ಹತಾಶರಾಗದೇ ಏಡ್ಸ್‌ಗೆ ಚಿಕಿತ್ಸೆ ಪಡೆಯಿರಿ


Team Udayavani, Dec 17, 2018, 12:26 PM IST

bid-2.jpg

ಬೀದರ: ಎಚ್‌ಐವಿ ಏಡ್ಸ್‌ ರೋಗ ನಿಯಂತ್ರಣಕ್ಕಾಗಿ ಸರ್ಕಾರ ಸಾಕಷ್ಟು ಕಾರ್ಯಕ್ರಮ ರೂಪಿಸುತ್ತಿದ್ದು, ರೋಗಿಗಳು ಯಾವುದೇ ಕಾರಣಕ್ಕೂ ಹತಾಶರಾಗದೇ ಚಿಕಿತ್ಸೆ ಪಡೆಯಲು ಮುಂದಾಗಬೇಕು ಎಂದು ಹಿರಿಯ ಸಿವಿಲ್‌ ನ್ಯಾಯಾಧೀಶ ಆರ್‌. ರಾಘವೇಂದ್ರ ಅಭಿಪ್ರಾಯಪಟ್ಟರು.

ಜಿಲ್ಲಾ ಆರೊಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಕಚೇರಿ ಸಭಾಂಗಣದಲ್ಲಿ ಜಿಲ್ಲಾಡಳಿತ, ಜಿಪಂ, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಜಿಲ್ಲಾ ಏಡ್ಸ್‌ ನಿಯಂತ್ರಣ ಮತ್ತು ತಡೆಗಟ್ಟುವ ಘಟಕ ಹಾಗೂ ಸ್ಥಳೀಯ ಸಂಘ ಸಂಸ್ಥೆಗಳ ಸಂಯುಕ್ತಾಶ್ರಯದಲ್ಲಿ ನಡೆದ ಜಿಲ್ಲಾ ಮಟ್ಟದ ವಿಶ್ವ ಏಡ್ಸ್‌ ದಿನಾಚರಣೆ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.

ಸರ್ಕಾರ 2030ರ ವೇಳೆಗೆ ದೇಶವನ್ನು ಎಚ್‌ಐವಿ ರೋಗದಿಂದ ಮುಕ್ತವಾಗಿಸುವ ಗುರಿ ಹೊಂದಿದೆ. ಅದರಂತೆ ಈ ರೋಗವನ್ನು ನಿರ್ಮೂಲನೆಗೊಳಿಸಲು ಪ್ರತಿಯೊಬ್ಬರು ಪಣ ತೊಡಬೇಕಿದೆ. ಎಚ್‌ಐವಿ ಬಾಧಿತರು ಕಾನೂನು ಸೇವೆ ಪಡೆಯಲು ಹೆದರಬೇಕಾಗಿಲ್ಲ. ಜಿಲ್ಲೆಯ ಎಆರ್‌ಟಿ ಕೇಂದ್ರದಲ್ಲಿ ಇಬ್ಬರು ಪ್ಯಾನಲ್‌ ವಕೀಲರನ್ನು ಸರ್ಕಾರದ ವತಿಯಿಂದ ನಿಯೋಜಿಸಲಾಗಿದೆ. ಎಚ್‌ಐವಿ ಬಾಧಿತರು ಇವರಿಂದ ಕಾನೂನು ಸಲಹೆ ಮತ್ತು ಸೇವೆ ಪಡೆಯಬಹುದಾಗಿದೆ ಎಂದು ಹೇಳಿದರು.

ನಗರ ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿ ಡಾ| ಮಾರ್ತಾಂಡರಾವ್‌ ಖಾಶೆಂಪುರಕರ ಮಾತನಾಡಿ, ಎಚ್‌
ಐವಿ ವೈರಾಣುವಿನಿಂದ ಬರುವ ರೋಗವಾಗಿದೆ. ಸೂಕ್ತ ಜಾಗೃತಿ ಮೂಡಿಸುವುದರಿಂದ ಮಾತ್ರ ನಿಯಂತ್ರಣ ಸಾಧ್ಯ. ಈ ರೋಗಕ್ಕೆ ಔಷಧ ಲಭ್ಯವಿಲ್ಲ. ಆದರೆ ಜೀವನಶೈಲಿ ಉತ್ತಮಗೊಳಿಕೊಳ್ಳುವ ಮೂಲಕ ರೋಗ ಬಾರದಂತೆ ನೋಡಿಕೊಳ್ಳಬಹುದು ಎಂದು ಹೇಳಿದರು. 

ಜಿಲ್ಲಾ ಶಸ್ತ್ರ ಚಿಕಿತ್ಸಕ ಡಾ| ಸಿ.ಎಸ್‌. ರಗಟೆ ಮಾತನಾಡಿ, ಎಚ್‌ಐವಿ ರೋಗಿಗಳಿಗೆ ಜಿಲ್ಲಾಸ್ಪತ್ರೆಯಲ್ಲಿ ಉಚಿತ ತಪಾಸಣೆ ಮತ್ತು ಚಿಕಿತ್ಸೆ ಸೌಲಭ್ಯವಿದೆ. ರೋಗಿಗಳು ಇದರ ಸದುಪಯೋಗ ಪಡೆಯಬೇಕು ಎಂದು ಹೇಳಿದರು.

ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ| ಎಂ.ಎ.ಜಬ್ಟಾರ್‌ ಮಾತನಾಡಿ, ಎಚ್‌ಐವಿ ಬಾಧಿತರಿಗೆ ಚಿಕಿತ್ಸೆ ಜತೆಗೆ ಬೆಂಬಲದ ಅವಶ್ಯಕತೆ ಇದೆ. ಈ ನಿಟ್ಟಿನಲ್ಲಿ ಆರೋಗ್ಯ ಇಲಾಖೆ ಹಾಗೂ ಸ್ವಯಂ ಸೇವಾ ಸಂಸ್ಥೆಗಳು ಸಕ್ರಿಯವಾಗಿ ಕಾರ್ಯನಿರ್ವಹಿಸುತ್ತಿವೆ ಎಂದು ಹೇಳಿದರು.

ಇದೇ ಸಂದರ್ಭದಲ್ಲಿ ಏಡ್ಸ್‌ ನಿಯಂತ್ರಣಕ್ಕಾಗಿ ಅತ್ಯುತ್ತಮ ಸೇವೆ ಸಲ್ಲಿಸಿದ ವಿಜಯಕುಮಾರ ವಾಘಮೋರೆ, ದಿಲೀಪ, ಸಂತೋಷ ಸಿಂಧೆ, ಮಹಾನಂದಾ, ವಿಶ್ವನಾಥ ಸ್ವಾಮಿ ಹಾಗೂ ಶಿವಕುಮಾರ ವಾಲ್ಮೋಡ್ಡಿ ಅವರಿಗೆ ಪ್ರಶಸ್ತಿ ನೀಡಿ ಸನ್ಮಾನಿಸಲಾಯಿತು. ಜಿಪಂ ಉಪಕಾರ್ಯದರ್ಶಿ ಕಿಶೋರಕುಮಾರ ದುಬೆ ಅವರು ಜಾಥಾಕ್ಕೆ ಚಾಲನೆ ನೀಡಿದರು. 

ಜಿಲ್ಲಾ ಏಡ್ಸ್‌ ನಿಯಂತ್ರಣಾಧಿ ಕಾರಿ ಡಾ| ದೀಪಾ ಖಂಡ್ರೆ, ಜಿಲ್ಲಾ ಮಟ್ಟದ ಕಾರ್ಯಕ್ರಮ ಅಧಿ ಕಾರಿ ಡಾ| ರಾಜಶೇಖರ ಪಾಟೀಲ, ಡಾ| ಇಂದುಮತಿ ಪಾಟೀಲ, ಡಾ| ಶಿವಶಂಕರ ಬಿ., ಡಾ| ಕೃಷ್ಣರೆಡ್ಡಿ, ಡಾ| ರವೀಂದ್ರ ಸಿರ್ಸೆ, ತಾಲೂಕು ಅಧಿ ಕಾರಿ ಡಾ| ಸಂಗಾರೆಡ್ಡಿ, ಎನ್‌. ಕೆ. ಜಾಬಶೆಟ್ಟಿ, ಉಪ ಆರೋಗ್ಯ ಶಿಕ್ಷಣಾ ಧಿಕಾರಿ ಸಂಗಪ್ಪ ಕಾಂಬಳೆ, ಸುಭಾಷ ಮುಧಾಳೆ, ಗೀತಾ ರೆಡ್ಡಿ ಇದ್ದರು.

ಟಾಪ್ ನ್ಯೂಸ್

Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ

Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ

9-bantwala

Bantwala: ಬಾಲಕಿಯೊಂದಿಗೆ ಅನುಚಿತ ವರ್ತನೆ; ಆರೋಪಿ ವಿರುದ್ಧ ಪ್ರಕರಣ ದಾಖಲು

I.N.D.I.A ಮೈತ್ರಿಕೂಟದ ಪ್ರಧಾನಿ ಅಭ್ಯರ್ಥಿ ಯಾರೆಂದು ಹೇಳಲಿ: ಮಾಳವಿಕಾ ಅವಿನಾಶ್

I.N.D.I.A ಮೈತ್ರಿಕೂಟದ ಪ್ರಧಾನಿ ಅಭ್ಯರ್ಥಿ ಯಾರೆಂದು ಹೇಳಲಿ: ಮಾಳವಿಕಾ ಅವಿನಾಶ್

 Delhi: ಬ್ಯಾಂಕ್‌ ಮ್ಯಾನೇಜರ್‌ ಅಪಹರಣ…ಮಾಜಿ ಬಾಡಿಗೆದಾರರನಿಂದ ಸಂಚು!

 Delhi: ಬ್ಯಾಂಕ್‌ ಮ್ಯಾನೇಜರ್‌ ಅಪಹರಣ…ಮಾಜಿ ಬಾಡಿಗೆದಾರರನಿಂದ ಸಂಚು!

pralhad joshi

Hubli; ದ್ವಂದ್ವತೆ, ತುಷ್ಟೀಕರಣ ಕಾಂಗ್ರೆಸ್ ರಕ್ತದ ಕಣಕಣದಲ್ಲಿದೆ: ಪ್ರಹ್ಲಾದ ಜೋಶಿ

ಹೆದ್ದಾರಿ ಬದಿ ನಿಂತಿದ್ದ ಟ್ರಕ್ ಗೆ ಕಾರು ಡಿಕ್ಕಿ… ಮಗು ಸೇರಿ 6 ಮಂದಿ ಸ್ಥಳದಲ್ಲೇ ಮೃತ್ಯು

ಹೆದ್ದಾರಿ ಬದಿ ನಿಂತಿದ್ದ ಟ್ರಕ್ ಗೆ ಕಾರು ಡಿಕ್ಕಿ… ಮಗು ಸೇರಿ 6 ಮಂದಿ ಸ್ಥಳದಲ್ಲೇ ಮೃತ್ಯು

Chamarajanagar: ಕೊಳ್ಳೇಗಾಲ ಶಾಸಕ ಎ ಆರ್ ಕೃಷ್ಣಮೂರ್ತಿ ಕಾರು ಅಪಘಾತ, ಅಪಾಯದಿಂದ ಪಾರು

Chamarajanagar: ಕೊಳ್ಳೇಗಾಲ ಶಾಸಕ ಎ ಆರ್ ಕೃಷ್ಣಮೂರ್ತಿ ಕಾರು ಅಪಘಾತ, ಅಪಾಯದಿಂದ ಪಾರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Lok Sabha Election: ಸೀನಿಯರ್‌ ಖೂಬಾಗೆ ಜ್ಯೂನಿಯರ್‌ ಖಂಡ್ರೆ ಸವಾಲು

Lok Sabha Election: ಸೀನಿಯರ್‌ ಖೂಬಾಗೆ ಜ್ಯೂನಿಯರ್‌ ಖಂಡ್ರೆ ಸವಾಲು

16

ನೀತಿ ಸಂಹಿತೆ ನಡುವೆಯೂ ರಾಜ್ಯಕ್ಕೆ ನೆರವು ಎನ್ನುವ ಬಿಜೆಪಿಗೆ ನಾಚಿಕೆ ಇಲ್ಲವೇ? – ಖಂಡ್ರೆ

Minchu

Rain; ಬೀದರ್,ಕೊಪ್ಪಳದಲ್ಲಿ ಸಿಡಿಲಿನ ಆರ್ಭಟಕ್ಕೆ ಇಬ್ಬರು ಮೃತ್ಯು

Bidar; ಪ್ರೇಯಸಿ ಮದುವೆ ದಿನವೇ ಪ್ರಿಯಕರನ ಶವ ಪತ್ತೆ

Bidar; ಪ್ರೇಯಸಿ ಮದುವೆ ದಿನವೇ ಪ್ರಿಯಕರನ ಶವ ಪತ್ತೆ

rape

Bidar; ಯುವಕನಿಂದ ಅಪ್ರಾಪ್ತ ವಯಸ್ಕಳ ರೇಪ್

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

bike

Devadurga: ಅಪಘಾತದಲ್ಲಿ ಬೈಕ್ ಸವಾರರಿಬ್ಬರು ಸಾವು

Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ

Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ

9-bantwala

Bantwala: ಬಾಲಕಿಯೊಂದಿಗೆ ಅನುಚಿತ ವರ್ತನೆ; ಆರೋಪಿ ವಿರುದ್ಧ ಪ್ರಕರಣ ದಾಖಲು

8-uv-fusion

Photography: ನಿಮ್ಮ ಬೊಗಸೆಯಲ್ಲಿ ಇರಲಿ ನೆನಪುಗಳು

I.N.D.I.A ಮೈತ್ರಿಕೂಟದ ಪ್ರಧಾನಿ ಅಭ್ಯರ್ಥಿ ಯಾರೆಂದು ಹೇಳಲಿ: ಮಾಳವಿಕಾ ಅವಿನಾಶ್

I.N.D.I.A ಮೈತ್ರಿಕೂಟದ ಪ್ರಧಾನಿ ಅಭ್ಯರ್ಥಿ ಯಾರೆಂದು ಹೇಳಲಿ: ಮಾಳವಿಕಾ ಅವಿನಾಶ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.