ಸಕಲರ ಒಳಿತಿಗೆ ವಿವಿ ಸ್ಥಾಪನೆ
Team Udayavani, Jan 21, 2019, 11:48 AM IST
ಬೀದರ: ವಿಶ್ವವಿದ್ಯಾಲಯ ಯಾವುದೇ ಒಂದು ಸಮುದಾಯಕ್ಕೆ ಸೀಮಿತವಾಗಿಲ್ಲ. ಸರ್ವ ಸಮುದಾಯದ ಹಿತಕ್ಕಾಗಿ ಆರಂಭಿಸಲಾಗಿದೆ. ಯಾರೂ ಬೇಕಾದರೂ ವಿಶ್ವವಿದ್ಯಾಲಯದಲ್ಲಿ ಪ್ರವೇಶ ಪಡೆಯಬಹುದು ಎಂದು ವಿಶ್ವವಿದ್ಯಾಲಯದ ಕುಲಪತಿ ಖಾಜಾಬಂದೆ ನವಾಜ್ ದರ್ಗಾದ ಸಜ್ಜಾದೆ ಡಾ| ಸೈಯ್ಯದ್ ಶಾ ಖುಸ್ರೊ ಹುಸೇನಿ ಹೇಳಿದರು.
ಹೈದ್ರಾಬಾದ ಕರ್ನಾಟಕ ಪಾಲಿಟಿಕಲ್ ಫೋರ್ಂ ವತಿಯಿಂದ ನಗರದ ಹಳೆ ಸರ್ಕಾರಿ ಆಸ್ಪತ್ರೆ ಸಮೀಪದ ನಗರಸಭೆ ಮೈದಾನದಲ್ಲಿ ಆಯೋಜಿಸಲಾಗಿದ್ದ ಸಮಾರಂಭದಲ್ಲಿ ಸನ್ಮಾನ ಸ್ವೀಕರಿಸಿ ಅವರು ಮಾತನಾಡಿದರು.
ವಿಶ್ವವಿದ್ಯಾಲಯದಲ್ಲಿ ಅತ್ಯಾಧುನಿಕ ತಂತ್ರಜ್ಞಾನ ಬಳಸಿ ವಿದ್ಯಾರ್ಥಿಗಳಿಗೆ ಅಂತಾರಾಷ್ಟ್ರೀಯ ಗುಣಮಟ್ಟದ ಶಿಕ್ಷಣ ನೀಡಲಾಗುವುದು. ಸ್ಪರ್ಧಾತ್ಮಕ ಯುಗದ ಸವಾಲುಗಳನ್ನು ಸಮರ್ಥವಾಗಿ ನಿಭಾಯಿಸಲು ಅಣಿಗೊಳಿಸಲಾಗುವುದು. ಕಲಬುರ್ಗಿ ಖಾಜಾಬಂದೆ ನವಾಜ್ ನೂತನ ವಿಶ್ವವಿದ್ಯಾಲಯದಲ್ಲಿ ವೈದ್ಯಕೀಯ ಸೇರಿದಂತೆ ವಿವಿಧ ಕ್ಷೇತ್ರಗಳಲ್ಲಿ ಸಂಶೋಧನೆಗೆ ಆದ್ಯತೆ ನೀಡಲಾಗುವುದು ಎಂದು ಹೇಳಿದರು.
ಕೆಲವೇ ವಿದ್ಯಾರ್ಥಿಗಳಿಂದ ಆರಂಭವಾದ ಖಾಜಾಬಂದೆ ನವಾಜ್ ಶಿಕ್ಷಣ ಸಂಸ್ಥೆ ಈಗ ಹೆಮ್ಮರವಾಗಿ ಬೆಳೆದಿದೆ. ದಶಕಗಳ ಅವಯಲ್ಲಿ ನರ್ಸರಿಯಿಂದ ವಿಶ್ವವಿದ್ಯಾಲಯ ವರೆಗೂ ತನ್ನ ವ್ಯಾಪ್ತಿ ವಿಸ್ತರಿಸಿಕೊಂಡಿದೆ. ಸಂಸ್ಥೆಯ ಶಾಲೆ-ಕಾಲೇಜುಗಳಲ್ಲಿ ಓದಿದ ಸಾವಿರಾರು ವಿದ್ಯಾರ್ಥಿಗಳು ಉನ್ನತ ಹುದ್ದೆಗಳಲ್ಲಿ ಇದ್ದಾರೆ. ಮಹಮೂದ್ ಗವಾನ್ ಅವರು ಬೀದರನಲ್ಲಿ ಶತಮಾನಗಳ ಹಿಂದೆಯೇ ವಿಶ್ವವಿದ್ಯಾಲಯ ಆರಂಭಿಸಿ ವಿದ್ಯಾರ್ಥಿಗಳಿಗೆ ಅನುಕೂಲ ಮಾಡಿಕೊಟ್ಟಿದ್ದರು. ದೇಶ ವಿದೇಶದ ವಿದ್ಯಾರ್ಥಿಗಳು ಆಗಲೇ ವ್ಯಾಸಂಗಕ್ಕಾಗಿ ಇಲ್ಲಿಗೆ ಬರುತ್ತಿದ್ದರು. ಅದಾದ 700 ವರ್ಷಗಳ ನಂತರ ಹಲವರ ಸಹಕಾರದಿಂದ ಈ ಭಾಗದ ಖಾಜಾಬಂದೆ ನವಾಜ್ ಸಂಸ್ಥೆಗೆ ವಿಶ್ವವಿದ್ಯಾಲಯ ಮಂಜೂರಾಗಿದೆ ಎಂದು ಹೇಳಿದರು.
ವಿಶ್ವವಿದ್ಯಾಲಯ ಮಂಜೂರು ಆಗಿರುವುದರ ಹಿಂದೆ ಬಹಳಷ್ಟು ಜನರ ಶ್ರಮವಿದೆ. ಖಾಜಾಬಂದೆ ನವಾಜ್ ಅವರ ಕೃಪಾಶೀರ್ವಾದ, ಹಿಂದಿನ ಮುಖ್ಯಮಂತ್ರಿ ಸಿದ್ದರಾಮಯ್ಯ, ಸದನದಲ್ಲಿ ಒಕ್ಕೊರಲಿಂದ ಬೆಂಬಲಿಸಿದ ಎಲ್ಲ ಶಾಸಕರು, ಲೋಕಸಭೆ ಕಾಂಗ್ರೆಸ್ ಪಕ್ಷದ ನಾಯಕ ಡಾ| ಮಲ್ಲಿಕಾರ್ಜುನ ಖರ್ಗೆ, ಪ್ರತ್ಯಕ್ಷ ಹಾಗೂ ಪರೋಕ್ಷವಾಗಿ ಸಹಕರಿಸಿದ ಎಲ್ಲರಿಗೂ ಇದರ ಶ್ರೇಯ ಸಲ್ಲುತ್ತದೆ ಎಂದು ಹೇಳಿದರು.
ನೀಲಂಗಾದ ದರ್ಗಾ ಹೈದರ್ ವಲಿ ಸಜ್ಜಾದೆ ಸೈಯ್ಯದ್ ಹೈದರ್ ಪಾಶಾ ಖಾದ್ರಿ, ಹೈದ್ರಾಬಾದ ಕರ್ನಾಟಕ ಪಾಲಿಟಿಕಲ್ ಫೋರ್ಂ ಸಂಚಾಲಕ ಡಾ| ಮಕ್ಸೂದ್ ಚಂದಾ ಮಾತನಾಡಿ, ಬೀದರ ಈಗ ಶೈಕ್ಷಣಿಕವಾಗಿ ಮುಂದುವರಿಯುತ್ತಿದೆ. ಹಿಂದೆ ಒಬ್ಬ ವಿದ್ಯಾರ್ಥಿ ಮೆಡಿಕಲ್ಗೆ ಹೋಗುವುದು ದೊಡ್ಡ ಸಾಧನೆಯಾಗುತ್ತಿತ್ತು. ಆದರೆ, ಇದೀಗ ಜಿಲ್ಲೆಯಲ್ಲಿ ಶೈಕ್ಷಣಿಕ ಕಾಂತ್ರಿ ನಡೆಯುತ್ತಿದೆ. ಉನ್ನತ ಸ್ಥಾನಗಳನ್ನು ನಮ್ಮ ಭಾಗದ ವಿದ್ಯಾರ್ಥಿಗಳು ಪಡೆದುಕೊಳ್ಳುತ್ತಿದ್ದಾರೆ ಎಂದು ಹೇಳಿದರು. ಶಾಹೀನ್ ಶಿಕ್ಷಣ ಸಂಸ್ಥೆ ಕಾರ್ಯದರ್ಶಿ ಅಬ್ದುಲ್ ಖದೀರ್, ಅಸ್ಲಂ ಫರಶೂರಿ, ಕೆಬಿಎನ್ ವಿವಿ ಸಿಬ್ಬಂದಿ ಹಾಗೂ ಮತ್ತಿತರರು ಇದ್ದರು.
ಹೈಕ ಭಾಗದ ಪ್ರತಿಷ್ಠಿತ ಸಂಸ್ಥೆಯಾಗಿರುವ ಖಾಜಾಬಂದೆ ನವಾಜ್ ಸಂಸ್ಥೆ ವಿಶ್ವವಿದ್ಯಾಲಯ ಸ್ಥಾಪಿಸುವ ಮೂಲಕ ವಿದ್ಯಾರ್ಥಿಗಳ ಸಾಧನೆಗೆ ವೇದಿಕೆ ಒದಗಿಸಿದೆ. ವಿಶ್ವವಿದ್ಯಾಲಯದ ಮಂಜೂರಾತಿ ಡಾ| ಸೈಯ್ಯದ್ ಶಾ ಖುಸ್ರೊ ಹುಸೇನಿ ಅವರ ಅವಿರತ ಶ್ರಮದ ಪ್ರತಿಫಲವಾಗಿದೆ. ವಿದ್ಯಾರ್ಥಿಗಳು ಕ್ರೀಡೆ ಸೇರಿದಂತೆ ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡಿ ತಮ್ಮ ಗುರು, ಪಾಲಕರು, ಜಿಲ್ಲೆ, ರಾಜ್ಯ ಹಾಗೂ ರಾಷ್ಟ್ರಕ್ಕೆ ಕೀರ್ತಿ ತರಬೇಕು.
•ಮಹಮ್ಮದ್ ಅಜರುದ್ದೀನ್ ಭಾರತ ಕ್ರಿಕೆಟ್ ತಂಡದ ಮಾಜಿ ನಾಯಕ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
B.S.Yediyurappa: ಶಾಸಕ ಪ್ರಭು ಚವ್ಹಾಣ ಹೆಸರು ಹೇಳುತ್ತಿದ್ದಂತೆ ಬಿಎಸ್ವೈ ಗರಂ
BJP; ಖೂಬಾ ಮತ್ತೊಮ್ಮೆ ಸಚಿವರಾಗ್ತಾರೆ : ಔರಾದ್ ನಲ್ಲಿ ಯಡಿಯೂರಪ್ಪ ಘೋಷಣೆ
Bidar; ನೇಹಾ ಪ್ರಕರಣದಲ್ಲಿ ಬಿಜೆಪಿ ರಾಜಕೀಯ ಮಾಡುವುದು ಸರಿಯಲ್ಲ: ಸಿಎಂ ಸಿದ್ಧರಾಮಯ್ಯ
Lok Sabha Election: ಸೀನಿಯರ್ ಖೂಬಾಗೆ ಜ್ಯೂನಿಯರ್ ಖಂಡ್ರೆ ಸವಾಲು
ನೀತಿ ಸಂಹಿತೆ ನಡುವೆಯೂ ರಾಜ್ಯಕ್ಕೆ ನೆರವು ಎನ್ನುವ ಬಿಜೆಪಿಗೆ ನಾಚಿಕೆ ಇಲ್ಲವೇ? – ಖಂಡ್ರೆ
MUST WATCH
ಹೊಸ ಸೇರ್ಪಡೆ
Election: ಮತದಾನ ಆರಂಭವಾದ 2 ಗಂಟೆಯಲ್ಲೇ ಉಡುಪಿ ಚಿಕ್ಕಮಗಳೂರು ಕ್ಷೇತ್ರದಲ್ಲಿ 12.82% ಮತದಾನ
Singapore ಏರ್ ಲೈನ್ಸ್ ಪೈಲಟ್ ನಂತೆ ಪೋಸ್ ಕೊಟ್ಟ ಉತ್ತರಪ್ರದೇಶ ಯುವಕನ ಬಂಧನ!
Lok Sabha 2ನೇ ಹಂತ; ದಾಖಲೆ ಸಂಖ್ಯೆಯಲ್ಲಿ ಭಾಗವಹಿಸಲು ಪ್ರಧಾನಿ ಮೋದಿ ಕನ್ನಡದಲ್ಲಿ ಮನವಿ
Mangaluru: ಕಪಿತಾನಿಯೋ ಮತದಾನ ಕೇಂದ್ರದ ಬಳಿ ಪೊಲೀಸರೊಂದಿಗೆ ಕಾರ್ಯಕರ್ತರ ಘರ್ಷಣೆ…
Congress ನಿಂದ ಸ್ಮಾರ್ಟ್ ಕಾರ್ಡ್ ಹಂಚಿಕೆ: ರೆಡ್ಹ್ಯಾಂಡ್ ಆಗಿ ಹಿಡಿದ ಮೈತ್ರಿ ಕಾರ್ಯಕರ್ತರು