ಸಕಲರ ಒಳಿತಿಗೆ ವಿವಿ ಸ್ಥಾಪನೆ


Team Udayavani, Jan 21, 2019, 11:48 AM IST

yad-2.jpg

ಬೀದರ: ವಿಶ್ವವಿದ್ಯಾಲಯ ಯಾವುದೇ ಒಂದು ಸಮುದಾಯಕ್ಕೆ ಸೀಮಿತವಾಗಿಲ್ಲ. ಸರ್ವ ಸಮುದಾಯದ ಹಿತಕ್ಕಾಗಿ ಆರಂಭಿಸಲಾಗಿದೆ. ಯಾರೂ ಬೇಕಾದರೂ ವಿಶ್ವವಿದ್ಯಾಲಯದಲ್ಲಿ ಪ್ರವೇಶ ಪಡೆಯಬಹುದು ಎಂದು ವಿಶ್ವವಿದ್ಯಾಲಯದ ಕುಲಪತಿ ಖಾಜಾಬಂದೆ ನವಾಜ್‌ ದರ್ಗಾದ ಸಜ್ಜಾದೆ ಡಾ| ಸೈಯ್ಯದ್‌ ಶಾ ಖುಸ್ರೊ ಹುಸೇನಿ ಹೇಳಿದರು.

ಹೈದ್ರಾಬಾದ ಕರ್ನಾಟಕ ಪಾಲಿಟಿಕಲ್‌ ಫೋರ್‌ಂ ವತಿಯಿಂದ ನಗರದ ಹಳೆ ಸರ್ಕಾರಿ ಆಸ್ಪತ್ರೆ ಸಮೀಪದ ನಗರಸಭೆ ಮೈದಾನದಲ್ಲಿ ಆಯೋಜಿಸಲಾಗಿದ್ದ ಸಮಾರಂಭದಲ್ಲಿ ಸನ್ಮಾನ ಸ್ವೀಕರಿಸಿ ಅವರು ಮಾತನಾಡಿದರು.

ವಿಶ್ವವಿದ್ಯಾಲಯದಲ್ಲಿ ಅತ್ಯಾಧುನಿಕ ತಂತ್ರಜ್ಞಾನ ಬಳಸಿ ವಿದ್ಯಾರ್ಥಿಗಳಿಗೆ ಅಂತಾರಾಷ್ಟ್ರೀಯ ಗುಣಮಟ್ಟದ ಶಿಕ್ಷಣ ನೀಡಲಾಗುವುದು. ಸ್ಪರ್ಧಾತ್ಮಕ ಯುಗದ ಸವಾಲುಗಳನ್ನು ಸಮರ್ಥವಾಗಿ ನಿಭಾಯಿಸಲು ಅಣಿಗೊಳಿಸಲಾಗುವುದು. ಕಲಬುರ್ಗಿ ಖಾಜಾಬಂದೆ ನವಾಜ್‌ ನೂತನ ವಿಶ್ವವಿದ್ಯಾಲಯದಲ್ಲಿ ವೈದ್ಯಕೀಯ ಸೇರಿದಂತೆ ವಿವಿಧ ಕ್ಷೇತ್ರಗಳಲ್ಲಿ ಸಂಶೋಧನೆಗೆ ಆದ್ಯತೆ ನೀಡಲಾಗುವುದು ಎಂದು ಹೇಳಿದರು.

ಕೆಲವೇ ವಿದ್ಯಾರ್ಥಿಗಳಿಂದ ಆರಂಭವಾದ ಖಾಜಾಬಂದೆ ನವಾಜ್‌ ಶಿಕ್ಷಣ ಸಂಸ್ಥೆ ಈಗ ಹೆಮ್ಮರವಾಗಿ ಬೆಳೆದಿದೆ. ದಶಕಗಳ ಅವಯಲ್ಲಿ ನರ್ಸರಿಯಿಂದ ವಿಶ್ವವಿದ್ಯಾಲಯ ವರೆಗೂ ತನ್ನ ವ್ಯಾಪ್ತಿ ವಿಸ್ತರಿಸಿಕೊಂಡಿದೆ. ಸಂಸ್ಥೆಯ ಶಾಲೆ-ಕಾಲೇಜುಗಳಲ್ಲಿ ಓದಿದ ಸಾವಿರಾರು ವಿದ್ಯಾರ್ಥಿಗಳು ಉನ್ನತ ಹುದ್ದೆಗಳಲ್ಲಿ ಇದ್ದಾರೆ. ಮಹಮೂದ್‌ ಗವಾನ್‌ ಅವರು ಬೀದರನಲ್ಲಿ ಶತಮಾನಗಳ ಹಿಂದೆಯೇ ವಿಶ್ವವಿದ್ಯಾಲಯ ಆರಂಭಿಸಿ ವಿದ್ಯಾರ್ಥಿಗಳಿಗೆ ಅನುಕೂಲ ಮಾಡಿಕೊಟ್ಟಿದ್ದರು. ದೇಶ ವಿದೇಶದ ವಿದ್ಯಾರ್ಥಿಗಳು ಆಗಲೇ ವ್ಯಾಸಂಗಕ್ಕಾಗಿ ಇಲ್ಲಿಗೆ ಬರುತ್ತಿದ್ದರು. ಅದಾದ 700 ವರ್ಷಗಳ ನಂತರ ಹಲವರ ಸಹಕಾರದಿಂದ ಈ ಭಾಗದ ಖಾಜಾಬಂದೆ ನವಾಜ್‌ ಸಂಸ್ಥೆಗೆ ವಿಶ್ವವಿದ್ಯಾಲಯ ಮಂಜೂರಾಗಿದೆ ಎಂದು ಹೇಳಿದರು.

ವಿಶ್ವವಿದ್ಯಾಲಯ ಮಂಜೂರು ಆಗಿರುವುದರ ಹಿಂದೆ ಬಹಳಷ್ಟು ಜನರ ಶ್ರಮವಿದೆ. ಖಾಜಾಬಂದೆ ನವಾಜ್‌ ಅವರ ಕೃಪಾಶೀರ್ವಾದ, ಹಿಂದಿನ ಮುಖ್ಯಮಂತ್ರಿ ಸಿದ್ದರಾಮಯ್ಯ, ಸದನದಲ್ಲಿ ಒಕ್ಕೊರಲಿಂದ ಬೆಂಬಲಿಸಿದ ಎಲ್ಲ ಶಾಸಕರು, ಲೋಕಸಭೆ ಕಾಂಗ್ರೆಸ್‌ ಪಕ್ಷದ ನಾಯಕ ಡಾ| ಮಲ್ಲಿಕಾರ್ಜುನ ಖರ್ಗೆ, ಪ್ರತ್ಯಕ್ಷ ಹಾಗೂ ಪರೋಕ್ಷವಾಗಿ ಸಹಕರಿಸಿದ ಎಲ್ಲರಿಗೂ ಇದರ ಶ್ರೇಯ ಸಲ್ಲುತ್ತದೆ ಎಂದು ಹೇಳಿದರು.

ನೀಲಂಗಾದ ದರ್ಗಾ ಹೈದರ್‌ ವಲಿ ಸಜ್ಜಾದೆ ಸೈಯ್ಯದ್‌ ಹೈದರ್‌ ಪಾಶಾ ಖಾದ್ರಿ, ಹೈದ್ರಾಬಾದ ಕರ್ನಾಟಕ ಪಾಲಿಟಿಕಲ್‌ ಫೋರ್‌ಂ ಸಂಚಾಲಕ ಡಾ| ಮಕ್ಸೂದ್‌ ಚಂದಾ ಮಾತನಾಡಿ, ಬೀದರ ಈಗ ಶೈಕ್ಷಣಿಕವಾಗಿ ಮುಂದುವರಿಯುತ್ತಿದೆ. ಹಿಂದೆ ಒಬ್ಬ ವಿದ್ಯಾರ್ಥಿ ಮೆಡಿಕಲ್‌ಗೆ ಹೋಗುವುದು ದೊಡ್ಡ ಸಾಧನೆಯಾಗುತ್ತಿತ್ತು. ಆದರೆ, ಇದೀಗ ಜಿಲ್ಲೆಯಲ್ಲಿ ಶೈಕ್ಷಣಿಕ ಕಾಂತ್ರಿ ನಡೆಯುತ್ತಿದೆ. ಉನ್ನತ ಸ್ಥಾನಗಳನ್ನು ನಮ್ಮ ಭಾಗದ ವಿದ್ಯಾರ್ಥಿಗಳು ಪಡೆದುಕೊಳ್ಳುತ್ತಿದ್ದಾರೆ ಎಂದು ಹೇಳಿದರು. ಶಾಹೀನ್‌ ಶಿಕ್ಷಣ ಸಂಸ್ಥೆ ಕಾರ್ಯದರ್ಶಿ ಅಬ್ದುಲ್‌ ಖದೀರ್‌, ಅಸ್ಲಂ ಫರಶೂರಿ, ಕೆಬಿಎನ್‌ ವಿವಿ ಸಿಬ್ಬಂದಿ ಹಾಗೂ ಮತ್ತಿತರರು ಇದ್ದರು.

ಹೈಕ ಭಾಗದ ಪ್ರತಿಷ್ಠಿತ ಸಂಸ್ಥೆಯಾಗಿರುವ ಖಾಜಾಬಂದೆ ನವಾಜ್‌ ಸಂಸ್ಥೆ ವಿಶ್ವವಿದ್ಯಾಲಯ ಸ್ಥಾಪಿಸುವ ಮೂಲಕ ವಿದ್ಯಾರ್ಥಿಗಳ ಸಾಧನೆಗೆ ವೇದಿಕೆ ಒದಗಿಸಿದೆ. ವಿಶ್ವವಿದ್ಯಾಲಯದ ಮಂಜೂರಾತಿ ಡಾ| ಸೈಯ್ಯದ್‌ ಶಾ ಖುಸ್ರೊ ಹುಸೇನಿ ಅವರ ಅವಿರತ ಶ್ರಮದ ಪ್ರತಿಫಲವಾಗಿದೆ. ವಿದ್ಯಾರ್ಥಿಗಳು ಕ್ರೀಡೆ ಸೇರಿದಂತೆ ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡಿ ತಮ್ಮ ಗುರು, ಪಾಲಕರು, ಜಿಲ್ಲೆ, ರಾಜ್ಯ ಹಾಗೂ ರಾಷ್ಟ್ರಕ್ಕೆ ಕೀರ್ತಿ ತರಬೇಕು.
•ಮಹಮ್ಮದ್‌ ಅಜರುದ್ದೀನ್‌ ಭಾರತ ಕ್ರಿಕೆಟ್ ತಂಡದ ಮಾಜಿ ನಾಯಕ

ಟಾಪ್ ನ್ಯೂಸ್

banMysuru: ಮೋದಿ ಕುರಿತು ಹಾಡು ಬರೆದ ಯೂಟ್ಯೂಬರ್‌ಗೆ ಹಲ್ಲೆ

Mysuru: ಮೋದಿ ಕುರಿತು ಹಾಡು ಬರೆದ ಯೂಟ್ಯೂಬರ್‌ಗೆ ಹಲ್ಲೆ

Thirthahalli; ಬಿಜೆಪಿಯಿಂದ ಶ್ರೀಮಂತರ ಓಲೈಕೆ ; ಕಿಮ್ಮ‌ನೆ ರತ್ನಾಕರ್

Thirthahalli; ಬಿಜೆಪಿಯಿಂದ ಶ್ರೀಮಂತರ ಓಲೈಕೆ ; ಕಿಮ್ಮ‌ನೆ ರತ್ನಾಕರ್

1-aaaaaa

BJP ಮೋದಿ ಮಾಡೆಲ್ ಹೆಸರಿನಲ್ಲಿ ಚೊಂಬಿನ ಮಾಡೆಲ್ ನೀಡಿದೆ: ಸುರ್ಜೇವಾಲ

1-weqwewqe

Davangere: 10 ರೂ.ಗಳ ನಾಣ್ಯ ರೂಪದಲ್ಲಿ 25 ಸಾವಿರ ರೂ. ಠೇವಣಿ ಕಟ್ಟಿದ ಅಭ್ಯರ್ಥಿ!

Exam

CET ಸುಗಮವಾಗಿ ನಡೆದಿದೆ: ಆಕ್ಷೇಪಣೆ ಸಲ್ಲಿಕೆಗೆ ಏ.27ರವರೆಗೆ ಅವಕಾಶ

1-wwqwqe

BJP ಶ್ರೀರಾಮುಲು, ಗಾಯತ್ರಿ ಸಿದ್ದೇಶ್ವರ್ ಈಗಾಗಲೇ ಗೆದ್ದಿದ್ದಾರೆ: ಜನಾರ್ದನ ರೆಡ್ಡಿ

Outrage over mistakes in CET exam question paper; Request for mercy marks

CET ಪರೀಕ್ಷೆ ಪ್ರಶ್ನೆಪತ್ರಿಕೆಯಲ್ಲಿ ಲೋಪಕ್ಕೆ ಆಕ್ರೋಶ; ಕೃಪಾಂಕಕ್ಕೆ ಆಗ್ರಹ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Minchu

Bidar; ಬಿರುಗಾಳಿ‌ ಸಹಿತ ಭಾರಿ ಮಳೆ :ಸಿಡಿಲು ಬಡಿದು‌ ರೈತ ಸಾವು

Bidar; ನಾಮಪತ್ರ ಸಲ್ಲಿಸಲು ಓಡೋಡಿ ಬಂದ ಖೂಬಾ

Bidar; ನಾಮಪತ್ರ ಸಲ್ಲಿಸಲು ಓಡೋಡಿ ಬಂದ ಖೂಬಾ

Bidar ಬಿಜೆಪಿಯ ಹಿರಿಯ ಮುಖಂಡ, ಮಾಜಿ ಶಾಸಕ ರಮೇಶ ಕುಮಾರ್ ಪಾಂಡೆ ನಿಧನ

Bidar ಬಿಜೆಪಿಯ ಹಿರಿಯ ಮುಖಂಡ, ಮಾಜಿ ಶಾಸಕ ರಮೇಶ ಕುಮಾರ್ ಪಾಂಡೆ ನಿಧನ

UPSC Result: ಬೀದರ್ ನ ಮೊಹಮ್ಮದ್ ಅಸೀಮ್‌ ಮುಜತೇಬಾಗೆ 481ನೇ ರ‍್ಯಾಂಕ್‌

UPSC Result: ಬೀದರ್ ನ ಮೊಹಮ್ಮದ್ ಅಸೀಮ್‌ ಮುಜತೇಬಾಗೆ 481ನೇ ರ‍್ಯಾಂಕ್‌

1-eqwewqeqwe

Bidar; ಬಿಜೆಪಿಗೆ ನಾಗಮಾರಪಳ್ಳಿ ಕುಟುಂಬದ ಬೆಂಬಲ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Kanakagiri ದೇಗುಲಕ್ಕೆ ಬಂದಿದ್ದ ಕರಡಿ ಸೆರೆ ಹಿಡಿಯುವಾಗ ದಾಳಿ: ವೃದ್ಧ ಸಾವು

Kanakagiri ದೇಗುಲಕ್ಕೆ ಬಂದಿದ್ದ ಕರಡಿ ಸೆರೆ ಹಿಡಿಯುವಾಗ ದಾಳಿ: ವೃದ್ಧ ಸಾವು

banMysuru: ಮೋದಿ ಕುರಿತು ಹಾಡು ಬರೆದ ಯೂಟ್ಯೂಬರ್‌ಗೆ ಹಲ್ಲೆ

Mysuru: ಮೋದಿ ಕುರಿತು ಹಾಡು ಬರೆದ ಯೂಟ್ಯೂಬರ್‌ಗೆ ಹಲ್ಲೆ

Thirthahalli; ಬಿಜೆಪಿಯಿಂದ ಶ್ರೀಮಂತರ ಓಲೈಕೆ ; ಕಿಮ್ಮ‌ನೆ ರತ್ನಾಕರ್

Thirthahalli; ಬಿಜೆಪಿಯಿಂದ ಶ್ರೀಮಂತರ ಓಲೈಕೆ ; ಕಿಮ್ಮ‌ನೆ ರತ್ನಾಕರ್

1-aaaaaa

BJP ಮೋದಿ ಮಾಡೆಲ್ ಹೆಸರಿನಲ್ಲಿ ಚೊಂಬಿನ ಮಾಡೆಲ್ ನೀಡಿದೆ: ಸುರ್ಜೇವಾಲ

1-weqwewqe

Davangere: 10 ರೂ.ಗಳ ನಾಣ್ಯ ರೂಪದಲ್ಲಿ 25 ಸಾವಿರ ರೂ. ಠೇವಣಿ ಕಟ್ಟಿದ ಅಭ್ಯರ್ಥಿ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.