ಮೊಬೈಲ್‌ ಕಳ್ಳನೆಂದು ಶಂಕಿಸಿ ಅಪರಿಚಿತನಿಗೆ ಧರ್ಮದೇಟು


Team Udayavani, Jun 4, 2018, 11:26 AM IST

vij-4.jpg

ಆಲಮಟ್ಟಿ: ವಾರದ ಸಂತೆಯಾದ ರವಿವಾರದಂದು ಸಂತೆಯಲ್ಲಿ ಕೆಲವು ವ್ಯಕ್ತಿಗಳ ಮೊಬೈಲ್‌ ಕಳ್ಳತನವಾಗಿದ್ದರಿಂದ ವ್ಯಕ್ತಿಯೊಬ್ಬನ ಶಂಕಾಸ್ಪದವಾಗಿ ಶಂಕಿಸಿ ಇಪ್ಪತ್ತಕ್ಕೂ ಹೆಚ್ಚು ಜನರು ಅಪರಿಚಿತ ವ್ಯಕ್ತಿಯನ್ನು ಥಳಿಸಿದ ಘಟನೆ ಜರುಗಿದೆ.

ಘಟನೆ ವಿವರ: ಆಲಮಟ್ಟಿಯ ವಾರದ ಸಂತೆಯು ರವಿವಾರವಾದ್ದರಿಂದ ಸಂತೆಗೆ ಆಗಮಿಸಿದ್ದ ಇಬ್ಬರ ವ್ಯಕ್ತಿಗಳ ಮೊಬೈಲ್‌ಗ‌ಳು ಹಾಗೂ ಓರ್ವ ವ್ಯಕ್ತಿಯ 5000 ರೂ. ಕಳ್ಳತನವಾಗಿದೆ. ಒಬ್ಬನ ಮೊಬೈಲ್‌ ಕಳ್ಳತನವಾಗುವಾಗ ಕಳ್ಳನನ್ನು ನೋಡಿ ಕಳ್ಳ ಕಳ್ಳ ಎಂದು ಚೀರಿದಾಗ, ಓರ್ವ ಯುವಕ ಓಡಿ ಹೋಗುವುದನ್ನು ಕಂಡ ಸಂತೆಗೆ ಬಂದ ಜನ ಅಪರಿಚಿವ ವ್ಯಕ್ತಿಯನ್ನು ಹಿಡಿಯಲು ಪ್ರಯತ್ನಿಸಿ ಕೊನೆಗೆ ಆ ವ್ಯಕ್ತಿಯನ್ನು ಹಿಡಿದು ಧರ್ಮದೇಟು ನೀಡಿದ್ದಾರೆ.

ತಪ್ಪಿಸಿಕೊಳ್ಳಲು ಯತ್ನ: ಸೇರಿದ ಜನರು ಧರ್ಮದೇಟು ನೀಡುತ್ತಿರುವಾಗ ವ್ಯಕ್ತಿಯೋರ್ವನನ್ನು ನೂಕಿ ಪರಾರಿಯಾಗಲು ಯತ್ನಿಸಿದ್ದಾನೆ. ಇದರಿಂದ ಕುಪಿತಗೊಂಡ ಜನ ಮತ್ತೆ ಥಳಿಸಲಾರಂಬಿಸಿದ್ದಾರೆ. ಆತ ಹೊಡೆತ ತಾಳಲಾರದೆ ಓಡಿ ಹೋಗಲು ಯತ್ನಿಸಿದ್ದಾನೆ. ಕೆಲ ಮನೆಗಳ ಕಾಂಪೌಂಡ್‌ ಹಾರಿ ಒಬ್ಬರ ಮನೆಯಲ್ಲಿ ಅಡಗಿದ್ದಾನೆ. ಅಷ್ಟರೊಳಗೆ ಅಲ್ಲಿಗೆ ಬಂದ ಗ್ರಾಮಸ್ಥರು ಹಾಗೂ ಸಂತೆಗೆ ಬಂದ ಹಲವು ಜನ ಸೇರಿ ಆತನನ್ನು ಹಿಗ್ಗಾಮುಗ್ಗಾ ಮತ್ತೆ ಥಳಿಸಿದ್ದಾರೆ.

ಆಲಮಟ್ಟಿಯಲ್ಲಿ ಪ್ರತಿ ರವಿವಾರವೂ ಸಂತೆ ನಡೆಯುತ್ತದೆ. ಇಲ್ಲಿಗೆ ನೂರಾರು ಹಳ್ಳಿಗಳಿಂದ ಜನರು ಸಂತೆಗೆ ಆಗಮಿಸುತ್ತಾರೆ. ಅವರ ರಕ್ಷಣೆಗೆ ಇಲ್ಲಿ ಯಾವ ಪೊಲೀಸರು ಇರುವುದಿಲ್ಲ. ಕಳ್ಳತನ ಘಟನೆಗಳು ಮೇಲಿಂದ ಮೇಲೆ ನಡೆದರೂ ಅದರ ಬಗ್ಗೆ ಪೊಲೀಸರು ಮಾತ್ರ ಮೌನವಾಗುತ್ತಾರೆ. ಈಗ ಸಿಕ್ಕಿರುವ ವ್ಯಕ್ತಿಯು ಕಳ್ಳನೋ ಅಥವಾ ನಿರಪರಾಧಿಯೋ ಎನ್ನುವುದನ್ನು ನೋಡದೇ ಸಂತೆಗೆ ಆಗಮಿಸಿದ್ದ ಜನ ಅಪರಿಚಿತ ವ್ಯಕ್ತಿಯನ್ನು ರಸ್ತೆ ಮೇಲೆ ಎಸೆದಿದ್ದಾರೆ. ಇಷ್ಟೆಲ್ಲಾ ಘಟನೆಯಾದರೂ ಯಾವೊಬ್ಬ ಪೊಲೀಸರು ಘಟನಾ ಸ್ಥಳಕ್ಕೆ ಬರಲಿಲ್ಲ ಎಂದು ನೆರೆದ ಜನ ಮಾತನಾಡುತ್ತಿರುವುದು ಕಂಡು ಬಂತು.

ಸಿಂದಗಿ ಪಟ್ಟಣದ ವಿಜಯನಗರ ಬಡಾವಣೆಯ ನಿವಾಸಿಯಾಗಿದ್ದೇನೆ. ನನ್ನ ಮಿತ್ರ ಆಲಮಟ್ಟಿಗೆ ಬರುವುದಾಗಿ ತಿಳಿಸಿದ್ದ, ಅದಕ್ಕಾಗಿ ನಾನು ಆಲಮಟ್ಟಿಗೆ ಬಂದಿದ್ದೆ. ಅಲ್ಲಿ ಬಂದು ಸರಾಯಿ ಕುಡಿದಿದ್ದೆ. ಆದರೆ ಮೊಬೈಲ್‌ ಕಳ್ಳತನ ಮಾಡಿಲ್ಲ. ಏಕಾಏಕಿ ನುಗ್ಗಿದ 20ಕ್ಕೂ ಅಧಿಕ ಜನ ಹಿಗ್ಗಾಮುಗ್ಗಾ ಥಳಿಸಿದರು. ಎಷ್ಟೇ ಮನವಿ ಮಾಡಿದರೂ ಬಿಡಲಿಲ್ಲ. ಜೀವದ ಸಂಕಟಕ್ಕೆ ಅಲ್ಲಿಂದ ಓಡಿ ಹೋದೆ, ಆಗ ಕಾಂಪೌಂಡ್‌ ಜಿಗಿದು ಒಬ್ಬರ ಮನೆಯಲ್ಲಿ ಅಡಗಿದ್ದೆ, ಅಲ್ಲಿಯೂ ಬಂದ ಜನ ನನ್ನನ್ನು ಹೊಡೆದರು. 
 ಹನುಮಂತ ಕಟ್ಟಿಮನಿ, ಥಳಿತಕ್ಕೊಳಗಾದ ವ್ಯಕ್ತಿ

ಮೊಬೈಲ್‌ ಕಳ್ಳತನದ ಬಗ್ಗೆ ಯಾರೂ ಕೂಡ ಮಾಹಿತಿ ನೀಡಿಲ್ಲ. ಆದರೆ ಸಂತೆಯಲ್ಲಿ ಮೊಬೈಲ್‌ ಹಾಗೂ ಹಣ ಕಳ್ಳತನ ಮಾಡಿದ ವ್ಯಕ್ತಿಯನ್ನು ಜನರು ಹೊಡೆಯುತ್ತಿದ್ದಾರೆ ಎಂದು ಮಾಹಿತಿ ಬಂದ ಕೂಡಲೇ ಸ್ಥಳಕ್ಕೆ ಸಿಬ್ಬಂದಿಯನ್ನು ಕಳಿಸಲಾಗಿದ್ದು ಅಲ್ಲಿಯ ಜನರೇ ಆಸ್ಪತ್ರೆಗೆ ಕಳುಹಿಸಿದ್ದಾರೆ.
 ಎಸ್‌.ಡಿ. ಕೊಲ್ಹಾರ, ಪಿಎಸೈ

ಟಾಪ್ ನ್ಯೂಸ್

Award: ಅಮಿತಾಬ್ ಬಚ್ಚನ್, ಎಆರ್ ರೆಹಮಾನ್ ಗೆ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಗೌರವ

ಪ್ರತಿಷ್ಠಿತ ಲತಾ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಸ್ವೀಕರಿಸಿದ ಬಾಲಿವುಡ್ ನಟ ಅಮಿತಾಬ್ ಬಚ್ಚನ್

5-harikrishna

LS Polls: ಹಿಂದೂ ಸಂಸ್ಕೃತಿ, ಪರಂಪರೆ ಉಳಿಸಲು ಬಿಜೆಪಿಯೇ ಶಕ್ತಿ: ಹರಿಕೃಷ್ಣ ಬಂಟ್ವಾಳ

3-dinesh

33 ವರ್ಷಗಳಲ್ಲಿ ದ.ಕ. ಜಿಲ್ಲೆಗೆ ಬಿಜೆಪಿ ಸಂಸದರ ಕೊಡುಗೆ ಏನು? ಸಚಿವ ದಿನೇಶ್‌ ಗುಂಡೂರಾವ್‌

Patna: ಪಾಟ್ನಾದಲ್ಲಿ ನಿತೀಶ್ ಕುಮಾರ್ ಪಕ್ಷದ ನಾಯಕನ ಗುಂಡಿಕ್ಕಿ ಹತ್ಯೆ… ಆರೋಪಿಗಳು ಪರಾರಿ

Patna: ಪಾಟ್ನಾದಲ್ಲಿ ನಿತೀಶ್ ಕುಮಾರ್ ಪಕ್ಷದ ನಾಯಕನ ಗುಂಡಿಕ್ಕಿ ಹತ್ಯೆ… ಆರೋಪಿಗಳು ಪರಾರಿ

Ramakrishna Mission: ರಾಮಕೃಷ್ಣ ಮಠ, ಮಿಷನ್‌ನ ಅಧ್ಯಕ್ಷರಾಗಿ ಕನ್ನಡಿಗ ಸ್ವಾಮೀಜಿ ಆಯ್ಕೆ

Ramakrishna Mission: ರಾಮಕೃಷ್ಣ ಮಠ, ಮಿಷನ್‌ನ ಅಧ್ಯಕ್ಷರಾಗಿ ಕನ್ನಡಿಗ ಸ್ವಾಮೀಜಿ ಆಯ್ಕೆ

Sam Pitroda: ಪಿತ್ರೋಡಾ ಹೇಳಿಕೆ, ನಮ್ಮ ಅಭಿಪ್ರಾಯ ಅಲ್ಲ: ಕಾಂಗ್ರೆಸ್‌

Sam Pitroda: ಪಿತ್ರೋಡಾ ಹೇಳಿಕೆ, ನಮ್ಮ ಅಭಿಪ್ರಾಯ ಅಲ್ಲ: ಕಾಂಗ್ರೆಸ್‌

Lok Sabha Election: ಸೀನಿಯರ್‌ ಖೂಬಾಗೆ ಜ್ಯೂನಿಯರ್‌ ಖಂಡ್ರೆ ಸವಾಲು

Lok Sabha Election: ಸೀನಿಯರ್‌ ಖೂಬಾಗೆ ಜ್ಯೂನಿಯರ್‌ ಖಂಡ್ರೆ ಸವಾಲು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

13-

Muddebihal: ಅಪರಿಚಿತ ವಾಹನ ಡಿಕ್ಕಿ: ಯುವಕ ಸಾವು

Vijayapura; Complaint to Election Commission against Yatnal: Shivananda Patil

Vijayapura; ಯತ್ನಾಳ್ ವಿರುದ್ಧ ಚುನಾವಣಾ ಆಯೋಗಕ್ಕೆ ದೂರು: ಶಿವಾನಂದ ಪಾಟೀಲ

Vijayapura; ಚುನಾವಣಾ ಬಾಂಡ್ ತನಿಖೆಯಾದರೆ ಮೋದಿ ಜೈಲಿಗೆ: ಎಂ.ಬಿ. ಪಾಟೀಲ್

Vijayapura; ಚುನಾವಣಾ ಬಾಂಡ್ ತನಿಖೆಯಾದರೆ ಮೋದಿ ಜೈಲಿಗೆ: ಎಂ.ಬಿ. ಪಾಟೀಲ್

1-wqqw

Vijayapura: ಬಿರುಗಾಳಿ-ಸಿಡಿಲ ಅಬ್ಬರದ ಮಳೆಯ ಅವಾಂತರ

Lok Sabha Polls; ಎ. 26: ವಿಜಯಪುರಕ್ಕೆ ರಾಹುಲ್‌ ಗಾಂಧಿ 

Lok Sabha Polls; ಎ. 26: ವಿಜಯಪುರಕ್ಕೆ ರಾಹುಲ್‌ ಗಾಂಧಿ 

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Lok Sabha Election: “ಅಭಿವೃದ್ಧಿಯೋ – ಅಕ್ರಮವೋ ಯೋಚಿಸಿ ಮತ ನೀಡಿ’: ಗಾಯತ್ರಿ ಸಿದ್ದೇಶ್ವರ್

Lok Sabha Election: “ಅಭಿವೃದ್ಧಿಯೋ – ಅಕ್ರಮವೋ ಯೋಚಿಸಿ ಮತ ನೀಡಿ’: ಗಾಯತ್ರಿ ಸಿದ್ದೇಶ್ವರ್

4-annamalai

Modi ಕಲ್ಪನೆಯ ವಿಕಸಿತ ಭಾರತಕ್ಕಾಗಿ ಕೋಟ ಅವರನ್ನು ಗೆಲ್ಲಿಸೋಣ: ಅಣ್ಣಾ ಮಲೈ

Award: ಅಮಿತಾಬ್ ಬಚ್ಚನ್, ಎಆರ್ ರೆಹಮಾನ್ ಗೆ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಗೌರವ

ಪ್ರತಿಷ್ಠಿತ ಲತಾ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಸ್ವೀಕರಿಸಿದ ಬಾಲಿವುಡ್ ನಟ ಅಮಿತಾಬ್ ಬಚ್ಚನ್

5-harikrishna

LS Polls: ಹಿಂದೂ ಸಂಸ್ಕೃತಿ, ಪರಂಪರೆ ಉಳಿಸಲು ಬಿಜೆಪಿಯೇ ಶಕ್ತಿ: ಹರಿಕೃಷ್ಣ ಬಂಟ್ವಾಳ

3-dinesh

33 ವರ್ಷಗಳಲ್ಲಿ ದ.ಕ. ಜಿಲ್ಲೆಗೆ ಬಿಜೆಪಿ ಸಂಸದರ ಕೊಡುಗೆ ಏನು? ಸಚಿವ ದಿನೇಶ್‌ ಗುಂಡೂರಾವ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.