ಸೈರಾ ನರಸಿಂಹ ರೆಡ್ಡಿ ಚಿತ್ರೀಕರಣಕ್ಕೆ ವಿರೋಧ
Team Udayavani, Feb 25, 2019, 8:50 AM IST
ಬೀದರ: ಸುರೇಂದ್ರ ರೆಡ್ಡಿ ನಿರ್ಮಾಣದ ಸೈರಾ ನರಸಿಂಹ ರೆಡ್ಡಿ ತೆಲುಗು ಚಲನಚಿತ್ರದ ಚಿತ್ರೀಕರಣಕ್ಕೆ ನಗರದ ಮುಸ್ಲಿಂ ಸಮುದಾಯದ ಜನರು ವಿರೋಧಿಸಿದ ಘಟನೆ ಶನಿವಾರ ರಾತ್ರಿ ನಡೆದಿದೆ.
ಸೈರಾ ಚಿತ್ರದಲ್ಲಿ ಮೆಗಾಸ್ಟಾರ್ ಚಿರಂಜೀವಿ, ಸುದೀಪ, ವಿಜಯ್ ಸೇತುಪಥಿ, ನಯನ ತಾರಾ, ತಮನ್ನಾ ಸೇರಿದಂತೆ ಇತರೆ ನಟರು ನಟಿಸುತ್ತಿದ್ದು, ಪೌರಾಣಿಕ ಕಥೆ ಹೊಂದಿದ ಚಿತ್ರ ನಿರ್ಮಾಣಕ್ಕೆ ಸಕಲ ಸಿದ್ಧತೆ ಮಾಡಿಕೊಂಡಿದ್ದ ಚಿತ್ರ ತಂಡಕ್ಕೆ ವಿರೋಧವ್ಯಕ್ತಪಡಿಸಿ ಚಿತ್ರಿಕರಣ ಸ್ಥಗಿತಗೊಳ್ಳುವಂತೆ ಮಾಡಿದ್ದಾರೆ.
ಇಲಾಖೆಯಿಂದ ಪರವಾನಗಿ ಪಡೆದು ನಗರದ ಬಹುಮನಿ ಸುಲ್ತಾನರ ಕೋಟೆಯಲ್ಲಿ ಚಿತ್ರಿಕರಣಕ್ಕೆ ಚಿತ್ರ ತಂಡ ಮುಂದಾಗಿತ್ತು ಎನ್ನಲಾಗಿದೆ. ಆದರೆ, ಕೋಟೆಯಲ್ಲಿನ ಮಸೀದಿಯಲ್ಲಿ ಚಿತ್ರ ತಂಡದವರು ಮೂರ್ತಿ ಇರಿಸಿದ್ದಾರೆ ಎಂದು ಆರೋಪಿಸಿ ಮುಸ್ಲಿಂ ಯುವಕರು ಆಕ್ರೋಶ ವ್ಯಕ್ತಪಡಿಸಿದರು. ಅಲ್ಲದೆ ಮೂರ್ತಿ ತೆರವುಗೊಳಿಸುವಂತೆ ಪ್ರತಿಭಟನೆ ನಡೆಸಿದರು. ಜಿಲ್ಲಾಧಿಕಾರಿ ನಿವಾಸದ ಎದುರು ಮುಖಂಡರು ಸೇರಿ ಚಿತ್ರಿಕರಣ ಸ್ಥಗಿತಗೊಳ್ಳಿಸುವಂತೆ
ಆಗ್ರಹಿಸಿದರು. ಯಾವುದೇ ಧರ್ಮದ ಭಾವನೆಗಳಿಗೆ ಧಕ್ಕೆ ತರುವ ಉದ್ದೇಶ ಚಿತ್ರ ತಂಡಕ್ಕೆ ಇಲ್ಲ ಎಂದು ಮನವರಿಕೆ ಮಾಡಿದ ಚಿತ್ರ ತಂಡ ಜನರ ಆಕ್ರೋಶದ ಹಿನ್ನೆಲೆಯಲ್ಲಿ ಅಲ್ಲಿಂದ ತೆರಳಿರುವುದಾಗಿ ಮೂಲಗಳು ತಿಳಿಸಿವೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
B.S.Yediyurappa: ಶಾಸಕ ಪ್ರಭು ಚವ್ಹಾಣ ಹೆಸರು ಹೇಳುತ್ತಿದ್ದಂತೆ ಬಿಎಸ್ವೈ ಗರಂ
BJP; ಖೂಬಾ ಮತ್ತೊಮ್ಮೆ ಸಚಿವರಾಗ್ತಾರೆ : ಔರಾದ್ ನಲ್ಲಿ ಯಡಿಯೂರಪ್ಪ ಘೋಷಣೆ
Bidar; ನೇಹಾ ಪ್ರಕರಣದಲ್ಲಿ ಬಿಜೆಪಿ ರಾಜಕೀಯ ಮಾಡುವುದು ಸರಿಯಲ್ಲ: ಸಿಎಂ ಸಿದ್ಧರಾಮಯ್ಯ
Lok Sabha Election: ಸೀನಿಯರ್ ಖೂಬಾಗೆ ಜ್ಯೂನಿಯರ್ ಖಂಡ್ರೆ ಸವಾಲು
ನೀತಿ ಸಂಹಿತೆ ನಡುವೆಯೂ ರಾಜ್ಯಕ್ಕೆ ನೆರವು ಎನ್ನುವ ಬಿಜೆಪಿಗೆ ನಾಚಿಕೆ ಇಲ್ಲವೇ? – ಖಂಡ್ರೆ