ಗ್ರಾಮಗಳಲ್ಲಿ ಆದೀತು ಕುಡಿವ ನೀರಿನ ಸಮಸ್ಯೆ


Team Udayavani, Feb 17, 2019, 8:58 AM IST

bid-1.jpg

ಬೀದರ: ಬೇಸಿಗೆಯಲ್ಲಿ ಜಿಲ್ಲೆಯ ಸುಮಾರು 130ಕ್ಕೂ ಅಧಿಕ ಗ್ರಾಮಗಳಲ್ಲಿ ಕುಡಿಯುವ ನೀರಿನ ಸಮಸ್ಯೆ ಎದುರಾಗುವ ಸಾಧ್ಯತೆ ಇದೆ ಎಂದು ಅಂದಾಜಿಸಲಾಗಿದ್ದು, ಇರುವ ನೀರನ್ನು ಸಮರ್ಪಕವಾಗಿ ಬಳಸಿಕೊಳ್ಳುವಲ್ಲಿ ಅಧಿಕಾರಿಗಳು ವಿಫಲರಾಗುತ್ತಿದ್ದಾರೆ ಎಂಬ ದೂರುಗಳು ಕೇಳಿಬರುತ್ತಿವೆ.
ಸದ್ಯ ಜಿಲ್ಲೆಯ ಜನರಿಗೆ ಕುಡಿಯುವ ನೀರು ಪೂರೈಕೆ ಮಾಡುವ ಕಾಮಧೇನು ಎಂದೇ ಗುರುತಿಸಿಕೊಂಡ ಕಾರಂಜಾ ಜಲಾಶಯದ ನೀರು ಪ್ರತಿನಿತ್ಯ ಒಂದಲ್ಲಾ ಒಂದು ಕಡೆ ಪೋಲಾಗುತ್ತಿರುವುದು ಸಹಜ ಎನ್ನುವಂತಾಗಿದೆ.

ಕಾರಂಜಾ ಜಲಾಶಯದಿಂದ ವಿವಿಧ ಪಟ್ಟಣ ಹಾಗೂ ಗ್ರಾಮಗಳಿಗೆ ಪೈಪ್‌ ಲೈನ್‌ ಮೂಲಕ ನೀರು ಹರಿಸುವ ಕಾರ್ಯ ನಡೆಯುತ್ತಿದೆ. ಆದರೆ, ಪದೇಪದೆ ಪೈಪ್‌ಲೈನ್‌ ಸಮಸ್ಯೆಯಿಂದ ಭಾರಿ ಪ್ರಮಾಣದ ನೀರು ಪೋಲಾಗುತ್ತಿದೆ. ತಿಂಗಳ ಹಿಂದೇ ಬೀದರ್‌-ಹುಮನಾಬಾದ ಮಾರ್ಗ ಮಧ್ಯದ ಹಾಲಹಳ್ಳಿ
ಸಮೀಪದಲ್ಲಿ ಕಾರಂಜಾ ಜಲಾಶಯದಿಂದ ಭಾರಿ ಪ್ರಮಾಣದ ನೀರು ಪೋಲಾಗುತ್ತಿತ್ತು. ನಂತರ ಸಂಗೋಳಗಿ ಸಮೀಪ, ಶಮಶಾನಗರ ಸಮೀಪದಲ್ಲಿ ಕೂಡ ನೀರು ಪೋಲಾಗಿತ್ತು. ಇದೀಗ ಬೀದರ್‌ ತಾಲೂಕಿನ ಕಮಠಾಣಾ ಸಮೀಪದಲ್ಲಿ ಪೈಪ್‌ ಲೈನ್‌ ಒಡೆದು ಭಾರಿ ಪ್ರಮಾಣದ ನೀರು ಪೋಲಾಗುತ್ತಿದೆ.

ನೀರು ಮಿತವಾಗಿ ಬಳಕೆ ಮಾಡಬೇಕು ಎಂದು ಜಿಲ್ಲಾಡಳಿತ ಜಿಲ್ಲೆಯ ಜನರಿಗೆ ಮನವರಿಕೆ ಮಾಡುತ್ತಿದೆ. ಈ ಮಧ್ಯದಲ್ಲಿ ಅಧಿ ಕಾರಿಗಳ ನಿರ್ಲಕ್ಷéಕ್ಕೆ ಭಾರಿ ಪ್ರಮಾಣದ ನೀರು ಪೋಲಾಗುತ್ತಿರುವುದು ಸಾರ್ವಜನಿಕರ ಆಕ್ರೋಶಕ್ಕೆ ಕಾರಣವಾಗಿದೆ. ಹಾಲಹಳ್ಳಿ ಮಾರ್ಗದಿಂದ ಶಮಶಾನಗರ,
ಕಂಗನಕೋಟೆ, ಕಮಠಾಣಾಗೆ ಸರಬರಾಜಾಗುವ ಪೈಪ್‌ಲೈನ್‌ ಕಮಠಾಣಾ ಗ್ರಾಮದ ಬಳಿ ಒಡೆದು ಹೋಗಿದೆ. ಇದರಿಂದ ದಿನನಿತ್ಯ ಸಾಕಷ್ಟು ನೀರು ಪೋಲಾಗುತ್ತಿದೆ. ಪೈಪ್‌ ಒಡೆದ ಜಾಗದಲ್ಲಿ ಭಾರೀ ಪ್ರಮಾಣದಲ್ಲಿ ನೀರು ಸಂಗ್ರಹವಾಗಿದೆ. ಆದರೆ, ಸಂಬಂಧಿ ಸಿದ ಸಿಬ್ಬಂದಿ ಈ ಕಡೆ ಗಮನಹರಿಸುತ್ತಿಲ್ಲ. ಕನಿಷ್ಠ ಕಮಠಾಣಾ ಪಂಚಾಯತ್‌ ಸಿಬ್ಬಂದಿ ಕೂಡ ನೀರು ಪೋಲಾಗುತ್ತಿರುವ ಕುರಿತು ಸಂಬಂಧಿಸಿದ ಇಲಾಖೆ
ಅ ಧಿಕಾರಿಗಳಿಗೂ ಮಾಹಿತಿ ನೀಡುವ ಕೆಲಸ ಮಾಡಿಲ್ಲ. 

ಗ್ರಾಮದಲ್ಲಿ ವಾಸಿಲು ಸೂಚನೆ: ಬೇಸಿಗೆ ಸಂದರ್ಭದಲ್ಲಿ ಆಯಾ ಗ್ರಾಮ ಪಂಚಾಯತ ವ್ಯಾಪ್ತಿಯ ಅಧಿಕಾರಿಗಳು ಆಯಾ ಗ್ರಾಮ ಪಂಚಾಯತ್‌ ವ್ಯಾಪ್ತಿಯಲ್ಲಿಯೇ ವಾಸ ಮಾಡಬೇಕು. ಯಾವ ಗ್ರಾಮದಲ್ಲೂ ಕುಡಿಯುವ ನೀರಿನ ಸಮಸ್ಯೆ ಆಗದಂತೆ ಎಚ್ಚರಿಕೆ ವಹಿಸುವಂತೆ ಸೂಚಿಸಲಾಗಿದೆ.
ಕರ್ತವ್ಯ ಲೋಪ ಮಾಡಿರುವ ಜಿಲ್ಲೆಯ 47 ಗ್ರಾಮ ಪಂಚಾಯತ್‌ ಅಭಿವೃದ್ಧಿ ಅಧಿಕಾರಿಗಳಿಗೆ ಶೋಕಾಸ್‌ ನೋಟಿಸ್‌ ನೀಡಲಾಗಿದೆ. ಅಲ್ಲದೆ, ಈಗಾಗಲೇ 16 ಪಿಡಿಒಗಳನ್ನು ಅಮಾನತು ಮಾಡಲಾಗಿದೆ ಎಂದು ಜಿಲ್ಲಾ ಪಂಚಾಯತ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಮಹಾಂತೇಶ ಬೀಳಗಿ ಮಾಹಿತಿ ನೀಡಿದ್ದು, ಭಾಲ್ಕಿ ತಾಲೂಕಿನ ತೇಗಂಪೂರ್‌ ಗ್ರಾಮದಲ್ಲಿ ಟ್ಯಾಂಕರ್‌ ನೀರು ಸರಬರಾಜು ಮಾಡಲಾಗುತ್ತಿದೆ ಎಂದು ತಿಳಿಸಿದ್ದಾರೆ.

ಜಿಲ್ಲೆಯಲ್ಲಿ 128 ಗ್ರಾಮಗಳಲ್ಲಿ ನೀರಿನ ಸಮಸ್ಯೆ ಉಂಟಾಗುವ ಕುರಿತು ಮಾಹಿತಿ ಇದೆ. ಈ ಬೇಸಿಗೆಯಲ್ಲಿ ಯಾವುದೇ ಗ್ರಾಮದಲ್ಲಿ ಕುಡಿಯುವ ನೀರಿನ ಸಮಸ್ಯೆ ಆಗದಂತೆ ಎಚ್ಚರಿಕೆ ವಹಿಸಲಾಗುತ್ತಿದೆ. ಗ್ರಾಮ ಪಂಚಾಯತ ಮಟ್ಟದಲ್ಲಿ ಕೆಲಸ ನಿರ್ವಹಿಸದ ಅಧಿಕಾರಿಗಳ ವಿರುದ್ಧ ಕಾನೂನು
ಕ್ರಮ ಕೈಗೊಳ್ಳಲಾಗುತ್ತಿದೆ. ಆಯಾ ಗ್ರಾಮದಲ್ಲಿ ನೀರಿನ ಸಂಗ್ರಹ ಇರುವ ಖಾಸಗಿ ಕೊಳವೆ ಬಾವಿ, ತೆರೆದ ಬಾವಿ ಪರಿಶೀಲಿಸಲಾಗುತ್ತಿದೆ. ಭೂ ಗರ್ಭ
ತಜ್ಞರ ಮಾಹಿತಿ ಪ್ರಕಾರ ವಿವಿಧೆಡೆ ಕೊಳವೆ ಬಾವಿಗಳನ್ನು ಕೊರೆಸುವ ಕಾರ್ಯ ನಡೆಯುತ್ತಿದೆ. ನಮ್ಮ ಎಲ್ಲಾ ಯೋಜನೆಗಳು ವಿಫಲಗೊಂಡ
ಸಂದರ್ಭದಲ್ಲಿ ಮಾತ್ರ ಟ್ಯಾಂಕರ್‌ ನೀರು ಪೂರೈಕೆ ಮಾಡಲಾಗುವುದು.
 ಮಹಾಂತೇಶ ಬೀಳಗಿ. ಜಿಲ್ಲಾಪಂಚಾಯತ ಸಿಇಒ

ಕುಡಿಯುವ ನೀರಿಗೆ ಪ್ರತಿಯೊಬ್ಬರು ಮಹತ್ವ ನೀಡಬೇಕು. ಎಲ್ಲಿಯಾದರೂ ನೀರು ಪೋಲಾಗುತ್ತಿದ್ದರೆ ಕೂಡಲೆ ಅಧಿಕಾರಿಗಳ ಗಮನಕ್ಕೆ ತರುವ ಕಾರ್ಯವನ್ನು ಸಾರ್ವಜನಿಕರು ಮಾಡಬೇಕು. ಕಮಠಾಣಾ ಗ್ರಾಮದ ಸಮೀಪದಲ್ಲಿ ನೀರು ಪೋಲಾಗುತ್ತಿರುವ ಕುರಿತು ಅಧಿಕಾರಿಗಳು ಕೂಡಲೇ ಭೇಟಿ ನೀಡಿ ನೀರು ಪೋಲಾಗದಂತೆ ತಡೆಯುವಂತೆ ಸೂಚಿಸಲಾಗುವುದು. ಔರಾದ ಪಟ್ಟಣಕ್ಕೆ ಕಾರಂಜಾ ಜಲಾಶಯದ ನೀರು ಪೂರೈಕೆ ಮಾಡುವಂತೆ ಔರಾದ ಶಾಸಕರು ಪತ್ರ ಬರೆದಿದ್ದಾರೆ. ಆದರೆ, ಕಾರಂಜಾ ಜಲಾಶಯದಲ್ಲಿ ನೀರಿನ ಪ್ರಮಾಣ ಕಡಿಮೆ ಇದೆ. ಜಲಾಶಯದಿಂದ ಔರಾದವರೆಗೆ ಹರಿದು ಹೋಗುವ ನೀರು ಹೆಚ್ಚಾಗಿ ಹಾಳಾಗುವ ಸಾಧ್ಯತೆ ಇದ್ದು, ಈ ಕುರಿತು ಪರಿಶೀಲಿಸಲಾಗುತ್ತಿದೆ.
 ಡಾ| ಎಚ್‌.ಆರ್‌. ಮಹಾದೇವ, ಜಿಲ್ಲಾಧಿಕಾರಿ

„ದುರ್ಯೋಧನ ಹೂಗಾರ

ಟಾಪ್ ನ್ಯೂಸ್

Surjewala

BJP ಎಂದರೆ ಹೊಸ ಈಸ್ಟ್ ಇಂಡಿಯಾ ಕಂಪೆನಿ: ಸುರ್ಜೇವಾಲಾ ಕಿಡಿ

Kharge (2)

Kalaburagi; ಸತ್ತಾಗ ಮಣ್ಣಿಗಾದರೂ ಬನ್ನಿ: ಭಾವನಾತ್ಮಕವಾಗಿ ಮತಯಾಚಿಸಿದ ಖರ್ಗೆ

voter

Vote ಚಲಾಯಿಸಲು ಭಾರೀ ಸಂಖ್ಯೆಯಲ್ಲಿ ಬರುತ್ತಿರುವ ಕೇರಳ ಎನ್‌ಆರ್‌ಐಗಳು

ತಂಗಿಯ ಸಮಾಧಿ ಸ್ಥಳಕ್ಕೆ  ಭೇಟಿ ನೀಡುವುದನ್ನು ವ್ಲಾಗ್‌ ವಿಡಿಯೋ ಮಾಡಿದ ಯೂಟ್ಯೂಬರ್: ಆಕ್ರೋಶ

ತಂಗಿಯ ಸಮಾಧಿ ಸ್ಥಳಕ್ಕೆ ಭೇಟಿ ನೀಡುವುದನ್ನು ವ್ಲಾಗ್‌ ವಿಡಿಯೋ ಮಾಡಿದ ಯೂಟ್ಯೂಬರ್: ಆಕ್ರೋಶ

ಹಳದಿ ಶಾಸ್ತ್ರದ ವೇಳೆ ವರನಿಗೆ ವಿದ್ಯುತ್ ಸ್ಪರ್ಶ… ಆಸ್ಪತ್ರೆ ದಾರಿಯಲ್ಲಿ ಕೊನೆಯುಸಿರು

ಹಳದಿ ಶಾಸ್ತ್ರದ ವೇಳೆ ವಿದ್ಯುತ್ ಸ್ಪರ್ಶ… ಆಸ್ಪತ್ರೆ ದಾರಿ ಮಧ್ಯೆ ಕೊನೆಯುಸಿರೆಳೆದ ವರ

Inheritance Tax:  ಸ್ಯಾಮ್‌ ಪಿತ್ರೋಡಾ ಹೇಳಿದ್ದೇನು-ಏನಿದು ಪಿತ್ರಾರ್ಜಿತ ತೆರಿಗೆ ಜಟಾಪಟಿ!

Inheritance Tax:  ಸ್ಯಾಮ್‌ ಪಿತ್ರೋಡಾ ಹೇಳಿದ್ದೇನು-ಏನಿದು ಪಿತ್ರಾರ್ಜಿತ ತೆರಿಗೆ ಜಟಾಪಟಿ!

Rahul Gandhi 3

U-turn ಹೊಡೆದ ರಾಹುಲ್: ಸಂಪತ್ತು ಹಂಚಿಕೆ ಬಗ್ಗೆ ಹೇಳಿಲ್ಲ,ಅನ್ಯಾಯ…


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

16

ನೀತಿ ಸಂಹಿತೆ ನಡುವೆಯೂ ರಾಜ್ಯಕ್ಕೆ ನೆರವು ಎನ್ನುವ ಬಿಜೆಪಿಗೆ ನಾಚಿಕೆ ಇಲ್ಲವೇ? – ಖಂಡ್ರೆ

Minchu

Rain; ಬೀದರ್,ಕೊಪ್ಪಳದಲ್ಲಿ ಸಿಡಿಲಿನ ಆರ್ಭಟಕ್ಕೆ ಇಬ್ಬರು ಮೃತ್ಯು

Bidar; ಪ್ರೇಯಸಿ ಮದುವೆ ದಿನವೇ ಪ್ರಿಯಕರನ ಶವ ಪತ್ತೆ

Bidar; ಪ್ರೇಯಸಿ ಮದುವೆ ದಿನವೇ ಪ್ರಿಯಕರನ ಶವ ಪತ್ತೆ

rape

Bidar; ಯುವಕನಿಂದ ಅಪ್ರಾಪ್ತ ವಯಸ್ಕಳ ರೇಪ್

Bidar; Will file Defamation case against Khooba: Eshwar Khandre

Bidar; ಖೂಬಾ ವಿರುದ್ಧ ಮಾನನಷ್ಟ ಮೊಕದ್ದಮೆ ಹೂಡುವೆ: ಈಶ್ವರ್ ಖಂಡ್ರೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

12-uv-fusion

UV Fusion: ಮಕ್ಕಳ ಆಸಕ್ತಿ ಹುಡುಕುವ ಕೆಲಸವಾಗಲಿ

Surjewala

BJP ಎಂದರೆ ಹೊಸ ಈಸ್ಟ್ ಇಂಡಿಯಾ ಕಂಪೆನಿ: ಸುರ್ಜೇವಾಲಾ ಕಿಡಿ

ಗದಗ: ಸೈಕ್ಲಿಂಗ್‌ ರಾಷ್ಟ್ರೀಯ ತರಬೇತಿ ಶಿಬಿರಕ್ಕೆ ಪವಿತ್ರಾ ಆಯ್ಕೆ

ಗದಗ: ಸೈಕ್ಲಿಂಗ್‌ ರಾಷ್ಟ್ರೀಯ ತರಬೇತಿ ಶಿಬಿರಕ್ಕೆ ಪವಿತ್ರಾ ಆಯ್ಕೆ

11-mallige

Bappanadu Durgaparameshwari: ಮಲ್ಲಿಗೆ ಪ್ರಿಯೆ ದೇವಿಗೆ ಲಕ್ಷ ಮಲ್ಲಿಗೆ ಶಯನೋತ್ಸವ

Kharge (2)

Kalaburagi; ಸತ್ತಾಗ ಮಣ್ಣಿಗಾದರೂ ಬನ್ನಿ: ಭಾವನಾತ್ಮಕವಾಗಿ ಮತಯಾಚಿಸಿದ ಖರ್ಗೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.