ಭಾರತ ತಿರುಗಿ ಬಿದ್ದರೆ ಪಾಕಿಸ್ತಾನಕ್ಕಿಲ್ಲ ಉಳಿಗಾಲ: ಸೂಲಿಬೆಲೆ


Team Udayavani, Feb 18, 2019, 9:11 AM IST

bid-2.jpg

ಬೀದರ: ಭಾರತ ದೇಶ ತಿರುಗಿಬಿದ್ದರೆ ಪಾಕಿಸ್ತಾನಕ್ಕೆ ಉಳಿಗಾಲ ಇಲ್ಲ. ಭಾರತ ಆಕ್ರಮಣ ಮಾಡಿದರೆ ಅದನ್ನು ತಡೆಯುವ ಶಕ್ತಿ ಪಾಕಿಸ್ತಾನಕ್ಕೆ ಇಲ್ಲ ಎಂಬುದು ಆ ದೇಶದ ಮಕ್ಕಳಿಗೂ ಅರ್ಥವಾಗಿದೆ. ಕಾರಣ ಇಂದು ಪಾಕ್ತಿಸ್ತಾನಿಗಳು ನಿದ್ದೆ ಕೆಡಿಸಿಕೊಂಡು ದಿನ ಕಳೆಯುತ್ತಿದ್ದಾರೆ ಎಂದು ವಾಗ್ಮಿ ಚಕ್ರವರ್ತಿ ಸೂಲಿಬೆಲೆ ಹೇಳಿದರು.

ನಗರದಲ್ಲಿ ಟೀಮ್‌ ಮೋದಿ ವತಿಯಿಂದ ಏರ್ಪಡಿಸಿದ್ದ ನರೇಂದ್ರ ಮೋದಿ ಅವರ 5 ವರ್ಷ ಅಭಿವೃದ್ಧಿಯ ಪರಿಚಯ ಹಾಗೂ “ದೇಶಕ್ಕಾಗಿ ಮೋದಿ, ಮೋದಿಗಾಗಿ ನಾವು’ ಬಹಿರಂಗ ಸಭೆಯಲ್ಲಿ ಅವರು ಮಾತನಾಡಿದರು.
 
ಉಗ್ರರ ದಾಳಿಗೆ ತಕ್ಕ ಉತ್ತರ ನೀಡುವುದಾಗಿ ಪ್ರಧಾನಿ ನರೇಂದ್ರ ಮೋದಿ ಹೇಳಿದ ಮಾತಿನಿಂದ ಇಂದು ಪಾಕಿಸ್ತಾನಕ್ಕೆ ನಡುಕು ಹುಟ್ಟಿದೆ. ಪಾಕಿಸ್ತಾನದಲ್ಲಿ ಹೈ ಅರ್ಲ್ಟ್‌ ಸೂಚಿಸಲಾಗಿದೆ. ಯುದ್ಧದ ಸ್ಥಿತಿ ಇಂದು ಪಾಕಿಸ್ತಾನದಲ್ಲಿ ಎದುರಾಗಿದೆ. ನರೇಂದ್ರ ಮೋದಿ ಅವರು ಪಾಕಿಸ್ತಾನಕ್ಕೆ ಸೂಕ್ತ ಸಮಯಕ್ಕೆ ಉತ್ತರ ನೀಡುತ್ತಾರೆ. ಆರ್ಥಿಕ ಸ್ಥಿತಿ ಹಾಳು ಮಾಡುತ್ತಿದ್ದ ಪಾಕ್‌ಗೆ ಉತ್ತರ ನೀಡಿದ್ದಾರೆ. ಇಂದು ವಿಶ್ವದಲ್ಲಿ ಭಾರತದ ಆರ್ಥಿಕ ಸ್ಥಿತಿ ಸುಧಾರಿಸಿದ್ದು, ಪಾಕ್‌ ಆರ್ಥಿಕ ಸ್ಥಿತಿ ಅಲ್ಲೇ ಇದೆ. ಇಂತಹ ದೇಶ ಭಾರತ ದೇಶದೊಂದಿಗೆ ಯುದ್ಧ ಮಾಡುವ ಶಕ್ತಿ ಇದೇಯೇ ಎಂದು ಪ್ರಶ್ನಿಸಿದರು.

ಪ್ರಧಾನಿ ಮೋದಿ ಅವರಿಗೆ ಯಾಕೆ ಓಟ್‌ ಮಾಡಬೇಕು ಎಂಬುದನ್ನು ಪ್ರತಿಯೊಬ್ಬರು ತಿಳಿದುಕೊಳ್ಳಬೇಕು. ಭಾರತದ ಗ್ರಾಮೀಣ ಭಾಗದ ಪ್ರತಿಯೊಬ್ಬರಿಗೆ ಖಾತೆ ಇರಬೇಕು ಎಂದು 33 ಕೋಟಿ ಹೊಸ ಖಾತೆ ತೆರೆದ ಕೀರ್ತಿ ಮೋದಿ ಅವರಿಗೆ ಸಲ್ಲುತ್ತದೆ. 3 ಕೋಟಿಗೂ ಅಧಿಕ ನಕಲಿ ಗ್ಯಾಸ್‌ ಸಂಪರ್ಕ ಕಡಿತಗೊಂಡಿದೆ. ಮೂರು ಲಕ್ಷ ನಕಲಿ ಕಂಪನಿಗಳು ಬಂದ್‌, ಆಧಾರ್‌ ಲಿಂಕ್‌ ಮಾಡಿದ ಕಾರಣ ನಕಲಿ ಖಾತೆಗಳು ಬಂದ್‌ ಆದವು ಎಂದು ವಿವರಿಸಿದರು. ಯಾವುದೇ ಯೋಜನೆ ಮಧ್ಯವರ್ತಿಗಳು ಇಲ್ಲದೇ ಎಲ್ಲಾ ಯೋಜನೆಗಳ ಲಾಭ ಪಡೆಯಲು ನೇರ ಖಾತೆಗೆ ಹಾಕುವ ಕಾರ್ಯ ಮಾಡಿದ್ದಾರೆ. ಮಧ್ಯವರ್ತಿಗಳ ಹಾವಳಿಗೆ ತಡೆ ಹಾಕಿ ಸರ್ಕಾರದ ಹಣ ನೇರವಾಗಿ ಫಲಾನುಭವಿಗೆ ಮುಟ್ಟಿಸುವ ಕೆಲಸ ಮಾಡಿದ್ದಾರೆ ಎಂದರು.

ಆಯುಷ್ಮಾನ್‌ ಯೋಜನೆ ಇಂದು ಬಡವರ ಪಾಲಿಗೆ ಶ್ರೀರಕ್ಷೆಯಾಗಿದೆ. ಅನಾರೋಗ್ಯ ಸಮಯದಲ್ಲಿ ಬಡವರು ಹಣಕ್ಕಾಗಿ ಪರದಾಡುವ ಸ್ಥಿತಿ ತಿಳಿದ ಮೋದಿ ಅವರು ಯೋಜನೆ ಅನುಷ್ಠಾನಗೊಳಿಸಿ ಬಡವರ ಆರೋಗ್ಯದ ಕಡೆಗೆ ಕಾಳಜಿ ವಹಿಸಿದ್ದಾರೆ. ಓಟ್‌ ಹಾಕುವ ಮುನ್ನ ಪ್ರತಿಯೊಬ್ಬರು ಮೂರು ಪ್ರಶ್ನೆಗೆ ಉತ್ತರ ಪಡೆದುಕೊಳ್ಳಬೇಕು. ನಾವು ಪಕ್ಷಕ್ಕೆ ಮತ ಹಾಕಬೇಕೊ ಅಥವಾ ದೇಶಕ್ಕೆ ಮತಹಾಕಬೇಕೊ ಎಂದು ತಿಳಿದುಕೊಳ್ಳಿ. ಪಕ್ಷಕ್ಕೆ ಮತ ಹಾಕಬೇಡಿ, ದೇಶಕ್ಕೆ ಹಾಕಬೇಕು. ಪ್ರಧಾನಿ ಮೋದಿ ದೇಶಕ್ಕಾಗಿ ಇದ್ದಾರೆ. ಅವರಿಗಾಗಿ ಪ್ರತಿಯೊಬ್ಬರು ಮತ ಹಾಕಬೇಕು ಎಂದು ಹೇಳಿದರು.

ಟಾಪ್ ನ್ಯೂಸ್

Ramakrishna Mission: ರಾಮಕೃಷ್ಣ ಮಠ, ಮಿಷನ್‌ನ ಅಧ್ಯಕ್ಷರಾಗಿ ಕನ್ನಡಿಗ ಸ್ವಾಮೀಜಿ ಆಯ್ಕೆ

Ramakrishna Mission: ರಾಮಕೃಷ್ಣ ಮಠ, ಮಿಷನ್‌ನ ಅಧ್ಯಕ್ಷರಾಗಿ ಕನ್ನಡಿಗ ಸ್ವಾಮೀಜಿ ಆಯ್ಕೆ

Sam Pitroda: ಪಿತ್ರೋಡಾ ಹೇಳಿಕೆ, ನಮ್ಮ ಅಭಿಪ್ರಾಯ ಅಲ್ಲ: ಕಾಂಗ್ರೆಸ್‌

Sam Pitroda: ಪಿತ್ರೋಡಾ ಹೇಳಿಕೆ, ನಮ್ಮ ಅಭಿಪ್ರಾಯ ಅಲ್ಲ: ಕಾಂಗ್ರೆಸ್‌

Lok Sabha Election: ಸೀನಿಯರ್‌ ಖೂಬಾಗೆ ಜ್ಯೂನಿಯರ್‌ ಖಂಡ್ರೆ ಸವಾಲು

Lok Sabha Election: ಸೀನಿಯರ್‌ ಖೂಬಾಗೆ ಜ್ಯೂನಿಯರ್‌ ಖಂಡ್ರೆ ಸವಾಲು

Vote: ಉದಾಸೀನ ಮಾಡದಿರಿ, ತಪ್ಪದೇ ಮತ ಹಾಕಿ…

Vote: ಉದಾಸೀನ ಮಾಡದಿರಿ, ತಪ್ಪದೇ ಮತ ಹಾಕಿ…

ರಕ್ಷಣೆ: ಸ್ವಾವಲಂಬನೆಯತ್ತ ಭಾರತದ ದೃಢ ಹೆಜ್ಜೆ

ರಕ್ಷಣೆ: ಸ್ವಾವಲಂಬನೆಯತ್ತ ಭಾರತದ ದೃಢ ಹೆಜ್ಜೆ

yaksh

Kundapura: ಕಳಚಿದ ಕೊಂಡಿ: ಭಾಗವತ ಸುಬ್ರಹ್ಮಣ್ಯ ಧಾರೇಶ್ವರ ಇನ್ನಿಲ್ಲ

Lok Sabha Election 2024; ನಿಮ್ಮ ಮತವನ್ನು ಮಾರಿಕೊಳ್ಳಬೇಡಿ: ಗಣ್ಯರ ಮನವಿ

Lok Sabha Election 2024; ನಿಮ್ಮ ಮತವನ್ನು ಮಾರಿಕೊಳ್ಳಬೇಡಿ: ಗಣ್ಯರ ಮನವಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Lok Sabha Election: ಸೀನಿಯರ್‌ ಖೂಬಾಗೆ ಜ್ಯೂನಿಯರ್‌ ಖಂಡ್ರೆ ಸವಾಲು

Lok Sabha Election: ಸೀನಿಯರ್‌ ಖೂಬಾಗೆ ಜ್ಯೂನಿಯರ್‌ ಖಂಡ್ರೆ ಸವಾಲು

16

ನೀತಿ ಸಂಹಿತೆ ನಡುವೆಯೂ ರಾಜ್ಯಕ್ಕೆ ನೆರವು ಎನ್ನುವ ಬಿಜೆಪಿಗೆ ನಾಚಿಕೆ ಇಲ್ಲವೇ? – ಖಂಡ್ರೆ

Minchu

Rain; ಬೀದರ್,ಕೊಪ್ಪಳದಲ್ಲಿ ಸಿಡಿಲಿನ ಆರ್ಭಟಕ್ಕೆ ಇಬ್ಬರು ಮೃತ್ಯು

Bidar; ಪ್ರೇಯಸಿ ಮದುವೆ ದಿನವೇ ಪ್ರಿಯಕರನ ಶವ ಪತ್ತೆ

Bidar; ಪ್ರೇಯಸಿ ಮದುವೆ ದಿನವೇ ಪ್ರಿಯಕರನ ಶವ ಪತ್ತೆ

rape

Bidar; ಯುವಕನಿಂದ ಅಪ್ರಾಪ್ತ ವಯಸ್ಕಳ ರೇಪ್

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Ramakrishna Mission: ರಾಮಕೃಷ್ಣ ಮಠ, ಮಿಷನ್‌ನ ಅಧ್ಯಕ್ಷರಾಗಿ ಕನ್ನಡಿಗ ಸ್ವಾಮೀಜಿ ಆಯ್ಕೆ

Ramakrishna Mission: ರಾಮಕೃಷ್ಣ ಮಠ, ಮಿಷನ್‌ನ ಅಧ್ಯಕ್ಷರಾಗಿ ಕನ್ನಡಿಗ ಸ್ವಾಮೀಜಿ ಆಯ್ಕೆ

Sam Pitroda: ಪಿತ್ರೋಡಾ ಹೇಳಿಕೆ, ನಮ್ಮ ಅಭಿಪ್ರಾಯ ಅಲ್ಲ: ಕಾಂಗ್ರೆಸ್‌

Sam Pitroda: ಪಿತ್ರೋಡಾ ಹೇಳಿಕೆ, ನಮ್ಮ ಅಭಿಪ್ರಾಯ ಅಲ್ಲ: ಕಾಂಗ್ರೆಸ್‌

Lok Sabha Election: ಸೀನಿಯರ್‌ ಖೂಬಾಗೆ ಜ್ಯೂನಿಯರ್‌ ಖಂಡ್ರೆ ಸವಾಲು

Lok Sabha Election: ಸೀನಿಯರ್‌ ಖೂಬಾಗೆ ಜ್ಯೂನಿಯರ್‌ ಖಂಡ್ರೆ ಸವಾಲು

Vote: ಉದಾಸೀನ ಮಾಡದಿರಿ, ತಪ್ಪದೇ ಮತ ಹಾಕಿ…

Vote: ಉದಾಸೀನ ಮಾಡದಿರಿ, ತಪ್ಪದೇ ಮತ ಹಾಕಿ…

ರಕ್ಷಣೆ: ಸ್ವಾವಲಂಬನೆಯತ್ತ ಭಾರತದ ದೃಢ ಹೆಜ್ಜೆ

ರಕ್ಷಣೆ: ಸ್ವಾವಲಂಬನೆಯತ್ತ ಭಾರತದ ದೃಢ ಹೆಜ್ಜೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.