ಸ್ವಾವಲಂಬನೆಯಿಂದ ಬದುಕಲು ಮುಂದಾಗಿ


Team Udayavani, Jan 21, 2019, 10:01 AM IST

bid-1.jpg

ಬಸವಕಲ್ಯಾಣ: ಕೇವಲ ಸರಕಾರಿ ನೌಕರಿ ಮೇಲೆ ನಂಬಿಕೆ ಇಟ್ಟಕೊಳ್ಳಬಾರದು. ಬದಲಾಗಿ ಸ್ವಾವಲಂಬಿ ಅಥವಾ ಸ್ವಾಭಿಮಾನದ ಜೀವನ ಮಾಡುವುದಕ್ಕೆ ಮುಂದಾಗಬೇಕು. ಇಲ್ಲದಿದ್ದರೆ ನಾವು ಸಮಸ್ಯೆಯಿಂದ ಮುಕ್ತಿ ಪಡೆಯಲು ಸಾಧ್ಯವಾಗುವುದಿಲ್ಲ ಎಂದು ಬೀದರ ಸಂಸದ ಭಗವಂತ ಖೂಬಾ ಹೇಳಿದರು.

ಶ್ರೀ ಮಾದರ ಚನ್ನಯ್ಯ ಅರಿವು ಪೀಠದ ವತಿಯಿಂದ ನಗರದ ಹಳೆ ತಹಶೀಲ್ದಾರ್‌ ಕಚೇರಿ ಆವರಣದಲ್ಲಿ ರವಿವಾರ ನಡೆದ 20ನೇ ಮಾದಾರ ಚನ್ನಯ್ಯ ಉತ್ಸವ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು. ಕೇಂದ್ರ ಸರ್ಕಾರ ಅಥವಾ ರಾಜ್ಯ ಸರ್ಕಾರವಾಗಲಿ ಶೇ.7ರಷ್ಟು ಮಾತ್ರ ಸರಕಾರಿ ನೌಕರಿಯಲ್ಲಿ ಕೊಡಲು ಸಾಧ್ಯ ಎಂದು ಹೇಳಿದರು.

12ನೇ ಶತಮಾನದಲ್ಲಿ ಅಸ್ಪೃಶ್ಯತೆ ಮತ್ತು ಮೂಢನಂಬಿಕೆ ಎನ್ನುವುದು ಮುಗಿಲು ಮುಟ್ಟಿತ್ತು. ಅಂತಹ ಸಂದರ್ಭದಲ್ಲಿ ವಿಶ್ವಗುರು ಬಸವಣ್ಣನವರು ಕಾಯಕವೇ ಕೈಲಾಸ ಎಂಬ ವಚನದೊಂದಿಗೆ ಎಲ್ಲ ಶಿವ-ಶರಣರನ್ನು ಒಂದುಗೂಡಿಸಿ ಸಮಾಜದಲ್ಲಿ ಅನಿಷ್ಠ ಪದ್ಧತಿ ದೂರ ಮಾಡಿದ್ದಾರೆ ಎಂದು ಹೇಳಿದರು.

ಕಲಬುರಗಿ ಸರಕಾರಿ ಪದವಿ ಪೂರ್ವ ಕಾಲೇಜಿನ ಉಪನ್ಯಾಸಕ ಡಾ| ವಿಶ್ವನಾಥ ಹೊಸಮನಿ ಮಾತನಾಡಿ, ಶಿಕ್ಷಣ, ಸಂಘಟನೆ ಮತ್ತು ಹೋರಾಟ ಮೈಗೂಡಿಸಿಕೊಳ್ಳಬೇಕು. ನ್ಯಾ| ಸದಾಶಿವ ಆಯೋಗದ ವರದಿ ಜಾರಿಗಾಗಿ ಬೆಂಬಲ ನೀಡುತ್ತಾರೊ ಅಂತಹ ಪಕ್ಷಕ್ಕೆ ನಮ್ಮ ಸಮಾಜ ಬೆಂಬಲ ನೀಡಬೇಕು ಎಂದು ಮನವಿ ಮಾಡಿದರು.

ಮೇಲ್ಜಾತಿ ವರ್ಗಕ್ಕೆ ಶೇ.10ರಷ್ಟು ಮೀಸಲಾತಿ ನೀಡಿರುವುದು ನಮಗೆ ಸಂತೋಷ ವಿಷಯವಾಗಿದೆ. ಆದರೆ ಕಳೆದ 20 ವರ್ಷಗಳಿಂದ ಸದಾಶಿವ ಆಯೋಗದ ವರದಿ ಜಾರಿಗೆ ಮಾಡಬೇಕು ಎಂದು ಸಾಕಷ್ಟು ಹೋರಾಟ ಮಾಡುತ್ತ ಬರಲಾಗುತ್ತಿದೆ. ಇಂದಿನ ನಮ್ಮ ಬೇಡಿಕೆಗೆ ಸ್ಪಂದಿಸದೇ ಇರುವುದು ದುರಾದೃಷ್ಟಕರ ಸಂಗತಿಯಾಗಿದೆ ಎಂದು ಹೇಳಿದರು.

ಪ್ರಾಸ್ತಾವಿಕಗಾಗಿ ಮಾತನಾಡಿದ ಪ್ರಹ್ಲಾದ ಚಂಗಟಿ, ಮಾದಿಗ ಸಮಾಜಕ್ಕೆ ತನ್ನದೆ ಆದ ಪರಂಪರೆ ಮತ್ತು ಇತಿಹಾಸ ಇದೆ. ಎಸ್‌ಸಿ ಜನಾಂಗದಲ್ಲಿ ಹೆಚ್ಚು ಜನಸಂಖ್ಯೆ ಉಳ್ಳ ಸಮಾಜ ನಮ್ಮದ್ದಾಗಿದೆ. ಆದರೆ ನಾವು ಎಲ್ಲಿ ಇದ್ದೇವೆ ಎಂಬುದನ್ನು ಆತ್ಮಾವಲೋಕನ ಮಾಡಿಕೊಳ್ಳಬೇಕಾಗಿದೆ ಎಂದು ಹೇಳಿದರು. ಅನುಭವ ಮಂಟಪದ ಸಂಚಾಲಕ ಶ್ರೀ ಶಿವಾನಂದ ಸ್ವಾಮಿಗಳು ಕಾರ್ಯಕ್ರಮ ಉದ್ಘಾಟಿಸಿದರು.

ನೂಲಿಯ ಚಂದಯ್ಯ ಗವಿ ಅಧ್ಯಕ್ಷೆ ಚಿತ್ರಮ್ಮ ತಾಯಿ, ಬಸವ ಮಹಾಮನೆಯ ಶ್ರೀ ಬಸವಪ್ರಭು ಸ್ವಾಮಿಗಳು ಸಾನ್ನಿಧ್ಯ ಮತ್ತು ಬಸವಕಲ್ಯಾಣ ಮಾದರ ಚನ್ನಯ್ಯ ಅರಿವು ಪೀಠದ ಕಾಂತ ಸ್ವಾಮಿಗಳು ನೇತೃತ್ವ ವಹಿಸಿದ್ದರು.

ರಾಜು ಕೌಡಿಯಾಳ, ಆರ್‌.ಜೆ. ಬೆಳ್ಳಿಚುಕ್ಕಿ, ರಮೇಶ ಕಟ್ಟಿತೂಗಾಂವ, ರೋಹಿದಾಸ ಘೋಡೆ, ಬಿಜೆಪಿ ತಾಲೂಕು ಘಟಕದ ಅಧ್ಯಕ್ಷ ವೀರಣ್ಣ ಹಲಗೆ, ಕಾವೇರಿ ಯುವರಾಜ ಬೆಂಡೆ, ಯುವರಾಜ ಬೆಂಡೆ, ಕರುಣಾಬಾಯಿ, ಮಾರುತಿ ಲಾಡೆ, ಸುಧಾಕರ ಸೂರ್ಯವಂಶಿ, ಸಂತೋಷ ಘೋಡೆ, ಮಲ್ಲಿಕಾರ್ಜುನ ಮೇತ್ರೆ, ಪ್ರದೀಪ ಡಗಳೆ, ಸಂತೋಷ ಮುಜನಾಯಕ, ದತ್ತಾತ್ರೆ ಡಾಂಗೆ ಇದ್ದರು.

ಟಾಪ್ ನ್ಯೂಸ್

ಹಳದಿ ಶಾಸ್ತ್ರದ ವೇಳೆ ವರನಿಗೆ ವಿದ್ಯುತ್ ಸ್ಪರ್ಶ… ಆಸ್ಪತ್ರೆ ದಾರಿಯಲ್ಲಿ ಕೊನೆಯುಸಿರು

ಹಳದಿ ಶಾಸ್ತ್ರದ ವೇಳೆ ವಿದ್ಯುತ್ ಸ್ಪರ್ಶ… ಆಸ್ಪತ್ರೆ ದಾರಿ ಮಧ್ಯೆ ಕೊನೆಯುಸಿರೆಳೆದ ವರ

Inheritance Tax:  ಸ್ಯಾಮ್‌ ಪಿತ್ರೋಡಾ ಹೇಳಿದ್ದೇನು-ಏನಿದು ಪಿತ್ರಾರ್ಜಿತ ತೆರಿಗೆ ಜಟಾಪಟಿ!

Inheritance Tax:  ಸ್ಯಾಮ್‌ ಪಿತ್ರೋಡಾ ಹೇಳಿದ್ದೇನು-ಏನಿದು ಪಿತ್ರಾರ್ಜಿತ ತೆರಿಗೆ ಜಟಾಪಟಿ!

Rahul Gandhi 3

U-turn ಹೊಡೆದ ರಾಹುಲ್: ಸಂಪತ್ತು ಹಂಚಿಕೆ ಬಗ್ಗೆ ಹೇಳಿಲ್ಲ,ಅನ್ಯಾಯ…

ತಂಗಿ ಮದುವೆಗೆ ಟಿವಿ ಗಿಫ್ಟ್‌ ಕೊಟ್ಟದ್ದಕ್ಕೆ ಅಸಮಾಧಾನ: ಪತಿಯನ್ನು ಥಳಿಸಿ ಕೊಲ್ಲಿಸಿದ ಪತ್ನಿ

ತಂಗಿ ಮದುವೆಗೆ ಟಿವಿ ಗಿಫ್ಟ್‌ ಕೊಟ್ಟದ್ದಕ್ಕೆ ಅಸಮಾಧಾನ: ಪತಿಯನ್ನು ಥಳಿಸಿ ಕೊಲ್ಲಿಸಿದ ಪತ್ನಿ

15

ರಾಹುಲ್ ಗಾಂಧಿ ಹೋದಲ್ಲೆಲ್ಲಾ ನಾವು ಗೆದ್ದಿದೀವಿ: ಬಳ್ಳಾರಿಯಲ್ಲಿ ನಮ್ಮ ಗೆಲುವು ನಿಶ್ಚಿತ

Bommai BJP

Congress ತುಷ್ಟೀಕರಣ ರಾಜಕೀಯಕ್ಕೆ ಮುಸ್ಲಿಂ ಮೀಸಲಾತಿಗೆ ಬೆಂಬಲಿಸುತ್ತದೆ: ಬೊಮ್ಮಾಯಿ

ಭಾರತದಲ್ಲಿ ರಿಲೀಸ್‌ಗೂ ಮುನ್ನ ʼಮಂಕಿ ಮ್ಯಾನ್‌ʼ ಹೆಚ್‌ ಡಿ ಕಾಪಿ ಲೀಕ್: ವಿಳಂಬ ಯಾಕೆ?

ಭಾರತದಲ್ಲಿ ರಿಲೀಸ್‌ಗೂ ಮುನ್ನ ʼಮಂಕಿ ಮ್ಯಾನ್‌ʼ ಹೆಚ್‌ ಡಿ ಕಾಪಿ ಲೀಕ್: ವಿಳಂಬ ಯಾಕೆ?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

16

ನೀತಿ ಸಂಹಿತೆ ನಡುವೆಯೂ ರಾಜ್ಯಕ್ಕೆ ನೆರವು ಎನ್ನುವ ಬಿಜೆಪಿಗೆ ನಾಚಿಕೆ ಇಲ್ಲವೇ? – ಖಂಡ್ರೆ

Minchu

Rain; ಬೀದರ್,ಕೊಪ್ಪಳದಲ್ಲಿ ಸಿಡಿಲಿನ ಆರ್ಭಟಕ್ಕೆ ಇಬ್ಬರು ಮೃತ್ಯು

Bidar; ಪ್ರೇಯಸಿ ಮದುವೆ ದಿನವೇ ಪ್ರಿಯಕರನ ಶವ ಪತ್ತೆ

Bidar; ಪ್ರೇಯಸಿ ಮದುವೆ ದಿನವೇ ಪ್ರಿಯಕರನ ಶವ ಪತ್ತೆ

rape

Bidar; ಯುವಕನಿಂದ ಅಪ್ರಾಪ್ತ ವಯಸ್ಕಳ ರೇಪ್

Bidar; Will file Defamation case against Khooba: Eshwar Khandre

Bidar; ಖೂಬಾ ವಿರುದ್ಧ ಮಾನನಷ್ಟ ಮೊಕದ್ದಮೆ ಹೂಡುವೆ: ಈಶ್ವರ್ ಖಂಡ್ರೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

7-uv-fsuion

Yugadi: ಯುಗ ಯುಗಾದಿ ಕಳೆದರೂ ಯುಗಾದಿ ಮರಳಿ ಬರುತಿದೆ

6-uv-fusion

UV Fusion: ಯುಗಾದಿ ಸಂಭ್ರಮೋತ್ಸವ

ಹಳದಿ ಶಾಸ್ತ್ರದ ವೇಳೆ ವರನಿಗೆ ವಿದ್ಯುತ್ ಸ್ಪರ್ಶ… ಆಸ್ಪತ್ರೆ ದಾರಿಯಲ್ಲಿ ಕೊನೆಯುಸಿರು

ಹಳದಿ ಶಾಸ್ತ್ರದ ವೇಳೆ ವಿದ್ಯುತ್ ಸ್ಪರ್ಶ… ಆಸ್ಪತ್ರೆ ದಾರಿ ಮಧ್ಯೆ ಕೊನೆಯುಸಿರೆಳೆದ ವರ

Inheritance Tax:  ಸ್ಯಾಮ್‌ ಪಿತ್ರೋಡಾ ಹೇಳಿದ್ದೇನು-ಏನಿದು ಪಿತ್ರಾರ್ಜಿತ ತೆರಿಗೆ ಜಟಾಪಟಿ!

Inheritance Tax:  ಸ್ಯಾಮ್‌ ಪಿತ್ರೋಡಾ ಹೇಳಿದ್ದೇನು-ಏನಿದು ಪಿತ್ರಾರ್ಜಿತ ತೆರಿಗೆ ಜಟಾಪಟಿ!

5-uv-fusion

Yugadi: ವರುಷದ ಆದಿ ಯುಗಾದಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.