ಅಕ್ರಮ ತನಿಖೆಗೆ ನಡೆದಿದೆ ಸಿದ್ಧತೆ


Team Udayavani, Feb 16, 2019, 7:23 AM IST

bid-2.jpg

ಬೀದರ: ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಅಡಿಯಲ್ಲಿ ಕಾರ್ಯ ನಿರ್ವಹಿಸುತ್ತಿರುವ ಜಿಲ್ಲೆಯ ಐದು ಎಂಎಸ್‌ಪಿಟಿಸಿ (ಮಹಿಳಾ ಆಹಾರ ಉತ್ಪನ್ನ ಘಟಕ) ಗಳಲ್ಲಿ ಈ ವರೆಗೆ ನಡೆದ ವ್ಯವಹಾರ ಕುರಿತು ಅಧಿಕಾರಿಗಳು ಸೂಕ್ತ ತನಿಖೆ ನಡೆಸಲು ಸಿದ್ಧತೆ ನಡೆದಿದೆ ಎಂದು ತಿಳಿದುಬಂದಿದೆ.

ಜಿಲ್ಲೆಯ ಬೀದರ್‌, ಬಸವಕಲ್ಯಾಣ, ಔರಾದ, ಭಾಲ್ಕಿ ಹಾಗೂ ಹುಮನಾಬಾದ ತಾಲೂಕುಗಳಲ್ಲಿ ಎಂಎಸ್‌ಪಿಟಿಸಿ ಘಟಕಗಳಿದ್ದು, ಆಯಾ ಪ್ರದೇಶದಲ್ಲಿನ ಅಂಗನವಾಡಿ ಕೇಂದ್ರಗಳಿಗೆ ಪೂರಕ ಪೌಷ್ಠಿಕ ಆಹಾರ ಪೂರೈಕೆ ಮಾಡುತ್ತಿವೆ. ಆದರೆ, ಕೆಲ ಘಟಕಗಳು ಸರ್ಕಾರದ ನಿಯಮಗಳನ್ನು ಪಾಲಿಸದೆ ಹಾಗೂ ಮೇಲಾಧಿಕಾರಿಗಳ ಪರವಾನಗಿ ರಹಿತ ಆಡಳಿತ ನಡೆಸಿರುವುದು ಮೇಲ್ನೊಟಕ್ಕೆ ಕಂಡು ಬಂದಿದೆ. ಈ ಹಿನ್ನೆಲೆಯಲ್ಲಿ ಅಧಿಕಾರಿಗಳು ತನಿಖೆ ನಡೆಸುವ ನಿಟ್ಟಿನಲ್ಲಿ ಮೇಲಾಧಿಕಾರಿಗಳ ಜತೆಗೆ ಚರ್ಚೆ ನಡೆಸಿದ್ದಾರೆ.

ಪ್ರತಿಯೊಂದು ಘಟಗಳಲ್ಲಿ ಅಧ್ಯಕ್ಷರ ಹಾಗೂ ಕಾರ್ಯದರ್ಶಿಗಳ ಮುಖ್ಯ ಸ್ಥರಾಗಿದ್ದು, ಫೆಸಿಲಿಟೇಟರ್‌ (ಪಿಎಫ್‌) ಗಳು ಘಟಕದ ಎಲ್ಲಾ ಕಾರ್ಯಗಳ ಮೇಲೆ
ಉಸ್ತುವಾರಿ ನೋಡಿಕೊಳ್ಳುವ ಕೆಲಸ ನಿರ್ವಹಿಸುತ್ತಿದ್ದಾರೆ. ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಅಧಿಕಾರಿಗಳ ಪ್ರಕಾರ, ಪ್ರತಿಯೊಂದು ಘಟಕಗಳು ಸರಿಸುಮಾರು 400ಕ್ಕೂ ಅಧಿಕ ಅಂಗನವಾಡಿ ಕೇಂದ್ರಗಳಿಗೆ ಪೂರಕ ಪೌಷ್ಠಿಕ ಆಹಾರ ಪೂರೈಕೆ ಮಾಡುತ್ತಿವೆ.

ತಿಂಗಳಿಗೆ ಸರಾಸರಿ 35ರಿಂದ 40 ಲಕ್ಷದ ಆಹಾರ ಪದಾರ್ಥಗಳು ಅಂಗನವಾಡಿ ಕೇಂದ್ರಗಳಿಗೆ ಪೂರೈಕೆ ಮಾಡುತ್ತಿವೆ. ಈ ಪೈಕಿ ಸರಾಸರಿ 5ರಿಂದ 8 ಲಕ್ಷ ರೂ. ಘಟಕಕ್ಕೆ ಪ್ರತಿ ತಿಂಗಳು ಲಾಭ ಆಗುತ್ತಿದ್ದು, ಸ್ತ್ರೀಶಕ್ತಿ ಸಂಘದ ಮಹಿಳೆಯರು ಅವರು ಮಾಡಿದ ಕೆಲಸದ ಸಂಬಳ ಪಡೆದು ಇನ್ನುಳಿದ ಹಣ ಯಾವ ಕಾರ್ಯಕ್ಕೆ ಖರ್ಚು ಮಾಡಲಾಗುತ್ತಿದೆ. ಯಾವ ವಸ್ತು ಖರೀದಿ ಮಾಡಲಾಗುತ್ತಿದೆ ಎಂಬುದನ್ನು ಲಿಖೀತ ಪತ್ರದ ಮೂಲಕ ಉಪ ನಿರ್ದೇಶಕರ ಪರವಾನಗಿ ಪಡೆಯಬೇಕು ಎಂಬುದು ಘಟಕಗಳ ನಿಯಮವಾಗಿದೆ ಎಂದು ಮಾಹಿತಿ ನೀಡಿದ್ದಾರೆ. ಇದೀಗ ಇಲ್ಲಿನ ಕೆಲ ಎಂಎಸ್‌ ಪಿಟಿಸಿಗಳು ನಿಯಮ ಪಾಲಿಸದೇ ಹಣ ಖರ್ಚು ಮಾಡಿರುವುದು ತಿಳಿದು ಬಂದಿರು ಹಿನ್ನೆಲೆಯಲ್ಲಿ ಸೂಕ್ತ ಪರಿಶೀಲನೆ ನಡೆಸಲು ಅಧಿಕಾರಿಗಳು ಸಿದ್ದತೆ ಮಾಡಿಕೊಳ್ಳುತ್ತಿದ್ದಾರೆ ಎಂದು ಮೂಲಗಳು ತಿಳಿಸಿವೆ.

ಮನ ಬಂದಂತೆ ಸಂಬಳ ಹೆಚ್ಚಳ: ಅಧಿಕಾರಿಗಳ ಮಾಹಿತಿ ಪ್ರಕಾರ ಎಂಎಸ್‌ಪಿಟಿಸಿ ಘಟಕಗಳಲ್ಲಿ ಕೆಲಸ ನಿರ್ವಹಿಸುವ ಸ್ತ್ರೀಶಕ್ತಿ ಸಂಘದ ಸದಸ್ಯರು ಸಂಬಳ ಹೆಚ್ಚಿಸಿ ಕೊಳ್ಳಬೇಕಾದರೂ ಇಲಾಖೆಯ ಉಪನಿರ್ದೇಶಕರ ಪರವಾನಗಿ ಪಡೆಯಬೇಕು. ಆದರೆ, ಘಟಕಗಳು ಯಾವುದೇ ನಿಯಮಗಳನ್ನು ಪಾಲಿಸದೆ ಮನಬಂದತೆ ಸಂಬಳ ಹೆಚ್ಚಿಸಿಕೊಂಡಿರುವುದು ತಿಳಿದುಬಂದಿದೆ. ಕೆಲ ಘಟಕದ ಅಧ್ಯಕ್ಷರಿಗೆ ತಿಂಗಳಿಗೆ ಎಷ್ಟು ಪ್ರಮಾಣದ ವ್ಯವಹಾರ
ನಡೆಯುತ್ತದೆ ಎಂಬುದು ಕೂಡ ಮಾಹಿತಿ ಇಲ್ಲದ ಸ್ಥಿತಿ ಇದೆ.

ದುರ್ಯೋಧನ ಹೂಗಾರ

ಟಾಪ್ ನ್ಯೂಸ್

Siddaramaiah ಮುಸ್ಲಿಂ ಮೀಸಲಾತಿ ಬಗ್ಗೆ ಬಿಜೆಪಿಯಿಂದ ಸುಳ್ಳು

Siddaramaiah ಮುಸ್ಲಿಂ ಮೀಸಲಾತಿ ಬಗ್ಗೆ ಬಿಜೆಪಿಯಿಂದ ಸುಳ್ಳು

1-wewqewq

T20 World Cup; ಯುವರಾಜ್‌ ಸಿಂಗ್‌ ರಾಯಭಾರಿ: ಐಸಿಸಿ ಘೋಷಣೆ 

Neha Hiremath Case ಮೊದಲ ದಿನವೇ ತನಿಖೆ ದಾರಿ ತಪ್ಪಿದೆ: ಬೊಮ್ಮಾಯಿ

Neha Hiremath Case ಮೊದಲ ದಿನವೇ ತನಿಖೆ ದಾರಿ ತಪ್ಪಿದೆ: ಬೊಮ್ಮಾಯಿ

Basavaraj Bommai; ನನ್ನ ಅವಧಿಯಲ್ಲಿ ಮುಸ್ಲಿಂ ಮೀಸಲು ಅಫಿದವಿತ್‌ ಸಲ್ಲಿಸಿಲ್ಲ

Basavaraj Bommai; ನನ್ನ ಅವಧಿಯಲ್ಲಿ ಮುಸ್ಲಿಂ ಮೀಸಲು ಅಫಿದವಿತ್‌ ಸಲ್ಲಿಸಿಲ್ಲ

1-ewewqe

IPL; ಕೆಕೆಆರ್‌ ನೀಡಿದ 262 ರನ್ ಗುರಿ ತಲುಪಿ ದಾಖಲೆ ಬರೆದ ಪಂಜಾಬ್

Tumkur ಮತದಾನದ ಬಳಿಕ ಹೃದಯ ಶಸ್ತ್ರಚಿಕಿತ್ಸೆ

Tumkur ಮತದಾನದ ಬಳಿಕ ಹೃದಯ ಶಸ್ತ್ರಚಿಕಿತ್ಸೆ

Chitradurga ಯರೇಹಳ್ಳಿಯಲ್ಲಿ ಹಕ್ಕು ಚಲಾಯಿಸಿದ್ದು ಕೇವಲ 18 ಮಂದಿ!

Chitradurga ಯರೇಹಳ್ಳಿಯಲ್ಲಿ ಹಕ್ಕು ಚಲಾಯಿಸಿದ್ದು ಕೇವಲ 18 ಮಂದಿ!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

12

B.S.Yediyurappa: ಶಾಸಕ ಪ್ರಭು ಚವ್ಹಾಣ ಹೆಸರು ಹೇಳುತ್ತಿದ್ದಂತೆ ಬಿಎಸ್‌ವೈ ಗರಂ

1-wqqwewqe

BJP; ಖೂಬಾ ಮತ್ತೊಮ್ಮೆ ಸಚಿವರಾಗ್ತಾರೆ : ಔರಾದ್ ನಲ್ಲಿ ಯಡಿಯೂರಪ್ಪ ಘೋಷಣೆ

siddaramaiah

Bidar; ನೇಹಾ ಪ್ರಕರಣದಲ್ಲಿ ಬಿಜೆಪಿ ರಾಜಕೀಯ‌ ಮಾಡುವುದು ಸರಿಯಲ್ಲ: ಸಿಎಂ ಸಿದ್ಧರಾಮಯ್ಯ‌

Lok Sabha Election: ಸೀನಿಯರ್‌ ಖೂಬಾಗೆ ಜ್ಯೂನಿಯರ್‌ ಖಂಡ್ರೆ ಸವಾಲು

Lok Sabha Election: ಸೀನಿಯರ್‌ ಖೂಬಾಗೆ ಜ್ಯೂನಿಯರ್‌ ಖಂಡ್ರೆ ಸವಾಲು

16

ನೀತಿ ಸಂಹಿತೆ ನಡುವೆಯೂ ರಾಜ್ಯಕ್ಕೆ ನೆರವು ಎನ್ನುವ ಬಿಜೆಪಿಗೆ ನಾಚಿಕೆ ಇಲ್ಲವೇ? – ಖಂಡ್ರೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Siddaramaiah ಮುಸ್ಲಿಂ ಮೀಸಲಾತಿ ಬಗ್ಗೆ ಬಿಜೆಪಿಯಿಂದ ಸುಳ್ಳು

Siddaramaiah ಮುಸ್ಲಿಂ ಮೀಸಲಾತಿ ಬಗ್ಗೆ ಬಿಜೆಪಿಯಿಂದ ಸುಳ್ಳು

1-wewqewq

T20 World Cup; ಯುವರಾಜ್‌ ಸಿಂಗ್‌ ರಾಯಭಾರಿ: ಐಸಿಸಿ ಘೋಷಣೆ 

Neha Hiremath Case ಮೊದಲ ದಿನವೇ ತನಿಖೆ ದಾರಿ ತಪ್ಪಿದೆ: ಬೊಮ್ಮಾಯಿ

Neha Hiremath Case ಮೊದಲ ದಿನವೇ ತನಿಖೆ ದಾರಿ ತಪ್ಪಿದೆ: ಬೊಮ್ಮಾಯಿ

Basavaraj Bommai; ನನ್ನ ಅವಧಿಯಲ್ಲಿ ಮುಸ್ಲಿಂ ಮೀಸಲು ಅಫಿದವಿತ್‌ ಸಲ್ಲಿಸಿಲ್ಲ

Basavaraj Bommai; ನನ್ನ ಅವಧಿಯಲ್ಲಿ ಮುಸ್ಲಿಂ ಮೀಸಲು ಅಫಿದವಿತ್‌ ಸಲ್ಲಿಸಿಲ್ಲ

1-ewewqe

IPL; ಕೆಕೆಆರ್‌ ನೀಡಿದ 262 ರನ್ ಗುರಿ ತಲುಪಿ ದಾಖಲೆ ಬರೆದ ಪಂಜಾಬ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.