ಪೋಲಿಯೋ ಲಸಿಕೆ ಅಭಿಯಾನಕ್ಕೆ ಅಗತ್ಯ ಸಿದತೆಗೆ ಸೂಚನೆ
Team Udayavani, Mar 6, 2019, 6:28 AM IST
ಬೀದರ: ಪೋಲಿಯೋ ರೋಗ ನಿರ್ಮೂಲನೆಗೆ ಸರ್ಕಾರ ಸಾಕಷ್ಟು ಪ್ರಯತ್ನಿಸುತ್ತಿದೆ. ಅಭಿಯಾನ ದಿನದಂದು ಆರೋಗ್ಯ ಇಲಾಖೆಯೊಂದಿಗೆ ಶಿಕ್ಷಣ ಇಲಾಖೆ, ಸಿಡಿಪಿಒ, ಸಾರಿಗೆ ಸೇರಿದಂತೆ ಎಲ್ಲಾ ಇಲಾಖೆಗಳು ಸಹಕರಿಸಬೇಕು ಎಂದು ಭಾಲ್ಕಿ ತಹಶೀಲ್ದಾರ್ ಅಣ್ಣಾರಾವ್ ಪಾಟೀಲ ಹೇಳಿದರು.
ಭಾಲ್ಕಿ ತಾಲೂಕು ಆರೋಗ್ಯ ಅಧಿಕಾರಿಗಳ ಕಚೇರಿಯಲ್ಲಿ ಮಂಗಳವಾರ ನಡೆದ ಪಲ್ಸ್ ಪೋಲಿಯೋ ತಾಲೂಕು ಕಾರ್ಯಪಡೆ ಸಭೆಯಲ್ಲಿ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಪಲ್ಸ್ ಪೊಲೀಯೋ ಲಸಿಕೆ ಅಭಿಯಾನಕ್ಕಿಂತ ಮುಂಚಿತವಾಗಿ ಎಲ್ಲಾ ಸಿದ್ಧತೆಗಳನ್ನು ಮಾಡಿಕೊಳ್ಳಬೇಕು. ಎಲ್ಲಿಯೂ ಲಸಿಕೆಗೆ ಕೊರತೆಯಾಗಬಾರದು. ಯಾವೊಂದು ಮಗುವೂ ಲಸಿಕೆಯಿಂದ ವಂಚಿತರಾಗಬಾರದು ಎಂದು ನಿರ್ದೇಶನ ನೀಡಿದರು.
ತಾಲೂಕು ಆರೋಗ್ಯ ಅಧಿಕಾರಿ ಡಾ|ಶರಣಯ್ನಾ ಸ್ವಾಮಿ ಮಾತನಾಡಿ, ಪ್ರಾದೇಶಿಕ ಸಾರಿಗೆ ಇಲಾಖೆಯಿಂದ ಪ್ರತಿ ಆರೋಗ್ಯ ಕೇಂದ್ರಕ್ಕೆ ಒಂದೊಂದು ವಾಹನದ ವ್ಯವಸ್ಥೆ ಕಲ್ಪಿಸಬೇಕು. ಅಂದು ಆರೋಗ್ಯ ಕೇಂದ್ರದ ವ್ಯಾಪ್ತಿಯಲ್ಲಿ ದಿನದ 24 ಗಂಟೆಯೂ ವಿದ್ಯುತ್ ಸಂಪರ್ಕ ಇರುವಂತೆ
ಜೆಸ್ಕಾಂ ಅಧಿಕಾರಿಗಳಿಗೆ ನಿರ್ದೇಶನ ನೀಡುವಂತೆ ಕೋರಿದರು.
ತಾಲೂಕು ಶಿಕ್ಷಣಾಧಿಕಾರಿ ಶಿವಗುಂಡಪ್ಪಾ ಎಚ್.ಎಸ್., ಸಾರ್ವಜನಿಕ ಆಸ್ಪತ್ರೆಯ ಮುಖ್ಯ ವೈದ್ಯಾಧಿಕಾರಿ ಡಾ| ಟಿ.ರುಬಿನಾ, ವೈದ್ಯಾಧಿಕಾರಿ ಡಾ| ದೇವಕಿ ಖಂಡ್ರೆ, ಡಾ| ಜಗದೀಶ, ಡಾ| ನೇಹಾ ಸಮರೀನ್, ಡಾ| ಲೋಕೇಶ, ಡಾ| ಸುಕಾನಂದ, ಡಾ| ಸುಶೀಲಕುಮಾರ, ಡಾ| ಶೇಶನಾಗ,
ಡಾ|ಶರಣಬಸಪ್ಪಾ, ಡಾ|ಸ್ವಾತಿ ಪಾಟೀಲ, ಡಾ|ಅಶ್ವಿನಿ, ಡಾ| ಪ್ರಿಯಂಕಾ, ಆರೋಗ್ಯ ಇಲಾಖೆಯ ಶಕುಂತಲಾ, ಪ್ರತಿಭಾ, ಓಂಕಾರ, ವಿಶಾಲಕುಮಾರ, ತಾಲೂಕಿನ ಎಲ್ಲಾ ಹಿರಿಯ ಮತ್ತು ಕಿರಿಯ ಆರೋಗ್ಯ ಸಹಾಯಕರು ಉಪಸ್ಥಿತರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
B.S.Yediyurappa: ಶಾಸಕ ಪ್ರಭು ಚವ್ಹಾಣ ಹೆಸರು ಹೇಳುತ್ತಿದ್ದಂತೆ ಬಿಎಸ್ವೈ ಗರಂ
BJP; ಖೂಬಾ ಮತ್ತೊಮ್ಮೆ ಸಚಿವರಾಗ್ತಾರೆ : ಔರಾದ್ ನಲ್ಲಿ ಯಡಿಯೂರಪ್ಪ ಘೋಷಣೆ
Bidar; ನೇಹಾ ಪ್ರಕರಣದಲ್ಲಿ ಬಿಜೆಪಿ ರಾಜಕೀಯ ಮಾಡುವುದು ಸರಿಯಲ್ಲ: ಸಿಎಂ ಸಿದ್ಧರಾಮಯ್ಯ
Lok Sabha Election: ಸೀನಿಯರ್ ಖೂಬಾಗೆ ಜ್ಯೂನಿಯರ್ ಖಂಡ್ರೆ ಸವಾಲು
ನೀತಿ ಸಂಹಿತೆ ನಡುವೆಯೂ ರಾಜ್ಯಕ್ಕೆ ನೆರವು ಎನ್ನುವ ಬಿಜೆಪಿಗೆ ನಾಚಿಕೆ ಇಲ್ಲವೇ? – ಖಂಡ್ರೆ