ಕೃಷ್ಣೆಗೂ ನೀಡಿ ಕಾವೇರಿಯಷ್ಟೇ ಮಹತ್ವ


Team Udayavani, Aug 8, 2017, 3:32 PM IST

08-BJP-4.jpg

ಆಲಮಟ್ಟಿ: ರಾಜ್ಯವನ್ನಾಳಿದ ಸರ್ಕಾರಗಳು ಕೃಷ್ಣೆ ಹಾಗೂ ಕಾವೇರಿಗಳೆರಡೂ ಕಣ್ಣುಗಳು ಹೇಳುತ್ತವೆ. ಆದರೆ ಕಾರ್ಯರೂಪದಲ್ಲಿ ಕಾವೇರಿಗೆ ಕೊಡುವ ಮಹತ್ವವನ್ನು ಕೃಷ್ಣೆಗೆ ಕೊಡುತ್ತಿಲ್ಲ ಎಂದು ಕಸಾಪ ಜಿಲ್ಲಾಧ್ಯಕ್ಷ ಮಲ್ಲಿಕಾರ್ಜುನ ಯಂಡಿಗೇರಿ ಆರೋಪಿಸಿದರು.

ಸೋಮವಾರ ಸ್ಥಳೀಯ ರಾಮಲಿಂಗೇಶ್ವರ ದೇವಸ್ಥಾನ ಆವರಣದಲ್ಲಿ ಕೃಷ್ಣಾ ಜಲನಿಧಿಗೆ ಬಾಗಿನ ಅರ್ಪಣೆಗೂ ಮುನ್ನ ನಡೆದ ಮೆರವಣಿಗೆಗೆ ಚಾಲನೆ ನೀಡಿ ಅವರು ಮಾತನಾಡಿದರು. ದೇಶದಲ್ಲಿಯೇ ಬೃಹತ್‌ ನೀರಾವರಿ ಯೋಜನೆಗಳಲ್ಲೊಂದಾದ ಆಲಮಟ್ಟಿ ಕೃಷ್ಣಾ ಮೇಲ್ದಂಡೆ ಯೋಜನೆ ಆರಂಭವಾಗಿ ಅರ್ಧ ಶತಮಾನ ಕಳೆದರೂ ಕೂಡ  ಇನ್ನೂವರೆಗೆ ಯೋಜನೆ ಪೂರ್ಣಗೊಳ್ಳದಿರಲು ರಾಜ್ಯವನ್ನಾಳಿದ ಸರ್ಕಾರಗಳೇ ಕಾರಣವಾಗಿವೆ. ಉತ್ತರ ಕರ್ನಾಟಕದ ಸಮಗ್ರ ನೀರಾವರಿಗಾಗಿಯೇ ಯೋಜಿಸಲಾದ ಯೋಜನೆ ಇನ್ನೂವರೆಗೆ ಪೂರ್ಣಗೊಳ್ಳದಿರುವುದರಿಂದ ಹಾಗೂ ಸಕಾಲಿಕವಾಗಿ ಸಮರ್ಪಕ ಮಳೆ ಸುರಿಯದಿರುವುದರಿಂದ ರೈತಾಪಿ ವರ್ಗ ತೀವ್ರ ತೊಂದರೆಗೀಡಾಗುವಂತಾಗಿದೆ ಎಂದರು.

ರಾಜ್ಯದ ಪ್ರಮುಖ ರಾಜಕೀಯ ಪಕ್ಷಗಳು ನದಿಯೆಂದರೆ ಕೇವಲ ಕಾವೇರಿ ನದಿ ಎಂದು ತಿಳಿದಿದ್ದಾರೆ ಇದು ಸರಿಯಲ್ಲ. ಎರಡೂ ನದಿಗಳನ್ನು ಸಮಾನ ದೃಷ್ಟಿಯಲ್ಲಿ ಕಾಣಬೇಕು ಮತ್ತು ಆಲಮಟ್ಟಿ ಜಲಾಶಯದಲ್ಲಿ 123.81 ಟಿಎಂಸಿ ಅಡಿ ನೀರು ಸಂಗ್ರಹವಾಗುತ್ತದೆ. ಇದರ ಅರ್ಧಕ್ಕಿಂತಲೂ ಕಡಿಮೆ ನೀರು
ಸಂಗ್ರಹವಾಗುವ ಕಾವೇರಿ ಬಗ್ಗೆ ಇರುವ ಕಾಳಜಿಯನ್ನು ಬೃಹತ್‌ ನೀರಾವರಿ ಯೋಜನೆ ಕೃಷ್ಣೆಗೂ ಆದ್ಯತೆ ನೀಡಿ ಕಾಲಮಿತಿಯಲ್ಲಿ ಪೂರ್ಣಗೊಂಡು ಇದರ ಲಾಭ ರೈತರಿಗೆ ಸಕಾಲದಲ್ಲಿ ಸಿಗುವಂತಾಗಬೇಕು ಎಂದು ಹೇಳಿದರು.

ರೈತ ಮುಖಂಡ ಪಂಚಪ್ಪ ಕಲುºರ್ಗಿ ಮಾತನಾಡಿ, ಉತ್ತರ  ಕರ್ನಾಟಕ ಸಮಗ್ರ ಅಭಿವೃದ್ಧಿಯಾಗಬೇಕಾದರೆ ಈ ಭಾಗ ಸಂಪೂರ್ಣ ನೀರಾವರಿಯಾಗಬೇಕು. ಅಭಿವೃದ್ಧಿ ವಿಚಾರದಲ್ಲಿ ಯಾರೂ ರಾಜಕೀಯ ಮಾಡದೇ ಒಂದೇ ಧ್ವನಿಯಲ್ಲಿ ಸರ್ಕಾರವನ್ನು ಪಕ್ಷಾತೀತವಾಗಿ ಎಚ್ಚರಿಸಬೇಕು ಎಂದರು. ಸಾನ್ನಿಧ್ಯವಹಿಸಿದ್ದ ನಿಡಗುಂದಿ ರುದ್ರಮುನಿ ಸ್ವಾಮೀಜಿ ಮಾತನಾಡಿ, ರೈತರು ಜಾಗೃತರಾಗಿ ನೀರು ಹಾಗೂ ಮಣ್ಣು ಬಳಕೆ ಬಗ್ಗೆ ಅರಿತುಕೊಂಡು ನಡೆಯಬೇಕು ಹಾಗೂ ಜಾನುವಾರುಗಳ ಸಾಕಣೆಯಿಂದ ಹಲವಾರು ಬಗೆಯಲ್ಲಿ ಲಾಭಗಳಿವೆ ಎಂದರು.

ರಾಮಲಿಂಗೆಶ್ವರ ದೇವಸ್ಥಾನದಲ್ಲಿ ಸುಮಮಂಗಲೆಯರಿಗೆ ಉಡಿ ತುಂಬುವ ಕಾರ್ಯಕ್ರಮ ನಡೆಯಿತು. ನಂತರ ವಿವಿಧ ವಾದ್ಯವೈಭವಗಳೊಂದಿಗೆ ದೇವಸ್ಥಾನದಿಂದ ಚಂದ್ರಮ್ಮದೇವಿ ದೇವಸ್ಥಾನ ಮಾರ್ಗವಾಗಿ ಸುಮಂಗಲೆಯರಿಂದ  ರ್ಣಕುಂಭ ಮೇಳದೊಂದಿಗೆ ಕೃಷ್ಣೆಯ ಹಿನ್ನೀರು ಪ್ರದೇಶಕ್ಕೆ ತೆರಳಿ ಗಂಗಾಪೂಜೆ ನೆರವೇರಿಸಿ ಲಾಲ್‌ ಬಹಾದ್ದೂರ್‌ ಶಾಸ್ತ್ರೀ ಜಲಾಶಯದ ಜಲನಿಧಿಗೆ ಬಾಗಿನ ಅರ್ಪಿಸಲಾಯಿತು. 

ಪೂಜಾ ಕೈಂಕರ್ಯವನ್ನು ರಾಮಲಿಂಗೇಶ್ವರ ದೇವಸ್ಥಾನದ ಅರ್ಚಕರಾದ ಶಾಮಾಚಾರಿ ಚಿಮ್ಮಲಗಿ ಹಾಗೂ ಶ್ರೀಶೈಲಯ್ಯ ಹಿರೇಮಠ ನಡೆಸಿಕೊಟ್ಟರು. ಸಾಹಿತಿ ಅರವಿಂದ ಕೊಪ್ಪ, ಅಶೋಕ ಹಂಚಲಿ, ದಸ್ತಗೀರ ಸಾಲೋಡಗಿ, ಶಾಂತಪ್ಪ ಮನಗೂಳಿ, ಸಿದ್ದಲಿಂಗಚೌಧರಿ, ಕಾನಿಪ ಜಿಲ್ಲಾ ಉಪಾಧ್ಯಕ್ಷ ಜಿ.ಸಿ.ಮುತ್ತಲದಿನ್ನಿ, ಅಂದಾನಿ ತೋಳಮಟ್ಟಿ, ರಮೆಶ ಆಲಮಟ್ಟಿ, ರಾಮುಜಗತಾಪ, ಮಕಬುಲ ಬಾಗವಾನ, ರಾಜು ಬೋರಣ್ಣವರ, ಪ್ರಕಾಶ ಕಾರಕೂನ, ನಿಂಗರಾಜ ಆಲೂರ, ಲಕ್ಷ್ಮೀ ದೇಸಾಯಿ, ವಿಜಯಾ ಮುಚ್ಚಂಡಿ, ವಿದ್ಯಾವತಿ ಪಟ್ಟಣಶೆಟ್ಟಿ, ಲಕ್ಷ್ಮೀ ಸಜ್ಜನ ಸೇರಿದಂತೆ ಆಲಮಟ್ಟಿ, ಅರಳದಿನ್ನಿ, ಬೇನಾಳ, ವಡವಡಗಿ, ಯರಝರಿ, ಯಲಗೂರ, ಕಾಳಗಿ, ಬಳಬಟ್ಟಿ ಗ್ರಾಮಗಳ ರೈತರು ಭಾಗವಹಿಸಿದ್ದರು.
 

ಟಾಪ್ ನ್ಯೂಸ್

Amit Shah: 2024ರ ಚುನಾವಣೆಯಲ್ಲಿ ಎನ್‌ ಡಿಎಗೆ 400ಕ್ಕೂ ಅಧಿಕ ಸ್ಥಾನ ಖಚಿತ: ಶಾ

Amit Shah: 2024ರ ಚುನಾವಣೆಯಲ್ಲಿ ಎನ್‌ ಡಿಎಗೆ 400ಕ್ಕೂ ಅಧಿಕ ಸ್ಥಾನ ಖಚಿತ: ಶಾ

11

ಕ್ರಿಕೆಟ್‌ ಬಗ್ಗೆ ಕಿಂಚಿತ್ತೂ ಜ್ಞಾನವಿಲ್ಲದ ವ್ಯಕ್ತಿಗೆ ಡ್ರೀಮ್‌11ನಲ್ಲಿ ಒಲಿಯಿತು 1.5 ಕೋಟಿ

baba-ramdev

Patanjali ತಪ್ಪು ಜಾಹೀರಾತು; ಕ್ಷಮೆಯಾಚಿಸಿದ ಬಾಬಾ ರಾಮ್ ದೇವ್,ಬಾಲಕೃಷ್ಣ

Dr Rajkumar: ಇಂದು ರಾಜ್‌ 96ನೇ ಹುಟ್ಟು ಹಬ್ಬ; ಅರ್ಥಪೂರ್ಣ ಆಚರಣೆಗೆ ಅಭಿಮಾನಿಗಳ ಸಿದ್ಧತೆ

Dr Rajkumar: ಇಂದು ರಾಜ್‌ 96ನೇ ಹುಟ್ಟು ಹಬ್ಬ; ಅರ್ಥಪೂರ್ಣ ಆಚರಣೆಗೆ ಅಭಿಮಾನಿಗಳ ಸಿದ್ಧತೆ

ಅಶ್ಲೀಲ ವಿಡಿಯೋ ಮಾದರಿಯಲ್ಲಿ ಲೈಂಗಿಕ ಕ್ರಿಯೆಗೆ ಒತ್ತಾಯಿಸಿದ್ದಕ್ಕೆ ಮಹಿಳೆಯನ್ನು ಕೊಂದ ಟೆಕಿ

ಅಶ್ಲೀಲ ವಿಡಿಯೋ ಮಾದರಿಯಲ್ಲಿ ಲೈಂಗಿಕ ಕ್ರಿಯೆಗೆ ಒತ್ತಾಯಿಸಿದ್ದಕ್ಕೆ ಮಹಿಳೆಯನ್ನು ಕೊಂದ ಟೆಕಿ

Udupi Chikmagalur Lok Sabha Constituency: ಕಾಫಿನಾಡಲ್ಲಿ ಕೈ-ಕಮಲ ತೀವ್ರ ಪೈಪೋಟಿ

Udupi Chikmagalur Lok Sabha Constituency: ಕಾಫಿನಾಡಲ್ಲಿ ಕೈ-ಕಮಲ ತೀವ್ರ ಪೈಪೋಟಿ

1-aaaa

Scrap mafia ದರೋಡೆಕೋರ ರವಿ ಕಾನಾ ಮತ್ತು ಪ್ರೇಯಸಿ ಕಾಜಲ್ ಥಾಯ್ಲೆಂಡ್‌ ನಲ್ಲಿ ಬಂಧನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

13-

Muddebihal: ಅಪರಿಚಿತ ವಾಹನ ಡಿಕ್ಕಿ: ಯುವಕ ಸಾವು

Vijayapura; Complaint to Election Commission against Yatnal: Shivananda Patil

Vijayapura; ಯತ್ನಾಳ್ ವಿರುದ್ಧ ಚುನಾವಣಾ ಆಯೋಗಕ್ಕೆ ದೂರು: ಶಿವಾನಂದ ಪಾಟೀಲ

Vijayapura; ಚುನಾವಣಾ ಬಾಂಡ್ ತನಿಖೆಯಾದರೆ ಮೋದಿ ಜೈಲಿಗೆ: ಎಂ.ಬಿ. ಪಾಟೀಲ್

Vijayapura; ಚುನಾವಣಾ ಬಾಂಡ್ ತನಿಖೆಯಾದರೆ ಮೋದಿ ಜೈಲಿಗೆ: ಎಂ.ಬಿ. ಪಾಟೀಲ್

1-wqqw

Vijayapura: ಬಿರುಗಾಳಿ-ಸಿಡಿಲ ಅಬ್ಬರದ ಮಳೆಯ ಅವಾಂತರ

Lok Sabha Polls; ಎ. 26: ವಿಜಯಪುರಕ್ಕೆ ರಾಹುಲ್‌ ಗಾಂಧಿ 

Lok Sabha Polls; ಎ. 26: ವಿಜಯಪುರಕ್ಕೆ ರಾಹುಲ್‌ ಗಾಂಧಿ 

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-qwewweq

K. Jayaprakash Hegde; ಮೀನುಗಾರಿಕೆ, ಪ್ರವಾಸೋದ್ಯಮದ ಅಭಿವೃದ್ದಿಗೆ ಹೆಚ್ಚಿನ ಆಧ್ಯತೆ 

Amit Shah: 2024ರ ಚುನಾವಣೆಯಲ್ಲಿ ಎನ್‌ ಡಿಎಗೆ 400ಕ್ಕೂ ಅಧಿಕ ಸ್ಥಾನ ಖಚಿತ: ಶಾ

Amit Shah: 2024ರ ಚುನಾವಣೆಯಲ್ಲಿ ಎನ್‌ ಡಿಎಗೆ 400ಕ್ಕೂ ಅಧಿಕ ಸ್ಥಾನ ಖಚಿತ: ಶಾ

11

ಕ್ರಿಕೆಟ್‌ ಬಗ್ಗೆ ಕಿಂಚಿತ್ತೂ ಜ್ಞಾನವಿಲ್ಲದ ವ್ಯಕ್ತಿಗೆ ಡ್ರೀಮ್‌11ನಲ್ಲಿ ಒಲಿಯಿತು 1.5 ಕೋಟಿ

1-asdasdas

IPL; ಸ್ಟಾಯಿನಿಸ್‌ ಏಟಿಗೆ ತವರಲ್ಲೆ ಚಾಂಪಿಯನ್‌ ಚೆನ್ನೈ ಠುಸ್‌!

1-BVR-1

Congress vs BJP; ಬ್ರಹ್ಮಾವರದಲ್ಲಿ ಶಕ್ತಿ ಪ್ರದರ್ಶನದ ವೇದಿಕೆ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.