ಬಿಸಿಯೂಟದಲ್ಲಿ ಮಕ್ಕಳಿಗೆ ಇಡ್ಲಿ ಸಾಂಬಾರ್
Team Udayavani, Jan 12, 2019, 11:35 AM IST
ಭಾಲ್ಕಿ: ಕಲವಾಡಿ ಕ್ಲಸ್ಟರ್ನ ಕುರುಬಖೇಳಗಿ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಮತ್ತು ದಾಡಗಿ ಗ್ರಾಮದ ಸರ್ಕಾರಿ ಪ್ರೌಢಶಾಲೆಯ ವಿದ್ಯಾರ್ಥಿಗಳು ಶುಕ್ರವಾರ ಬಿಸಿಯೂಟ ಯೋಜನೆಯಲ್ಲಿ ಇಡ್ಲಿ, ಚಟ್ನಿ, ಸಾಂಬಾರ್ ಸೇವಿಸಿದರು.
ಪ್ರತಿನಿತ್ಯ ಅನ್ನ ಸಾಂಬಾರ್ ಮಾತ್ರ ಊಟ ಮಾಡುತ್ತಿದ್ದ ವಿದ್ಯಾರ್ಥಿಗಳಿಗೆ ಇಡ್ಲಿ, ಚಟ್ನಿ, ಸಾಂಬಾರ್ನ ಉಣ ಬಡಿಸುವ ನಿಟ್ಟಿನಲ್ಲಿ ತಾಲೂಕು ಅಕ್ಷರ ದಾಸೋಹ ಯೋಜನೆಯ ಸಹಾಯಕ ನಿರ್ದೇಶಕ ಸೂರ್ಯಕಾಂತ ಪಾಟೀಲರು ಕ್ರಮ ಕೈಗೊಂಡಿದ್ದು, ಅಡುಗೆ ಸಹಾಯಕರು ಮತ್ತು ಮುಖ್ಯಶಿಕ್ಷಕರ ಮನ ಒಲಿಸಿ, ಪ್ರಾಯೋಗಿಕವಾಗಿ ಕಲವಾಡಿ ಕ್ಲಸ್ಟರ್ನ ದಾಡಗಿ ಮತ್ತು ಕುರುಬಖೇಳಗಿ ಗ್ರಾಮಗಳ ಸರ್ಕಾರಿ ಶಾಲೆಯಲ್ಲಿ ಇಡ್ಲಿ, ಸಾಂಬಾರ ವಿತರಿಸಲಾಯಿತು.
ಈ ವೇಳೆ ಮಾತನಾಡಿದ ಅವರು, ಶಿಕ್ಷಕರು ಮತ್ತು ಶಿಕ್ಷಣ ಇಲಾಖೆ ಸಿಬ್ಬಂದಿ ಮನಸೋ ಇಚ್ಛೆ ಕಾರ್ಯ ನಿರ್ವಹಿಸಿದಲ್ಲಿ ಎಲ್ಲವೂ ಸಾಧ್ಯವಾಗುತ್ತದೆ. ಪ್ರತಿನಿತ್ಯ ಬರೀ ಅನ್ನ ಸಾರು ಊಟ ಮಾಡುವ ಮಕ್ಕಳಿಗೆ ವಾರಕ್ಕೊಮ್ಮೆಯಾದರೂ ವಿಭಿನ್ನ ಆಹಾರ ನೀಡುವ ಉದ್ದೇಶ ನಮ್ಮದಾಗಿದೆ. ಒಂದು ವಾರ ಇಡ್ಲಿ ಸಾಂಬಾರ ಮಾಡಿದರೆ ಮತ್ತೂಂದು ವಾರ ಪೂರಿ ಸಾಗು ನೀಡಲಾಗುವುದು ಎಂದು ಹೇಳಿದರು.
ಕಲವಾಡಿ ಕ್ಲಸ್ಟರ್ ಸಂಪನ್ಮೂಲ ವ್ಯಕ್ತಿ ಗದಗೆಪ್ಪಾ ಪಾಟೀಲ, ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಜಿಲ್ಲಾ ಪ್ರತಿನಿಧಿ ಷಡಕ್ಷರಿ ಸ್ವಾಮಿ, ಕುರುಬಖೇಳಗಿ ಸರ್ಕಾರಿ ಪ್ರಾಥಮಿಕ ಶಾಲೆಯ ಮುಖ್ಯ ಶಿಕ್ಷಕ ನಾಗಭೂಷಣ ಮಾಮಡಿ, ಪ್ರೌಢಶಾಲಾ ಶಿಕ್ಷಕರ ಸಂಘದ ತಾಲೂಕು ಅಧ್ಯಕ್ಷ ಬಾಲಾಜಿ ಕಾಂಬಳೆ, ಸರ್ಕಾರಿ ಪ್ರೌಢಶಾಲೆ ದಾಡಗಿಯ ಮುಖ್ಯ ಶಿಕ್ಷಕ ಎಂ.ಡಿ. ಹನೀಫ್, ಶಿಕ್ಷಕರಾದ ಶಿವಕಾಂತ ಪಾಟೀಲ, ನೀಲಕಂಠ, ಕೃಷ್ಣಾ ಸೊನಕಾಂಬಳೆ ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Dharwad; ನೇಹಾ ಕೊಲೆ ಮಾಡಿದ ನನ್ನ ಮಗನಿಗೆ ಕಠಿಣ ಶಿಕ್ಷೆಯಾಗಲಿ: ಫಯಾಜ್ ತಾಯಿ ಆಗ್ರಹ
Glanders infection: ಗ್ಲ್ಯಾಂಡರ್ಸ್ ಸೋಂಕು; ಬೆಂಗಳೂರು ತೊರೆದ ಕುದುರೆ ಮಾಲೀಕ, ಸವಾರ
Chain theft: ಒಂಟಿ ಮಹಿಳೆಯರ ಸರ ಕದಿಯುತ್ತಿದ್ದ 5 ಬಂಧನ; 10.82 ಲಕ್ಷದ ವಸ್ತು ಜಪ್ತಿ
Hubli;ತಪ್ಪಿತಸ್ಥರಿಗೆ ಶಿಕ್ಷೆ ಆಗಲೇಬೇಕು: ನೇಹಾ ಮನೆಗೆ ಫಕೀರ ಸಿದ್ಧರಾಮೇಶ್ವರ ಶಿವಯೋಗಿ ಭೇಟಿ
Davanagere; ಗಾಯಿತ್ರಿ ಸಿದ್ದೇಶ್ವರ್ ಅಂತಿಮ ನಾಮಪತ್ರ ಸಲ್ಲಿಕೆ; ಭರ್ಜರಿ ಮೆರವಣಿಗೆ