ಲೋಕಸಭೆಯಲ್ಲಿ ಗಮನ ಸೆಳೆವೆ
Team Udayavani, Dec 11, 2018, 11:03 AM IST
ಬೀದರ: ರಾಮ ಮಂದಿರ ನಿರ್ಮಾಣ ಕುರಿತು ಲೋಕಸಭೆಯಲ್ಲಿ ಮಾತನಾಡಿ ಸರ್ಕಾರದ ಗಮನ ಸೆಳೆಯುವುದಾಗಿ ಸಂಸದ ಭಗವಂತ ಖೂಬಾ ಹೇಳಿದರು. ನಗರದ ಅಂಬೇಡ್ಕರ್ ವೃತ್ತದಲ್ಲಿ ವಿಶ್ವ ಹಿಂದು ಪರಿಷದ್ ವತಿಯಿಂದ ಆಯೋಜಿಸಿದ್ದ ಅಯೋಧ್ಯೆಯ ಶ್ರೀರಾಮ ಜನ್ಮ ಭೂಮಿಯಲ್ಲಿ ಭವ್ಯ ಮಂದಿರ ನಿರ್ಮಾಣ ಕುರಿತ ಜನಾಗ್ರಹ ಸಭೆಯಲ್ಲಿ ಅವರು ಮಾತನಾಡಿದರು. ರಾಮ ಮಂದಿರ ನಿರ್ಮಾಣ ಕುರಿತು ಜನರಲ್ಲಿರುವ ಕಿಚ್ಚು, ಭಾವನೆ ತಿಳಿದುಕೊಂಡಿದ್ದೇನೆ. ಬರುವ ದಿನಗಳಲ್ಲಿ ಈ ಕುರಿತು ಲೋಕಸಭೆಯಲ್ಲಿ ಮಾತನಾಡುವ ಮೂಲಕ ಗಮನ ಸೆಳೆಯುವುದಾಗಿ ತಿಳಿಸಿದರು.
ಡಾ| ಹಣಮತರಾವ್ ಮಾತನಾಡಿ, ಸಂಘ ಪರಿವಾರ ಯಾರಿಗೂ ತೊಂದರೆ ನೀಡಿಲ್ಲ. ಕಾರಣ ಅಲ್ಲಿನ ಮುಸ್ಲಿಂ ಸಮಾಜದವರು ಕೂಡ ರಾಮ ಮಂದಿರ ನಿರ್ಮಾಣಕ್ಕೆ ಸಹಾಯ ಮಾಡುತ್ತಿದ್ದಾರೆ. ಆರದೆ, ರಾಜಕೀಯ ವ್ಯಕ್ತಿಗಳು ಸಮಾಜ ಒಡೆಯುವ ಕೆಲಸ ಮಾಡುತ್ತಿದ್ದಾರೆ ಎಂದರು.
ಡಾ| ಮಲ್ಲಾ ಜೀ ಮಾತನಾಡಿ, ರಾಮ ಜನ್ಮಭೂಮಿಯಲ್ಲಿ ರಾಮ ಮಂದಿರ ನಿರ್ಮಾಣ ಮಾಡಲು ನಾವು ಹೋರಾಟ ಮಾಡುವ ದಿನಗಳು ಬರುತ್ತಿರುವುದು ನೋಡಿದರೆ ಬೇಸರವಾಗುತ್ತಿದೆ. ರಾಮ ಮಂದಿರ ನಿರ್ಮಿಸಿ ದೇಶದ ಕೀರ್ತಿ ಹೆಚ್ಚಿಸಬೇಕಾಗಿದೆ ಎಂದರು. ಹಾರಕೂಡ ಡಾ| ಚನ್ನಾವೀರ ಶಿವಾಚಾರ್ಯರು, ಭಾತಂಬ್ರಾ ಶಿವಯೋಗೇಶ್ವರ ಮಹಾಸ್ವಾಮಿಗಳು, ಮಹೇಕರ್ ರಾಜೇಶ್ವರ ಶಿವಾಚಾರ್ಯರು, ರಾಜೇಶ್ವರದ ಘನಲಿಂಗರುದ್ರಮುನಿ ಶಿವಾಚಾರ್ಯರು, ಡಾ| ರಾಜೇಶ್ವರ ಸ್ವಾಮಿ ಗೋರ್ಟಾ, ಸುಧಾಕಾರ ದೇಶಪಾಂಡೆ, ಜ್ಯೋತಿರ್ಮಯಾನಂದ ಸ್ವಾಮೀಜಿ, ಈಶ್ವರ ಸಿಂಗ್ ಠಾಕೂರ್, ಡಾ| ಶೈಲೇಂದ್ರ ಬೆಲ್ದಾಳೆ ಹಾಗೂ ಅನೇಕ ಮುಖಂಡರು ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Delhi ತವರಿಗೆ ಮರಳಿದ ಖುಷಿಯಲ್ಲಿ: ಕೋಟ್ಲಾದಲ್ಲಿ ಹೈದರಾಬಾದ್ ವಿರುದ್ಧ ಮುಖಾಮುಖಿ
ರಾಜ್ಯ 2ನೇ ಹಂತ: 337 ಮಂದಿ ಕಣಕ್ಕೆ: ನಾಮಪತ್ರ ಸಲ್ಲಿಕೆ ಮುಕ್ತಾಯ, ಇಂದು ಪರಿಶೀಲನೆ
IMD; ಕರ್ನಾಟಕ ಸೇರಿ 23 ರಾಜ್ಯಗಳ 125 ಜಿಲ್ಲೆಗಳಿಗೆ ‘ಬರ’ಸಿಡಿಲು
Congress ಪಡೆದ ಬಾಂಡ್ ಸುಲಿಗೆ ಅಲ್ಲವೇ: ಅಮಿತ್ ಶಾ ಪ್ರಶ್ನೆ
RCB ; ರವಿವಾರ ಕೆಕೆಆರ್ ವಿರುದ್ಧ ಈಡನ್ನಲ್ಲಿ ಗೋ ಗ್ರೀನ್ ಗೇಮ್