ಅನ್ಯರ ಸದ್ಗುಣಗಳ ವರ್ಣಿಸಿ


Team Udayavani, Jan 12, 2019, 11:22 AM IST

bid-2.jpg

ಹುಮನಾಬಾದ: ಸೃಷ್ಟಿಕರ್ತ ಪರಮಾತ್ಮ ನಮ್ಮೆಲ್ಲರಿಗೆ ನೀಡಿರುವ ಅಮೂಲ್ಯ ಸಮಯವನ್ನು ಅನ್ಯರ ವೈಯಕ್ತಿಕ ದೋಷಗಳ ಎಣಿಕೆಗಾಗಿ ವ್ಯಯಿಸದೇ ಅವರಲ್ಲಿನ ಸದ್ಗುಣಗಳನ್ನು ವರ್ಣಿಸಲು ಬಳಸಬೇಕು ಎಂದು ಬಸವಕಲ್ಯಾಣ ಅನುಭವ ಮಂಟಪದ ಶ್ರೀ ಸಂಗಮೇಶ್ವರ ದೇವರು ಹೇಳಿದರು.

ಪಟ್ಟಣದ ಬಸವಸೇವಾ ಪ್ರತಿಷ್ಠಾನ ಗೃಹ ನಿರ್ಮಾಣ ಮಂಡಳಿಯ ಬಯಲು ರಂಗ ಮಂಟಪದಲ್ಲಿ ಚನ್ನಬಸಪ್ಪ ವಡ್ಡನಕೇರಿ ಅವರ ಆತಿಥ್ಯದಲ್ಲಿ ನಡೆದ 192ನೇಯ ಬಸವಜ್ಯೋತಿ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

ಜೀವನದಲ್ಲಿ ಬರುವಾಗ ಯಾರೂ ಏನನ್ನೂ ತಂದಿಲ್ಲ, ಹೋಗುವಾಗ ತೆಗೆದುಕೊಂಡೂ ಹೋಗಿಲ್ಲ. ಹೋಗುವುದು ಇಲ್ಲ. ಶಾಶ್ವತವಲ್ಲದ ಬದುಕಿನಲ್ಲಿ ನಾನು, ನನ್ನದೆಂದು ಅಹಂಕಾರಪಡದೇ ದೇಹದ ಮೇಲಿನ ವ್ಯಾಮೋಹ ತೊರೆದು ಪರಮಾತ್ಮನ ಧ್ಯಾನ ಹಾಗೂ ಸಕಲರಿಗೂ ಲೇಸನ್ನೇ ಬಯಸುವುದಕ್ಕಾಗಿ ಮೀಸಲಾಗಿಸಬೇಕು. ಎಷ್ಟು ಕಾಲ ಬದುಕಿದೆ ಎಂಬುದಕಿಂತ ಹೇಗೆ ಬದುಕಿದೆನೆಂಬುದು ಮುಖ್ಯ ಎಂದು ಹೇಳಿದರು. ಬೀದರ್‌ ಸಿದ್ಧಾರ್ಥ ಪದವಿ ಕಾಲೇಜು ಪ್ರಾಧ್ಯಾಪಕ ಜಗದೇವಪ್ಪ ಅಕ್ಕಿ ಮಾತನಾಡಿ, ಬಸವಣ್ಣನವರ ಕಳಬೇಡ, ಕೊಲಬೇಡ ಎನ್ನುವ ಸಪ್ತಸೂತ್ರ ಮನುಷ್ಯ ಜನ್ಮದ ಸಾರ್ಥಕತೆಯನ್ನು ತಿಳಿಸುತ್ತದೆ ಎಂದರು.

ಜಾಗತಿಕ ಲಿಂಗಾಯತ ಧರ್ಮದ ಜಿಲ್ಲಾ ಪ್ರಧಾನ ಕಾರ್ಯದರ್ಶಿ ರಮೇಶ ಮಠಪತಿ ಮಾತನಾಡಿ, ಜನವರಿ 20ರಂದು ನಡೆಯಲಿರುವ ಸಮಾವೇಶ ಮತ್ತು ಫೆಬ್ರವರಿ 17,18 ಮತ್ತು 19ರಂದು ನಡೆಯಲಿರುವ ವಚನ ವಿಜಯೋತ್ಸವ ಕಾರ್ಯಕ್ರಮದಲ್ಲಿ ಲಿಂಗವಂತ ಅನುಯಾಯಿಗಳು ಹೆಚ್ಚು ಸಂಖ್ಯೆಯಲ್ಲಿ ಭಾಗವಹಿಸಿ ಯಶಸ್ವಿಗೊಳಿಸಬೇಕು ಎಂದು ಮನವಿ ಮಾಡಿದರು. ಸಂಗಮೇಶ್ವರಿ ಮಾತನಾಡಿ, ಬಸವ ಚಾನಲ್‌ ಪೋಷಣೆ ನಮ್ಮ ನಿಮ್ಮೆಲ್ಲರ ಜವಾಬ್ದಾರಿ. ಅದನ್ನು ಕರ್ತವ್ಯವೆಂದು ಭಾವಿಸಬೇಕು ಎಂದರು.

ಸಾನ್ನಿಧ್ಯ ವಹಿಸಿದ್ದ ಬೀದರ ಬಸವಸೇವಾ ಪ್ರತಿಷ್ಠಾನದ ಅಕ್ಕ ಅನ್ನಪೂರ್ಣ ಮಾತನಾಡಿ, ರಾಜಕೀಯ ಪಕ್ಷಗಳ ಕೈಗೆ ಸಿಕ್ಕು ಲಿಂಗಾಯತ ಧರ್ಮ ಒದ್ದಾಡುವ ಸ್ಥಿತಿಗೆ ತಲುಪಿರುವುದು ಮಹಾ ದುರಂತ. ಸರಿಪಡಿಸುವುದಕ್ಕಾಗಿ ಲಿಂಗವಂತರೆಲ್ಲರೂ ಸಂಘಟಿತರಾಗುವುದು ಹಿಂದೆಂದಿಗಿಂತಲೂ ಈಗ ಅನಿವಾರ್ಯವಾಗಿದೆ ಎಂದು ಹೇಳಿದರು.

ವಿಶ್ರಾಂತ ಪ್ರಾಚಾರ್ಯ ಮಹಾದೇವಯ್ಯ ಕಲ್ಯಾಣಮಠ್ ಅಧ್ಯಕ್ಷತೆ ವಹಿಸಿದ್ದರು. ತಾಲೂಕು ಪಂಚಾಯಿತಿ ಸಾಮಾಜಿಕ ನ್ಯಾಯ ಸ್ಥಾಯಿ ಸಮಿತಿ ಅಧ್ಯಕ್ಷ ಕಂಟೆಪ್ಪ ದಾನಾ, ಡಾ| ಸೋಮನಾಥ ಯಾಳವಾರ, ಮಡಿವಾಳಯ್ಯ ಸ್ವಾಮಿ, ಮೀನಾಕುಮಾರಿ ಬೋರಾಳ್ಕರ್‌, ಸರ್ವೋದಯ ಪದವಿ ಕಾಲೇಜು ಪ್ರಾಚಾರ್ಯೆ ಶಿಲ್ಪಾರಾಣಿ ಶೇರಿಕಾರ್‌, ಎಸ್‌.ಎನ್‌.ಯಲಾಲ್‌, ಎಸ್‌.ಎಸ್‌. ಪಾರಾ, ಡಾ| ಮಠಪತಿ, ಶಂಕರ ಮುಗಳಿ, ಶಾಂತಪ್ಪ ದುಬಲಗುಂಡಿ, ಶಿವಶರಣಪ್ಪ ಬುರ್ಜಿ, ಮಹಾನಂದಾ ಬಶಟ್ಟಿ ಇದ್ದರು.

ಮಹಾದೇವಮ್ಮ ಕಲ್ಯಾಣಮಠ್, ಸಾವಿತ್ರಿ ಪಾಟೀಲ ಪ್ರಾರ್ಥಿಸಿದರು. ಪ್ರತಿಷ್ಠಾನ ಅಧ್ಯಕ್ಷ ಚನ್ನಬಸಪ್ಪ ವಡ್ಡನಕೇರಿ ಸ್ವಾಗತಿಸಿದರು. ಪ್ರಧಾನ ಕಾರ್ಯದರ್ಶಿ ಮಲ್ಲಿಕಾರ್ಜುನ ಸಂಗಮಕರ್‌ ನಿರೂಪಿಸಿದರು. ಬಾಬುರಾವ್‌ ಪಾಟೀಲ ಚಿತ್ತಕೋಟಾ ವಂದಿಸಿದರು.

ಟಾಪ್ ನ್ಯೂಸ್

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ

accident

Gangavathi: ಎರಡು ಪ್ರತ್ಯೇಕ ಅಪಘಾತದಲ್ಲಿ ಮೂರು ಜನ ಸಾವು

Election Commission: ಮೋದಿ, ರಾಹುಲ್‌ ವಿರುದ್ಧ ದೂರು: ಚುನಾವಣಾ ಆಯೋಗ ನೋಟಿಸ್‌

Election Commission: ಮೋದಿ, ರಾಹುಲ್‌ ವಿರುದ್ಧ ದೂರು: ಚುನಾವಣಾ ಆಯೋಗ ನೋಟಿಸ್‌

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

Sumalatha Ambareesh: ಟ್ವೀಟ್‌ನಲ್ಲಿ ಸಂಸದೆ ಸುಮಲತಾ ಅಂಬರೀಶ್‌ ವಿವೇಕದ ಪಾಠ

Sumalatha Ambareesh: ಟ್ವೀಟ್‌ನಲ್ಲಿ ಸಂಸದೆ ಸುಮಲತಾ ಅಂಬರೀಶ್‌ ವಿವೇಕದ ಪಾಠ

1-WQEWQEWQ

Eshwarappa ಅವರಿಂದ ನಾನೇನು ಕಲಿಯಬೇಕಾಗಿಲ್ಲ: ಗೀತಾ ಶಿವರಾಜ್ ಕುಮಾರ್

Vijayendra (2)

PM ಮೋದಿಯವರಿಂದ ಏ.28 ಮತ್ತು 29 ರಂದು 5 ಕಡೆ ಪ್ರಚಾರ: ವಿಜಯೇಂದ್ರ ಮಾಹಿತಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

12

B.S.Yediyurappa: ಶಾಸಕ ಪ್ರಭು ಚವ್ಹಾಣ ಹೆಸರು ಹೇಳುತ್ತಿದ್ದಂತೆ ಬಿಎಸ್‌ವೈ ಗರಂ

1-wqqwewqe

BJP; ಖೂಬಾ ಮತ್ತೊಮ್ಮೆ ಸಚಿವರಾಗ್ತಾರೆ : ಔರಾದ್ ನಲ್ಲಿ ಯಡಿಯೂರಪ್ಪ ಘೋಷಣೆ

siddaramaiah

Bidar; ನೇಹಾ ಪ್ರಕರಣದಲ್ಲಿ ಬಿಜೆಪಿ ರಾಜಕೀಯ‌ ಮಾಡುವುದು ಸರಿಯಲ್ಲ: ಸಿಎಂ ಸಿದ್ಧರಾಮಯ್ಯ‌

Lok Sabha Election: ಸೀನಿಯರ್‌ ಖೂಬಾಗೆ ಜ್ಯೂನಿಯರ್‌ ಖಂಡ್ರೆ ಸವಾಲು

Lok Sabha Election: ಸೀನಿಯರ್‌ ಖೂಬಾಗೆ ಜ್ಯೂನಿಯರ್‌ ಖಂಡ್ರೆ ಸವಾಲು

16

ನೀತಿ ಸಂಹಿತೆ ನಡುವೆಯೂ ರಾಜ್ಯಕ್ಕೆ ನೆರವು ಎನ್ನುವ ಬಿಜೆಪಿಗೆ ನಾಚಿಕೆ ಇಲ್ಲವೇ? – ಖಂಡ್ರೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Gangavati: ಜೈ ಶ್ರೀರಾಮ್‌ ಎಂದಿದ್ದಕ್ಕೆ ಯುವಕರ ತಂಡದಿಂದ ಹಲ್ಲೆ

Gangavati: ಜೈ ಶ್ರೀರಾಮ್‌ ಎಂದಿದ್ದಕ್ಕೆ ಯುವಕರ ತಂಡದಿಂದ ಹಲ್ಲೆ

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ

accident

Gangavathi: ಎರಡು ಪ್ರತ್ಯೇಕ ಅಪಘಾತದಲ್ಲಿ ಮೂರು ಜನ ಸಾವು

Election Commission: ಮೋದಿ, ರಾಹುಲ್‌ ವಿರುದ್ಧ ದೂರು: ಚುನಾವಣಾ ಆಯೋಗ ನೋಟಿಸ್‌

Election Commission: ಮೋದಿ, ರಾಹುಲ್‌ ವಿರುದ್ಧ ದೂರು: ಚುನಾವಣಾ ಆಯೋಗ ನೋಟಿಸ್‌

IPL: ಎಲ್ಲೆ ಮೀರಿ ವಿಕೆಟ್‌ ಸಂಭ್ರಮಾಚರಣೆಡೆಲ್ಲಿ ವೇಗಿ ರಸಿಕ್‌ ಸಲಾಂಗೆ ಛೀಮಾರಿ

IPL: ಎಲ್ಲೆ ಮೀರಿ ವಿಕೆಟ್‌ ಸಂಭ್ರಮಾಚರಣೆಡೆಲ್ಲಿ ವೇಗಿ ರಸಿಕ್‌ ಸಲಾಂಗೆ ಛೀಮಾರಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.