ನಿರುದ್ಯೋಗಿಗಳಿಗೆ ಮೇಳ ಆಸರೆ
Team Udayavani, Jan 18, 2019, 9:40 AM IST
ಬಸವಕಲ್ಯಾಣ: ದೊಡ್ಡ-ದೊಡ್ಡ ಕಂಪನಿಗಳ ಪ್ರಭಾವದಿಂದ ಗ್ರಾಮೀಣ ಪ್ರದೇಶದ ಮೂಲ ಕಸುಬುಗಳು ನಿಂತು ಹೋಗಿವೆ. ಇದರಿಂದ ದಿನೇ ದಿನೇ ದೇಶದಲ್ಲಿ ನಿರುದ್ಯೋಗ ಸಮಸ್ಯೆ ಹೆಚ್ಚುತ್ತಿದೆ. ಇಂತಹ ಸಂದರ್ಭದಲ್ಲಿ ಯುವಕರ ಬದುಕಿಗೆ ಆಸರೆಯಾಗಲು ಉದ್ಯೋಗ ಮೇಳ ಹಮ್ಮಿಕೊಂಡಿರುವುದು ಸಂತೋಷದ ವಿಷಯವಾಗಿದೆ ಎಂದು ಬಸವ ಮಹಾಮನೆ ಅಧ್ಯಕ್ಷ ಶ್ರೀ ಸಿದ್ಧರಾಮ ಬೆಲ್ದಾಳ ಶರಣರು ಹೇಳಿದರು.
ನಗರದ ಮಾತೆ ಮಹಾದೇವಿ ಸಭಾಂಗಣದಲ್ಲಿ ಗುರುವಾರ ಡಾ| ಬಿ.ಆರ್.ಅಂಬೇಡ್ಕರ್ ಸೋಸಿಯಲ್ ವೆಲ್ಫೇರ್ ಟ್ರಸ್ಟ್ ಬೆಂಗಳೂರು, ದಿ.ನಡ್ಜ್ ಫೌಂಡೇಶನ್ (ಗುರುಕುಲ) ಸಂಯುಕ್ತಾಶ್ರಯದಲ್ಲಿ ನಡೆದ ಬೃಹತ್ ಉದ್ಯೋಗ ಮೇಳ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.
ಹಿಂದಿನ ಕಾಲದಲ್ಲಿ ಗ್ರಾಮೀಣ ಪ್ರದೇಶದಲ್ಲಿ ಕಂಬಾರಿಕೆ, ಕುಂಬಾರಿಕೆ, ನೇಕಾರ, ಬಡಿಗತನ ಸೇರಿದಂತೆ ಸಾಕಷ್ಟು ಕಸುಬುದಾರರು ಕೆಲಸ ಮಾಡುತ್ತಿದ್ದರು. ಆದರೆ ನೂತನ ತಂತ್ರಜ್ಞಾನ ಆವಿಷ್ಕಾರದಿಂದ ಎಲ್ಲ ಕೆಲಸಗಳು ಮುಳಗುವ ಹಂತಕ್ಕೆ ಬಂದು ತಲುಪುವಂತಾಗಿ, ದೇಶದ ತುಂಬಾ ನಿರುದ್ಯೋಗ ಶಾಪವಾಗಿ ಪರಿಣಮಿಸಿದೆ. ಆದ್ದರಿಂದ ವಿದ್ಯಾರ್ಥಿಗಳು ಹಾಗೂ ನಿರುದ್ಯೋಗಿಗಳು ಈ ಮೇಳದ ಸದುಪಯೋಗ ಪಡೆದು ಉಜ್ವಲ ಭವಿಷ್ಯ ರೂಪಿಸಿಕೊಳ್ಳಬೇಕು ಎಂದು ಸಲಹೆ ನೀಡಿದರು. ದಿ.ನಡ್ಜ್ ಫೌಂಡೇಶನ್ ಮುಖ್ಯಸ್ಥ ವಿನಾಯಕ, ಉದ್ಯೋಗ ಮೇಳದ ಉದ್ದೇಶ ಮತ್ತು ಮಹತ್ವ ಕುರಿತು ತಿಳಿಸಿದರು.
ತಾಪಂ ಇಒ ಮಡೋಳಪ್ಪಾ ಪಿ.ಎಸ್. ಮಾತನಾಡಿ, ಸ್ಪರ್ಧಾತ್ಮಕ ಯುಗದಲ್ಲಿ ನಿರಂತರ ಪರಿಶ್ರಮ ಪಟ್ಟಾಗ ಮಾತ್ರ ನಾವು ಏನಾದರೂ ಸಾಧಿಸಲು ಸಾಧ್ಯ. ಇಂತಹ ಸಂದರ್ಭದಲ್ಲಿ ನಿಮ್ಮ ಮನೆ ಬಾಗಿಲಿಗೆ ತರಬೇತಿ ಜೊತೆ ಉದ್ಯೋಗ ಒದಗಿಸುವ ಸೌಭಾಗ್ಯ ಕೂಡಿ ಬಂದಿದೆ. ವಿದ್ಯಾರ್ಥಿಗಳು ಹಾಗೂ ಯುವಕರು ಇದರ ಸದುಪಯೋಗ ಪಡೆಯಬೇಕು ಎಂದು ಸಲಹೆ ನೀಡಿದರು.
ಬಸವ ಮಹಾಮನೆ, ಅಲ್ಲಮಪ್ರಭು ಶೂನ್ಯಪೀಠದ ಶ್ರೀ ಜಗದ್ಗುರು ಸಿದ್ಧರಾಮೇಶ್ವರ ಸ್ವಾಮೀಜಿ ಆಶೀರ್ವಚನ ನೀಡಿದರು. ವೆಲ್ಫೇರ್ ಟ್ರಸ್ಟ್ ಅಧ್ಯಕ್ಷ ಸಂಜು ಗಾಯಕವಾಡ ಪ್ರಾಸ್ತಾವಿಕವಾಗಿ ಮಾತನಾಡಿದರು. ತಾಪಂ ಅಧ್ಯಕ್ಷೆ ಯಶೋಧಾ ನೀಲಕಂಠ ರಾಠೊಡ, ತಹಶೀಲ್ದಾರ್ ಜಗನ್ನಾಥರೆಡ್ಡಿ, ಚಲನಚಿತ್ರ ನಿರ್ಮಾಕ ಬಸವರಾಜ ಹಿರೇಮಠ, ಸಂಚಾರಿ ಪೊಲೀಸ್ ಠಾಣೆ ಪಿಎಸ್ಐ ಜೈಶ್ರೀ ವಿ.ಹೂಡಲ್, ನಾಡ ತಹಶೀಲ್ದಾರ್ ಶಿವಾನಂದ ಮೇತ್ರೆ, ದಿಲೀಪ ಸಿಂಧೆ ಮತ್ತಿತರರು ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Lokayukta; ಬೆಳ್ಳಂಬೆಳಗ್ಗೆ ರಾಜ್ಯದ ವಿವಿಧೆಡೆ ಭ್ರಷ್ಟರ ಬೇಟೆಗಿಳಿದ ಲೋಕಾಯುಕ್ತ
Bidar: 9 ಲಕ್ಷ ರೂ. ಮೌಲ್ಯದ ಕಚ್ಚಾ ಪಾನ್ ಮಸಾಲಾ, 3 ಲಕ್ಷ ರೂ. ಮೌಲ್ಯ ಸೀರೆ ಜಪ್ತಿ
ಹಾಲ್ ಟಿಕೆಟನ್ನೇ ತಿಂದು ಹಾಕಿದ ಕುರಿ… ನೊಂದು ಆತ್ಮಹತ್ಯೆಗೆ ಯತ್ನಿಸಿದ ವಿದ್ಯಾರ್ಥಿನಿ
Bidar; ಖೂಬಾ ಪರ ಆರ್.ಅಶೋಕ್ ನೇತೃತ್ವದಲ್ಲಿ ಬಿಜೆಪಿ ಒಗ್ಗಟ್ಟು ಪ್ರದರ್ಶನ
Loksabha: ಬೀದರ್ ಕ್ಷೇತ್ರಕ್ಕೆ ಸಾಗರ ಖಂಡ್ರೆ ಹೆಸರು ಅಂತಿಮ; ಸಿಎಂ ಭೇಟಿಯಾದ ಈಶ್ವರ್
MUST WATCH
ಹೊಸ ಸೇರ್ಪಡೆ
ಸಂಸದ ಡಿ.ಕೆ.ಸುರೇಶ್ ಆಸ್ತಿ ಮೌಲ್ಯ 593 ಕೋಟಿ ರೂ.!
IPL; ಇಂದು ಚಿನ್ನಸ್ವಾಮಿಯಲ್ಲಿ ಆರ್ಸಿಬಿ ಬಲೆಗೆ ಬೀಳುತ್ತಾ ಕೋಲ್ಕತಾ?
Raichur Lok Sabha Constituency: ಎಸ್ಟಿ ಮೀಸಲು ಕ್ಷೇತ್ರದಲ್ಲಿ 14 ಸಲ ಗೆದ್ದ ಕಾಂಗ್ರೆಸ್
Subramanya: ಮಗು ಮಲಗಿದೆ ಜೋರಾಗಿ ಮಾತನಾಡಬೇಡಿ ಎಂದಿದಕ್ಕೆ ಕತ್ತಿಯಿಂದ ಹಲ್ಲೆ
Politics: ಸುಮಲತಾ – ನಾವು ಶಾಶ್ವತ ಶತ್ರುಗಳಲ್ಲ: ಕುಮಾರಸ್ವಾಮಿ