ನನ್ನದು ಮಾತು ಕಡಿಮೆ, ಕೆಲಸ ಹೆಚ್ಚು


Team Udayavani, Mar 5, 2018, 3:46 PM IST

vij-6.jpg

ಬಸವನಬಾಗೇವಾಡಿ: ನನ್ನ 20 ವರ್ಷ ಶಾಸಕರ ಕಾಲಾವಧಿಯಲ್ಲಿ ಮಾಡದಿರದಷ್ಟು ಅಭಿವೃದ್ಧಿ ಕಾರ್ಯಗಳು ಕಳೆದ 4 ವರ್ಷದ ಅವಧಿಯಲ್ಲಿ ಬಸವನಬಾಗೇವಾಡಿ ಮತಕ್ಷೇತ್ರಕ್ಕೆ ಮಾಡಿದ ನನಗಿದೆ ಎಂದು ಕರ್ನಾಟಕ ನಗರ ನೀರು ಸರಬುರಾಜು ಮತ್ತು ಒಳಚರಂಡಿ ಮಂಡಳಿ ಅಧ್ಯಕ್ಷ, ಶಾಸಕ ಶಿವಾನಂದ ಪಾಟೀಲ ಹೇಳಿದರು.

ರವಿವಾರ ಪಟ್ಟಣದ ಹೃದಯ ಭಾಗದಲ್ಲಿ 3.07 ಎಕರೆ ಜಾಗೆಯಲ್ಲಿ 32.73 ಕೋಟಿ ವೆಚ್ಚದಲ್ಲಿ ನೂತನ ಮೆಗಾ ಮಾರುಕಟ್ಟೆ ನಿರ್ಮಾಣದ ಕಾಮಗಾರಿಗೆ ಭೂಮಿ ಪೂಜೆ ನೆರವೇರಿಸಿ ಅವರು ಮಾತನಾಡಿದರು.

ನಾನು ತಿಕೋಟಾ, ಬಸವನಬಾಗೇವಾಡಿ ಮತಕ್ಷೇತ್ರದಲ್ಲಿ 4 ಬಾರಿ ಶಾಸಕನಾಗಿ ಆಯ್ಕೆಯಾಗಿದ್ದೇನೆ. ನಾನು ಮಾಡಿರುವ ಪ್ರತಿಯೊಂದು ಅಭಿವೃದ್ಧಿ ಕಾರ್ಯಗಳು ಜನತೆಯ ಮನದಲ್ಲಿ ಶಾಶ್ವತವಾಗಿ ನೆಲೆಯೂರಿವೆ. ಅಭಿವೃದ್ಧಿ ವಿಷಯದಲ್ಲಿ ನಾನೆಂದು ರಾಜಕೀಯ ಮಾಡಿಲ್ಲ. ನಾನು ಮಾಡಿರುವ ಕೆಲಸಗಳೆ ನನಗೆ ಶ್ರೀರಕ್ಷೆ. ನಾನು ಮಾತನಾಡುವುದು ಕಮ್ಮಿ ಆದರೆ ಕೆಲಸ ಮಾಡುವುದು ಹೆಚ್ಚು. ಹೀಗಾಗಿ ಕ್ಷೇತ್ರ ಕೆಲವು ಸಾಮಾನ್ಯ ಜನರಿಗೆ ನಾನು ಸಿಗದೇ ಇರಬಹುದು. ಆದರೆ ಪ್ರತಿಯೊಬ್ಬ ಕ್ಷೇತ್ರ ಸಾಮಾನ್ಯ ವರ್ಗದ ಜನರಿಗೂ ಕೆಲಸದ ಮೂಲಕ ಅವರ ಋಣವನ್ನು ತೀರಿಸಿದ್ದೇನೆ ಎಂಬ ತೃಪ್ತಿ ನನಗಿದೆ ಎಂದರು.

ಕಳೆದ ನಾಲ್ಕುವರೆ ವರ್ಷದಲ್ಲಿ ಬಸವನಬಾಗೇವಾಡಿ ಮತಕ್ಷೇತ್ರದಲ್ಲಿ 2 ರಾಜ್ಯ ಹೆದ್ದಾರಿ 7 ಪ್ರಮುಖ ರಸ್ತೆಯನ್ನು ದ್ವಿಪಥ ಮಾಡುವುದರ ಜೊತೆಗೆ ಕ್ಷೇತ್ರದ ಪ್ರತಿಯೊಂದು ಹಳ್ಳಿಗೂ ಉತ್ತಮ ರಸ್ತೆ, ಸುಸಜ್ಜಿತ ಸರಕಾರಿ ಕಟ್ಟಡಗಳು, 3 ಪಟ್ಟಣ ಪಂಚಾಯತ್‌, 2 ಹೋಬಳಿ ಕೇಂದ್ರ, 2 ತಾಲೂಕು ಕೇಂದ್ರ ಸೇರಿದಂತೆ ಕ್ಷೇತ್ರದ ಸರ್ವಾಂಗೀಣ ಅಭಿವೃದ್ಧಿಗೆ ಒತ್ತು ನೀಡಿ ಜಿಲ್ಲೆಯಲ್ಲೇ ಮಾದರಿ ಕ್ಷೇತ್ರವಾಗಿ ಹೊರ ಹೊಮ್ಮಿದೆ ಎಂದರು. 

ಬಸವನಬಾಗೇವಾಡಿ ಪಟ್ಟಣಕ್ಕೆ 46 ಕೋಟಿ ವೇಚ್ಚದಲ್ಲಿ 24*7 ಕುಡಿಯುವ ನೀರು ಯೋಜನೆಗೆ ಮಂಜೂರಾತಿ ಸಿಕ್ಕಿದೆ. ಇಂಗಳೇಶ್ವರ, ಕೊಲ್ಹಾರ, ಮನಗೂಳಿ ಸೇರಿದಂತೆ ಅನೇಕ ಹಳ್ಳಿಗಳಿಗೆ ಕೃಷ್ಣಾ ನದಿಯಿಂದ ಬಹುಹಳ್ಳಿ ಕುಡಿಯುವ ನೀರಿನ ಯೋಜನೆ ಜಾರಿಯಾಗಲಿದೆ ಎಂದು ಹೇಳಿದರು. 

ಪುರಸಭೆ ಅಧ್ಯಕ್ಷೆ ಪರಿಜಾನ ಚೌಧರಿ ಅಧ್ಯಕ್ಷತೆ ವಹಿಸಿದ್ದರು. ಬ್ಲಾಕ್‌ ಕಾಂಗ್ರೆಸ್‌ ಅಧ್ಯಕ್ಷ ಈರಣ್ಣ ಪಟ್ಟಣಶೆಟ್ಟಿ, ಜಿಲ್ಲಾ ಮಹಿಳಾ ಘಟಕದ ಅಧ್ಯಕ್ಷೆ ಮಹಾದೇವಿ ಗೋಕಾಕ, ಬ್ಲಾಕ್‌ ಅಧ್ಯಕ್ಷೆ ರುಕ್ಮಿàಣಿ ರಾಠೊಡ, ಬಸಣ್ಣ ದೇಸಾಯಿ, ವೈ.ಡಿ. ನಾಯ್ಕೋಡಿ, ಬಾಲಚಂದ್ರ ಮುಂಜಾನೆ, ಶಿವನಗೌಡ ಬಿರಾದಾರ, ಬಸಣ್ಣ ಹಾರಿವಾಳ, ಎಸ್‌.ಎಸ್‌. ಜಾಲಗೇರಿ, ಸದಾನಂದ ಯಳಮೇಲಿ, ಸಿದ್ದಣ್ಣ ಮೋದಿ, ಅಶೋಕ ಹಾರಿವಾಳ, ಅನಿಲ ಪವಾರ, ಅಬ್ಬು ಚೌಧರಿ, ಆರ್‌.ಬಿ. ದೇಶಬಾಂಡೆ, ಮೈಬೂ ಗಣಿ, ಗುರಲಿಂಗ ಹಡಪದ, ಮುತ್ತು
ಪತ್ತಾರ, ಮೇರಾಸಾಬ ಕೊರಬು, ಸುರೇಶ ಮಣ್ಣೂರ, ಬಸಗೊಂಡ ಹಾದಿಮನಿ, ಶ್ರೀದೇವಿ ಲಮಾಣಿ, ಮುತ್ತು ಉಕ್ಕಲಿ, ಸಂಗಮೇಶ ಓಲೇಕಾರ, ರವಿ ತಿಪ್ಪನಗೌಡ, ಲೋಕನಾಥ ಅಗರವಾಲ, ಮಹಾದೇವ ಮುರಗಿ, ರವಿ ರಾಠೊಡ ಇದ್ದರು.

ಪುರಸಭೆ ಮುಖ್ಯಾಧಿಕಾರಿ ಬಿ.ಎ. ಸೌದಾಗರ ಪ್ರಾಸ್ತಾವಿಕ ಮಾತನಾಡಿದರು. ಬಸವರಾಜ ತುಂಬಗಿ ಸ್ವಾಗತಿಸಿದರು. ಗಿರಿಜಾ ಪಾಟೀಲ, ಎಚ್‌.ಬಿ. ಬಾರಿಕಾಯಿ ನಿರೂಪಿಸಿದರು. ಶಂಕರಗೌಡ ಬಿರಾದಾರ ವಂದಿಸಿದರು 

ಟಾಪ್ ನ್ಯೂಸ್

Kota: ಬೈಕ್‌ ಅಪಘಾತ; ಯುವಕ ಸಾವು

Kota: ಬೈಕ್‌ ಅಪಘಾತ; ಯುವಕ ಸಾವು

Uppinangady : ಗ್ರಾ.ಪಂ. ಸಿಬಂದಿ ಆತ್ಮಹತ್ಯೆ

Uppinangady : ಗ್ರಾ.ಪಂ. ಸಿಬಂದಿ ಆತ್ಮಹತ್ಯೆ

Subrahmanya: ಬಸ್ಸಿನಿಂದ ಬಿದ್ದು ಪ್ರಯಾಣಿಕ ಸಾವು

Subrahmanya: ಬಸ್ಸಿನಿಂದ ಬಿದ್ದು ಪ್ರಯಾಣಿಕ ಸಾವು

ಬರ ಪರಿಹಾರದಲ್ಲಿ ಸಿಎಂ, ಕಾಂಗ್ರೆಸ್‌ ರಾಜಕೀಯ: ಅಶೋಕ್‌

ಬರ ಪರಿಹಾರದಲ್ಲಿ ಸಿಎಂ, ಕಾಂಗ್ರೆಸ್‌ ರಾಜಕೀಯ: ಅಶೋಕ್‌

“ಬರ ಪರಿಹಾರ ಕೊಡಿ, ಇಲ್ಲವೇ ರಾಜ್ಯಕ್ಕೆ ಬರಲೇಬೇಡಿ’

“ಬರ ಪರಿಹಾರ ಕೊಡಿ, ಇಲ್ಲವೇ ರಾಜ್ಯಕ್ಕೆ ಬರಲೇಬೇಡಿ’

Gold price drops by Rs 1,530 in one day

Gold Rate; ಚಿನ್ನದ ಬೆಲೆ ಒಂದೇ ದಿನ 1,530 ರೂ. ಇಳಿಕೆ: ಗ್ರಾಹಕರಿಗೆ ನಿರಾಳ

ನಿಮ್ಮ ಮನೆ ದೇವರು, ಮತದಾರರು ಒಳ್ಳೆಯದು ಮಾಡ್ತಾರಾ?: ಡಿಕೆಶಿ

ನಿಮ್ಮ ಮನೆ ದೇವರು, ಮತದಾರರು ಒಳ್ಳೆಯದು ಮಾಡ್ತಾರಾ?: ಡಿಕೆಶಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

13-

Muddebihal: ಅಪರಿಚಿತ ವಾಹನ ಡಿಕ್ಕಿ: ಯುವಕ ಸಾವು

Vijayapura; Complaint to Election Commission against Yatnal: Shivananda Patil

Vijayapura; ಯತ್ನಾಳ್ ವಿರುದ್ಧ ಚುನಾವಣಾ ಆಯೋಗಕ್ಕೆ ದೂರು: ಶಿವಾನಂದ ಪಾಟೀಲ

Vijayapura; ಚುನಾವಣಾ ಬಾಂಡ್ ತನಿಖೆಯಾದರೆ ಮೋದಿ ಜೈಲಿಗೆ: ಎಂ.ಬಿ. ಪಾಟೀಲ್

Vijayapura; ಚುನಾವಣಾ ಬಾಂಡ್ ತನಿಖೆಯಾದರೆ ಮೋದಿ ಜೈಲಿಗೆ: ಎಂ.ಬಿ. ಪಾಟೀಲ್

1-wqqw

Vijayapura: ಬಿರುಗಾಳಿ-ಸಿಡಿಲ ಅಬ್ಬರದ ಮಳೆಯ ಅವಾಂತರ

Lok Sabha Polls; ಎ. 26: ವಿಜಯಪುರಕ್ಕೆ ರಾಹುಲ್‌ ಗಾಂಧಿ 

Lok Sabha Polls; ಎ. 26: ವಿಜಯಪುರಕ್ಕೆ ರಾಹುಲ್‌ ಗಾಂಧಿ 

MUST WATCH

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

ಹೊಸ ಸೇರ್ಪಡೆ

Kota: ಬೈಕ್‌ ಅಪಘಾತ; ಯುವಕ ಸಾವು

Kota: ಬೈಕ್‌ ಅಪಘಾತ; ಯುವಕ ಸಾವು

Uppinangady : ಗ್ರಾ.ಪಂ. ಸಿಬಂದಿ ಆತ್ಮಹತ್ಯೆ

Uppinangady : ಗ್ರಾ.ಪಂ. ಸಿಬಂದಿ ಆತ್ಮಹತ್ಯೆ

Subrahmanya: ಬಸ್ಸಿನಿಂದ ಬಿದ್ದು ಪ್ರಯಾಣಿಕ ಸಾವು

Subrahmanya: ಬಸ್ಸಿನಿಂದ ಬಿದ್ದು ಪ್ರಯಾಣಿಕ ಸಾವು

ಬರ ಪರಿಹಾರದಲ್ಲಿ ಸಿಎಂ, ಕಾಂಗ್ರೆಸ್‌ ರಾಜಕೀಯ: ಅಶೋಕ್‌

ಬರ ಪರಿಹಾರದಲ್ಲಿ ಸಿಎಂ, ಕಾಂಗ್ರೆಸ್‌ ರಾಜಕೀಯ: ಅಶೋಕ್‌

“ಬರ ಪರಿಹಾರ ಕೊಡಿ, ಇಲ್ಲವೇ ರಾಜ್ಯಕ್ಕೆ ಬರಲೇಬೇಡಿ’

“ಬರ ಪರಿಹಾರ ಕೊಡಿ, ಇಲ್ಲವೇ ರಾಜ್ಯಕ್ಕೆ ಬರಲೇಬೇಡಿ’

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.