ಪರಿಸರ ಗಣೇಶ ಉತ್ಸವಕ್ಕೆ ಪಾಲಿಕೆ ಕ್ರಮ


Team Udayavani, Jul 29, 2017, 3:25 PM IST

29-BJP-3.jpg

ವಿಜಯಪುರ: ಈ ಬಾರಿಯ ಗಣೇಶ ಉತ್ಸವದಲ್ಲಿ ಪರಿಸರಕ್ಕೆ ಮಾರಕವಾಗುವ ಪ್ಲಾಸ್ಟರ್‌ ಆಫ್‌ ಪ್ಯಾರೀಸ್‌ ಮೂರ್ತಿಗಳ ಬಳಕೆಯನ್ನು ಪಾಲಿಕೆ ಸಂಪೂರ್ಣ ನಿಷೇ ಧಿಸಿದೆ. ಅಲ್ಲದೆ ಕೆರೆ-ಬಾವಿಗಳಿಗೆ ಇಂಥ ಮೂರ್ತಿಗಳನ್ನು ಎಸೆದು ಜಲ ಮೂಲಗಳನ್ನು ನಾಶ ಮಾಡಿದರೆ ಜೈಲಿಗೆ ಹಾಕುವ ಎಚ್ಚರಿಕೆಯನ್ನೂ ನೀಡಿದ್ದಾರೆ. ಕೇವಲ ಆದೇಶ ಹೊರಡಿಸಿ ಕೈಕಟ್ಟಿ ಕುಳಿತುಕೊಳ್ಳದೆ ಅಗತ್ಯ ಮುಂಜಾಗ್ರತಾ ಕ್ರಮಕ್ಕೂ ಮುಂದಾಗಿದೆ.

ನಗರದಲ್ಲಿರುವ ಐತಿಹಾಸಿಕ ಜಲಮೂಲದ ಬಾವಡಿಗಳಲ್ಲಿ ಗಣೇಶ ಉತ್ಸವದಲ್ಲಿ ಪ್ರತಿಷ್ಠಾಪನೆಗೊಳ್ಳುವ ಮೂರ್ತಿಗಳನ್ನು ವಿಸರ್ಜಿಸಲಾಗುತ್ತದೆ. ಇದರಿಂದ ಪ್ಲಾಸ್ಟರ್‌ ಆಫ್‌ ಪ್ಯಾರೀಸ್‌ನಿಂದ ತಯಾರಿಸಿದ ಗಣೇಶ ಮೂರ್ತಿಗಳ ವಿಸರ್ಜನೆಯಿಂದ ಈ ಬಾವಿಗಳು ನಿರ್ಜೀವಗೊಂಡಿದ್ದವು. ಆದರೆ ಕೆಲ ತಿಂಗಳ ಹಿಂದೆ ಈ ಐತಿಹಾಸಿಕ ಬಾವಿಗಳ ಪುನಶ್ಚೇತನ ಕಾರ್ಯ ನಡೆದಿದ್ದು, ಅವು ಪುನರುಜ್ಜೀವನಗೊಂಡು ಜೀವಜಲ ಧುಮ್ಮಿಕ್ಕುತ್ತಿದೆ. ಇದರಿಂದ ಪಾರಂಪರಿಕ ಬಾವಿಗಳು ಮರುಜೀವ ಪಡೆದಿವೆ.

ಅಧಿಕಾರಿಗಳ ದಾಳಿ: ಇದರಿಂದಾಗಿ ಪಿಒಪಿ ಗಣೇಶ ಮೂರ್ತಿ ತಯಾರಿಕೆ, ಬಳಕೆ, ವಿಸರ್ಜನೆಯನ್ನು ಪರಿಸರ ಮಾಲಿನ್ಯ ನಿಯಂತ್ರಣ ಕಾಯ್ದೆಯಂತೆ ಸಂಪೂರ್ಣ ನಿಷೇಧಿಸಿದೆ. ಈ ಕುರಿತು ತಿಂಗಳ ಹಿಂದಿನಿಂದಲೇ ಮಾಧ್ಯಮಗಳ ಮೂಲಕ ಜಾಗೃತಿ ಮೂಡಿಸಿರುವ ಮಹಾನಗರ ಪಾಲಿಕೆ, ಮಾಲಿನ್ಯಕ್ಕೆ
ಕಾರಣವಾದರೆ ಕಾನೂನು ಕ್ರಮದ ಎಚ್ಚರಿಕೆ ನೀಡಿದೆ. ದಂಡ ವಿಧಿಸುವ ಹಾಗೂ ಜೈಲಿಗೆ ಹಾಕುವುದಾಗಿಯೂ ಎಚ್ಚರಿಸಿದೆ. ಅದಲ್ಲದೆ, ಮಹಾನಗರ ಪಾಲಿಕೆ ಅಧಿಕಾರಿಗಳು ಪೊಲೀಸ್‌, ಪರಿಸರ, ಕಂದಾಯ ಇಲಾಖೆ ಅಧಿಕಾರಿಗಳ ತಂಡ ಕಟ್ಟಿಕೊಂಡು ಪಿಒಪಿ ಗಣೇಶ ಮೂರ್ತಿ ತಯಾರಿಕೆ ಹಾಗೂ ಸಂಗ್ರಹ ಕೇಂದ್ರಗಳ ಮೇಲೆ ದಾಳಿ ನಡೆಸುತ್ತಿದ್ದಾರೆ.

ನಗರದ ಸೈನಿಕ ಸ್ಕೂಲ್‌ ಬಳಿಯ ಶಾಸ್ತ್ರೀ ನಗರದಲ್ಲಿ ಸುರೇಶ ಅಫ್ಜಲಪುರ ಎಂಬುವರ ಮನೆ ಮೇಲೆ ದಾಳಿ ನಡೆಸಿರುವ ಪಿಒಪಿ ರಾಸಾಯನಿಕ ಬಳಸಿ ತಯಾರಿಸಿದ 184 ಗಣೇಶ ಮೂರ್ತಿಗಳನ್ನು ವಶಕ್ಕೆ ಪಡೆದಿದ್ದಾರೆ. ಇದರಿಂದಾಗಿ ಪ್ರತಿ ವರ್ಷ ದೊಡ್ಡ ಪ್ರಮಾಣದಲ್ಲಿ ವಹಿವಾಟು ನಡೆಸುತ್ತಿದ್ದ
ವಿಜಯಪುರ ನಗರದ ಗಣೇಶ ಮೂರ್ತಿ ಉದ್ಯಮ ಮಂಕುಬಡಿದು ಕುಳಿತಿದೆ. 

ಮಹಾರಾಷ್ಟ್ರ ಗಡಿಯಲ್ಲಿ ನಿಗಾ: ವಿಜಯಪುರ ನಗರದಲ್ಲೇ 55 ಕುಟುಂಬಗಳು ಗಣೇಶ ಮೂರ್ತಿ ಮಾರಾಟವನ್ನೇ ಪರಂಪರಾಗತ ಉದ್ಯೋಗವಾಗಿಸಿಕೊಂಡಿವೆ. ಜಿಲ್ಲೆಯಲ್ಲಿ ಪ್ರತಿಷ್ಠಾಪಿಸುವ ಗಣೇಶ ಮೂರ್ತಿಗಳಲ್ಲಿ ಶೇ. 75ರಷ್ಟು ಪಿಒಪಿ ಮೂರ್ತಿಗಳು ನೆರೆಯ ಮಹಾರಾಷ್ಟ್ರದ ಹಲವು ನಗರಗಳಿಂದ ಜಿಲ್ಲೆಗೆ ಪ್ರವೇಶಿಸುತ್ತವೆ. ಹೀಗಾಗಿ ಜಿಲ್ಲೆಯ ಗಡಿ ಭಾಗದ ಚೆಕ್‌ಪೋಸ್ಟ್‌ಗಳಲ್ಲಿ ತೀವ್ರ ನಿಗಾ ಇಡಲು ಮುಂದಾಗಿದೆ.
ಇತ್ತ ಪಾಲಿಕೆ ಅಧಿಕಾರಿಗಳು ಪರಿಸರದ ಹೆಸರಿನಲ್ಲಿ ಗಣೇಶ ಮೂರ್ತಿ ಉದ್ಯಮವನ್ನು ಮಾತ್ರ ನಿಯಂತ್ರಣದಲ್ಲಿ ಇಡಲು ಮುಂದಾಗುತ್ತಿದ್ದಾರೆ ಎಂಬ ಆಕ್ರೋಶ ವ್ಯಕ್ತಪಡಿಸುತ್ತಿದೆ. ಪರಿಸರಕ್ಕೆ ಹಾನಿ ಆಗುವ ಎಲ್ಲ ಮೂರ್ತಿಗಳನ್ನು ಪಾಲಿಕೆ ನಿಷೇಧಿಸಿ, ಅಂಥ ಮಾರಾಟ ವ್ಯವಸ್ಥೆಯ ಮೇಲೂ ಸಂಪೂರ್ಣ
ನಿಯಂತ್ರಣ ಹೇರಬೇಕು. ಅಧಿಕಾರಿಗಳ ಕ್ರಮದಿಂದ ಗಣೇಶ ಮೂರ್ತಿ ತಯಾರಿಕೆ ಉದ್ಯಮವೇ ಸಂಪೂರ್ಣ ಸ್ಥಗಿತಗೊಂಡಿದೆ ಎಂದು ಮೂರ್ತಿ ತಯಾರಿಕರ ಸಂಘದ ಅಧ್ಯಕ್ಷ ರಮೇಶ ಸುಗಂ ಅಧಿಕಾರಿಗಳ ವಿರುದ್ಧ ಗರಂ ಆಗಿದ್ದಾರೆ.

ಹಳೆಯ ದಾಸ್ತಾನು: ಕಳೆದ ವರ್ಷ ಮಾರಾಟ ಆಗದೇ ಒಬ್ಬೊಬ್ಬ ವ್ಯಾಪಾರಿಗಳ ಬಳಿಯೂ ಲಕ್ಷಾಂತರ ರೂ. ಮೌಲ್ಯದ ಪಿಒಪಿ ಗಣೇಶ ಮೂರ್ತಿಗಳ ದಾಸ್ತಾನು ಇದೆ. ಹಿಂದಿನಂತೆ ಪರಿಸರ ಸ್ನೇಹಿ ಗಣೇಶ ಮೂರ್ತಿ ರೂಪಿಸಲು ಅಗತ್ಯ ಪ್ರಮಾಣದ ಮಣ್ಣು ಸಿಗುವುದಿಲ್ಲ. ರೈತರು ಗಣೇಶ
ಮೂರ್ತಿ ತಯಾರಿಕೆಗೆ ಮಣ್ಣು ನೀಡಲು ನೀಡಲು ಮುಂದಾಗುವುದಿಲ್ಲ. ಪಾಲಿಕೆ ಅಧಿಕಾರಿಗಳು ಗಣೇಶ ಮೂರ್ತಿ ತಯಾರಕರ ಸಮಸ್ಯೆ ಅರಿಯಬೇಕಿತ್ತು. ಇದಕ್ಕೆ ಪರಿಹಾರ ಕ್ರಮ ಕೈಗೊಂಡ ಬಳಿಕ ಪಿಒಪಿ ಗಣೇಶ ಮೂರ್ತಿ ತಯಾರಿಕೆ, ಮಾರಾಟ ನಿಷೇಧ ಹೇರಬೇಕಿತ್ತು ಎಂದು ನಾರಾಯಣ ಕಾಳೆ ಆಕ್ರೋಶ ವ್ಯಕ್ತಪಡಿಸುತ್ತಾರೆ.

ಪರಿಸರಕ್ಕೆ ಹಾನಿ ಮಾಡುವ ಪಿಒಪಿ ಗಣೇಶ ಮೂರ್ತಿಗಳ ತಯಾರಿಕೆ, ಮಾರಾಟ, ಬಳಕೆ ನಿಷೇಧಿಸಿದ ಕುರಿತು ಸಾಕಷ್ಟು ಸಮಯದ ಮೊದಲೇ ಜಾಗೃತಿಗಾಗಿ ಮಾಹಿತಿ ನೀಡಿದ್ದೇವೆ. ಅದರ ಹೊರತಾಗಿ ನಿಷೇಧ ಆದೇಶ ಉಲ್ಲಂಘಿಸಿದರೆ ಕಾನೂನು ಕ್ರಮದ ಎಚ್ಚರಿಕೆಯನ್ನೂ ನೀಡಿದ್ದೇವೆ. ಹೀಗಾಗಿ
ಪರಿಸರಕ್ಕೆ ಹಾನಿಕಾರಕ ಗಣೇಶ ಮೂರ್ತಿ ತಯಾರಿಕಾ ಕೇಂದ್ರಗಳ ಮೇಲೆ ದಾಳಿ ನಿರಂತರ ನಡೆಯಲಿದೆ. ಪರಿಸರಕ್ಕೆ ಹಾನಿಕಾರಕ ಗಣೇಶ ಮೂರ್ತಿ ಪ್ರತಿಷ್ಠಾಪಿಸುವ ವ್ಯಕ್ತಿಗಳ ವಿರುದ್ಧವೂ ಕಾನೂನು ಕ್ರಮ ಕೈಗೊಳ್ಳುತ್ತೇವೆ.
ಹರ್ಷಾ ಶೆಟ್ಟಿ ಮಹಾನಗರ ಪಾಲಿಕೆ ಆಯುಕ್ತ, ವಿಜಯಪುರ

ಟಾಪ್ ನ್ಯೂಸ್

1-dsad

Uttara Kannada ಸಮುದ್ರದಲ್ಲಿ ಮತ್ತೆ ಜೆಲ್ಲಿಫಿಶ್‌ಗಳು: ಪ್ರವಾಸಿಗರಿಗೆ ಭಯ

1-dsadasd

IPL ;ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ಗೆ 12 ರನ್‌ಗಳ ಜಯ

1-weqwewq

Belthangady: ಸ್ಕೂಟರ್ ಢಿಕ್ಕಿಯಾಗಿ ರಸ್ತೆ ದಾಟುತ್ತಿದ್ದ ವ್ಯಕ್ತಿ ಸಾವು

Pramod Madhwaraj: ಸಂಸದರಿಗೆ ಭಾಷೆಯಲ್ಲ,ಕೆಲಸ ಮುಖ್ಯ: ಪ್ರಮೋದ್‌ ಮಧ್ವರಾಜ್‌

Pramod Madhwaraj: ಸಂಸದರಿಗೆ ಭಾಷೆಯಲ್ಲ,ಕೆಲಸ ಮುಖ್ಯ: ಪ್ರಮೋದ್‌ ಮಧ್ವರಾಜ್‌

Lok sabha polls: ಸುರೇಶ್‌ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್‌ ದಾಸ್‌

Lok sabha polls: ಸುರೇಶ್‌ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್‌ ದಾಸ್‌

1-wwqeqw

Kejriwal; ಏಪ್ರಿಲ್ 1 ರವರೆಗೆ ಇಡಿ ಕಸ್ಟಡಿಗೆ: ಸಾರ್ವಜನಿಕರು ತಕ್ಕ ಉತ್ತರ ನೀಡುತ್ತಾರೆ

kejriwal-2

Kejriwal ಕುರಿತು ಅಮೆರಿಕದ ಹೇಳಿಕೆ ಸ್ವೀಕಾರಾರ್ಹವಲ್ಲ ಎಂದ ಭಾರತದ ವಿದೇಶಾಂಗ ಇಲಾಖೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-qqwewqe

Congress ಹಾಸನ, ಮಂಡ್ಯದಲ್ಲೂ ಗೆಲ್ಲಲಿದೆ : ಸಚಿವ ಎಂ.ಬಿ.ಪಾಟೀಲ್

1-eewqe

BJP MP ಜಿಗಜಿಣಗಿ ಮಾಡಿದ ಅಪಮಾನವನ್ನು ಸಮಾಜದ ಮನೆ ಮನೆಗೆ ತಿಳಿಸುತ್ತೇವೆ: ರಾಠೋಡ

SSLC ಪರೀಕ್ಷೆ ಬರೆಯುತ್ತಿದ್ದ ವಿದ್ಯಾರ್ಥಿನಿಗೆ ಎದೆನೋವು… ಆಸ್ಪತ್ರೆಗೆ ದಾಖಲು

SSLC ಪರೀಕ್ಷೆ ಬರೆಯುತ್ತಿದ್ದ ವಿದ್ಯಾರ್ಥಿನಿಗೆ ಎದೆನೋವು… ಆಸ್ಪತ್ರೆಗೆ ದಾಖಲು

9-muddebihala

Muddebihal: ಆಕಸ್ಮಿಕ ಬೆಂಕಿ: 2 ಲಕ್ಷ ಮೌಲ್ಯದ ಗುಜರಿ ಸಾಮಗ್ರಿ ಬೆಂಕಿಗಾಹುತಿ

1-wqweqewq

BJP; ಜಿಗಜಿಣಗಿ ಹಠಾವೋ, ಬಿಜೆಪಿ ಬಚಾವೋ ಘೋಷಣೆ, ಪ್ರತಿಭಟನೆ

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

1-eewqeeeqwewqewq

Australia; ಕೇಂದ್ರೀಯ ಗುತ್ತಿಗೆ ಪಟ್ಟಿ: ವಾರ್ನರ್‌, ಸ್ಟೋಯಿನಿಸ್‌, ಅಗರ್‌ ಹೊರಕ್ಕೆ

1-hanuma

ACA ವಿರುದ್ಧ ಹೇಳಿಕೆ: ಕ್ರಿಕೆಟಿಗ ಹನುಮ ವಿಹಾರಿಗೆ ನೋಟಿಸ್‌

1-wewqqewqe

Rajasthan Royals; ಪ್ರಸಿದ್ಧ್ ಕೃಷ್ಣ ಬದಲಿಗೆ ಕೇಶವ ಮಹಾರಾಜ್‌

1-dsad

Uttara Kannada ಸಮುದ್ರದಲ್ಲಿ ಮತ್ತೆ ಜೆಲ್ಲಿಫಿಶ್‌ಗಳು: ಪ್ರವಾಸಿಗರಿಗೆ ಭಯ

1-dsadasd

IPL ;ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ಗೆ 12 ರನ್‌ಗಳ ಜಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.