ಬಹುತೇಕ ಅಂಗನವಾಡಿಗೆ ಬಾಡಿಗೆ ಕಟ್ಟಡವೇ ಸೂರು


Team Udayavani, Dec 15, 2018, 12:39 PM IST

gul-6.jpg

ಭಾಲ್ಕಿ: ಮಕ್ಕಳ ದೈಹಿಕ, ಭಾವನಾತ್ಮಕ ಬೆಳವಣಿಗೆ ಹಾಗೂ ವಿವಿಧ ಪೌಷ್ಠಿಕಾಂಶಗಳನ್ನು ಒದಗಿಸುವ ಉದ್ದೇಶಕ್ಕಾಗಿ ಇರುವ ಅಂಗನವಾಡಿ ಕೇಂದ್ರಗಳು ಪಟ್ಟಣದಲ್ಲಿ ಬಹುತೇಕ ಬಾಡಿಗೆ ಕಟ್ಟದಲ್ಲಿಯೇ ಕಾರ್ಯ ನಿರ್ವಹಿಸುತ್ತಿವೆ. ಆದರೆ ಯಾವ ಭಾಗದ ಅಂಗನವಾಡಿ ಕೇಂದ್ರ ಎಲ್ಲಿದೆ ಎಂಬುದ ಕುರಿತು ನಾಗರಿಗೆ ಮಾಹಿತಿಯೇ ಇಲ್ಲದಾಗಿದೆ.

ಹೀಗಿರುವಾಗ ಪಾಲಕರು ತಮ್ಮ ಮಕ್ಕಳನ್ನು ಅಂಗನವಾಡಿ ಕೇಂದ್ರಕ್ಕೆ ಸೇರಿಸಿ ಸರ್ಕಾರಿ ಸೌಲಭ್ಯ ಒದಗಿಸುವುದು ದೂರದ ಮಾತು. ಭಾಲ್ಕಿ ಪಟ್ಟಣದಲ್ಲಿರುವ ಒಟ್ಟು 32 ಅಂಗನವಾಡಿ ಕೇಂದ್ರಗಳಲ್ಲಿ ಮೂರು ಕೇಂದ್ರಗಳು ಮಾತ್ರ ಸರ್ಕಾರಿ ಕಟ್ಟಡದಲ್ಲಿ ನಡೆಯುತ್ತಲಿವೆ. ಉಳಿದ 29 ಕೇಂದ್ರಗಳು ಬಾಡಿಗೆ ಕಟ್ಟಡದಲ್ಲಿವೆ. ಪಟ್ಟಣದ ಸಿದ್ಧಾರ್ಥನಗರ ಬಡಾವಣೆ, ಖಾಜಾ ಬಂದೇನವಾಜ ಬಡಾವಣೆ ಮತ್ತು ದಾಡಗಿ ಬೇಸ್‌ ಹತ್ತಿರದ ಸರ್ಕಾರಿ ಶಾಲಾ ಆವರಣದಲ್ಲಿಯ ಮೂರು ಅಂಗನವಾಡಿ ಕೇಂದ್ರಗಳು ಮಾತ್ರ ಸರ್ಕಾರಿ ಕಟ್ಟಡದಲ್ಲಿ ಕಾರ್ಯ ನಿರ್ವಹಿಸುತ್ತಲಿವೆ. 

ಬಹುತೇಕ ಬಾಡಿಗೆ ಕಟ್ಟಡದಲ್ಲಿರುವ ಅಂಗನವಾಡಿ ಕೇಂದ್ರಗಳ ಮಾಹಿ ಇಲ್ಲದೇ ಇಲ್ಲಿಯ ನಾಗರಿಕರಿಗೆ ಮರಿಚೀಕೆಯಾಗಿವೆ. ಯಾವ ಅಂಗನವಾಡಿ ಕೇಂದ್ರ ಎಲ್ಲಿದೆ. ಅಲ್ಲಿಯ ಮೇಲ್ವಿಚಾರಕರು ಮತ್ತು ಕಾರ್ಯಕರ್ತೆಯರು ಯಾರಿದ್ದಾರೆ ಎನ್ನುವುದನ್ನು ತಿಳಿದುಕೊಳ್ಳಲು ಹರ ಸಾಹಸ ಪಡಬೇಕಾಗುತ್ತಿದೆ. 

ಸಂಬಂಧಪಟ್ಟ ಮೇಲಧಿಕಾರಿಗಳು ತಪಾಸಣೆ ನಡೆಸುವುದೂ ಸರ್ಕಾರಿ ಅಂಗನವಾಡಿ ಕೇಂದ್ರಗಳಲ್ಲಿ ಮಾತ್ರ. ಹೀಗಾಗಿ ಪಟ್ಟಣದ ಅಂಗನವಾಡಿ ಕೇಂದ್ರಗಳಿಗೆ ಯಾರ ಭಯವೂ ಇಲ್ಲದಂತಾಗಿದೆ. ಕಾರಣ ಪಟ್ಟಣದ ಚಿಕ್ಕ ಮಕ್ಕಳು ಸರ್ಕಾರದ
ಪೌಷ್ಠಿಕಾಂಶಯುಕ್ತ ಆಹಾರದ ಕೊರತೆ ಅನುಭವಿಸುತ್ತಿದ್ದಾರೆ.
 
ಆದರೆ ಗ್ರಾಮೀಣ ಭಾಗದಲ್ಲಿ ಮಾತ್ರ ಅಂಗನವಾಡಿ ಕೇಂದ್ರಗಳು ಉತ್ತಮವಾಗಿ ಕಾರ್ಯ ನಿರ್ವಹಿಸುತ್ತಲಿವೆ. ಪ್ರತಿಯೊಂದು ಗ್ರಾಮಗಳಲ್ಲೂ 3ರಿಂದ 6 ವರ್ಷದ ಮಕ್ಕಳು ಅಂಗನವಾಡಿ ಕೇಂದ್ರದಲ್ಲಿ ಸರ್ಕಾರದ ಪೌಷ್ಟಿಕ ಆಹಾರ ಸೇವಿಸುದರೊಂದಿಗೆ ಶಾಲಾಪೂರ್ವ ಅಕ್ಷರಭ್ಯಾಸದಲ್ಲೂ ತೊಡಗಿದ್ದಾರೆ. 

ಪಟ್ಟಣದ ನಾಗರಿಕರಿಗೆ ಪೂರ್ವ ಪ್ರಾಥಮಿಕ ಶಾಲೆಗಳೇ ಗತಿ. ಪಟ್ಟಣದ ವಿವಿಧ ಪೂರ್ವ ಪ್ರಾಥಮಿಕ ಶಾಲೆಗಳಲ್ಲಿ ತಮ್ಮ ಮಕ್ಕಳನ್ನು ದಾಖಲಿಸಿ, ದುಬಾರಿ ಶುಲ್ಕ ನೀಡಿ ಮನೆಯಿಂದ ಉತ್ತಮ ಆಹಾರ ಕಟ್ಟಿಕೊಡಬೇಕಿದೆ. ಹಾಗಾಗಿ ಸರ್ಕಾರಿ ಸೌಲಭ್ಯದಿಂದ ವಂಚಿತರಾಗಿದ್ದಾರೆ.
 
ಗರ್ಭಿಣಿಯರು ತಾಯಿ ಕಾರ್ಡ್‌ ಸೇರಿದಂತೆ ವಿವಿಧ ಸೌಲಭ್ಯಗಳನ್ನು ಪಡೆಯಲು ಅಂಗನವಾಡಿ ಮೇಲ್ವಿಚಾರಕರ ಅವಶ್ಯಕತೆ ಇದೆ. ಆದರೆ ನಮ್ಮ ವಾರ್ಡ್‌ನ ಅಂಗನವಾಡಿ ಕೇಂದ್ರ ಎಲ್ಲಿದೇ, ಅಲ್ಲಿಯ ಮೇಲ್ವಿಚಾರಕರು ಯಾರು ಎನ್ನುವುದೇ ನಮಗೆ ತಿಳಿದಿಲ್ಲ. ಹೀಗಾಗಿ ಸರ್ಕಾರದ ಸೌಲಭ್ಯ ಪಡೆಯಲು ದಲ್ಲಾಳಿಗಳ ಮೊರೆ ಹೋಗಬೇಕಾಗಿದೆ ಎನ್ನುತ್ತಾರೆ ಪಟ್ಟಣದ ಖಂಡ್ರೆಗಲ್ಲಿ ನಿವಾಸಿ ಶಿಲ್ಪಾ ಶಿವಪುತ್ರ. ಕಾರಣ ಸಂಬಂಧಪಟ್ಟ ಅಧಿಕಾರಿಗಳು ಪಟ್ಟಣದ ನಾಗರಿಕರಿಗೆ ಅಂಗನವಾಡಿ ಕೇಂದ್ರಗಳ ಬಗ್ಗೆ ಮಾಹಿತಿ ನೀಡಿ, ಪಟ್ಟಣದ ಮಕ್ಕಳು ಅಂಗನವಾಡಿ ಕೇಂದ್ರದಲ್ಲಿ ಸರ್ಕಾರದ ಸೌಲಭ್ಯಗಳನ್ನು ಪಡೆಯುವಂತೆ ಸಹಕರಿಸಬೇಕು ಎನ್ನುವುದು ಪಟ್ಟಣದ ನಾಗರಿಕರ ಒತ್ತಾಸೆಯಾಗಿದೆ. 

ಪಟ್ಟಣದಲ್ಲಿ ಅಂಗನವಾಡಿ ಕಟ್ಟಡ ನಿರ್ಮಿಸಲು ಪ್ರಸ್ತಾವನೆ ಸಲ್ಲಿಸಲಾಗಿದೆ. ಸ್ಥಳಾವಕಾಶದ ಕೊರತೆಯಿಂದ ಸ್ವಂತ ಕಟ್ಟಡ ನಿರ್ಮಿಸಲು ಸಾಧ್ಯವಾಗಿಲ್ಲ. ಕೆಲವು ದಿನಗಳಲ್ಲಿ ಆದಷ್ಟು ಬೇಗ ಅಂಗನವಾಡಿಗಳಿಗೆ ಸ್ವಂತ ಕಟ್ಟಡ ನಿರ್ಮಿಸಲಾಗುವುದು.
 ಪ್ರಭಾಕರ, ಸಿಡಿಪಿಒ ಭಾಲಿ

ಟಾಪ್ ನ್ಯೂಸ್

R. Ashok: ಬಿಜೆಪಿಯಲ್ಲಿ ಈಶ್ವರಪ್ಪನವರದು ಮುಗಿದ ಅಧ್ಯಾಯ: ಅಶೋಕ್‌

R. Ashok: ಬಿಜೆಪಿಯಲ್ಲಿ ಈಶ್ವರಪ್ಪನವರದು ಮುಗಿದ ಅಧ್ಯಾಯ: ಅಶೋಕ್‌

Dr. K Sudhakar: ಭ್ರಷ್ಟಾಚಾರದಿಂದಲೇ ಸಿದ್ದು ಸೋತಿದ್ದಾ?: ಸುಧಾಕರ್‌

Dr. K Sudhakar: ಭ್ರಷ್ಟಾಚಾರದಿಂದಲೇ ಸಿದ್ದು ಸೋತಿದ್ದಾ?: ಸುಧಾಕರ್‌

1-qwwqeqw

Thirthahalli;ಮಳೆಯ ಅಬ್ಬರಕ್ಕೆ ಮೊದಲ ಬಲಿ: ಆಗುಂಬೆ ಘಾಟಿಯಲ್ಲಿ ಟ್ರಾಫಿಕ್ ಜಾಮ್

Politics: ಡಿ.ಕೆ.ಶಿವಕುಮಾರ್‌ ಸಿಎಂ ಆಗುತ್ತಾರೆ: ಎಚ್‌.ವಿಶ್ವನಾಥ್‌

Politics: ಡಿ.ಕೆ.ಶಿವಕುಮಾರ್‌ ಸಿಎಂ ಆಗುತ್ತಾರೆ: ಎಚ್‌.ವಿಶ್ವನಾಥ್‌

13

Politics: ಸಿದ್ದರಾಮಯ್ಯ ಸರಕಾರ ಬಂದ ಬಳಿಕ ಮುಸ್ಲಿಂ ಮೂಲಭೂತವಾದಿಗಳು ಹೆಚ್ಚಳ; ಅಶೋಕ್‌

1-qeqeqwe

Congress ಸರ್ಕಾರ ಪತನ ದೇವೇಗೌಡರ ಭ್ರಮೆ: ಸಿದ್ದರಾಮಯ್ಯ ವಾಗ್ದಾಳಿ

1-aaa-1

Rain; ರಾಜ್ಯದ ವಿವಿಧೆಡೆ ಸಿಡಿಲಬ್ಬರದ ಮಳೆ; ಕುಷ್ಟಗಿಯಲ್ಲಿ ರೈತ ಬಲಿ, ಅಪಾರ ನಷ್ಟ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Bidar; ನಾಮಪತ್ರ ಸಲ್ಲಿಸಲು ಓಡೋಡಿ ಬಂದ ಖೂಬಾ

Bidar; ನಾಮಪತ್ರ ಸಲ್ಲಿಸಲು ಓಡೋಡಿ ಬಂದ ಖೂಬಾ

Bidar ಬಿಜೆಪಿಯ ಹಿರಿಯ ಮುಖಂಡ, ಮಾಜಿ ಶಾಸಕ ರಮೇಶ ಕುಮಾರ್ ಪಾಂಡೆ ನಿಧನ

Bidar ಬಿಜೆಪಿಯ ಹಿರಿಯ ಮುಖಂಡ, ಮಾಜಿ ಶಾಸಕ ರಮೇಶ ಕುಮಾರ್ ಪಾಂಡೆ ನಿಧನ

UPSC Result: ಬೀದರ್ ನ ಮೊಹಮ್ಮದ್ ಅಸೀಮ್‌ ಮುಜತೇಬಾಗೆ 481ನೇ ರ‍್ಯಾಂಕ್‌

UPSC Result: ಬೀದರ್ ನ ಮೊಹಮ್ಮದ್ ಅಸೀಮ್‌ ಮುಜತೇಬಾಗೆ 481ನೇ ರ‍್ಯಾಂಕ್‌

1-eqwewqeqwe

Bidar; ಬಿಜೆಪಿಗೆ ನಾಗಮಾರಪಳ್ಳಿ ಕುಟುಂಬದ ಬೆಂಬಲ

Bidar; ಬಿರುಗಾಳಿ ಸಹಿತ ಭಾರಿ ಮಳೆಗೆ ಅಪಾರ ಹಾನಿ; ಮಾವು ಬೆಳೆಗಾರರಿಗೆ ನಷ್ಟ

Bidar; ಬಿರುಗಾಳಿ ಸಹಿತ ಭಾರಿ ಮಳೆಗೆ ಅಪಾರ ಹಾನಿ; ಮಾವು ಬೆಳೆಗಾರರಿಗೆ ನಷ್ಟ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

R. Ashok: ಬಿಜೆಪಿಯಲ್ಲಿ ಈಶ್ವರಪ್ಪನವರದು ಮುಗಿದ ಅಧ್ಯಾಯ: ಅಶೋಕ್‌

R. Ashok: ಬಿಜೆಪಿಯಲ್ಲಿ ಈಶ್ವರಪ್ಪನವರದು ಮುಗಿದ ಅಧ್ಯಾಯ: ಅಶೋಕ್‌

Dr. K Sudhakar: ಭ್ರಷ್ಟಾಚಾರದಿಂದಲೇ ಸಿದ್ದು ಸೋತಿದ್ದಾ?: ಸುಧಾಕರ್‌

Dr. K Sudhakar: ಭ್ರಷ್ಟಾಚಾರದಿಂದಲೇ ಸಿದ್ದು ಸೋತಿದ್ದಾ?: ಸುಧಾಕರ್‌

CN Ashwath Narayan: ಕಾಂಗ್ರೆಸ್‌ನಿಂದ ನಿತ್ಯ ತುಷ್ಟೀಕರಣ ರಾಜಕಾರಣ; ಅಶ್ವತ್ಥನಾರಾಯಣ

CN Ashwath Narayan: ಕಾಂಗ್ರೆಸ್‌ನಿಂದ ನಿತ್ಯ ತುಷ್ಟೀಕರಣ ರಾಜಕಾರಣ; ಅಶ್ವತ್ಥನಾರಾಯಣ

1-qwwqeqw

Thirthahalli;ಮಳೆಯ ಅಬ್ಬರಕ್ಕೆ ಮೊದಲ ಬಲಿ: ಆಗುಂಬೆ ಘಾಟಿಯಲ್ಲಿ ಟ್ರಾಫಿಕ್ ಜಾಮ್

Politics: ಡಿ.ಕೆ.ಶಿವಕುಮಾರ್‌ ಸಿಎಂ ಆಗುತ್ತಾರೆ: ಎಚ್‌.ವಿಶ್ವನಾಥ್‌

Politics: ಡಿ.ಕೆ.ಶಿವಕುಮಾರ್‌ ಸಿಎಂ ಆಗುತ್ತಾರೆ: ಎಚ್‌.ವಿಶ್ವನಾಥ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.