ವಿಷ ಬೀಜ ಬಿತ್ತುವವರ ಆಟ ನಡೆಯಲ್ಲ


Team Udayavani, Mar 4, 2018, 1:39 PM IST

vij-6.jpg

ಬಸವನಬಾಗೇವಾಡಿ: ಬಸವಣ್ಣನವರು ಜಾತಿರಹಿತ ನವ ಸಮಾಜ ನಿರ್ಮಾಣ ಮಾಡಿದ್ದಾರೆ. ಇಲ್ಲಿ ಯಾರೆ ಬಂದು ಜಾತಿ, ಧರ್ಮದ ವಿಷ ಬೀಜ ಬಿತ್ತಿದರು ಕೂಡಾ ಅದು ನಾಟಿಯಾಗಿ ಬೆಳೆದು ಹೆಮ್ಮರವಾಗುವ ಸಾಧ್ಯವಿಲ್ಲ ಎಂದು ವಿಧಾನ ಪರಿಷತ್‌ ಸದಸ್ಯ ಸಿ.ಎಂ. ಇಬ್ರಾಹಿಂ ಹೇಳಿದರು.

ತಾಲೂಕಿನ ಮಸಿಬಿನಾಳ ಗ್ರಾಮದಲ್ಲಿ ದರ್ಗಾ ಹಜರತ್‌ ಮೈಹಿಬೂಸುಬಾನಿ ಮತ್ತು ಜಾಮೀಯಾ ಮಸಜಿದ್‌ ಕಮಿಟಿ ವತಿಯಿಂದ ನಿರ್ಮಿಸಲಾದ ನೂತನ ಶಾದಿಮಹಲ್‌ ಉದ್ಘಾಟಿಸಿ ಅವರು ಮಾತನಾಡಿದರು.

12ನೇ ಶತಮಾತದಲ್ಲಿ ಅಣ್ಣ ಬಸವಣ್ಣನವರು ಅನುಭವ ಮಂಟಪ ನಿರ್ಮಿಸಿ ಜಾತಿ ರಹಿತ ಸಮಾಜ ಕಟ್ಟಿದ್ದಾರೆ. ಇಂತಹ ದೇಶದಲ್ಲಿ ಜಾತಿ ಧರ್ಮದ ಬಗ್ಗೆ ವಿಷ ಬೀಜ ಬಿತ್ತುವರ ಆಟ ನಡೆಯುವುದಿಲ್ಲ. ಆ ಆಟಕ್ಕೆ ಕಡಿವಾಣ ಹಾಕುವುದು ಪ್ರತಿಯೊಬ್ಬ ವ್ಯಕ್ತಿಯ ಜವಾಬ್ದಾರಿಯಾಗಿದೆ ಎಂದರು.

ಬಿಜೆಪಿಗೆ ಚುನಾವಣೆ ಬಂದಾಗ ಮಾತ್ರ ಹಿಂದೂಗಳು ನೆನಪಾಗುತ್ತಾರೆ. ಹಿಂದೂ ಧರ್ಮದ ಮಾತುಗಳನ್ನು ಬಳಸುತ್ತಾರೆ. ಚುನಾವಣೆ ಬಳಿಕ ಅನಂತಕುಮಾರ ಮುಂದೆ ಮುಂದೆ ಯಡಿಯೂರಪ್ಪ ಹಿಂದೆ ಹಿಂದೆ ಧರ್ಮ ಹೋಗುತ್ತದೆ ಎಂದು ಟೀಕೆ ಮಾಡಿದ ಅವರು, ಭಾರತ ದೇಶದಲ್ಲಿ ಬದುಕುವ ಪ್ರತಿಯೊಬ್ಬ ಹಿಂದು ಮುಸ್ಲಿಂರು ಒಂದೇ ತಾಯಿ ಮಕ್ಕಳ ಹಾಗೆ ಬಾಳಬೇಕು. ಅಂದಾಗ ಮಾತ್ರ ದೇಶ ಅಭಿವೃದ್ಧಿ ಪಥದತ್ತ ಸಾಗಲು ಸಾಧ್ಯವಾಗುತ್ತದೆ ಎಂದು ಹೇಳಿದರು.

ನಾನು ಯೋಜನಾ ಆಯೋಗದ ಊಪಾಧ್ಯಕ್ಷನಾಗಿದ್ದಾಗ ಬಳಿಕ ಬಸವತತ್ವ ಆಧಾರದ ಮೇಲೆ ನಡೆದುಕೊಂಡಿದ್ದೇನೆ. ನಾನು ಮುಸ್ಲಿಂ ಧರ್ಮದಲ್ಲಿ ಜನಿಸಿದರು ಕೂಡಾ ಬಸವ ತತ್ವದ ಪ್ರತಿಪಾದಕ. ಹೀಗಾಗಿಯೇ ನಾನು ಯೋಜನಾ ಆಯೋಗದ ಅಧ್ಯಕ್ಷನಾದ ಬಳಿಕ ಮಠ, ಮಂದಿರಗಳಲ್ಲಿ ಕಾರ್ಯ ನಿರ್ವಹಿಸುವವರಿಗೆ 400 ರೂ. ಇದ್ದ ಭತ್ಯೆಉನ್ನು 5 ಸಾವಿರ ರೂ.ಗೆ ಏರಿಸಿದ್ದೇನೆ ಮತ್ತು ಮಠ, ಮಂದಿರಗಳ ಅಭಿವೃದ್ಧಿಗೆ ವಿಶೇಷ ಯೋಜನೆ ರೂಪಿಸಿದ್ದೇನೆ ಎಂದರು.
 
ಬಿಜೆಪಿಯವರು ಸಂವಿಧಾನ ಬದಲು ಮಾಡಲು ಬಂದಿದ್ದೇವೆ ಎಂದು ಹೇಳುತ್ತಿರುವುದು ತಪ್ಪು. ಸಂವಿಧಾನ ಬದಲಾದರೆ ದೇಶಕ್ಕೆ ಗಂಡಾಂತರ ತಪ್ಪಿದ್ದಲ್ಲ. ನಿನ್ನ ಧರ್ಮ ಇಷ್ಟ ಪಡು ಪರ ಧರ್ಮ ಗೌರವಿಸಬೇಕು ಹೊರತು ಬೇರೆ ಧರ್ಮದ ಬಗ್ಗೆ ಅ ಗೌರವ ತೋರಬಾರದು. ಅದು ಮನುಷ್ಯನ ಧರ್ಮವೇ ಅಲ್ಲ. ಅದಕ್ಕಾಗಿಯೇ ಬಸವಣ್ಣನವರ ತತ್ವಗಳು ಅವರ ಆಚಾರ ವಿಚಾರಗಳು. ಪ್ರತಿಯೊಬ್ಬರು ಪಠಣ ಮಾಡಿದ ವ್ಯಕ್ತಿ ಬಾಯಲ್ಲಿ ಇಂತಹ ಮಾತುಗಳು ಬರುವುದಿಲ್ಲ ಎಂದು ಹೇಳಿದರು.

ಮುಖ್ಯಮಂತ್ರಿ ಸಿದ್ದರಾಮಯ್ಯನವರಿಗೆ ಅಹಿಂದ ಮಾಡುವ ಮೊದಲು ನಾನು ಅವರಿಗೆ ಒಂದು ಸಲಹೆ ನೀಡಿದ್ದೆ. ನೀವು ಅಹಿಂದ ಸ್ಥಾಪಿಸಿ ಆದರೆ ಅದರಲ್ಲಿ ಬಸವಣ್ಣನವರ ತತ್ವ ಇರಲಿ ಎಂದು ಹೇಳಿದ್ದೆ. ನಾನು ಹೇಳಿದಂತೆ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಕಳೆದ 5 ವರ್ಷದಿಂದ ರಾಜ್ಯದಲ್ಲಿ ಬಸವತತ್ವದ ಆಧಾರದ ಮೇಲೆ ಆಡಳಿತ ನಡೆಸುತ್ತಿದ್ದಾರೆ ಎಂದರು. 

ಪ್ರಧಾನಿ ನರೇಂದ್ರ ಮೋದಿ ಅವರು ಮನ್‌ ಕಿ ಬಾತ್‌ ಹೇಳುವ ಬದಲು ಕಾಯಕ ಮಾಡಲಿ, ಅಂದಾಗ ಮಾತ್ರ ದೇಶ ಅಭಿವೃದ್ಧಿ ಪಥದತ್ತ ಸಾಗಲು ಸಾಧ್ಯ. ಕೇವಲ ಮಾತಿನಲ್ಲಿ ಹೊಟ್ಟೆ ತುಂಬಲ್ಲ. ಈ ದೇಶದ ಬೆನ್ನೆಲಬುವಾದ ರೈತರ ಸಾಲ ಮನ್ನಾ ಮಾಡಲಿ, ಅದನ್ನು ಬಿಟ್ಟು ದೇಶದ ಉದ್ಯಮಿಗಳ ಸಾಲ ಮನ್ನಾ ಮಾಡುವುದು ಯಾವ ನ್ಯಾಯ ಎಂದು ಪ್ರಶ್ನಿಸಿದರು.

ಯರನಾಳ ಮಠದ ಸಂಗನಬಸವ ಶ್ರೀಗಳು, ಮಸಬಿನಾಳದ ವಿರಕ್ತಮಠದ ಸಿದ್ದರಾಮ ಶ್ರೀಗಳು ಸಾನ್ನಿಧ್ಯ, ಶಾಸಕ ಶಿವಾನಂದ ಪಾಟೀಲ ಅಧ್ಯಕ್ಷತೆ ವಹಿಸಿದ್ದರು. ಕೊಲ್ಹಾರ ಬ್ಲಾಕ್‌ ಕಾಂಗ್ರೆಸ್‌ ಅಧ್ಯಕ್ಷ ಆರ್‌.ಬಿ. ಪಕಾಲಿ, ಬಸವನಬಾಗೇವಾಡಿ ಬ್ಲಾಕ್‌ ಅಧ್ಯಕ್ಷ ಈರಣ್ಣ ಪಟ್ಟಣಶೆಟ್ಟಿ, ಜಿಪಂ ಮಾಜಿ ಅಧ್ಯಕ್ಷ ಚಂದ್ರಶೇಖರ ಪಾಟೀಲ, ರಾಜುಗೌಡ ಪಾಟೀಲ, ಹನಿಫ್‌ ಮಕಾನದಾರ, ಉಸ್ಮಾನ ಪಟೇಲ್‌, ಎಸ್‌.ಎಂ. ಪಟೇಲ್‌ (ಗಣಿಯಾರ), ಎ.ಬಿ. ಪಾಟೀಲ, ಸಲೀಂ ನಾಗಠಾಣ, ಎಂ.ಸಿ. ಮುಲ್ಲಾ, ಬೀರಪ್ಪ ಸಾಸನೂರ, ಬಾಬುಗೌಡ ಪಾಟೀಲ, ಜಿ.ಎಂ. ದೊಡ್ಡಮನಿ, ಎ.ಎಂ. ಹಿಪ್ಪರಗಿ, ಬಸವರಾಜ ಸೋಮಪು, ಡಿ.ಎಂ. ಬಡಿದಾಳ, ಈರನಗೌಡ ಪಾಟೀಲ, ಎಂ.ಎಚ್‌.
ಹತ್ತರಕಿಹಾಳ, ಐ.ಎನ್‌. ಕರ್ನಾಳ, ಮೌಲಾಸಾಬ ಅತ್ತಾರ, ಶಾಂತಪ್ಪ ಬೈಚನಳ, ಬಾಬಾಗೌಡ ಪಾಟೀಲ, ದಾನಪ್ಪ ತೋಟದ, ಮೈಬೂಬಸಾಬ ಗಣಿ, ಎ.ಎಲ್‌. ಗಂಗೂರ, ಕೆ.ಸಿ. ಕಾರಜೋಳ ಇದ್ದರು. ಜಮೀರ ಸೈಯದ್‌ ಸ್ವಾಗತಿಸಿದರು. ಬಿ.ಎಸ್‌. ಅಗಸಬಾಳ ನಿರೂಪಿಸಿದರು. ದಾದಾಪಿರ್‌ ಜೌರಸಂಗ ವಂದಿಸಿದರು.

ಟಾಪ್ ನ್ಯೂಸ್

LSG vs CSK: ಲಕ್ನೋದಲ್ಲೂ ಚೆನ್ನೈ  ಫೇವರಿಟ್‌

LSG vs CSK: ಲಕ್ನೋದಲ್ಲೂ ಚೆನ್ನೈ  ಫೇವರಿಟ್‌

1-qwewqeqwe

Cerelac ಶಿಶು ಆಹಾರದಲ್ಲಿ ಹೆಚ್ಚುವರಿ ಸಕ್ಕರೆ ಬೆರೆತಿದೆ: ಗಂಭೀರ ಆರೋಪ

1-kudre

Horse riding ಎಚ್ಚರಿಕೆ: ಅಪಾಯಕಾರಿ ಗ್ಲ್ಯಾಂಡರ್ಸ್‌ ಸೋಂಕು ಅಂಟಿಕೊಂಡೀತು ಹುಷಾರು!

Rahul Gandhi 3

BJP ಮಾಧ್ಯಮಗಳಿಂದ ನನಗೆ ನಿತ್ಯ ನಿಂದನೆ: ರಾಹುಲ್‌ ಗಾಂಧಿ ಆರೋಪ

1-qewqeqwe

TIME; ವಿಶ್ವದ 100 ಪ್ರಭಾವಿಗಳ ಪೈಕಿ ಆಲಿಯಾ, ಪ್ರಿಯಂವದ

1-aewr

DRDO; ನಿರ್ಭಯ್‌ ಪರೀಕ್ಷಾರ್ಥ ಉಡಾವಣೆ ಯಶಸ್ವಿ

1eewqe

Iran ವಶದಲ್ಲಿದ್ದ ಹಡಗಿನ ಮಹಿಳಾ ಸಿಬಂದಿ ವಾಪಸ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ganihara

Vijayapura; ವಿಕಸಿತ ಭಾರತದಲ್ಲಾಗಿರುವ ಅಭಿವೃದ್ಧಿ ಏನು: ಕೆಪಿಸಿಸಿ ವಕ್ತಾರ ಗಣಿಹಾರ ಪ್ರಶ್ನೆ

Bengaluru ಗ್ರಾಮಾಂತರದಲ್ಲಿ ಕಾಂಗ್ರೆಸ್‌ 500 ಕೋಟಿ ರೂ. ಖರ್ಚು’

Bengaluru ಗ್ರಾಮಾಂತರದಲ್ಲಿ ಕಾಂಗ್ರೆಸ್‌ 500 ಕೋಟಿ ರೂ. ಖರ್ಚು’

Congress ಗೆ ದೇಶದಲ್ಲಿ 40 ಸ್ಥಾನ ಸಿಗೋದು ಕಷ್ಟ, ರಾಜ್ಯದಲ್ಲಿ ಬಿಜೆಪಿಗೆ 28 ಸ್ಥಾನ ಸ್ಪಷ್ಟ

Congress ಗೆ ದೇಶದಲ್ಲಿ 40 ಸ್ಥಾನ ಸಿಗೋದು ಕಷ್ಟ, ರಾಜ್ಯದಲ್ಲಿ ಬಿಜೆಪಿಗೆ 28 ಸ್ಥಾನ ಸ್ಪಷ್ಟ

2018ರಲ್ಲಿ ನಡೆದ ಬಾಲ್ಯ ವಿವಾಹ ಪ್ರಕರಣ: 7 ಜನರಿಗೆ ಕಠಿಣ ಶಿಕ್ಷೆ ವಿಧಿಸಿದ ನ್ಯಾಯಾಲಯ

2018ರಲ್ಲಿ ನಡೆದ ಬಾಲ್ಯ ವಿವಾಹ ಪ್ರಕರಣ: 7 ಜನರಿಗೆ ಕಠಿಣ ಶಿಕ್ಷೆ ವಿಧಿಸಿದ ನ್ಯಾಯಾಲಯ

UPSC Result: ವಿಜಯಪುರದ ವಿಜೇತಾಗೆ ಯುಪಿಎಸ್‍ಸಿಯಲ್ಲಿ 100ನೇ ರ್‍ಯಾಂಕ್

UPSC Result: ವಿಜಯಪುರದ ವಿಜೇತಾಗೆ ಯುಪಿಎಸ್‍ಸಿಯಲ್ಲಿ 100ನೇ ರ್‍ಯಾಂಕ್

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

LSG vs CSK: ಲಕ್ನೋದಲ್ಲೂ ಚೆನ್ನೈ  ಫೇವರಿಟ್‌

LSG vs CSK: ಲಕ್ನೋದಲ್ಲೂ ಚೆನ್ನೈ  ಫೇವರಿಟ್‌

Election Commission: ಪ್ರಿಯಾಂಕ್‌ ಖರ್ಗೆ, ಡಿಕೆಶಿ ವಿರುದ್ಧ ಚು.ಆಯೋಗಕ್ಕೆ ಬಿಜೆಪಿ ದೂರು

Election Commission: ಪ್ರಿಯಾಂಕ್‌ ಖರ್ಗೆ, ಡಿಕೆಶಿ ವಿರುದ್ಧ ಚು.ಆಯೋಗಕ್ಕೆ ಬಿಜೆಪಿ ದೂರು

1-qwewqeqwe

Cerelac ಶಿಶು ಆಹಾರದಲ್ಲಿ ಹೆಚ್ಚುವರಿ ಸಕ್ಕರೆ ಬೆರೆತಿದೆ: ಗಂಭೀರ ಆರೋಪ

Congress party: ಮಾಲೀಕಯ್ಯ ಗುತ್ತೇದಾರ್‌ ಇಂದು ಕಾಂಗ್ರೆಸ್‌ ಸೇರ್ಪಡೆ

Congress party: ಮಾಲೀಕಯ್ಯ ಗುತ್ತೇದಾರ್‌ ಇಂದು ಕಾಂಗ್ರೆಸ್‌ ಸೇರ್ಪಡೆ

Lok Sabha election: ಗುರುವಾರ 21.48 ಕೋ.ರೂ. ಮೌಲ್ಯದ ಚುನಾವಣ ಅಕ್ರಮ ಪತ್ತೆ

Lok Sabha election: ಗುರುವಾರ 21.48 ಕೋ.ರೂ. ಮೌಲ್ಯದ ಚುನಾವಣ ಅಕ್ರಮ ಪತ್ತೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.