ಆರ್ಥಿಕ ಹೊರೆ ತಪ್ಪಿಸಿ: ನಾಯಕ
Team Udayavani, May 18, 2018, 12:35 PM IST
ವಿಜಯಪುರ: ಪ್ರಸ್ತುತ ಸಂದರ್ಭದಲ್ಲಿ ವಿದ್ಯಾರ್ಥಿನಿಯರು ತಾಂತ್ರಿಕ ಮಾಹಿತಿ ಶಿಕ್ಷಣ ಪಡೆದು ಶಿಕ್ಷಣಕ್ಕೆ ಅಗತ್ಯ ಇರುವ
ಆರ್ಥಿಕ ಸಂಪನ್ಮೂಲ ಸಂಗ್ರಹಿಸಿಕೊಳ್ಳಬೇಕು.
ಇದರಿಂದ ನಿಮ್ಮ ಶಿಕ್ಷಣಕ್ಕೆ ಪಾಲಕರ ಮೇಲಿನ ಆರ್ಥಿಕ ಹೊರೆ ತಪ್ಪಿಸುವ ಜೊತೆಗೆ ನಿಮ್ಮ ಸ್ವಾವಲಂಬಿ ಜೀವನ ಮಾದರಿ ಆಗಲಿದೆ ಎಂದು ಅಕ್ಕಮಹಾದೇವಿ ಮಹಿಳಾ ವಿಶ್ವವಿದ್ಯಾನಿಲಯದ ಕುಲಸಚಿವ ಪ್ರೊ|. ಎಲ್.ಆರ್. ನಾಯಕ ವಿದ್ಯಾರ್ಥಿನಿಯರಿಗೆ ಸಲಹೆ ನೀಡಿದರು.
ಅಕ್ಕಮಹಾದೇವಿ ಮಹಿಳಾ ವಿಶ್ವವಿದ್ಯಾನಿಲಯ ಜ್ಞಾನಶಕ್ತಿ ಆವರಣದ ಪ.ಜಾ-ಪ.ಪಂ. ಘಟಕ ಹಾಗೂ ಪತ್ರಿಕೋದ್ಯಮ ಮತ್ತು ಸಮೂಹ ಸಂವಹನ ವಿಭಾಗ ಇವರ ಸಂಯುಕ್ತಾಶ್ರಯದಲ್ಲಿ ಹಮ್ಮಿಕೊಂಡಿದ್ದ ಮುದ್ರಣ ವಿನ್ಯಾಸ
ಮತ್ತು ಕಲಾಕೃತಿ ಕಾರ್ಯಾಗಾರದ ಸಮಾರಂಭದಲ್ಲಿ ಮಾತನಾಡಿದ ಅವರು, ಸಮಾಜದಲ್ಲಿ ಒಳ್ಳೆಯ ಮಾತುಗಾರ,
ಕಲೆಗಾರ, ವಿನ್ಯಾಸಗಾರ, ಛಾಯಾಗ್ರಾಹಕ ಅಂದುಕೊಂಡಷ್ಟು ಸುಲಭದ ಕೆಲಸವಲ್ಲ. ಆದರೆ ಪರಿಶ್ರಮದಿಂದ ಯಶಸ್ಸು
ನಿಮ್ಮದಾಗುತ್ತದೆ ಎಂದು ವಿದ್ಯಾರ್ಥಿನಿಯರಿಗೆ ಕಿವಿಮಾತು ಹೇಳಿದರು.
ಹಿರಿಯ ಪತ್ರಕರ್ತ ದಿಲಾವರ ರಾಮದುರ್ಗ ಮಾತನಾಡಿ, ನಮ್ಮೊಳಗೆ ಇರುವ ಶಕ್ತಿ-ಸಾಮರ್ಥ್ಯ ಅರಿತು, ಸಮರ್ಥವಾಗಿ ಬಳಸಿಕೊಳ್ಳುವಲ್ಲಿ ನಾವು ವಿಫಲವಾಗುತ್ತೇವೆ. ನಿಮ್ಮಲ್ಲಿರುವ ಪ್ರತಿಭಾ ಶಕ್ತಿಯನ್ನು ಹೊರಹಾಕುವಲ್ಲಿ ಇಂತಹ ಕಾರ್ಯಾಗಾರಗಳು ನೆರವಾಗುತ್ತವೆ ಎಂದು ಹೇಳಿದರು.
ಅಧ್ಯಕ್ಷತೆ ವಹಿಸಿದ್ದ ಪತ್ರಿಕೋದ್ಯಮ ಮತ್ತು ಸಮೂಹ ಸಂವಹ ವಿಭಾಗದ ಮುಖ್ಯಸ್ಥ ಪ್ರೊ| ಓಂಕಾರ ಕಾಕಡೆಮಾತನಾಡಿ, ವಿದ್ಯಾರ್ಥಿನಿಯರು ಕೇವಲ ಒಂದು ಕೋರ್ಸ್ಗೆ ಮಾತ್ರ ಸೀಮಿತವಾಗದೆ ಎಲ್ಲ ವಿಭಾಗಗಳಲ್ಲಿ ಸಿಗುವ ಜ್ಞಾನ ಸಂಗ್ರಹಕ್ಕೆ ಮುಂದಾಗಬೇಕು. ಇದರಿಂದ ನಿಮ್ಮ ಭವಿಷ್ಯ ರೂಪಿಸಿಕೊಳ್ಳುವಲ್ಲಿ ಸಹಕಾರಿ ಆಗಲಿದೆ ಎಂದರು.
ಪ.ಜಾ.-ಪ.ಪಂ. ಘಟಕದ ನಿರ್ದೇಶಕ ಡಾ| ಸಕ್ಪಾಲ್ ಹೂವಣ್ಣ ಮಾತನಾಡಿದರು. ಜ್ಯೋತಿ ಕಿಂಗಾರ ಪ್ರಾರ್ಥಿಸಿದರು.
ಸುಷ್ಮಲತಾ ಸ್ವಾಗತಿಸಿದರು. ಅಂಬಿಕಾ ಕಟ್ಟಿಮನಿ ವಂದಿಸಿದರು. ವಿದ್ಯಾರ್ಥಿನಿ ಸೌಮ್ಯಶ್ರೀ ನಿರೂಪಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Vijayapura; ವಿಕಸಿತ ಭಾರತದಲ್ಲಾಗಿರುವ ಅಭಿವೃದ್ಧಿ ಏನು: ಕೆಪಿಸಿಸಿ ವಕ್ತಾರ ಗಣಿಹಾರ ಪ್ರಶ್ನೆ
Bengaluru ಗ್ರಾಮಾಂತರದಲ್ಲಿ ಕಾಂಗ್ರೆಸ್ 500 ಕೋಟಿ ರೂ. ಖರ್ಚು’
Congress ಗೆ ದೇಶದಲ್ಲಿ 40 ಸ್ಥಾನ ಸಿಗೋದು ಕಷ್ಟ, ರಾಜ್ಯದಲ್ಲಿ ಬಿಜೆಪಿಗೆ 28 ಸ್ಥಾನ ಸ್ಪಷ್ಟ
2018ರಲ್ಲಿ ನಡೆದ ಬಾಲ್ಯ ವಿವಾಹ ಪ್ರಕರಣ: 7 ಜನರಿಗೆ ಕಠಿಣ ಶಿಕ್ಷೆ ವಿಧಿಸಿದ ನ್ಯಾಯಾಲಯ
UPSC Result: ವಿಜಯಪುರದ ವಿಜೇತಾಗೆ ಯುಪಿಎಸ್ಸಿಯಲ್ಲಿ 100ನೇ ರ್ಯಾಂಕ್
MUST WATCH
ಹೊಸ ಸೇರ್ಪಡೆ
Gadag Incident; ದರೋಡೆಯ ಉದ್ದೇಶವಿಲ್ಲ; ಕೊಲೆ ಮಾಡಲೆಂದೆ ಬಂದಿದ್ದಾರೆ; ಐಜಿಪಿ ಹೇಳಿಕೆ
Udupi-ಚಿಕ್ಕಮಗಳೂರಿನಲ್ಲಿ ಬಿಜೆಪಿಗರೂ ಜೆಪಿ-ಜೆಪಿ ಎನ್ನುತ್ತಿದ್ದಾರೆ: ನಿಕೇತ್ರಾಜ್ ಮೌರ್ಯ
Food Safety: ಆಹಾರ ಸುರಕ್ಷೆ- ನೂರು ಪ್ರತಿಶತ ಖಾತರಿ ಅಗತ್ಯ
Gujarat Lok Sabha Constituency: ಗುಜರಾತ್ ಎಂಬ ಕೇಸರಿ ಕೋಟೆಗೆ ಲಗ್ಗೆ ಸಾಧ್ಯವೇ?
Lok Sabha Election: ಮಠಾಧೀಶರ ಆಶೀರ್ವಾದ ಪಡೆದ ಬಿಜೆಪಿ ಅಭ್ಯರ್ಥಿ ಗಾಯತ್ರಿ ಸಿದ್ದೇಶ್ವರ