ಮಾನವೀಯ ಮೌಲ್ಯ ಕುಸಿತ


Team Udayavani, Sep 15, 2017, 12:22 PM IST

vij-4.jpg

ವಿಜಯಪುರ: ಮನುಷ್ಯನ ನೆಮ್ಮದಿಗೆ ಕಸಿಯುವ ದುರಾಸೆಯಿಂದ ದೂರ ಇದ್ದಲ್ಲಿ ಸುಖೀ ಜೀವನ ನಡೆಸಲು ಸಾಧ್ಯ. ದುರಾಸೆ ಫಲವಾಗಿ ಸಮಾಜದಲ್ಲಿ ಮಾನವೀಯ ಮೌಲ್ಯಗಳು ಕುಸಿಯುತ್ತಿವೆ ಎಂದು ಲಯನ್ಸ್‌ ಕ್ಲಬ್‌ ಅಧ್ಯಕ್ಷ ಡಾ| ಬಿ.ಎಸ್‌. ತಮಗೊಂಡ ಹೇಳಿದರು.

ನಗರದ ತುಳಜಾಭವಾನಿ ನರ್ಸಿಂಗ್‌ ಕಾಲೇಜಿನಲ್ಲಿ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್‌ ಹಮ್ಮಿಕೊಂಡಿದ್ದ ದತ್ತಿ ಉಪನ್ಯಾಸ
ಕಾರ್ಯಕ್ರಮದಲ್ಲಿ ಶರಣರು ಹಾಗೂ ಕಾಯಕ ಸದೃಢ ಆರೋಗ್ಯ ಹಾಗೂ ಯುವಕರು ವಿಷಯದ ಕುರಿತು ಉಪನ್ಯಾಸ ಮಂಡಿಸಿದ ಅವರು, ಸದೃಢ ದೇಹದಲ್ಲಿ ಸದೃಢ ಮನಸ್ಸು ಇರುತ್ತದೆ. ಮನುಷ್ಯನಿಂದು ಎಲ್ಲ ರಂಗಗಳಲ್ಲಿ ಸಾಕಷ್ಟು ಸಾಧನೆ ಮಾಡುತ್ತಿದ್ದಾನೆ. ಆದರೆ ಅತಿಯಾದ ಆಸೆಯಿಂದ ನೆಮ್ಮದಿ ಕಳೆದುಕೊಂಡಿದ್ದಾನೆ ಎಂದರು.

ಶರೀರವು ಸತ್ಯಾತ್ಮಕ ಇಂದ್ರೀಯಗಳ ಜೊತೆಯಲ್ಲಿಯೇ ಜೀವಂತ ಶರೀರವಾಗುತ್ತದೆ. ನಿತ್ಯದ ಊಟದಲ್ಲಿ ಸಿರಿಧಾನ್ಯಗಳ ಬಳಕೆ ಹಾಗೂ ತಪ್ಪಲು, ಕಾಯಿಪಲ್ಲೆ, ಹಣ್ಣು ಹಂಪಲು, ಹಾಲು ತುಪ್ಪ ಇವುಗಳ ಬಳಕೆಯಿಂದ ಸದೃಢ ಕಾಯ ಹೊಂದಲು ಸಾಧ್ಯ. ತ್ರಿದೋಷಗಳಾದ ವಾತ, ಪಿತ್ತ, ಕಪದಲ್ಲಿ ಏರಿಳಿತವಾದರೆ ಆರೋಗ್ಯದಲ್ಲಿ ಹೆಚ್ಚು ಕಡಿಮೆಯಾಗುತ್ತದೆ. ಎಲ್ಲ ಬೇಕೆಂಬ ಬೇಡಿಕೆಗಳಿಗೆ ಆಸೆಪಟ್ಟು ಒತ್ತಡಕ್ಕೆ ಒಳಗಾಗುತ್ತಿದ್ದೇವೆ. ಶರಣರು ಇದ್ದುದ್ದರಲ್ಲಿಯೇ ಸಂತೃಪ್ತ ಜೀವನ ಕಂಡವರು ಎಂದರು.

ಉಪನ್ಯಾಸ ಮಂಡಿಸಿದ ಜಿಲ್ಲಾಸ್ಪತ್ರೆ ಆಪ್ತ ಸಮಾಲೋಚಕ ರವಿ ಕಿತ್ತೂರ ಮಾತನಾಡಿ, ನಿಮ್ಮಲ್ಲಿ ಏನೆಲ್ಲ ಇದ್ದರೂ ಸದೃಢ
ಆರೋಗ್ಯ ಇಲ್ಲದಿದ್ದರೆ ಎಲ್ಲವೂ ಶೂನ್ಯ. ಅತಿಯಾದ ಸ್ವೇಚ್ಛಾಚಾರದ ಜೀವನ ಭವಿಷ್ಯಕ್ಕೆ ಮಾರಕವಾಗಲಿದೆ. ವ್ಯಕ್ತಿತ್ವವನ್ನೇ ಬಲಿ ಪಡೆಯುವ ಮನೋವಿಕಾರ ಗುಣಗಳನ್ನು ಬಿಡದಿದ್ದರೆ ಜೀವನ ನರಕವಾಗುತ್ತದೆ. ಕಾರ್ಖಾನೆಗಳು ಹೊರ ಸೂಸುವ ಪರಿಸರಕ್ಕೆ ಧಕ್ಕೆ ತರುವ ರಾಸಾಯನಿಕಯುಕ್ತ ತ್ಯಾಜ್ಯ ವಾವು, ನೀರು ಸೇರಿದಂತೆ ಇಡಿ ಪರಿಸರಕ್ಕೆ ಮಾರಕವಾಗಿ ಪರಿಣಮಿಸಿದೆ. ಇದರಿಂದ
ಮನುಷ್ಯ ಮಾತ್ರವಲ್ಲ ಜಲಚರಗಳು, ಪಶು, ಪಕ್ಷಿಗಳ ಸಂಕುಲಕ್ಕೂ ಸಂಚಕಾರ ತಂದಿದೆ. ಇನ್ನಾದರೂ ಪರಿಸರ ರಕ್ಷಣೆ ನಮ್ಮೆಲ್ಲರ ಹೊಣೆಯಾಗಬೇಕು ಎಂದರು. ಕಸಾಪ ಜಿಲ್ಲಾಧ್ಯಕ್ಷ ಮಲ್ಲಿಕಾರ್ಜುನ ಯಂಡಿಗೇರಿ, ತಾಲೂಕಾಧ್ಯಕ್ಷ ಯು.ಎನ್‌.ಕುಂಟೋಜಿ ಮಾತನಾಡಿದರು. ಡಾ| ಪ್ರಭಾವತಿ ಕಾಳೆ ಅಧ್ಯಕ್ಷತೆ ವಹಿಸಿದ್ದರು. ಸೋಮಶೇಖರ ಕುರ್ಲೆ, ಎಸ್‌. ವೈ. ನಡುವಿನಕೇರಿ, ಲಲಿತಾ ಯಲಿಗಾರ, ಮುತ್ತಣ್ಣ ಕಬಾಡೆ, ರಾಜಶೇಖರ ಕಳಕಳಮಠ, ದಿಲೀಪಕುಮಾರ ಮರಾಠೆ, ಹನುಮಂತ ಬತಗುಣಕಿ, ಅಲ್ಪಾ ಡಿ, ಅನಿಲ ತರಣಳ್ಳಿ, ಸೋಮನಾಥ ಬಿರಾದಾರ, ಆದರ್ಶ ನಾಯಕ, ನರಸಿಂಹ ಗುರುವ, ಜಾವೇದ ಮುಲ್ಲಾ, ಶಿವಾನಂದ ಬೀಳಗಿ ಇದ್ದರು.

ಟಾಪ್ ನ್ಯೂಸ್

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಕಾರ್ಗಿಲ್‌ ಯೋಧ ಮೆಲ್ವಿನ್‌ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ

ಕಾರ್ಗಿಲ್‌ ಯೋಧ ಮೆಲ್ವಿನ್‌ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ

High Court ಮೆಟ್ಟಿಲೇರಿದ್ದ ಕೋವಿ ಪರವಾನಿಗೆದಾರರು

High Court ಮೆಟ್ಟಿಲೇರಿದ್ದ ಕೋವಿ ಪರವಾನಿಗೆದಾರರು

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

1-pak

Pak ಆತ್ಮಾಹುತಿ ದಾಳಿ: ಐವರು ಜಪಾನೀಯರು ಪಾರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Outrage over mistakes in CET exam question paper; Request for mercy marks

CET ಪರೀಕ್ಷೆ ಪ್ರಶ್ನೆಪತ್ರಿಕೆಯಲ್ಲಿ ಲೋಪಕ್ಕೆ ಆಕ್ರೋಶ; ಕೃಪಾಂಕಕ್ಕೆ ಆಗ್ರಹ

Vijayapura; ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಕುಸಿದಿದೆ : ಸಂಸದ ಜಿಗಜಿಣಗಿ

Vijayapura; ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಕುಸಿದಿದೆ : ಸಂಸದ ಜಿಗಜಿಣಗಿ

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!

Vijayapura: ಸಿಡಿಲು ಬಡಿದು ಓರ್ವನಿಗೆ ಗಾಯ, ಮೂರು ಜಾನುವಾರು ಸಾವು

Vijayapura: ಸಿಡಿಲು ಬಡಿದು ಓರ್ವನಿಗೆ ಗಾಯ, ಮೂರು ಜಾನುವಾರು ಸಾವು

ganihara

Vijayapura; ವಿಕಸಿತ ಭಾರತದಲ್ಲಾಗಿರುವ ಅಭಿವೃದ್ಧಿ ಏನು: ಕೆಪಿಸಿಸಿ ವಕ್ತಾರ ಗಣಿಹಾರ ಪ್ರಶ್ನೆ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Udupi ಶ್ರೀಕೃಷ್ಣ ಮಠ ; ಸುಂದರಕಾಂಡ ಪ್ರವಚನಕ್ಕೆ ಚಾಲನೆ

Udupi ಶ್ರೀಕೃಷ್ಣ ಮಠ ; ಸುಂದರಕಾಂಡ ಪ್ರವಚನಕ್ಕೆ ಚಾಲನೆ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

1-wqeqweqweeqweqe

Brahmos; ಫಿಲಿಪ್ಪೀನ್ಸ್‌ಗೆ ಬ್ರಹ್ಮೋಸ್‌: ಭಾರತದ ಮೊದಲ ರಫ್ತು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.