ಜೀಜಾಮಾತಾ ಶಿಕ್ಷಣ ಸಂಸ್ಥೆ ವಾರ್ಷಿಕೋತ್ಸವ
Team Udayavani, Jan 14, 2019, 9:57 AM IST
ಬಸವಕಲ್ಯಾಣ: ವಿದ್ಯಾರ್ಥಿಗಳು ಮಹಾನ್ ವ್ಯಕ್ತಿಗಳ ಚರಿತ್ರೆಯನ್ನು ಅರಿತು ವಿಶಾಲ ಗುರಿ ಹೊಂದಬೇಕು ಎಂದು ಮಾಜಿ ಶಾಸಕ ಮಾರುತಿರಾವ್ ಮೂಳೆ ಹೇಳಿದರು.
ನಗರದ ಜೀಜಾಮಾತಾ ಶಿಕ್ಷಣ ಸಂಸ್ಥೆಯಲ್ಲಿ ಸಾವಿತ್ರಿಬಾಯಿ ಫುಲೆ, ಸ್ವಾಮಿ ವಿವೇಕಾನಂದ ಜಯಂತಿ ಹಾಗೂ ವಾರ್ಷಿಕ ಸ್ನೇಹ ಸಮ್ಮೇಳನ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ವಿದ್ಯಾರ್ಥಿಗಳು ಗುರಿ ಮುಟ್ಟುವವರೆಗೂ ಯಾವುದೇ ವ್ಯಸನಕ್ಕೆ ಬಲಿಯಾಗದೆ, ವಿದ್ಯಾಭ್ಯಾಸದ ಕಡೆ ಹೆಚ್ಚು ಗಮನ ಹರಿಸಬೇಕು ಎಂದು ಹೇಳಿದರು.
ಸಹಾಯಕ ಆಯುಕ್ತ ಜ್ಞಾನೇಂದ್ರಕುಮಾರ ಗಂಗವರ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿ, ಮಕ್ಕಳು ಸತತ ಕಠಿಣ ಪರಿಶ್ರಮ ಮಾಡಬೇಕು. ಹಾಗೂ ಮಹಾನ್ ವ್ಯಕ್ತಿಗಳ ಚರಿತ್ರೆಗಳನ್ನು ಓದಬೇಕು ಎಂದು ಸಲಹೆ ನೀಡಿದರು.
ಶಾಹೀನ್ ಶಿಕ್ಷಣ ಸಂಸ್ಥೆಯ ಅಬ್ದುಲ್ ಮನ್ನಾನ ಸೇಠ ಹಾಗೂ ನಗರಸಭೆ ಸದಸ್ಯ ಅನೀಲಕುಮಾರ ಕುಲಕರ್ಣಿ ಮಾತನಾಡಿದರು. ಮುಖ್ಯಗುರು ಪ್ರತಾಪ ಸೂರ್ಯವಂಶಿ ಪ್ರಸ್ತಾವಿಕವಾಗಿ ಮಾತನಾಡಿದರು. ಅರ್ಜುನ ಕನಕ, ಮನೋಹರ ಮೈಸೆ, ನರಸಿಂಗರೆಡ್ಡಿ ಗದಲೇಗಾಂವ, ಭಾಸ್ಕರರಾವ್ ಕಾಂಬಳೆ, ಸಂಜುಕುಮಾರ ಕಾಂಗೆ, ಪ್ರಭುಲಿಂಗಯ್ನಾ ಟಂಕಸಾಲಿಮಠ, ದೇವೇಂದ್ರ ಮಂಠಾಳಕರ, ವಿಜಯ ಜಗತಾಪ, ವಿಶ್ವನಾಥ ಸಿಂಧೆ, ಹಣಮಂತರಾವ್ ಪಾಟೀಲ, ಜ್ಞಾನೇಶ್ವರ ಮೂಳೆ, ಅಭಿಮನ್ಯು ಪಾಟೀಲ, ಮುಖ್ಯ ಗುರು ಚಂದ್ರಕಾಂತ ಜಾಧವ, ಪ್ರಾಚಾರ್ಯರು ದಯಾನಂದ ಸೂರ್ಯವಂಶಿ, ಬಾಲಾಜಿ ಬಿರಾದಾರ ಮತ್ತಿತರರು ಇದ್ದರು. ಸತೀಶಕುಮಾರ ಮೂಳೆ ಸ್ವಾಗತಿಸಿದರು. ದ್ವಾರಕಾಬಾಯಿ ಪಾಟೀಲ ನಿರೂಪಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Usire Usire: ಕೈ ಕೊಟ್ಟ ನಿರ್ದೇಶಕ; ನಿರ್ಮಾಪಕ ಕಂಗಾಲು
New Jersey: ಸ್ಥಳೀಯ ಶಾಪ್ ನಲ್ಲಿ ಕಳ್ಳತನ- ಇಬ್ಬರು ಭಾರತೀಯ ವಿದ್ಯಾರ್ಥಿನಿಯರ ಬಂಧನ
College Student ನೇಹಾ ಹತ್ಯೆ ಪ್ರಕರಣ: ಆರೋಪಿಗೆ ಗಲ್ಲು ಶಿಕ್ಷೆ ವಿಧಿಸಲು ಬಜರಂಗದಳ ಆಗ್ರಹ
Mangaluru; ಕಾರಿಗೆ ಪೆಟ್ರೋಲ್ ಬದಲು ಡೀಸೆಲ್ ; ಕಾರು ಮಾಲಕರಿಗೆ ಲಕ್ಷಾಂತರ ರೂ.ನಷ್ಟ
RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್