ಮನುಷ್ಯ ಜನ್ಮದ ಮೂಲ ಉದ್ದೇಶ ಸತ್ಯಾನ್ವೇಷಣೆ: ಗಣೇಶಾನಂದ ಶ್ರೀ


Team Udayavani, Dec 17, 2018, 12:20 PM IST

bid-1.jpg

ಭಾಲ್ಕಿ: ಮಾನವ ಜನ್ಮದ ಮೂಲ ಉದ್ದೇಶ ಸತ್ಯಾನ್ವೇಷಣೆಯಾಗಿದೆ. ಸತ್ಯದ ಅರಿವು ನಮಗಾಗಬೇಕಾದರೆ. ನಾವು ಸಂತರ ಸಂಗ ಮಾಡಬೇಕು ಎಂದು ಬೀದರ ಗುರುದೇವಾಶ್ರಮದ ಶ್ರೀ ಗಣೇಶಾನಂದ ಮಹಾರಾಜರು ಹೇಳಿದರು.

ತಾಲೂಕಿನ ಬ್ಯಾಲಹಳ್ಳಿ(ಕೆ) ಗ್ರಾಮದ ಶಿವಾನಂದ ಕೈಲಾಸ ಆಶ್ರಮದಲ್ಲಿ ಶ್ರೀ ಸಚ್ಚಿದಾನಂದ ಮಹಾಸ್ವಾಮಿಗಳು ಮತ್ತು ಶ್ರೀ ಶಿವಾನಂದ ಮಹಾಸ್ವಾಮಿಗಳ ಪುಣ್ಯಾರಾಧನೆ ಕಾರ್ಯಕ್ರಮ ನಿಮಿತ್ತ ನಡೆದ ಪ್ರವಚನ ಕಾರ್ಯಕ್ರಮದ ಸಾನ್ನಿಧ್ಯ ವಹಿಸಿ ಸ್ವಾಮೀಜಿ ಮಾತನಾಡಿದರು.
 
ಹೂವಿನ ಮೇಲಿನ ಪರಿಮಳ ಬಂದರೆ ಸುಗಂಧದ ಅರಿವಾಗುವಂತೆ ಸಂತರ ಸಂಗದ ಪರಿಮಳದಿಂದ ಸತ್ಯದ
ಅರಿವಾಗುವುದು. ಮನುಷ್ಯ ಜನ್ಮದ ಮೂಲ ಧೇಯ ಆತ್ಮ ಸಾಕ್ಷಾತ್ಕಾರ. ಈ ನಿಟ್ಟಿನಲ್ಲಿ ಪ್ರವೃರ್ತರಾಗಲು ಸಾಧು ಸಂತರ ಸೇವೆ ಮಾಡುತ್ತ ಸನ್ಮಾರ್ಗದಲ್ಲಿ ನಡೆಯಬೇಕು. ಸಂತರ ಮಾತುಗಳು ನಮ್ಮ ಬದುಕಿನಲ್ಲಿ ಪ್ರೇರಣೆ ನೀಡುತ್ತವೆ. ಹೀಗಾಗಿ ಸಂತರ ಸಂಗ ಬಯಸಿ ಜೀವನ ಸಾರ್ಥಕ ಮಾಡಿಕೊಳ್ಳಬೇಕು ಎಂದು ಹೇಳಿದರು.

ಮಳಚಾಪುರ ಶಂಭುಲಿಂಗಾಶ್ರಮದ ಶ್ರೀ ಸದ್ರೂಪಾನಂದ ಭಾರತಿ ಸ್ವಾಮಿಗಳು ಮಾತನಾಡಿ, ಯಾವುದನ್ನು ಕೇಳುವುದರಿಂದ ದ್ವೈತ ಪ್ರವೃತ್ತಿ ನಾಶವಾಗಿ ಅದ್ವೈತ್ವ ಪ್ರವೃತ್ತಿ ಉಂಟಾಗುವುದೋ ಅದೇ ನಿಜವಾದ ಶಾಸ್ತ್ರವಾಗಿದೆ. ಪಶ್ಚಾತಾಪದಿಂದ ಭಕ್ತಿ ಉಂಟಾಗುವುದು. ಆತ್ಮ ಪರಮಾತ್ಮನನ್ನು ಮರೆತಾಗಲೇ ಜೀವನದ ಅಧೋಗತಿಯಾಗುವುದು ಎಂದು ವಿಶ್ಲೇಷಿಸಿದರು.

ನೇತೃತ್ವ ವಹಿಸಿ ಮಾತನಾಡಿದ ಶ್ರೀ ನಾಗಯ್ಯ ಸ್ವಾಮಿಗಳು, ನಾವು ನಮ್ಮ ಅಜ್ಞಾನ, ಅಂಧಕಾರ ಕಳೆಯುವಂತಹ ಶಾಸ್ತ್ರ ಕೇಳಬೇಕು. ದ್ವೈತ ಬುದ್ಧಿನಾಶವಾಗುವ ಶಾಸ್ತ್ರ ಕೇಳುವುದರಿಂದ ಜೀವನೋಧಾರವಾಗುವುದು ಎಂದು ಹೇಳಿದರು. ಅಧ್ಯಕ್ಷತೆ ವಹಿಸಿ ಮಾತನಾಡಿದ ಶ್ರೀ ಗುರುಲಿಂಗ ಮಹಾಸ್ವಾಮಿಗಳು, ಭೇದವಿದ್ದಲ್ಲಿ ದುಃಖವಿದೆ. ಅಭೇದವಿದ್ದಲ್ಲಿ ಸುಖವಿದೆ. ನಾವು ಯಾವುದಕ್ಕೂ ಭೇದಮಾಡದೇ ಸುಖಜೀವನ ಸಾಗಿಸಬೇಕು ಎಂದು ಹೇಳಿದರು.

ಪ್ರಸಾದ ದಾನಿಗಳಾದ ಬುಧೇರಾ ಗ್ರಾಮದ ಚಂದ್ರಪ್ಪ ಮಾನಾ, ಕಾಶಿನಾಥ ಮಾನಾ, ವಿಶ್ವನಾಥ ಮಾನಾ, ಬಸವರಾಜ ಮಾನಾ ಮತ್ತು ಕಲಬುರಗಿಯ ಅಕ್ಕಮಹಾದೇವಿ ಸಂಜೀವಕುಮಾರ ಪಡಶೆಟ್ಟಿ ಅವರನ್ನು ಸನ್ಮಾನಿಸಿ ಸತ್ಕರಿಸಲಾಯಿತು. 

ವೈಜಿನಾಥಪ್ಪ ಕನಕಟ್ಟೆ, ಮಲ್ಲಿಕಾರ್ಜುನ ವೀರಶೆಟ್ಟೆ, ಡಿ.ಕೆ. ಗಣಪತಿ, ಡಾ| ಸುಭಾಷ ಅಂಬೆಸಿಂಗಿ, ಸಂಜುಕುಮಾರ ಬಿರಾದಾರ, ಶಿವರಾಜ ಶರಗಾರ, ತೇಜಮ್ಮ ಸುಭಾಷ ಬಾಯಪ್ನೋರ, ವಿಜಯಕುಮಾರ ಬಾಯಪ್ನೋರ, ರಾಜಕುಮಾರ ನಾಗನಾಥರಾವ ಪಾಟೀಲ, ಸಿರಾಮಪ್ಪ ವಡ್ಡಿ ಇದ್ದರು. ವೈಜಿನಾಥಪ್ಪ ದಾಬಶೆಟ್ಟಿ ಸ್ವಾಗತಿಸಿದರು. ರಮೇಶ ಶ್ರೀಮಂಡಲ ನಿರೂಪಿಸಿದರು. ಶಾಮರಾವ ಮಂದಕನಳ್ಳಿ ವಂದಿಸಿದರು.

ಟಾಪ್ ನ್ಯೂಸ್

ಲೋಕಸಭಾ ಚುನಾವಣೆ: ಪಕ್ಷೇತರ ಅಭ್ಯರ್ಥಿಯಾಗಿ ಕಣಕ್ಕಿಳಿಯಲಿದ್ದಾರ ಸೂರಜ ನಾಯ್ಕ ಸೋನಿ ?

ಲೋಕಸಭಾ ಚುನಾವಣೆ: ಪಕ್ಷೇತರ ಅಭ್ಯರ್ಥಿಯಾಗಿ ಕಣಕ್ಕಿಳಿಯಲಿದ್ದಾರ ಸೂರಜ ನಾಯ್ಕ ಸೋನಿ ?

jds

JDS; ಮೂವರು ಅಭ್ಯರ್ಥಿಗಳ ಪಟ್ಟಿ ಪ್ರಕಟ: ಕೋಲಾರಕ್ಕೆ ಮಲ್ಲೇಶ್ ಬಾಬು

Rameshwaram Cafe ಪ್ರಕರಣ: ಇಬ್ಬರು ಶಂಕಿತರ ಮಾಹಿತಿ ನೀಡಿದವರಿಗೆ 10 ಲಕ್ಷ ಬಹುಮಾನ ಘೋಷಣೆ

Rameshwaram Cafe ಪ್ರಕರಣ: ಇಬ್ಬರು ಶಂಕಿತರ ಮಾಹಿತಿ ನೀಡಿದವರಿಗೆ ಬಹುಮಾನ ಘೋಷಣೆ ಮಾಡಿದ NIA

prahlad-joshi

LS Election; ದಿಂಗಾಲೇಶ್ವರ ಶ್ರೀ ಟೀಕೆ ನನಗೆ ಆಶೀರ್ವಾದ ಇದ್ದಂತೆ: ಪ್ರಹ್ಲಾದ್ ಜೋಶಿ

1-wewqeq

Kejriwal ಪತ್ನಿಯನ್ನು ರಾಬ್ರಿ ದೇವಿಗೆ ಹೋಲಿಸಿದ ಕೇಂದ್ರ ಸಚಿವ ಹರ್ದೀಪ್ ಪುರಿ

1-eqqwqw

Mukhtar Ansari ಸಾವಿನ ಪ್ರಕರಣ: ನ್ಯಾಯಾಂಗ ತನಿಖೆಗೆ ಆದೇಶಿಸಿದ ಕೋರ್ಟ್

ವಿಕಸಿತ ಭಾರತದಂತಹ ಬಲಾಢ್ಯ ಕಲ್ಪನೆ ಕಾಂಗ್ರೆಸ್ ಇನ್ನೆಷ್ಟು ವರ್ಷ ಆಳ್ವಿಕೆ ಮಾಡಿದರೂ ಬಾರದು

ವಿಕಸಿತ ಭಾರತದಂತ ಬಲಾಢ್ಯ ಕಲ್ಪನೆ ಕಾಂಗ್ರೆಸ್ ಎಷ್ಟು ವರ್ಷ ಆಳ್ವಿಕೆ ಮಾಡಿದರೂ ಸಾಧ್ಯವಾಗದು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Bidar; The man jumps into the water tank

Bidar; ಪತ್ನಿಯ ಅನೈತಿಕ ಸಂಬಂಧಕ್ಕೆ ಮನನೊಂದು ನೀರಿನ ಟ್ಯಾಂಕ್ ಗೆ ಬಿದ್ದು ಪತಿ ಆತ್ಮಹತ್ಯೆ

1-aaaa

Lokayukta; ಬೆಳ್ಳಂಬೆಳಗ್ಗೆ ರಾಜ್ಯದ ವಿವಿಧೆಡೆ ಭ್ರಷ್ಟರ ಬೇಟೆಗಿಳಿದ ಲೋಕಾಯುಕ್ತ

Raw paan masala worth Rs 9 lakh, saree worth Rs 3 lakh seized in Bidar

Bidar: 9 ಲಕ್ಷ ರೂ. ಮೌಲ್ಯದ ಕಚ್ಚಾ ಪಾನ್ ಮಸಾಲಾ, 3 ಲಕ್ಷ ರೂ. ಮೌಲ್ಯ ಸೀರೆ ಜಪ್ತಿ

ಹಾಲ್ ಟಿಕೆಟನ್ನೇ ತಿಂದು ಹಾಕಿದ ಕುರಿ… ನೊಂದು ಆತ್ಮಹತ್ಯೆಗೆ ಯತ್ನಿಸಿದ ವಿದ್ಯಾರ್ಥಿನಿ

ಹಾಲ್ ಟಿಕೆಟನ್ನೇ ತಿಂದು ಹಾಕಿದ ಕುರಿ… ನೊಂದು ಆತ್ಮಹತ್ಯೆಗೆ ಯತ್ನಿಸಿದ ವಿದ್ಯಾರ್ಥಿನಿ

1-qwewqe

Bidar; ಖೂಬಾ ಪರ ಆರ್.ಅಶೋಕ್ ನೇತೃತ್ವದಲ್ಲಿ ಬಿಜೆಪಿ ಒಗ್ಗಟ್ಟು ಪ್ರದರ್ಶನ

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

Kannada Cinema; ಚಿತ್ರೀಕರಣ ಮುಗಿಸಿದ ‘ವಿದ್ಯಾರ್ಥಿ ವಿದ್ಯಾರ್ಥಿನಿಯರೇ’

Kannada Cinema; ಚಿತ್ರೀಕರಣ ಮುಗಿಸಿದ ‘ವಿದ್ಯಾರ್ಥಿ ವಿದ್ಯಾರ್ಥಿನಿಯರೇ’

ಲೋಕಸಭಾ ಚುನಾವಣೆ: ಪಕ್ಷೇತರ ಅಭ್ಯರ್ಥಿಯಾಗಿ ಕಣಕ್ಕಿಳಿಯಲಿದ್ದಾರ ಸೂರಜ ನಾಯ್ಕ ಸೋನಿ ?

ಲೋಕಸಭಾ ಚುನಾವಣೆ: ಪಕ್ಷೇತರ ಅಭ್ಯರ್ಥಿಯಾಗಿ ಕಣಕ್ಕಿಳಿಯಲಿದ್ದಾರ ಸೂರಜ ನಾಯ್ಕ ಸೋನಿ ?

jds

JDS; ಮೂವರು ಅಭ್ಯರ್ಥಿಗಳ ಪಟ್ಟಿ ಪ್ರಕಟ: ಕೋಲಾರಕ್ಕೆ ಮಲ್ಲೇಶ್ ಬಾಬು

Rameshwaram Cafe ಪ್ರಕರಣ: ಇಬ್ಬರು ಶಂಕಿತರ ಮಾಹಿತಿ ನೀಡಿದವರಿಗೆ 10 ಲಕ್ಷ ಬಹುಮಾನ ಘೋಷಣೆ

Rameshwaram Cafe ಪ್ರಕರಣ: ಇಬ್ಬರು ಶಂಕಿತರ ಮಾಹಿತಿ ನೀಡಿದವರಿಗೆ ಬಹುಮಾನ ಘೋಷಣೆ ಮಾಡಿದ NIA

prahlad-joshi

LS Election; ದಿಂಗಾಲೇಶ್ವರ ಶ್ರೀ ಟೀಕೆ ನನಗೆ ಆಶೀರ್ವಾದ ಇದ್ದಂತೆ: ಪ್ರಹ್ಲಾದ್ ಜೋಶಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.