ಮಹಾಶಿವರಾತ್ರಿ ಸಂಭ್ರಮಾಚರಣೆ
Team Udayavani, Mar 5, 2019, 11:13 AM IST
ಬೀದರ: ಮಹಾಶಿವರಾತ್ರಿ ಹಬ್ಬವನ್ನು ಸೋಮವಾರ ಜಿಲ್ಲಾದ್ಯಂತ ಸಡಗರ ಸಂಭ್ರಮದಿಂದ ಆಚರಣೆ ಮಾಡಲಾಯಿತು. ಜಿಲ್ಲೆಯ ವಿವಿಧ ದೇವಸ್ಥಾನಗಳಲ್ಲಿ ಬೆಳಗ್ಗೆಯಿಂದ ಭಕ್ತಾದಿಗಳು ಸರದಿ ಸಾಲಿನಲ್ಲಿ ನಿಂತು ದೇವರ ದರ್ಶನ ಪಡೆದರು.
ಶಿವರಾತ್ರಿ ಹಿನ್ನೆಲೆಯಲ್ಲಿ ನಗರದ ಹೊರವಲಯದ ಐತಿಹಾಸಿಕ ಪುಣ್ಯ ಕ್ಷೇತ್ರವಾದ ಪಾಪನಾಶ ದೇವಸ್ಥಾನದ ಶಿವಲಿಂಗ ದರ್ಶನ ಪಡೆಯಲು ಭಕ್ತರ ದಂಡು ಹರಿದುಬಂದಿತು. ನೆರೆ ರಾಜ್ಯ ತೆಲಂಗಾಣ, ಮಹಾರಾಷ್ಟ್ರ ಅಲ್ಲದೆ, ಜಿಲ್ಲೆಯ ವಿವಿಧೆಡೆಯಿಂದ ಸಾವಿರಾರು ಭಕ್ತರು ಆಗಮಿಸಿ ಶಿವಲಿಂಗದ ದರ್ಶನ ಪಡೆದರು.
ಭಕ್ತರು ಬೆಳಗ್ಗೆಯಿಂದಲೇ ದೇವಸ್ಥಾನದತ್ತ ಹೆಚ್ಚೆ ಹಾಕಿದ್ದು, ಆವರಣದಲ್ಲಿ ಜಾತ್ರೆಯ ವಾತಾವರಣ ನಿರ್ಮಾಣವಾಗಿತ್ತು. ಆವರಣದಲ್ಲಿರುವ ಕಲ್ಯಾಣಿಯಲ್ಲಿ ಮಕ್ಕಳು, ಯುವಕರು ಸ್ನಾನ ಮಾಡಿ ಭಕ್ತಿ ಶ್ರದ್ಧೆಯಿಂದ ಇಷ್ಟಲಿಂಗ ಪೂಜೆ ಮಾಡಿದರು.
ತೆಂಗು, ಕರ್ಪೂರ, ಬಿಲ್ವಪತ್ರೆ, ಹೂವು ಮತ್ತಿತರ ಪೂಜಾ ಸಾಮಾಗ್ರಿಗಳೊಂದಿಗೆ ಗಂಟೆಗಟ್ಟಲೇ ಸಾಲಿನಲ್ಲಿ ನಿಂತು ಭಕ್ತಿ ಶ್ರದ್ಧೆಯಿಂದ ಶಿವಲಿಂಗ ದರ್ಶನ ಪಡೆದು ಪುನೀತರಾದರು. ಶಿವರಾತ್ರಿ ನಿಮಿತ್ತ ರುದ್ರಾಭಿಷೇಕ, ಭಜನೆ, ಸಂಗೀತ ಹಾಗೂ ವಿವಿಧ ಧಾರ್ಮಿಕ, ಸಂಸ್ಕೃತಿಕ ಕಾರ್ಯಕ್ರಮಗಳನ್ನು ಆಯೋಜಿಸಲಾಗಿತ್ತು.
ಶಿವರಾತ್ರಿ ಹಿನ್ನೆಲೆಯಲ್ಲಿ ಹೆಚ್ಚು ಭಕ್ತರ ಆಗಮಿಸಬಹುದು ಎಂಬ ನಿರೀಕ್ಷೆಯಲ್ಲಿ ವ್ಯಾಪಾರಿಗಳು ವಿವಿಧೆಡೆಯಿಂದ ಆಗಮಿಸಿ ತಾತ್ಕಾಲಿಕ ಅಂಗಡಿಗಳನ್ನು ತೆರೆದಿದ್ದರು. ಹೂವು, ಹಣ್ಣು, ಪೂಜಾ ಸಾಮಗ್ರಿ, ತಿನಿಸು, ಮಕ್ಕಳ ಆಟಿಕೆಗಳ ವ್ಯಾಪಾರದ ಭರಾರಟೆಯೂ ಹೆಚ್ಚಿತ್ತು.
ಬೇಸಿಗೆ ಬಿಸಿ ಹೆಚ್ಚುತ್ತಿರುವುದಿರಂದ ವಿವಿಧ ಸಂಘಟನೆಯವರು ಭಕ್ತರಿಗೆ ಕುಡಿಯುವ ನೀರು, ವಿವಿಧ ರೀತಿಯ ಪ್ರಸಾದ ವಿತರಣೆ ವ್ಯವಸ್ಥೆ ಮಾಡಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
B.S.Yediyurappa: ಶಾಸಕ ಪ್ರಭು ಚವ್ಹಾಣ ಹೆಸರು ಹೇಳುತ್ತಿದ್ದಂತೆ ಬಿಎಸ್ವೈ ಗರಂ
BJP; ಖೂಬಾ ಮತ್ತೊಮ್ಮೆ ಸಚಿವರಾಗ್ತಾರೆ : ಔರಾದ್ ನಲ್ಲಿ ಯಡಿಯೂರಪ್ಪ ಘೋಷಣೆ
Bidar; ನೇಹಾ ಪ್ರಕರಣದಲ್ಲಿ ಬಿಜೆಪಿ ರಾಜಕೀಯ ಮಾಡುವುದು ಸರಿಯಲ್ಲ: ಸಿಎಂ ಸಿದ್ಧರಾಮಯ್ಯ
Lok Sabha Election: ಸೀನಿಯರ್ ಖೂಬಾಗೆ ಜ್ಯೂನಿಯರ್ ಖಂಡ್ರೆ ಸವಾಲು
ನೀತಿ ಸಂಹಿತೆ ನಡುವೆಯೂ ರಾಜ್ಯಕ್ಕೆ ನೆರವು ಎನ್ನುವ ಬಿಜೆಪಿಗೆ ನಾಚಿಕೆ ಇಲ್ಲವೇ? – ಖಂಡ್ರೆ
MUST WATCH
ಹೊಸ ಸೇರ್ಪಡೆ
Yadgir BJP ಬೃಹತ್ ರೋಡ್ ಶೋ; ದೇಶದ ರಕ್ಷಣೆಗಾಗಿ ಮತ್ತೆ ಬೆಂಬಲಿಸಿ: ನಡ್ಡಾ
Vote; ಕರ್ನಾಟಕ ಮೊದಲ ಹಂತ: ಶೇಕಡಾವಾರು ಮತದಾನದ ವಿವರ
Chamarajanagar; ಮತದಾನ ಮಾಡಬೇಕೋ ಬೇಡವೋ ಎಂದು EVM ಗಳೇ ಧ್ವಂಸ !
EVM ಕುರಿತು ಸುಪ್ರೀಂ ತೀರ್ಪು ಪ್ರತಿಪಕ್ಷಗಳಿಗೆ ಕಪಾಳ ಮೋಕ್ಷ: ಪ್ರಧಾನಿ ಮೋದಿ
Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ