ಹುಡಗಿ ಬಳಿ ನೀರು ಪೋಲು


Team Udayavani, Dec 6, 2018, 12:26 PM IST

bid-3.jpg

ಹುಮನಾಬಾದ: ಮಳೆ ಅಭಾವ ಕಾರಣ ಈ ಬಾರಿ ಎಲೆಡೆ ಜನಜಾನುವಾರು ನೀರಿಗಾಗಿ ಹಾಹಾಕಾರ ಎದ್ದಿರುವಾಗ ಹುಮನಾಬಾದ, ಚಿಟಗುಪ್ಪ ಸೇರಿ ತಾಲೂಕಿನ ಒಟ್ಟು 14 ಗ್ರಾಮಗಳಿಗೆ ಕಲ್ಪಿಸಲಾದ ಕಾರಂಜಾ ಜಲಾಶಯ ಶಾಶ್ವತ ಕುಡಿಯುವ ನೀರಿನ ಯೋಜನೆ ಸಂಬಂಧಿತ ತಾಲೂಕಿನ ಹುಡಗಿ ಹತ್ತಿರದ ಸಂಗ್ರಹಾರ ಬಳಿ ಯಾರೊಬ್ಬರಿಗೂ ಬಳಕೆಯಾಗದೇ ಸಹಸ್ರಾರು ಲೀಟರ್‌ ನಿತ್ಯ ಪೋಲಾಗುತ್ತಿದೆ.

ಈ ಹಿಂದೆ ಕುಡಿಯುವ ನೀರು, ಬಟ್ಟೆ ಸ್ವತ್ಛಗೊಳಿಸಲು ಕಿಮೀಗಟ್ಟಲೇ ತೋಟ ಅಥವಾ ಹಳ್ಳಗಳ ಮೊರೆ ಹೋಗುವುದು ಅನಿವಾರ್ಯವಿತ್ತು. ಒಂದೂವರೆ ದಶಕ ಹಿಂದೆ ಹಳ್ಳಿಖೇಡ(ಕೆ) ಗ್ರಾಮದಿಂದ ಕೊಳವೆಬಾವಿ ಮೂಲಕ ನೀರು ಪೂರೈಕೆ ಆರಂಭಿಸಿದ ನಂತರ ಸಮಸ್ಯೆ ಸ್ವಲ್ಪ ಮಟ್ಟಿಗೆ ಬಗೆಹರಿದಿತ್ತು. ಕೆಲ ವರ್ಷಗಳ ನಂತರ ಮತ್ತೆ ಯಥಾ ಸ್ಥಿತಿ ಮುಂದುವರಿಯಿತು. ಸಮಸ್ಯೆಗೆ ಶಾಶ್ವತ ಪರಿಹಾರ ಕಂಡುಕೊಳ್ಳಲು 2008ರಲ್ಲಿ 20 ಕೋಟಿ ರೂ. ಮೊತ್ತದಲ್ಲಿ ಕಾರಂಜಾ ಜಲಾಶಯದ ಶಾಶ್ವತ ಕುಡಿಯುವ ನೀರಿನ ಯೋಜನೆ ಪೂರ್ಣಗೊಂಡ ನಂತರ ಹುಮನಾಬಾದ- ಚಿಟಗುಪ್ಪ ಪಟ್ಟಣ ಮಾತ್ರವಲ್ಲದೇ ವ್ಯಾಪ್ತಿಯ 14 ಗ್ರಾಮಗಳ ಜನರು ಈ ಯೋಜನೆ ಲಾಭ ಪಡೆಯುತ್ತಿದ್ದಾರೆ.

2017ರಲ್ಲಿ ಉತ್ತಮ ಮಳೆಯಾಗಿದ್ದರಿಂದ ಜಲಾಶಯದಲ್ಲಿ ತಕ್ಕ ಮಟ್ಟಿಗೆ ನೀರು ಸಂಗ್ರಹವಾದ ಹಿನ್ನೆಲೆಯಲ್ಲಿ ಸಮಸ್ಯೆ ಅಷ್ಟಾಗಿ ಕಾಡಲಿಲ್ಲ. ಈ ಮಧ್ಯ ಇದೇ ಜಲಾಶಯದಿಂದ ಬೀದರ, ಭಾಲ್ಕಿ ಪಟ್ಟಣಕ್ಕೂ ಪೂರೈಕೆ ಆಗುತ್ತಿರುವ ಕಾರಣ ಅವಧಿಗಿಂತ ಮುಂಚೆಯೇ ಕಾರಂಜಾ ಜಲಾಶಯ ನೀರು ಬಹುತೇಕ ಬತ್ತಿದೆ. ಇಂತಹ ಗಂಭೀರ ಪರಿಸ್ಥಿತಿ ಮಧ್ಯದಲ್ಲೇ ತಾಲೂಕಿನ ಹುಡಗಿ ಹತ್ತಿರದ ವೆಂಕಮ್ಮ ದೇವಸ್ಥಾನ ಸಮೀಪದ ನೀರು ಸಂಗ್ರಹಾರ ಬಳಿ ಮುಖ್ಯಪೈಪ್‌ ಹಾಳಾದ ಕಾರಣ ನಿತ್ಯ ಸಹಸ್ರಾರು ಲೀಟರ್‌ ನೀರು ಪೋಲಾಗುತ್ತಿದೆ.

ವಸ್ತುಸ್ಥಿತಿ ಗೊತ್ತಿದ್ದರೂ ನಿರ್ವಹಣೆ ಜವಾಬ್ದಾರಿ ಹೊತ್ತ ಹುಮನಾಬಾದ ಪುರಸಭೆ ಆಡಳಿತ ನೀರು ಪೋಲಾಗುವುದನ್ನು ತಪ್ಪಿಸಲು ಯಾವುದೇ ದಿಟ್ಟ ಕ್ರಮ ಕೈಗೊಳ್ಳದೇ ಇನ್ನಿಲ್ಲದ ನೆಪ ಒಡ್ಡಿ ಕೈಕಟ್ಟಿ ಕುಳಿತಿರುವುದು ಸಾರ್ವಜನಿಕರ ಆಕ್ರೋಶಕ್ಕೆ ಕಾರಣವಾಗಿದೆ. ಜಲ ಅಮೂಲ್ಯ. ಅದನ್ನು ವ್ಯರ್ಥ ಪೋಲಾಗಿಸದೇ ಹಿತಮಿತವಾಗಿ ಬಳಸುವಂತೆ ಸರ್ಕಾರ, ಸ್ವಯಂ ಸೇವಾ ಸಂಸ್ಥೆಗಳು ಜಾಗೃತಿ ಮೂಡಿಸುತ್ತಿರುವ ಈ ಸಂದರ್ಭದಲ್ಲಿ ನೀರು ಪೂರೈಸುವ ಜವಾಬ್ದಾರಿ ಹೊತ್ತ ಅಧಿಕಾರಿಗಳು ಕರ್ತವ್ಯದಿಂದ ನುಣುಚಿಕೊಳ್ಳದೇ ನೀರು ಪೋಲಾಗುವುದನ್ನು ತಪ್ಪಿಸಲು ತಕ್ಷಣ ಕ್ರಮ ಕೈಗೊಳ್ಳಬೇಕೆಂದು ಸಾರ್ವಜನಿಕರು ಆಗ್ರಹಿಸಿದ್ದಾರೆ.

ನಾನು ಹುಡಗಿ ಗ್ರಾಮದ ರೈತ ನಮ್ಮ ಹೊಲಕ್ಕೆ ನಿತ್ಯ ಅದೇ ಮಾರ್ಗದಿಂದ ಹೋಗುತ್ತೇನೆ. ಕಳೆದ ಎರಡು ವರ್ಷಗಳಿಂದ ನೋಡುತ್ತಿದ್ದೇನೆ. ನೀರು ಜನ-ಜಾನುವಾರು ಸೇರಿದಂತೆ ಯಾರೊಬ್ಬರ ಉಪಯೋಗಕ್ಕೂ ಬಾರದೇ ನಿತ್ಯ ಸಹಸ್ರಾರು ಲೀಟರ್‌ ಪೋಲಾಗುತ್ತಿದೆ. ಚುನಾಯಿತ ಪ್ರತಿನಿಧಿಗಳು ಹರಸಾಹಸಪಟ್ಟು ಕೋಟ್ಯಂತರ ಮೊತ್ತದಲ್ಲಿ ಜನೋಪಯೋಗಿ ಕೆಲಸ ಮಾಡಿದ್ದಾರೆ. ಅಧಿಕಾರಿಗಳ ಬೇಜವಾಬ್ದಾರಿ ಹೊರತಾಗಿ ಬೇರಾರು ಕಾರಣರಲ್ಲ. ಈಗಲಾದರೂ ಎಚ್ಚೆತ್ತುಕೊಂಡು ಕ್ರಮ ಕೈಗೊಳ್ಳಲಿ.  
ವೈಜಿನಾಥ ಪಾಟೀಲ, ಹುಡಗಿ ಗ್ರಾಮಸ್ಥ

ನೀರು ಪೋಲಾಗುತ್ತಿರುವ ವಿಷಯ ಗಮನಕ್ಕಿದೆ. ಅದನ್ನು ನಿರ್ವಹಣೆ ಮಾಡುವ ಜವಾಬ್ದಾರಿಯೂ ನಮ್ಮ ಮೇಲಿದೆ. ಆದರೆ ಅಲ್ಲಿ ಖಾಯಂ ಇಂಜಿನಿಯರ್‌ಇಲ್ಲದ ಕಾರಣ ದುರುಸ್ತಿ ಕಾರ್ಯ ಕೈಗೆತ್ತಿಕೊಳ್ಳಲು ಸಾಧ್ಯ ವಾಗಿಲ್ಲ. ಸಾಧ್ಯವಾದಷ್ಟು ಶೀಘ್ರ ದುರುಸ್ತಿ ಕೈಗೊಳ್ಳುವ ಮೂಲಕ ಸಮಸ್ಯೆಗೆ ಶಾಶ್ವತ ಪರಿಹಾರ ಕಂಡುಕೊಳ್ಳಲು ಪ್ರಾಮಾಣಿಕವಾಗಿ ಪ್ರಯತ್ನಿಸುತ್ತೇವೆ.
 ಶಂಭುಲಿಂಗ ದೇಸಾಯಿ, ಮುಖ್ಯಾಧಿಕಾರಿ ಪುರಸಭೆ ಹುಮನಾಬಾದ

„ಶಶಿಕಾಂತ ಕೆ. ಭಗೋಜಿ

ಟಾಪ್ ನ್ಯೂಸ್

14-

Kasaragodu: ಹಣದ ವಿವಾದ: ಪೆಟ್ರೋಲ್‌ ಸುರಿದು ಮಹಿಳೆಯ ಕೊಲೆಗೆ ಯತ್ನ

13-mulleria

Mulleria: ವ್ಯಕ್ತಿಯ ನಿಗೂಢ ಸಾವು : ತಲೆಗೆ ಗಂಭೀರ ಗಾಯ ಮರಣಕ್ಕೆ ಕಾರಣ

Lok Sabha Polls; ಮುಂಟೀಪುರ,ಬರಗಿ ಕಾಲೋನಿ ಗ್ರಾಮಸ್ಥರಿಂದ ಚುನಾವಣೆ ಬಹಿಷ್ಕಾರದ ಎಚ್ಚರಿಕೆ

Lok Sabha Polls; ಮುಂಟೀಪುರ,ಬರಗಿ ಕಾಲೋನಿ ಗ್ರಾಮಸ್ಥರಿಂದ ಚುನಾವಣೆ ಬಹಿಷ್ಕಾರದ ಎಚ್ಚರಿಕೆ

9-

Chamarajanagara: ಪ್ರಮೋದ್ ಆರಾಧ್ಯಗೆ ಯುಪಿಎಸ್‌ಸಿ 671 ರ‍್ಯಾಂಕ್‌  

Election ಗೆದ್ದ ನಂತರ ಜನರಿಂದ ದೂರವಾಗದೆ ಕ್ಷೇತ್ರವನ್ನು ಅಭಿವೃದ್ಧಿ ಮಾಡುವತ್ತ ಸಾಗಬೇಕು

Election ಗೆದ್ದ ಬಳಿಕ ಕ್ಷೇತ್ರವನ್ನು ಅಭಿವೃದ್ಧಿ ಮಾಡುವತ್ತ ಸಾಗಬೇಕು; ಬಿ.ವೈ.ರಾಘವೇಂದ್ರ

BJP ಪ್ರಾಥಮಿಕ ಸದಸ್ಯತ್ವಕ್ಕೆ ಸಂಸದ ಸಂಗಣ್ಣ ಕರಡಿ ರಾಜೀನಾಮೆ… ಮುಂದಿನ ನಡೆ ಏನು?

BJP ಪ್ರಾಥಮಿಕ ಸದಸ್ಯತ್ವಕ್ಕೆ ಸಂಸದ ಸಂಗಣ್ಣ ಕರಡಿ ರಾಜೀನಾಮೆ… ಮುಂದಿನ ನಡೆ ಏನು?

UPSC ಪರೀಕ್ಷೆಯಲ್ಲಿ 101ನೇ ರ್‍ಯಾಂಕ್ ಪಡೆದ ಸೌಭಾಗ್ಯಗೆ ಗುರುವಾಗಿ ನಿಂತದ್ದು ಡಾ.ಅಶ್ವಿನಿ

UPSC ಪರೀಕ್ಷೆಯಲ್ಲಿ 101ನೇ ರ್‍ಯಾಂಕ್ ಪಡೆದ ಸೌಭಾಗ್ಯಗೆ ಗುರುವಾಗಿ ನಿಂತದ್ದು ಡಾ.ಅಶ್ವಿನಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

UPSC Result: ಬೀದರ್ ನ ಮೊಹಮ್ಮದ್ ಅಸೀಮ್‌ ಮುಜತೇಬಾಗೆ 481ನೇ ರ‍್ಯಾಂಕ್‌

UPSC Result: ಬೀದರ್ ನ ಮೊಹಮ್ಮದ್ ಅಸೀಮ್‌ ಮುಜತೇಬಾಗೆ 481ನೇ ರ‍್ಯಾಂಕ್‌

1-eqwewqeqwe

Bidar; ಬಿಜೆಪಿಗೆ ನಾಗಮಾರಪಳ್ಳಿ ಕುಟುಂಬದ ಬೆಂಬಲ

Bidar; ಬಿರುಗಾಳಿ ಸಹಿತ ಭಾರಿ ಮಳೆಗೆ ಅಪಾರ ಹಾನಿ; ಮಾವು ಬೆಳೆಗಾರರಿಗೆ ನಷ್ಟ

Bidar; ಬಿರುಗಾಳಿ ಸಹಿತ ಭಾರಿ ಮಳೆಗೆ ಅಪಾರ ಹಾನಿ; ಮಾವು ಬೆಳೆಗಾರರಿಗೆ ನಷ್ಟ

1-eqewewqe

Bidar DCC Bank ಮೇಲೆ ಐಟಿ ದಾಳಿ: ರಾಜಕೀಯ ತಿರುವಿಗೆ ಕಾರಣ?

28 ಲೋಕಸಭಾ ಕ್ಷೇತ್ರಗಳಲ್ಲೂ ಬಿಜೆಪಿ‌ ಜಯಭೇರಿ‌ ನಿಶ್ಚಿತ: ರಾಧಾ ಮೋಹನದಾಸ ಅಗರ್ವಾಲ್

28 ಲೋಕಸಭಾ ಕ್ಷೇತ್ರಗಳಲ್ಲೂ ಬಿಜೆಪಿ‌ ಜಯಭೇರಿ‌ ನಿಶ್ಚಿತ: ರಾಧಾ ಮೋಹನದಾಸ ಅಗರ್ವಾಲ್

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

14-

Kasaragodu: ಹಣದ ವಿವಾದ: ಪೆಟ್ರೋಲ್‌ ಸುರಿದು ಮಹಿಳೆಯ ಕೊಲೆಗೆ ಯತ್ನ

13-mulleria

Mulleria: ವ್ಯಕ್ತಿಯ ನಿಗೂಢ ಸಾವು : ತಲೆಗೆ ಗಂಭೀರ ಗಾಯ ಮರಣಕ್ಕೆ ಕಾರಣ

Lok Sabha Polls; ಮುಂಟೀಪುರ,ಬರಗಿ ಕಾಲೋನಿ ಗ್ರಾಮಸ್ಥರಿಂದ ಚುನಾವಣೆ ಬಹಿಷ್ಕಾರದ ಎಚ್ಚರಿಕೆ

Lok Sabha Polls; ಮುಂಟೀಪುರ,ಬರಗಿ ಕಾಲೋನಿ ಗ್ರಾಮಸ್ಥರಿಂದ ಚುನಾವಣೆ ಬಹಿಷ್ಕಾರದ ಎಚ್ಚರಿಕೆ

12-

Gangolli: ರಿಕ್ಷಾ-ಕಾರು ಢಿಕ್ಕಿ

11-

UPSC ಪರೀಕ್ಷೆಯಲ್ಲಿ ಹುಣಸೂರಿನ ಲೇಖನ್‌ಗೆ 77ನೇ ರ‍್ಯಾಂಕ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.