ಹುಮನಾಬಾದ ವೀರಭದ್ರೇಶ್ವರ ರಥೋತ್ಸವ ವೈಭವ


Team Udayavani, Jan 28, 2019, 9:30 AM IST

bell-4.jpg

ಹುಮನಾಬಾದ: ನಗರದಲ್ಲಿ ರವಿವಾರ ಕಲ್ಯಾಣ ಕರ್ನಾಟಕದ ಇತಿಹಾಸ ಪ್ರಸಿದ್ಧ, ಸರ್ವಧರ್ಮ ಸಮನ್ವಯತೆ ಖ್ಯಾತಿಯ ಶ್ರೀ ವೀರಭದ್ರೇಶ್ವರ ರಥೋತ್ಸವ ಸಾವಿರಾರು ಭಕ್ತರ ಸಮ್ಮುಖದಲ್ಲಿ ವೈಭವದಿಂದ ನೆರವೇರಿತು.

ಪಲ್ಲಕ್ಕಿ ಉತ್ಸವದೊಂದಿಗೆ ಆಗಮಿಸಿದ ಹಿರೇಮಠದ ಶ್ರೀ ರೇಣುಕ ಗಂಗಾಧರ ಸ್ವಾಮೀಜಿ ಅವರನ್ನು ಭಕ್ತರು ವಾದ್ಯವೃಂದದೊಂದಿಗೆ ರಥದತ್ತ ಕರೆತಂದರು. ರಥದ ಮುಂಭಾಗದ ಮಂಟಪದಲ್ಲಿ ಬೈವೇದ್ಯಕ್ಕಾಗಿ ಇಡಲಾದ ಎಳ್ಳಿನ ಹೋಳಿಗೆ, ಜೋಳದ ಅನ್ನ ಮೊದಲಾದವುಗಳ ಮೇಲೆ ಹಾಯ್ದು ಸ್ವಾಮೀಜಿ ರಥದಲ್ಲಿ ಆಸೀನರಾಗುತ್ತಿದ್ದ ಹಾಗೆ ಭಕ್ತರಿಂದ ಶ್ರೀ ವೀರಭದ್ರೇಶ್ವರ ಮಹಾಜರಾಕೀ ಜೈ ಎಂಬ ಘೋಷಣೆ ಮುಗಿಲುಮುಟ್ಟಿತು. ಬಳಿಕ ಕಲಬುರಗಿ ಜಿಲ್ಲೆಯ ಶರಣಬಸಪ್ಪ ಕಲ್ಯಾಣಿ ಅವರು ರಥ ಹತ್ತಿದ್ದಾಗ ಭಕ್ತರಿಂದ ಕರತಾಡನ ಕೇಳಿಸುತಿದ್ದಂತೆ ರಥೋತ್ಸವ ಆರಂಭಗೊಂಡಿತು.

ಭಕ್ತರು ರಥದತ್ತ ಬಾಳೆಹಣ್ಣು, ಪೇಡಾ, ಖಾರಿಕ ಮೊದಲಾದ ಸಿಹಿ ತಿನಿಸು ಸಮರ್ಪಿಸಿದರೆ ಇನ್ನೂ ಕೆಲವರು ಹಣವನ್ನು ರಥಕ್ಕೆ ಸಮರ್ಪಿಸಿ ಭಕ್ತಿಸೇವೆ ಸಲ್ಲಿಸಿದರು. ಅಲ್ಲದೇ ವೀರಭದ್ರೇಶ್ವರ ಸ್ವಾಮಿ ಕೃಪೆಯಿಂದ ತಮ್ಮ ಇಷ್ಟಾರ್ಥ ಈಡೇರಿದ್ದಕ್ಕೆ ಭಕ್ತಾದಿಗಳು ವಿಭಿನ್ನ ರೀತಿಯಲ್ಲಿ ತಮ್ಮ ಹರಿಕೆ ತೀರಿಸಿದರು.

ರಥವು ಹಳೆ ತಹಶೀಲ್ದಾರ್‌ ಕಚೇರಿ ಮುಂಭಾಗದ ಬಸವಣ್ಣ ಕಟ್ಟೆ ತಲುಪಿದ ನಂತರ ವೀರಭದ್ರೇಶ್ವರ ಪಲ್ಲಕಿಯನ್ನು ದೇವಸ್ಥಾನ ಕಟ್ಟೆ ಹತ್ತಿಸಿದಾಗ, ಸ್ವಾಮೀಜಿ ಭಕ್ತರತ್ತ ಎಸೆದ ಪ್ರಸಾದ ಹಿಡಿಯಲು ಭಕ್ತರು ಮುಂದಾದರು.

ಸಚಿವರಿಂದ ಕಲಾ ಪ್ರದರ್ಶನ ವೀಕ್ಷಣೆ: ರಥೋತ್ಸವ ಆರಂಭಕ್ಕೆ ಮುನ್ನ ಶಿವಮೊಗ್ಗ ಜಿಲ್ಲೆ ಸಾಗರದ ಶ್ರೀ ಆದಿಶಕ್ತಿ ಮಹಿಳಾ ಡೊಳ್ಳು ಕುಣಿತ ತಂಡದ ನೃತ್ಯ, ಸೊನ್ನಲಪುರದ ಜೋಡುಕುದುರೆ ನೃತ್ಯ, ಬೊಂಬೆ ಕುಣಿತ, ನಂದಿಕೋಲು ಕುಣಿತವನ್ನು ಸಚಿವ ರಾಜಶೇಖರ ಪಾಟೀಲ ವೀಕ್ಷಿಸಿ, ಕಲಾತಂಡಗಳನ್ನು ಪ್ರೋತ್ಸಾಹಿಸಿದರು.

ವಿಧಾನ ಪರಿಷತ್‌ ಸದಸ್ಯ ಡಾ| ಚಂದ್ರಶೇಖರ ಪಾಟೀಲ, ದೇವಸ್ಥಾನ ಸಮಿತಿ ಅಧ್ಯಕ್ಷ ವೀರಣ್ಣ ಪಾಟೀಲ, ತಹಶೀಲ್ದಾರ್‌ ದೇವೇಂದ್ರ ಪಾಣಿ, ಪಿಕೆಪಿಎಸ್‌ ಅಧ್ಯಕ್ಷ ಶರಣಪಗೌಡ ಪಾಟೀಲ, ಜಿಲ್ಲಾ ಸಹಕಾರ ಬ್ಯಾಂಕ್‌ ಉಪಧ್ಯಕ್ಷ ಭೀಮರಾವ ಪಾಟೀಲ, ಅಗ್ನಿಕುಂಡ ಸಮಿತಿ ಅಧ್ಯಕ್ಷ ಡಿ.ಆರ್‌. ಚಿದ್ರಿ, ಪಲ್ಲಕ್ಕಿ ಉತ್ಸವ ಸಮಿತಿ ಅಧ್ಯಕ್ಷ ಮಲ್ಲಿಕಾರ್ಜುನ ಮಳಶಟ್ಟಿ ಇದ್ದರು. ಇದೇ ವೇಳೆ ಜಾತ್ರಾ ಉತ್ಸವ ಯಶಸ್ಸಿಗೆ ಶ್ರಮಿಸಿದವರನ್ನು ಸಚಿವ ರಾಜಶೇಖರ ಪಾಟೀಲ ಸನ್ಮಾನಿಸಿದರು.

ಟಾಪ್ ನ್ಯೂಸ್

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

1-asasas

Naxal ಬಾಧಿತ ಮತಗಟ್ಟೆಗಳ ಭದ್ರತೆಗೆ ಹೆಚ್ಚುವರಿ ಆದ್ಯತೆ: ಮುಲ್ಲೈ ಮುಗಿಲನ್‌

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

KPCC: ಮೋದಿ, ರಾಜನಾಥ್‌ಸಿಂಗ್‌ ವಿರುದ್ಧ ಕ್ರಮಕ್ಕೆ ಕೆಪಿಸಿಸಿ ದೂರು

KPCC: ಮೋದಿ, ರಾಜನಾಥ್‌ಸಿಂಗ್‌ ವಿರುದ್ಧ ಕ್ರಮಕ್ಕೆ ಕೆಪಿಸಿಸಿ ದೂರು

1-rerwer

IPL; ಸನ್‌ರೈಸರ್ಸ್ ಹೈದರಾಬಾದ್ ವಿರುದ್ಧ ಜಯದ ನಗು ಬೀರಿದ ಆರ್ ಸಿಬಿ

MONEY (2)

Mysuru: ದಾಖಲೆ ಇಲ್ಲದೆ ಸಾಗಿಸುತ್ತಿದ್ದ 89 ಲಕ್ಷ ರೂ. ವಶಕ್ಕೆ

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

12

B.S.Yediyurappa: ಶಾಸಕ ಪ್ರಭು ಚವ್ಹಾಣ ಹೆಸರು ಹೇಳುತ್ತಿದ್ದಂತೆ ಬಿಎಸ್‌ವೈ ಗರಂ

1-wqqwewqe

BJP; ಖೂಬಾ ಮತ್ತೊಮ್ಮೆ ಸಚಿವರಾಗ್ತಾರೆ : ಔರಾದ್ ನಲ್ಲಿ ಯಡಿಯೂರಪ್ಪ ಘೋಷಣೆ

siddaramaiah

Bidar; ನೇಹಾ ಪ್ರಕರಣದಲ್ಲಿ ಬಿಜೆಪಿ ರಾಜಕೀಯ‌ ಮಾಡುವುದು ಸರಿಯಲ್ಲ: ಸಿಎಂ ಸಿದ್ಧರಾಮಯ್ಯ‌

Lok Sabha Election: ಸೀನಿಯರ್‌ ಖೂಬಾಗೆ ಜ್ಯೂನಿಯರ್‌ ಖಂಡ್ರೆ ಸವಾಲು

Lok Sabha Election: ಸೀನಿಯರ್‌ ಖೂಬಾಗೆ ಜ್ಯೂನಿಯರ್‌ ಖಂಡ್ರೆ ಸವಾಲು

16

ನೀತಿ ಸಂಹಿತೆ ನಡುವೆಯೂ ರಾಜ್ಯಕ್ಕೆ ನೆರವು ಎನ್ನುವ ಬಿಜೆಪಿಗೆ ನಾಚಿಕೆ ಇಲ್ಲವೇ? – ಖಂಡ್ರೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

1-asasas

Naxal ಬಾಧಿತ ಮತಗಟ್ಟೆಗಳ ಭದ್ರತೆಗೆ ಹೆಚ್ಚುವರಿ ಆದ್ಯತೆ: ಮುಲ್ಲೈ ಮುಗಿಲನ್‌

1-MB

Note Ban ವೇಳೆ ಮಹಿಳೆಯರು ಮಂಗಳಸೂತ್ರ ಅಡವಿಟ್ಟಾಗ ಮೋದಿ ಮೌನ: ಭಂಡಾರಿ

Exam

Udupi; ಪಿಯುಸಿ ಪರೀಕ್ಷೆ-2 : ನಿಷೇಧಾಜ್ಞೆ ಜಾರಿ

IMD

Dakshina Kannada ಜಿಲ್ಲೆಯಲ್ಲಿ ಮುಂದುವರಿದ ಉರಿಬಿಸಿಲು:ಮಳೆಯ ಮುನ್ಸೂಚನೆ ಇಲ್ಲ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.