ಕಾರಂಜಾದಿಂದ ನೀರು ಬಿಡುವುದೇ ಜಿಲ್ಲಾಡಳಿತ?


Team Udayavani, Feb 21, 2019, 11:52 AM IST

1.jpg

ಔರಾದ: ಕಾರಂಜಾ ಜಲಾಶಯದಿಂದ ತಾಲೂಕಿಗೆ ನೀರು ಸರಬರಾಜು ಮಾಡುವ ವಿಷಯದಲ್ಲಿ ಜಿಲ್ಲಾಡಳಿತ ಮೌನ ವಹಿಸಿದೆ. ಕಳೆದೆರಡು ವರ್ಷಗಳಿಂದ ಭೀಕರ ಬರದಿಂದ ನರಳುತ್ತಿರುವ ಜನರು ಕುಡಿಯುವ ನೀರಿಗಾಗಿ ಪರಿತಪಿಸುತ್ತಿದ್ದರೆ, ರೈತರು ಜಾನುವಾರುಗಳ ಮೇವಿಗಾಗಿ ಅಕ್ಷರಶಃ ಕಂಗಾಲಾಗಿದ್ದಾರೆ. ಆದರೆ ಸಮಸ್ಯೆಗೆ ಸ್ಪಂದಿಸಬೇಕಾದ ಜಿಲ್ಲಾಡಳಿತ ಸುಮ್ಮನೆ ಕುಳಿತಿದೆ.

ಕಾರಂಜಾ ಜಲಾಶಯದಿಂದ ಔರಾದ ತಾಲೂಕಿನ ಸಂಗಮ ಗ್ರಾಮದಿಂದ ಕಂದಗೂಳ ಗ್ರಾಮದವರೆಗೆ ನೀರು ಬಿಡುವಂತೆ ಆಗ್ರಹಿಸಿ ರೈತ ಸಂಘದ ಸದಸ್ಯರು ಕೌಠಾ ಹಾಗೂ ಕಂದಗೂಳ ಗ್ರಾಮದಲ್ಲಿನ ಸೇತುವೆ ಮೇಲೆ ಎರಡು ಕಡೆಗೂ ಏಕಕಾಲಕ್ಕೆ ರಸ್ತೆ ತಡೆ ಮಾಡಿದ್ದರು. ಅಲ್ಲದೇ ಜಿಲ್ಲಾಧಿಕಾರಿ ಕಚೇರಿ ಮುಂದೆಯೂ ಪ್ರತಿಭಟನೆ ನಡೆಸಿದ್ದರು. ಆಗ ಜಿಲ್ಲಾಧಿಕಾರಿಗಳು ಹಾಗೂ ಸಹಾಯಕ ಆಯುಕ್ತರು ನೀರು ಬಿಡುವುದಾಗಿ ಭರವಸೆ ನೀಡಿದ್ದರು. ಆದರೆ ಭರವಸೆ ನೀಡಿ ಮೂರು ತಿಂಗಳು ಕಳೆದರೂ ಇಂದಿಗೂ ಹನಿ ನೀರು ಬಂದಿಲ್ಲ.

ತಾರತಮ್ಯ: ಕಾರಂಜಾ ಜಲಾಶಯದಿಂದ ಜಿಲ್ಲಾಡಳಿತ ಜಿಲ್ಲೆಯ ಭಾಲ್ಕಿ ತಾಲೂಕಿನವರೆಗೆ ಎರಡು ಬಾರಿ ನೀರು ಬಿಟ್ಟಿದೆ. ಅದರೆ ಗಡಿ ತಾಲೂಕಿಗೆ ಇಲ್ಲಿಯವರೆಗೂ ಒಮ್ಮೆಯೂ ನೀರು ಬಿಡದಿರುವುದು ಹಲವು ಸಂಶಯಗಳಿಗೆ ಎಡೆಮಾಡಿಕೊಟ್ಟಿದೆ. ಜಲಾಶಯದಿಂದ ನೀರು ಬಿಟ್ಟರೆ ನದಿ ಅಕ್ಕಪಕ್ಕದ ಗ್ರಾಮಸ್ಥರಿಗೆ ನೀರಿನ ಸಮಸ್ಯೆಯಿಂದ ಮುಕ್ತಿ ಸಿಗುತ್ತದೆ. ಅಲ್ಲದೇ ಔರಾದ ಪಟ್ಟಣಕ್ಕೂ ನೀರಿನ ಸಮಸ್ಯೆಯಿಂದ ಅಲ್ಪ ಮಟ್ಟಿನ ಪರಿಹಾರ ಸಿಗಬಹುದು ಎನ್ನುತ್ತಾರೆ ಕ್ಷೇತ್ರದ ಜನರು.
 
ಶಾಸಕರ ಮನವಿಗಿಲ್ಲ ಬೆಲೆ: ಶಾಸಕ ಪ್ರಭು ಚವ್ಹಾಣ ತಾಲೂಕಿನ ಜನರ ಸ್ಥಿತಿ ನೋಡಿ ಕಾರಂಜಾ ಜಲಾಶಯದಿಂದ ಮಾಂಜ್ರಾ ನದಿಗೆ ನೀರು ಬಿಡುವಂತೆ ಜಿಲ್ಲಾಧಿಕಾರಿಗೆ ಎರಡು ಹಾಗೂ ಪ್ರಾದೇಶಿಕ ಆಯುಕ್ತರಿಗೆ ಹಾಗೂ ತಾಲೂಕು ದಂಡಾ ಧಿಕಾರಿಗೆ ಒಂದು ಬಾರಿ ಲಿಖೀತ ರೂಪದಲ್ಲಿ ಮನವಿ ಸಲ್ಲಿಸಿದ್ದಾರೆ. ಆದರೂ ಯಾವುದೇ ಪ್ರಯೋಜನವಾಗಿಲ್ಲ

ಕಾರಂಜಾ ಜಲಾಶಯದಿಂದ ತಾಲೂಕಿಗೆ ನೀರು ಬಿಡುವಂತೆ ಜಿಲ್ಲಾಧಿಕಾರಿ ಹಾಗೂ ಪ್ರಾದೇಶಿಕ ಆಯುಕ್ತರಿಗೂ ಪತ್ರ ಬರೆಯಲಾಗಿದೆ. ಎರಡು ದಿನಗಳಲ್ಲಿ ಕಾರಂಜಾ ಜಲಾಶಯದಿಂದ ಔರಾದ ತಾಲೂಕಿಗೆ ನೀರು ಬಂದರೆ ಸರಿ. ಇಲ್ಲವಾದರೆ ಜಿಲ್ಲಾಧಿಕಾರಿ ಕಚೇರಿ ಎದುರು ಧರಣಿ ಸತ್ಯಾಗ್ರಹ ಮಾಡುತ್ತೇನೆ.
 ಪ್ರಭು ಚವ್ಹಾಣ, ಔರಾದ ಶಾಸಕ

ಜನರ ಸಮಸ್ಯೆಗೆ ಸ್ಪಂದಿಸುವ ಮನಸ್ಸು ಸರ್ಕಾರ- ಲ್ಲಾಡಳಿತಕ್ಕೆ ಇಲ್ಲವಾಗಿದೆ. ಕಾರಂಜಾ ಜಲಾಶಯದಿಂದ ನೀರು ಬಿಟ್ಟರೆ ತಾಲೂಕಿನ ಶೇ.40 ನೀರಿನ ಸಮಸ್ಯೆಗೆ ಮುಕ್ತಿ ಸಿಗುತ್ತದೆ. ಈ ಹಿಂದೆ ಕೌಠಾ ಹಾಗೂ ಕಂದಗೂಳ ಗ್ರಾಮದ ಸೇತುವೆ ಮೇಲೆ ಪ್ರತಿಭಟನೆ ನಡೆಸಿದಾಗ ಜಿಲ್ಲಾ ಧಿಕಾರಿ ನೀರು ಬಿಡುವ ಭರವಸೆ ನೀಡಿದ್ದರು. ಆದರೆ ಮೂರು ತಿಂಗಳಾದ್ರೂ ಹನಿ ನೀರು ಬಂದಿಲ್ಲ.
 ಶ್ರೀಮಂತ ಬಿರಾದರ, ರೈತ ಸಂಘದ ತಾಲೂಕು ಅಧ್ಯಕ್ಷ

„ರವೀಂದ್ರ ಮುಕ್ತೇದಾರ

ಟಾಪ್ ನ್ಯೂಸ್

Dakshina kannada: ದ.ಕ.: 18,18,127 ಮತದಾರರ ಕೈಯಲ್ಲಿ 9 ಅಭ್ಯರ್ಥಿಗಳ ಭವಿಷ್ಯ

Dakshina kannada: ದ.ಕ.: 18,18,127 ಮತದಾರರ ಕೈಯಲ್ಲಿ 9 ಅಭ್ಯರ್ಥಿಗಳ ಭವಿಷ್ಯ

ಹಣ ಹಂಚಿ ಚುನಾವಣೆ ನಡೆಸಲು ಅವಕಾಶ ಮಾಡಿಕೊಡಿ… ಚುನಾವಣಾ ಆಯೋಗದ ವಿರುದ್ಧ HDK ಕಿಡಿ

ಹಣ ಹಂಚಿ ಚುನಾವಣೆ ನಡೆಸಲು ಅವಕಾಶ ಮಾಡಿಕೊಡಿ… ಚುನಾವಣಾ ಆಯೋಗದ ವಿರುದ್ಧ HDK ಕಿಡಿ

Bantwal: ಮತದಾನ ಮಾಡಿ ಮದುವೆ ಮುಹೂರ್ತಕ್ಕೆ ಅಣಿಯಾದ ನವವಧು

Bantwal: ಮದುವೆ ಮುಹೂರ್ತಕ್ಕೂ ಮೊದಲೇ ಮತದಾನ ಹಕ್ಕು ಚಲಾಯಿಸಿದ ನವವಧು

Election: ಮತದಾನ ಆರಂಭವಾದ 2 ಗಂಟೆಯಲ್ಲೇ ಉಡುಪಿ ಚಿಕ್ಕಮಗಳೂರು ಕ್ಷೇತ್ರದಲ್ಲಿ 12.82% ಮತದಾನ

Election: ಮತದಾನ ಆರಂಭವಾದ 2 ಗಂಟೆಯಲ್ಲೇ ಉಡುಪಿ ಚಿಕ್ಕಮಗಳೂರು ಕ್ಷೇತ್ರದಲ್ಲಿ 12.82% ಮತದಾನ

Singapore ಏರ್‌ ಲೈನ್ಸ್‌ ಪೈಲಟ್ ನಂತೆ ಪೋಸ್‌ ಕೊಟ್ಟ ಉತ್ತರಪ್ರದೇಶ ಯುವಕನ ಬಂಧನ!

Singapore ಏರ್‌ ಲೈನ್ಸ್‌ ಪೈಲಟ್ ನಂತೆ ಪೋಸ್‌ ಕೊಟ್ಟ ಉತ್ತರಪ್ರದೇಶ ಯುವಕನ ಬಂಧನ!

Lok Sabha 2ನೇ ಹಂತ; ದಾಖಲೆ ಸಂಖ್ಯೆಯಲ್ಲಿ ಭಾಗವಹಿಸಲು ಪ್ರಧಾನಿ ಮೋದಿ ಕನ್ನಡದಲ್ಲಿ ಮನವಿ

Lok Sabha 2ನೇ ಹಂತ; ದಾಖಲೆ ಸಂಖ್ಯೆಯಲ್ಲಿ ಭಾಗವಹಿಸಲು ಪ್ರಧಾನಿ ಮೋದಿ ಕನ್ನಡದಲ್ಲಿ ಮನವಿ

Mangaluru: ಕಪಿತಾನಿಯೋ ಮತದಾನ ಕೇಂದ್ರದ ಬಳಿ ಪೊಲೀಸರೊಂದಿಗೆ‌ ಕಾರ್ಯಕರ್ತರ ಘರ್ಷಣೆ…

Mangaluru: ಕಪಿತಾನಿಯೋ ಮತದಾನ ಕೇಂದ್ರದ ಬಳಿ ಪೊಲೀಸರೊಂದಿಗೆ‌ ಕಾರ್ಯಕರ್ತರ ಘರ್ಷಣೆ…


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

12

B.S.Yediyurappa: ಶಾಸಕ ಪ್ರಭು ಚವ್ಹಾಣ ಹೆಸರು ಹೇಳುತ್ತಿದ್ದಂತೆ ಬಿಎಸ್‌ವೈ ಗರಂ

1-wqqwewqe

BJP; ಖೂಬಾ ಮತ್ತೊಮ್ಮೆ ಸಚಿವರಾಗ್ತಾರೆ : ಔರಾದ್ ನಲ್ಲಿ ಯಡಿಯೂರಪ್ಪ ಘೋಷಣೆ

siddaramaiah

Bidar; ನೇಹಾ ಪ್ರಕರಣದಲ್ಲಿ ಬಿಜೆಪಿ ರಾಜಕೀಯ‌ ಮಾಡುವುದು ಸರಿಯಲ್ಲ: ಸಿಎಂ ಸಿದ್ಧರಾಮಯ್ಯ‌

Lok Sabha Election: ಸೀನಿಯರ್‌ ಖೂಬಾಗೆ ಜ್ಯೂನಿಯರ್‌ ಖಂಡ್ರೆ ಸವಾಲು

Lok Sabha Election: ಸೀನಿಯರ್‌ ಖೂಬಾಗೆ ಜ್ಯೂನಿಯರ್‌ ಖಂಡ್ರೆ ಸವಾಲು

16

ನೀತಿ ಸಂಹಿತೆ ನಡುವೆಯೂ ರಾಜ್ಯಕ್ಕೆ ನೆರವು ಎನ್ನುವ ಬಿಜೆಪಿಗೆ ನಾಚಿಕೆ ಇಲ್ಲವೇ? – ಖಂಡ್ರೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Dakshina kannada: ದ.ಕ.: 18,18,127 ಮತದಾರರ ಕೈಯಲ್ಲಿ 9 ಅಭ್ಯರ್ಥಿಗಳ ಭವಿಷ್ಯ

Dakshina kannada: ದ.ಕ.: 18,18,127 ಮತದಾರರ ಕೈಯಲ್ಲಿ 9 ಅಭ್ಯರ್ಥಿಗಳ ಭವಿಷ್ಯ

ಹಣ ಹಂಚಿ ಚುನಾವಣೆ ನಡೆಸಲು ಅವಕಾಶ ಮಾಡಿಕೊಡಿ… ಚುನಾವಣಾ ಆಯೋಗದ ವಿರುದ್ಧ HDK ಕಿಡಿ

ಹಣ ಹಂಚಿ ಚುನಾವಣೆ ನಡೆಸಲು ಅವಕಾಶ ಮಾಡಿಕೊಡಿ… ಚುನಾವಣಾ ಆಯೋಗದ ವಿರುದ್ಧ HDK ಕಿಡಿ

ದೇಶದ ಭದ್ರತೆ, ಅಭಿವೃದ್ಧಿ, ಆರ್ಥಿಕತೆಗಾಗಿ ಮೋದಿ ಬೆಂಬಲಿಸಲು ಕೋಟ ಗೆಲ್ಲಿಸಿ:ಕಿಶೋರ್‌ಕುಮಾರ್‌

ದೇಶದ ಭದ್ರತೆ, ಅಭಿವೃದ್ಧಿ, ಆರ್ಥಿಕತೆಗಾಗಿ ಮೋದಿ ಬೆಂಬಲಿಸಲು ಕೋಟ ಗೆಲ್ಲಿಸಿ:ಕಿಶೋರ್‌ಕುಮಾರ್‌

Bantwal: ಮತದಾನ ಮಾಡಿ ಮದುವೆ ಮುಹೂರ್ತಕ್ಕೆ ಅಣಿಯಾದ ನವವಧು

Bantwal: ಮದುವೆ ಮುಹೂರ್ತಕ್ಕೂ ಮೊದಲೇ ಮತದಾನ ಹಕ್ಕು ಚಲಾಯಿಸಿದ ನವವಧು

Election: ಮತದಾನ ಆರಂಭವಾದ 2 ಗಂಟೆಯಲ್ಲೇ ಉಡುಪಿ ಚಿಕ್ಕಮಗಳೂರು ಕ್ಷೇತ್ರದಲ್ಲಿ 12.82% ಮತದಾನ

Election: ಮತದಾನ ಆರಂಭವಾದ 2 ಗಂಟೆಯಲ್ಲೇ ಉಡುಪಿ ಚಿಕ್ಕಮಗಳೂರು ಕ್ಷೇತ್ರದಲ್ಲಿ 12.82% ಮತದಾನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.