ಮತದಾರರ ಪಟ್ಟಿಗೆ ಹೆಸರು ಸೇರಿಸಿ
Team Udayavani, Jan 22, 2018, 2:26 PM IST
ವಿಜಯಪುರ: ಮತದಾನದ ಮಹತ್ವ ಹಾಗೂ ಮತದಾರರ ಪಟ್ಟಿಯಲ್ಲಿ ಹೆಸರು ಸೇರ್ಪಡೆ ಮಹತ್ವವನ್ನು ತಿಳಿಸುವ ಜಾಗೃತಿ ಜಾಥಾಕ್ಕೆ ಜಿಲ್ಲಾ ಸ್ವೀಪ್ ಸಮಿತಿ ಅಧ್ಯಕ್ಷ ಜಿಪಂ ಸಿಇಒ ಎಂ.ಸುಂದರೇಶಬಾಬು ಚಾಲನೆ ನೀಡಿದರು.
ಗೋದಾವರಿ ಹೋಟೆಲ್ ಆವರಣದಿಂದ ಆರಂಭಗೊಂಡ ವಿದ್ಯಾರ್ಥಿಗಳ ಜಾಥಾ ಶಿವಾಜಿ ವೃತ್ತ, ಗಾಂಧಿ ವೃತ್ತ, ಬಸವೇಶ್ವರ ವೃತ್ತ ಮೂಲಕ ಸಂಚರಿಸಿ ಡಾ| ಅಂಬೇಡ್ಕರ್ ವೃತ್ತದಲ್ಲಿ ಮುಕ್ತಾಯವಾಯಿತು.
ಚಾಲನೆ: ಜಿಲ್ಲಾಡಳಿತ, ಜಿಪಂ, ಜಿಲ್ಲಾ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಸಹಯೋಗದೊಂದಿಗೆ ಮತದಾನದ
ಮಹತ್ವ ಹಾಗೂ ಮತದಾರರ ಪಟ್ಟಿಯಲ್ಲಿ ಹೆಸರು ಸೇರ್ಪಡೆ ಮಹತ್ವ ತಿಳಿ ಹೇಳುವ ಜಾಗೃತಿ ಜಾಥಾಕ್ಕೆ ಜಿಲ್ಲಾ ಸ್ವೀಪ್ ಸಮಿತಿ ಅಧ್ಯಕ್ಷ ಎಂ.ಸುಂದರೇಶಬಾಬು ಚಾಲನೆ ನೀಡಿದರು. ನಗರದ ಕೆಎಸ್ಆರ್ಟಿಸಿ ಘಟಕಗಳ ಬಳಿ ಮುಖ್ಯ ರಸ್ತೆಯಲ್ಲಿ ಚಾಲನೆ ಪಡೆದ ಜಾಥಾದಲ್ಲಿ ಪಾಲ್ಗೊಂಡಿದ್ದ ವಿದ್ಯಾರ್ಥಿಗಳು ಶಿವಾಜಿ ವೃತ್ತ, ಮಹಾತ್ಮ ಗಾಂಧೀಜಿ ವೃತ್ತ, ಬಸವೇಶ್ವರ ವೃತ್ತ ಮೂಲಕ ಸಂಚರಿಸಿ ಡಾ| ಬಿ.ಆರ್. ಅಂಬೇಡ್ಕರ್ ವೃತ್ತದವರೆಗೆ ಸಂಚರಿಸಿ ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸಿ ದರು. ಈ ವೇಳೆ ಜಿಲ್ಲಾ ಹಿಂದುಳಿದ ವರ್ಗಗಳ ಹಾಗೂ ಅಲ್ಪಸಂಖ್ಯಾತರ ಕಲ್ಯಾಣ ಅಧಿಕಾರಿಗಳಾದ ಜಿ.ಎಂ. ದೊಡ್ಡಮನಿ, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಸಹಾಯಕ ನಿರ್ದೇಶಕ ಸುಲೇಮಾನ ನದಾಫ್, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ತಾಲೂಕು ವಿಸ್ತರಣಾಧಿಕಾರಿ ಜಿ.ಎಲ್. ರಾಠೊಡ, ಎಸ್.ಎ. ಜಮಾದಾರ ಇದ್ದರು .
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Congress ಹಾಸನ, ಮಂಡ್ಯದಲ್ಲೂ ಗೆಲ್ಲಲಿದೆ : ಸಚಿವ ಎಂ.ಬಿ.ಪಾಟೀಲ್
BJP MP ಜಿಗಜಿಣಗಿ ಮಾಡಿದ ಅಪಮಾನವನ್ನು ಸಮಾಜದ ಮನೆ ಮನೆಗೆ ತಿಳಿಸುತ್ತೇವೆ: ರಾಠೋಡ
SSLC ಪರೀಕ್ಷೆ ಬರೆಯುತ್ತಿದ್ದ ವಿದ್ಯಾರ್ಥಿನಿಗೆ ಎದೆನೋವು… ಆಸ್ಪತ್ರೆಗೆ ದಾಖಲು
Muddebihal: ಆಕಸ್ಮಿಕ ಬೆಂಕಿ: 2 ಲಕ್ಷ ಮೌಲ್ಯದ ಗುಜರಿ ಸಾಮಗ್ರಿ ಬೆಂಕಿಗಾಹುತಿ
BJP; ಜಿಗಜಿಣಗಿ ಹಠಾವೋ, ಬಿಜೆಪಿ ಬಚಾವೋ ಘೋಷಣೆ, ಪ್ರತಿಭಟನೆ