ್ಯಮಂತ್ರಿ ಭಗವಂತ್ ಮಾನ್ ಅವರಿಗೆ ಹೆಣ್ಣು ಮಗುವಿನ ಜನನ

8

ʼAadujeevithamʼ Twitter review: ಪೃಥ್ವಿರಾಜ್‌ ಅಭಿನಯಕ್ಕೆ ಬಹುಪರಾಕ್; ಹೇಗಿದೆ ಸಿನಿಮಾ?

12-baikampady

Fire; ಬೈಕಂಪಾಡಿ ಕೈಗಾರಿಕಾ ಪ್ರದೇಶದಲ್ಲಿ ಅಗ್ನಿ ಅವಘಡ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.