ಅಂಗನವಾಡಿ ಕಾರ್ಯಕರ್ತೆಯರ ಸಮಸ್ಯೆ ಬಗೆಹರಿಸಲು ಆಗ್ರಹ
Team Udayavani, Mar 17, 2019, 11:01 AM IST
ಬೀದರ: ಅಂಗನವಾಡಿ ಕಾರ್ಯಕರ್ತೆಯರ ಮತ್ತು ಸಹಾಯಕಿಯರ ಸ್ಥಳೀಯ ಸಮಸ್ಯೆಗಳನ್ನು ಬಗೆಹರಿಸುವಂತೆ ಒತ್ತಾಯಿಸಿ ಕರ್ನಾಟಕ ರಾಜ್ಯ ಅಂಗನವಾಡಿ ನೌಕರರ ಸಂಘದಿಂದ ನಗರದಲ್ಲಿ ಪ್ರತಿಭಟನೆ ನಡೆಸಲಾಯಿತು.
ಅಂಗನವಾಡಿ ಸಿಬ್ಬಂದಿಗೆ ಐದು ತಿಂಗಳಿಂದ ಗೌರವ ಧನ ಪಾವತಿಯಾಗಿಲ್ಲ. ಕೂಡಲೆ ಗೌರವ ಧನ ನೀಡಬೇಕು. ಗುಣಮಟ್ಟದ ಆಹಾರ ಪದಾರ್ಥ, ಸಾಮಗ್ರಿಗಳನ್ನು ಸರಿಯಾದ ಸಮಯಕ್ಕೆ ಸರಬರಾಜು ಮಾಡಬೇಕು. ಅಂಗನವಾಡಿ ಕೇಂದ್ರಗಳ ಬಾಡಿಗೆ ಕಳೆದ ವರ್ಷ ಏಪ್ರಿಲ್ ತಿಂಗಳಿಂದ ಬಾಕಿ ಇದ್ದು, ಕೂಡಲೆ ಬಾಡಿಗೆ ಪಾವತಿ ಮಾಡಬೇಕು. ಅಂಗನವಾಡಿ ಸಿಬ್ಬಂದಿಗೆ ಇತರೆ ಇಲಾಖೆಗಳ ಕೆಲಸ ನೀಡಬಾರದು.
ನಿವೃತ್ತರಾದ ಕಾರ್ಯಕರ್ತೆಯರಿಗೆ ಕೂಡಲೆ ಹಣ ಬಿಡುಗಡೆ ಮಾಡಬೇಕು. ಅಮಾನತುಗೊಳಿಸಿದ ಕಾರ್ಯಕರ್ತೆಯರನ್ನು ಮರಳಿ ಕೆಲಸಕ್ಕೆ ನೇಮಿಸಿಕೊಳ್ಳಬೇಕು. ಮಾತೃಪೂರ್ಣ ಯೋಜನೆಯಡಿ ಅಡುಗೆ ಪಾತ್ರೆಗಳು, ಪೂರ್ಣ ಪ್ರಮಾಣದ ಆಹಾರ, ತರಕಾರಿ ಮತ್ತು ಇತರೆ ಸಾಮಗ್ರಿಗಳನ್ನು ಮುಂಗಡವಾಗಿ ಕೂಡಬೇಕು. ವರ್ಷಕ್ಕೆ 8 ಸಿಲಿಂಡರ್ ನೀಡಬೇಕು ಎಂಬ ನಿಯಮ ಇದ್ದರೂ ಸಿಲಿಂಡರ್ ಸಿಗುತ್ತಿಲ್ಲ. ಈ ಹಿನ್ನೆಲೆಯಲ್ಲಿ ವಿವಿಧ ಬೇಡಿಕೆಗಳಿಗೆ ಸೂಕ್ತ ಪರಿಹಾರ ಒದಗಿಸುವಂತೆ ಒತ್ತಾಯಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
BJP; ಖೂಬಾ ಮತ್ತೊಮ್ಮೆ ಸಚಿವರಾಗ್ತಾರೆ : ಔರಾದ್ ನಲ್ಲಿ ಯಡಿಯೂರಪ್ಪ ಘೋಷಣೆ
Bidar; ನೇಹಾ ಪ್ರಕರಣದಲ್ಲಿ ಬಿಜೆಪಿ ರಾಜಕೀಯ ಮಾಡುವುದು ಸರಿಯಲ್ಲ: ಸಿಎಂ ಸಿದ್ಧರಾಮಯ್ಯ
Lok Sabha Election: ಸೀನಿಯರ್ ಖೂಬಾಗೆ ಜ್ಯೂನಿಯರ್ ಖಂಡ್ರೆ ಸವಾಲು
ನೀತಿ ಸಂಹಿತೆ ನಡುವೆಯೂ ರಾಜ್ಯಕ್ಕೆ ನೆರವು ಎನ್ನುವ ಬಿಜೆಪಿಗೆ ನಾಚಿಕೆ ಇಲ್ಲವೇ? – ಖಂಡ್ರೆ
Rain; ಬೀದರ್,ಕೊಪ್ಪಳದಲ್ಲಿ ಸಿಡಿಲಿನ ಆರ್ಭಟಕ್ಕೆ ಇಬ್ಬರು ಮೃತ್ಯು
MUST WATCH
ಹೊಸ ಸೇರ್ಪಡೆ
Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ
Heart beats; ಭಾರತದ ಹೃದಯ ಪಾಕಿಸ್ಥಾನದ ಯುವತಿಗೆ ಹೊಸ ಜೀವನ ನೀಡಿತು..
T20 World Cup; ಯಾರಿಲ್ಲ.. ಯಾರಿಲ್ಲ.. ವಿಶ್ವಕಪ್ ಗೆ ವೇಗದ ಬೌಲರ್ ಗಳು ಯಾರೆಲ್ಲಾ?
ನರಗುಂದ: ಸಮಾಜದಲ್ಲಿ ದೇವಸ್ಥಾನಗಳು ಭಕ್ತಿಯ ಸಂಗಮ- ಶಾಂತಲಿಂಗ ಸ್ವಾಮೀಜಿ
ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಹಕ್ಕು ಹೊಂದಿಲ್ಲ