ಬಾಲಕಿಯರ ವಸತಿ ನಿಲಯದಲ್ಲಿ ಅವ್ಯವಸ್ಥೆ


Team Udayavani, Dec 30, 2017, 4:00 PM IST

vij-4.jpg

ಸಿಂದಗಿ: ಪಟ್ಟಣದ ಖಾಸಗಿ ಕಟ್ಟಡದಲ್ಲಿರುವ ವಿಜಯಪುರ ಜಿಪಂ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಡಿ. ದೇವರಾಜ ಅರಸು ಹಿಂದುಳಿದ ವರ್ಗಗಳ ಮೆಟ್ರಿಕ್‌ ಪೂರ್ವ ಬಾಲಕಿಯರ ವಿದ್ಯಾರ್ಥಿನಿಲಯ ಅವ್ಯವಸ್ಥೆ ಆಗರವಾಗಿದೆ.

ವಸತಿ ನಿಲಯಗಳು ಅದರಲ್ಲಿ ಬಾಲಕಿಯರ ವಸತಿ ನಿಲಯಗಳು ಮೂಲಭೂತ ಸೌಕರ್ಯಗಳೊಂದಿಗೆ ವಸತಿ ನಿಲಯ ವಿದ್ಯಾರ್ಥಿಗಳ ಆರೈಕೆ, ರಕ್ಷಣೆ ನೀಡುವುದು ತಾಲೂಕು ಹಿಂದುಳಿದ ವರ್ಗಗಳ ವಿಸ್ತರಣಾಧಿಕಾರಿಗಳ ಮತ್ತು ವಸತಿ ನಿಲಯದ ಮೇಲ್ವಿಚಾರ ಕರ್ತವ್ಯ. ವಸತಿ ನಿಲಯದ ಮೇಲ್ವಿಚಾರಕಿ ಆಗೊಮ್ಮೆ ಈಗೊಮ್ಮೆ ಬಂದು ಹೋದರೆ ರಾತ್ರಿ ಕಾವಲುಗಾರತಿ (ನೈಟ್‌ ವಾಚ್‌ಮನ್‌) ಸಾಯಂಕಾಲ 6ಕ್ಕೆ ಬರುವ ಬದಲು ರಾತ್ರಿ 9ರ ನಂತರ ವಸತಿ ನಿಲಯಕ್ಕೆ ಬಂದರೇ ವಿದ್ಯಾರ್ಥಿಯರಿಗೆ ರಕ್ಷಣೆ ಮಾಡುವವರಾರು? ಏನಾದರು ಅವಘಡಗಳು ಸಂಭವಿಸಿದರೇ ಉತ್ತರ ನೀಡುವವರಾರು ಎಂಬ ಪ್ರಶ್ನೆ ಸಾರ್ವಜನಿಕರಲ್ಲಿ ಮೂಡಿದೆ.

ಖಾಸಗಿ ಕಟ್ಟಡದಲ್ಲಿದ್ದರೂ ಕಟ್ಟಡ ಸುರಕ್ಷಿತವಾಗಿದೆ. ನೀರಿನ ಸೌಲಭ್ಯವಿದೆ. ಆದರೆ ವಸತಿ ನಿಲಯದ ನಿರ್ವಹಣೆ ಮಾತ್ರ ತಪ್ಪಿದೆ. ವಸತಿ ನಿಲಯದ ಮೇಲ್ವಿಚಾರಕಿ ನಂದಾಜ್ಯೋತಿ ನಾಸಿ ಅವರಿಗೆ ಸಿಂದಗಿ ಪಟ್ಟಣದಲ್ಲಿರುವ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಡಿ. ದೇವರಾಜ ಅರಸು ಹಿಂದುಳಿದ ವರ್ಗಗಳ ಮೆಟ್ರಿಕ್‌ ಪೂರ್ವ ಬಾಲಕಿಯರ ವಿದ್ಯಾರ್ಥಿ ನಿಲಯ, ಮೆಟ್ರಿಕ್‌ ನಂತರದ ಬಾಲಕಿಯರ ನಿಲಯ ಮತ್ತು ಜಾಲವಾದದಲ್ಲಿನ ವಸತಿ ನಿಲಯದ ಮೇಲ್ವಿಚಾರಣೆಯ ಜವಾಬ್ದಾರಿಯಿದೆ ಎಂದು ನೇಪ ಹೇಳಿ ವಸತಿ ನಿಲಯದಲ್ಲಿ ಇರುವುದಿಲ್ಲ. ಅವರು ಸರಿಯಾಗಿ ಕಾಯಿಪಲ್ಲೆ ಸಂತಿ ಮಾಡುವುದಿಲ್ಲ ಇದರಿಂದ ಇಲ್ಲಿ ಊಟ ಮತ್ತು ರಕ್ಷಣೆಯ ವ್ಯವಸ್ಥೆ ಅವ್ಯವಸ್ಥಿತವಾಗಿದೆ ಎಂದು ವಸತಿ ನಿಲಯದ ಬಾಲಕಿಯರು ದೂರಿದ್ದಾರೆ.

ವಸತಿ ನಿಲಯದಲ್ಲಿ ಗ್ರಂಥಗಳನ್ನು ಇಡುವ ಕಪಾಟಿದ್ದರೂ ಪುಸ್ತಕಗಳಿಲ್ಲ. ಇರುವ ಪುಸ್ತಕಗಳು ರೂಮಿನೊಳಗೆ ಕಟ್ಟಿ ಇಟ್ಟಿದ್ದಾರೆ. ನಮಗೆ ಓದಲು ಪುಸ್ತಕ ನೀಡುವುದಿಲ್ಲ . ವಸತಿ ನಿಲಯದಲ್ಲಿ 50 ವಿದ್ಯಾರ್ಥಿಗಳ ಹೆಸರು ಇರುತ್ತದೆ. 30-35
ವಿದ್ಯಾರ್ಥಿಗಳು ಇರುತ್ತಾರೆ. ಉಳಿದವರು ತಿಂಗಳಿಗೊಮ್ಮೆ ಬಂದು ಕಿಟ್‌ ಪಡೆದುಕೊಂಡು ಹೋಗುತ್ತಾರೆ. ದಿನಕ್ಕೆ ಬೆಳಗ್ಗೆ 7ಕ್ಕೆ ಚಹಾ, 8:45ರಿಂದ 9:35ರವರೆಗೆ ಊಟ, ಸಂಜೆ 5 ರಿಂದ 5:30ರವರೆಗೆ ಚಹಾ, ಉಪಾಹಾರ ಮತ್ತು ರಾತ್ರಿ 7:30 ರಿಂದ 8:30 ರವರೆಗೆ ಊಟ ನೀಡಬೇಕು. ಅದು ಕೇವಲ ವೇಳಾ ಪಟ್ಟಿಯಲ್ಲಿ ಇದೆ. 

ನಮಗೆ ಬೆಳಗ್ಗೆ 9ಕ್ಕೆ ಉಪಹಾರ ನೀಡಿ ಒಮ್ಮೆಲೆ ರಾತ್ರಿ ಊಟ ಹಾಕುತ್ತಾರೆ. ತಿಂಗಳಲ್ಲಿ ವಿಶೇಷ ಊಟ ಕೊಟ್ಟರೆ ಕೊಟ್ಟರು ಇಲ್ಲಾಂದ್ರ ಇಲ್ಲ. ಏನಾದರು ಕೇಳಿದರೆ ಮಧ್ಯಾಹ್ನ ಶಾಲೆಯಲ್ಲಿ ಬಿಸಿಯೂಟ ಕೊಡುತ್ತಾರಲ್ಲ ಎಂದು ಹೇಳುತ್ತಾರೆ. ಹೆಚ್ಚಿಗೆ ಕೇಳಿದಲ್ಲಿ ನಮ್ಮ ಮೇಲೆ ಕ್ರಮ ಕೈಗೊಳ್ಳುತ್ತೇವೆ ಎಂದು ಹೆದರಿಸುತ್ತಾರೆ ಎಂದು ವಿದ್ಯಾರ್ಥಿನಿಯರು ದೂರಿದರು

ಇಂದಿನ ಕಾಲದಲ್ಲಿ ಅಪ್ರಾಪ್ತ ಬಾಲಕಿಯರನ್ನು ಹೊರಗೆ ಬಿಡುವುದು ಕಷ್ಟವಾಗಿದೆ. ವಸತಿ ನಿಲಯದ ಇಲಾಖೆ ಮತ್ತು ಮೇಲ್ವಿಚಾರಕರನ್ನು ನಂಬಿ ಪಾಲಕರು ತಮ್ಮ ಮಕ್ಕಳನ್ನು ಬಿಟ್ಟಿರುತ್ತಾರೆ. ಇವರಿಗೆ ಮೂಲಭೂತ ಸೌಕರ್ಯ ಒದಗಿಸುವ
ಜೊತೆಗ ಪೌಷ್ಟಿಕ ಆಹಾರ ನೀಡುವ ಜೊತೆಗೆ ರಕ್ಷಣೆ ನೀಡುವುದು ಅಧಿಕಾರಿಗಳ ಜವಾಬ್ದಾರಿಯಾಗಿದೆ. 
 ಶೈಲಜಾ ಸ್ಥಾವರಮಠ, ಮಹಿಳಾ ಜಾಗರಣಾ ವೇದಿಕೆ ಅಧ್ಯಕೆ 

ವಸತಿ ನಿಲಯದಲ್ಲಿ 50 ವಿದ್ಯಾರ್ಥಿಗಳ ಹಾಜರಾತಿಯಿದೆ. ಅವರಲ್ಲಿ 30-35 ವಿದ್ಯಾರ್ಥಿಗಳು ವಸತಿ ನಿಲಯದಲ್ಲಿರುತ್ತಾರೆ. ಇನ್ನುಳಿದವರು ತಿಂಗಳಿಗೆ ಬಂದು ಇಲಾಖೆ ನೀಡುವ ಕಿಟ್‌ ತಗೆದುಕೊಂಡು ಹೋಗುತ್ತಾರೆ. ವಸತಿ ನಿಲಯದಲ್ಲಿ ಒಬ್ಬ ರಾತ್ರಿ ಕಾವಲುಗಾರರನ್ನಾಗಿ ನೇಮಕ ಮಾಡಿಕೊಳ್ಳಲಾಗಿದೆ. ಅವರು ಸರಿಯಾಗಿ ಬರುತ್ತಿಲ್ಲ ಎಂದು ತಿಳಿದು ಬಂದಿದ್ದು ಎಚ್ಚರಿಕೆ ನೀಡಲಾಗಿದೆ.
ದಾಜ್ಯೋತಿ ನಾಸಿ, ವಸತಿ ನಿಲಯದ ಮೇಲ್ವಿಚಾರಕಿ

ವಸತಿ ನಿಲಯದಲ್ಲಿನ ಮಕ್ಕಳ ಹಾಜರಾತಿ ಸಂಖ್ಯೆಯನ್ನು ನೋಡುತ್ತೇನೆ. ಅಲ್ಲಿನ ಅವ್ಯವಸ್ಥೆ ನನಗೆ ತಿಳಿದಿಲ್ಲ. ಈ ಕುರಿತು ಮೇಲ್ವಿಚಾರಕಿಯರನ್ನು ವಿಚಾರ ಮಾಡಲಾಗುವುದು. 
ಬಸಯ್ಯ ಗೋಳಮಠ, ತಾಲೂಕು ಹಿಂದುಳಿದ ವರ್ಗಗಳ ವಿಸ್ತರಣಾಧಿಕಾರಿಗಳು ಸಿಂದಗಿ.

ರಮೇಶ ಪೂಜಾರ

ಟಾಪ್ ನ್ಯೂಸ್

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Veerappa Moily ಬಿಜೆಪಿ ವಿರುದ್ಧ ಅಸಮಾಧಾನ ಜ್ವಾಲಾಮುಖಿ ಸ್ಫೋಟ

Veerappa Moily ಬಿಜೆಪಿ ವಿರುದ್ಧ ಅಸಮಾಧಾನ ಜ್ವಾಲಾಮುಖಿ ಸ್ಫೋಟ

ಮತದಾರರ ಚೀಟಿಯಲ್ಲಿ ಕ್ಯುಆರ್‌ ಕೋಡ್‌! ಮಂಗಳೂರು ದಕ್ಷಿಣ-ಉತ್ತರದಲ್ಲಿ ಅನುಷ್ಠಾನ

ಮತದಾರರ ಚೀಟಿಯಲ್ಲಿ ಕ್ಯುಆರ್‌ ಕೋಡ್‌! ಮಂಗಳೂರು ದಕ್ಷಿಣ-ಉತ್ತರದಲ್ಲಿ ಅನುಷ್ಠಾನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

13-

Muddebihal: ಅಪರಿಚಿತ ವಾಹನ ಡಿಕ್ಕಿ: ಯುವಕ ಸಾವು

Vijayapura; Complaint to Election Commission against Yatnal: Shivananda Patil

Vijayapura; ಯತ್ನಾಳ್ ವಿರುದ್ಧ ಚುನಾವಣಾ ಆಯೋಗಕ್ಕೆ ದೂರು: ಶಿವಾನಂದ ಪಾಟೀಲ

Vijayapura; ಚುನಾವಣಾ ಬಾಂಡ್ ತನಿಖೆಯಾದರೆ ಮೋದಿ ಜೈಲಿಗೆ: ಎಂ.ಬಿ. ಪಾಟೀಲ್

Vijayapura; ಚುನಾವಣಾ ಬಾಂಡ್ ತನಿಖೆಯಾದರೆ ಮೋದಿ ಜೈಲಿಗೆ: ಎಂ.ಬಿ. ಪಾಟೀಲ್

1-wqqw

Vijayapura: ಬಿರುಗಾಳಿ-ಸಿಡಿಲ ಅಬ್ಬರದ ಮಳೆಯ ಅವಾಂತರ

Lok Sabha Polls; ಎ. 26: ವಿಜಯಪುರಕ್ಕೆ ರಾಹುಲ್‌ ಗಾಂಧಿ 

Lok Sabha Polls; ಎ. 26: ವಿಜಯಪುರಕ್ಕೆ ರಾಹುಲ್‌ ಗಾಂಧಿ 

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.