ಅನಾಥ ಮಕ್ಕಳ ಬಾಳು ಬೆಳಗಿದ ಸಿದ್ಧಗಂಗಾ ಶ್ರೀ: ಪಾಟೀಲ
Team Udayavani, Mar 9, 2019, 11:12 AM IST
ಭಾಲ್ಕಿ: ಲಕ್ಷಾಂತರ ಬಡ ಮಕ್ಕಳ ತಂದೆ, ತಾಯಿ, ಗುರುವಾಗಿ ಅವರ ಬಾಳು ಬೆಳಗಿಸಿದ ಸಿದ್ಧಗಂಗಾ ಶ್ರೀಗಳು ಅನಾಥ ಮಕ್ಕಳಿಗೆ ಬೆಳಕಾಗಿದ್ದರು ಎಂದು ಸಿದ್ಧಗಂಗಾ ಮಠದ ಹಳೆ ವಿದ್ಯಾರ್ಥಿಗಳ ಹಾಗೂ ಹಿತೈಷಿಗಳ ಸಂಘದ ಜಿಲ್ಲಾ ಘಟಕದ ಅಧ್ಯಕ್ಷ ಶಿವಕುಮಾರ ಪಾಟೀಲ ತೇಗಂಪೂರ ಹೇಳಿದರು.
ತೇಗಂಪೂರ ಗ್ರಾಮದಲ್ಲಿ ನಡೆದ ಲಿಂ. ಡಾ| ಶಿವಕುಮಾರ ಮಹಾಸ್ವಾಮಿಗಳ ಪುಣ್ಯಸ್ಮರಣೆ ಮತ್ತು ಸಿದ್ಧಗಂಗಾ ಶ್ರೀ ವೃತ್ತ ಉದ್ಘಾಟನೆ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.
ಬೀದರ ಜಿಲ್ಲೆಯಲ್ಲಿ ಸಾವಿರಾರು ವಿದ್ಯಾರ್ಥಿಗಳು ಸಿದ್ಧಗಂಗಾ ಮಠದಲ್ಲಿ ವಿದ್ಯಾಭ್ಯಾಸ ಮಾಡಿ ಸಂಸ್ಕಾರವಂತರಾಗಿ ಉತ್ತಮ ಹುದ್ದೆಯಲ್ಲಿದ್ದಾರೆ ಎಂದು ಸ್ಮರಿಸಿದರು.
ಗ್ರಾಮಸ್ಥರಾದ ಶಿವಲಿಂಗಯ್ಯ ಸ್ವಾಮಿ ಮಾತನಾಡಿ, ಸಿದ್ದಗಂಗಾ ಶ್ರೀಗಳ ಸೇವೆ ನಾಡಿಗಲ್ಲದೇ ದೇಶಕ್ಕೂ ಮಾದರಿಯಾಗಿದೆ ಎಂದು ಹೇಳಿದರು. ಮಾಣಿಕರಾವ್ ಪಾಟೀಲ ಅಧ್ಯಕ್ಷತೆ ವಹಿಸಿ ಮಾತನಾಡಿದರು.
ಗೋಪಾಲ ಬಿರಾದಾರ, ದೀಲಿಪ ಪಾಟೀಲ, ಶಕುಂತಲಾ ಪಾಟೀಲ, ಹಣಮಂತ ಹುಲೆಪ್ಪ, ನವನಾಥ ಪಾಟೀಲ, ಮನೆಬಾಯಿ, ಪರೆಗಬಾಯಿ ಚೆನ್ನಪ್ಪ ಉಪಸ್ಥಿತರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
B.S.Yediyurappa: ಶಾಸಕ ಪ್ರಭು ಚವ್ಹಾಣ ಹೆಸರು ಹೇಳುತ್ತಿದ್ದಂತೆ ಬಿಎಸ್ವೈ ಗರಂ
BJP; ಖೂಬಾ ಮತ್ತೊಮ್ಮೆ ಸಚಿವರಾಗ್ತಾರೆ : ಔರಾದ್ ನಲ್ಲಿ ಯಡಿಯೂರಪ್ಪ ಘೋಷಣೆ
Bidar; ನೇಹಾ ಪ್ರಕರಣದಲ್ಲಿ ಬಿಜೆಪಿ ರಾಜಕೀಯ ಮಾಡುವುದು ಸರಿಯಲ್ಲ: ಸಿಎಂ ಸಿದ್ಧರಾಮಯ್ಯ
Lok Sabha Election: ಸೀನಿಯರ್ ಖೂಬಾಗೆ ಜ್ಯೂನಿಯರ್ ಖಂಡ್ರೆ ಸವಾಲು
ನೀತಿ ಸಂಹಿತೆ ನಡುವೆಯೂ ರಾಜ್ಯಕ್ಕೆ ನೆರವು ಎನ್ನುವ ಬಿಜೆಪಿಗೆ ನಾಚಿಕೆ ಇಲ್ಲವೇ? – ಖಂಡ್ರೆ