ಅಕಾಲಿಕ ಮಳೆ: ಜನಜೀವನ ಅಸ್ತವ್ಯಸ್ಥ
Team Udayavani, May 12, 2018, 4:36 PM IST
ನಿಡಗುಂದಿ: ಶುಕ್ರವಾರ ಸಂಜೆ ಸುರಿದ ಮಳೆ, ಬೀಸಿದ ಭಾರಿ ಗಾಳಿಗೆ ಪಟ್ಟಣ ಸೇರಿದಂತೆ ನಾನಾ ಕಡೆ ಪತ್ರಾಸ್ಗಳು ಹಾರಿ, ಗಿಡಗಳು ನೆಲಕ್ಕುರುಳಿದ ಘಟನೆ ನಡೆದಿದೆ. ಪಟ್ಟಣದ ಹೊರವಲಯದ ಮುದ್ದೇಬಿಹಾಳ ಕ್ರಾಸ್ ಬಳಿ ಇರುವ ಅಂಗಡಿಯ ಪತ್ರಾಸ್ಗಳು ಹಾರಿ ಹೋಗಿವೆ. ಸುರಿದ ಮಳೆ ಕಮದಾಳ ಪುನರ್ವಸತಿ ಕೇಂದ್ರದ ಹಲವಾರು ಮನೆಗಳಿಗೆ
ಚರಂಡಿ ನೀರು ಒಮ್ಮಲೆ ನುಗ್ಗಿದೆ. ಶಂಕ್ರಯ್ಯ ಹಿರೇಮಠ ಅವರಿಗೆ ಸೇರಿದ ಮನೆಗಳು, ಅಂಗಡಿಗಳಿಗೆ ನೀರು ಹೊಕ್ಕಿದೆ. ಕೆಲ ಗಿಡಗಳು ಕೂಡಾ ನೆಲಕ್ಕುರುಳಿವೆ. ಇನ್ನೂ ಆಲಮಟ್ಟಿ, ಬೇನಾಳ, ವಂದಾಲ, ಗೊಳಸಂಗಿ ಭಾಗದಲ್ಲಿಯೂ ಭಾರಿ
ಪ್ರಮಾಣದಲ್ಲಿ ಗಾಳಿ ಬೀಸಿದ್ದು, ಮಳೆ ಕೂಡಾ ಸುರಿದಿದೆ. ಸಂಜೆಯವರೆಗೂ ಜಿಟಿ ಜಿಟಿ ಮಳೆಯ ಅಬ್ಬರ ಮುಂದುವರಿದಿತ್ತು. ನಿಡಗುಂದಿ ಪಟ್ಟಣದಲ್ಲಿ ಹಲವೆಡೆ ವಿದ್ಯುತ್ ತಂತಿಗಳು ಹರಿದು ಬಿದ್ದಿವೆ. ಹೀಗಾಗಿ ವಿದ್ಯುತ್ ಸಂಪರ್ಕ ಕಡಿತಗೊಂಡಿ¨
ಅಪಾರ ಹಾನಿ
ಆಲಮಟ್ಟಿ: ಪಟ್ಟಣವೂ ಸೇರಿದಂತೆ ಸುತ್ತಮುತ್ತಲಿನ ಗ್ರಾಮಗಳಲ್ಲಿ ಗುಡುಗು, ಮಿಂಚು ಮಿಶ್ರಿತ ಬಿರುಗಾಳಿ ಸಮೇತ ಸುರಿದ ಮಳೆಗೆ ಅಪಾರ ಹಾನಿ ಸಂಭವಿಸಿದೆ. ಶುಕ್ರವಾರ ಸಂಜೆ ಸುರಿದ ಮಳೆಗೆ ಆಲಮಟ್ಟಿ, ಅರಳದಿನ್ನಿ, ಬೇನಾಳ, ಚಿಮ್ಮಲಗಿ, ವಂದಾಲ ಸೇರಿದಂತೆ ಸುತ್ತಮುತ್ತಲಿನ ಗ್ರಾಮಗಳಲ್ಲಿ ಬಿರುಗಾಳಿಗೆ ಗಿಡ, ಮರ, ವಿದ್ಯುತ್ ಕಂಬಗಳು
ಧರೆಗುರುಳಿದ್ದಲ್ಲದೇ ಶೆಡ್ಡುಗಳಿಗೆ ಹಾಕಲಾಗಿದ್ದ ತಗಡು ಹಾರಿ ಎಲ್ಲೆಂದರಲ್ಲಿ ಬಿದ್ದಿರುವ ಬಗ್ಗೆ ವರದಿಯಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Sringeri Sharadamba Temple; ಪ್ರಧಾನಿ ಮೋದಿ ಹೆಸರಲ್ಲಿ ಸಹಸ್ರನಾಮ ಪೂಜೆ
ಮೊದಲ ಬಾರಿ ಕುಂದಾನಗರಿಯಲ್ಲಿ ಪ್ರಧಾನಿ ಮೋದಿ ವಾಸ್ತವ್ಯ; 28ಕ್ಕೆ ಸಮಾವೇಶ
ಬಿಸಿಲ ಝಳದಿಂದ ಮೈದಾನಗಳು ಖಾಲಿ; ಮಕ್ಕಳ ಆಟಕ್ಕೂ ಉರಿ ಬಿಸಿಲು ಅಡ್ಡಿ!
Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ
INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್