ಬೆಂಬಲಿಗರಿಂದ ಮುಂದುವರಿದ ಹೋರಾಟ


Team Udayavani, Jun 8, 2018, 11:52 AM IST

bid-2.jpg

ವಿಜಯಪುರ: ಬಬಲೇಶ್ವರ ಕ್ಷೇತ್ರದ ಶಾಸಕ ಎಂ.ಬಿ.ಪಾಟೀಲ ಅವರಿಗೆ ಸಚಿವ ಸ್ಥಾನ ನೀಡದ ಕಾಂಗ್ರೆಸ್‌ ಹೈಕಮಾಂಡ್‌ ಕ್ರಮ ವಿರೋಧಿಸಿ ಜಿಲ್ಲೆಯಲ್ಲಿ ಪ್ರತಿಭಟನೆಗಳು ಮುಂದುವರಿದಿವೆ.

ನಗರದಲ್ಲಿ ಬಬಲೇಶ್ವರದಲ್ಲಿ ಪಾಟೀಲ ಬೆಂಬಲಿಗರು ಸರದಿ ಉಪವಾಸ ಆರಂಭಿಸಿದ್ದಾರೆ. ಬಬಲೇಶ್ವರ ಪಟ್ಟಣದ ಶಾಂತವೀರ ಸರ್ಕಲ್‌ ಬಳಿ ಗುರುವಾರದಿಂದ ಉಪವಾಸ ಸತ್ಯಾಗ್ರಹ ಆರಂಭಿಸಿದ್ದಾರೆ. ಇದಕ್ಕೂ ಮೊದಲು ವಿಜಯಪುರ-ಜಮಖಂಡಿ ಹೆದ್ದಾರಿ ಸಂಚಾರ ತಡೆದು ಮಾನವ ಸರಪಳಿ ನಿರ್ಮಿಸಿ ಆಕ್ರೋಶ ವ್ಯಕ್ತಪಡಿಸಿದರು.

ಪ್ರತಿಭಟನಾಕಾರನ್ನು ಉದ್ದೇಶಿಸಿ ಮಾತನಾಡಿದ ಬಬಲೇಶ್ವರ ಬ್ಲಾಕ್‌ ಮಹಿಳಾ ಕಾಂಗ್ರೆಸ್‌ ಅಧ್ಯಕ್ಷೆ ವಿದ್ಯಾರಾಣಿ ತುಂಗಳ, ಕಾಂಗ್ರೆಸ್‌ ಪಕ್ಷ ಕಟ್ಟುವುದಕ್ಕಾಗಿ ಹಗಲಿರುಳು ಶ್ರಮಿಸಿದ ಎಂ.ಬಿ. ಪಾಟೀಲ ಅವರು, ರಾಜ್ಯವನ್ನು ಸಮಗ್ರ ನೀರಾವರಿ ಸೌಲಭ್ಯಕ್ಕಾಗಿ ಕರ್ನಾಟಕ ಪೂರ್ತಿ ಸುತ್ತಿ, ನನೆಗುದಿಗೆ ಬಿದ್ದಿದ್ದ ಹಲವು ಯೋಜನೆಗಳನ್ನು ಅನುಷ್ಠಾನಗೊಳಿಸಿ ಜನಮೆಚ್ಚುಗೆ ಪಡೆದಿದ್ದಾರೆ. ಅದೇ ಕಾರಣಕ್ಕೆ ಅವರು ಸತತವಾಗಿ ಆಯ್ಕೆಯಾಗುತ್ತಿದ್ದಾರೆ. ಆದರೂ ಅವರ ರಾಜಕೀಯ ಏಳ್ಗೆ ಸಹಿಸದೇ ಕುತಂತ್ರ ಮಾಡಿ, ಸಚಿವ ಸ್ಥಾನ ತಪ್ಪಿಸಲಾಗಿದೆ ಎಂದು ಕಿಡಿ ಕಾರಿದರು.

ಎಂ.ಬಿ. ಪಾಟೀಲ ಅವರು ಪ್ರಾಮಾಣಿಕತೆಯಿಂದ ಅನುಷ್ಠಾನಕ್ಕೆ ತಂದಿರುವ ನೀರಾವರಿ ಯೋಜನೆಗಳು ಇಡಿ ದೇಶಕ್ಕೆ ಮಾದರಿಯಾಗಿವೆ. ಇಂಥ ಯೋಜನೆಗಳ ಪೂರ್ಣಗೊಳಿಸಲು ಎಂ.ಬಿ. ಪಾಟೀಲ ಅವರಿಗೆ ಮತ್ತೆ ಜಲ ಸಂಪನ್ಮೂಲ ಖಾತೆ ಸಹಿತ ಸಂಪುಟದಲ್ಲಿ ಅವಕಾಶ ನೀಡುವುದು ಅನಿವಾರ್ಯವಾಗಿತ್ತು. ಆದರೆ ಅವರಿಗೆ ಅವಕಾಶ ನೀಡದ ಕಾರಣ ಬಹುತೇಕ ನೀರಾವರಿ ಮಹತ್ವಾಕಾಂಕ್ಷೆ ಯೋಜನೆಗಳು ಪೂರ್ಣವಾಗಿ ಅನುಷ್ಠಾನಗೊಳ್ಳದೇ, ಭವಿಷ್ಯದಲ್ಲಿ ಅವಶೇಷಗಳಂತೆ ಕಾಣುವುದು ಖಚಿತ ಎಂದು ಅಸಮಾಧಾನ ವ್ಯಕ್ತಪಡಿಸಿದರು.

ದೇವಾನಂದ ಆಲಗೊಂಡ, ಮಲ್ಲು ಮರ್ಯಾಣಿ, ಮುದಕಪ್ಪ ಕೊಟ್ಯಾಳ, ವಿಠuಲ ಶೀರೋಳ, ಭೀಮಶಿ ಕನ್ನೂರ, ಜಗದೀಶ ಕನ್ನೂರ, ರಾಜಗುರು ಉಳ್ಳಾಗಡ್ಡಿ, ಶ್ರೀಕಾಂತ ಪಡಗಾರ, ರಾಜಕುಮಾರ ಇಮ್ಮನದ, ಗುರಪ್ಪ ಕೊಲ್ಹಾರ, ಸಂಗಮೇಶ ಕೋಲಕಾರ, ದೇವರಾಜ ಬಿರಾದಾರ, ನಾಗು ಆರ್‌ ಹೋಳೆಪ್ಪಗೋಳ (ಹಲಗಣಿ), ಮಾಳು ಹಾವಡಿ, ಕಾಂತು ಚಿಕ್ಕಲಕಿ ಇತರರು ಉಪವಾಸ ಸತ್ಯಾಗ್ರಹದಲ್ಲಿ ಪಾಲ್ಗೊಂಡಿದ್ದರು.

ಮತ್ತೂಂದೆಡೆ ವಿಜಯಪುರ ನಗರದ ಬಿಎಲ್‌ಡಿಇ ಸಂಸ್ಥೆ ಮುಖ್ಯದ್ವಾರದ ಎದುರು ಟೈರ್‌ಗೆ ಬೆಂಕಿ ಹಚ್ಚಿ ಆಕ್ರೋಶ ವ್ಯಕ್ತಪಡಿಸಿದ ಎಂ.ಬಿ. ಪಾಟೀಲ ಬೆಂಬಲಿಗರು ಕಾಂಗ್ರೆಸ್‌ ಹೈಕಮಾಂಡ್‌ ವಿರುದ್ಧ ಹರಿಹಾಯ್ದರು.

ಟಾಪ್ ನ್ಯೂಸ್

IPL 2024; ಮುಂಬೈ ಪಂದ್ಯದ ಟಾಸ್ ಕಳ್ಳಾಟ ಬಿಚ್ಚಿಟ್ಟ ಆರ್ ಸಿಬಿ ನಾಯಕ ಫಾಫ್| Video

IPL 2024; ಮುಂಬೈ ಪಂದ್ಯದ ಟಾಸ್ ಕಳ್ಳಾಟ ಬಿಚ್ಚಿಟ್ಟ ಆರ್ ಸಿಬಿ ನಾಯಕ ಫಾಫ್| Video

Salman Khan: ನಟ ಸಲ್ಮಾನ್‌ ಖಾನ್‌ ನಿವಾಸದ ಮೇಲೆ ಗುಂಡಿನ ದಾಳಿ; ಇಬ್ಬರ ಬಂಧನ

Salman Khan: ನಟ ಸಲ್ಮಾನ್‌ ಖಾನ್‌ ನಿವಾಸದ ಮೇಲೆ ಗುಂಡಿನ ದಾಳಿ; ಇಬ್ಬರ ಬಂಧನ

RCBsvSRH; ಚಿನ್ನಸ್ವಾಮಿಯಲ್ಲಿ ರೆಕಾರ್ಡ್ಸ್ ಸುರಿಮಳೆ; ದಾಖಲೆಗಳ ವಿವರ ಇಲ್ಲಿದೆ

RCBsvSRH; ಚಿನ್ನಸ್ವಾಮಿಯಲ್ಲಿ ರೆಕಾರ್ಡ್ಸ್ ಸುರಿಮಳೆ; ದಾಖಲೆಗಳ ವಿವರ ಇಲ್ಲಿದೆ

Bus Falls From Bridge In Odisha’s Jajpur

Jajpur; ಸೇತುವೆಯಿಂದ ಬಿದ್ದ ಬಸ್; ಐವರು ಸಾವು, ಹಲವರಿಗೆ ಗಾಯ

‘Please sell the RCB team to someone else’; Tennis star appeal

IPL 2024; ‘ದಯವಿಟ್ಟು ಆರ್ ಸಿಬಿ ತಂಡವನ್ನು ಬೇರೆಯವರಿಗೆ ಮಾರಿ ಬಿಡಿ’; ಟೆನ್ನಿಸ್ ತಾರೆ ಮನವಿ

Lok Sabha Elections ಈಶ್ವರಪ್ಪ ಸ್ಪರ್ಧೆಯಿಂದ ಬಿಜೆಪಿಗೆ ಲಾಭ: ಆರ್‌. ಅಶೋಕ್‌

Lok Sabha Elections ಈಶ್ವರಪ್ಪ ಸ್ಪರ್ಧೆಯಿಂದ ಬಿಜೆಪಿಗೆ ಲಾಭ: ಆರ್‌. ಅಶೋಕ್‌

ಎ. 20ರಂದು ಮತ್ತೆ ರಾಜ್ಯಕ್ಕೆ ಪ್ರಧಾನಿ ಮೋದಿ?

Lok Sabha Election; ಎ. 20ರಂದು ಮತ್ತೆ ರಾಜ್ಯಕ್ಕೆ ಪ್ರಧಾನಿ ಮೋದಿ?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Suspended

Vijaypur: ಕರ್ತವ್ಯ ಲೋಪ ಡಿಡಿಪಿಐ ನಾಗೂರ ಮತ್ತೆ ಸಸ್ಪೆಂಡ್

1-qweqeweqw

Congress ಅಭ್ಯರ್ಥಿ ಮೆರವಣಿಗೆಯಲ್ಲಿ ಹಣ ಹಂಚಿದ ವಿಡಿಯೋ ವೈರಲ್

shivananda

Vijayapura; ಯತ್ನಾಳಗೆ ತಾಕತ್ತಿದ್ದರೆ ಈಗಲೇ ಸ್ಪರ್ಧೆಗೆ ಬರಲಿ: ಸಚಿವ ಶಿವಾನಂದ ಪಾಟೀಲ

MB Patil 2

Electoral bonds; ಮೋದಿ ಭ್ರಷ್ಟಾಚಾರದ ಮತ್ತೊಂದು ಮುಖ ಬಯಲು:ಎಂ.ಬಿ.ಪಾಟೀಲ್

Vijayapura; ನಾಮಪತ್ರ ಸಲ್ಲಿಕೆಗೆ ಮುನ್ನ ಬಿ.ಎಂ.ಪಾಟೀಲ ಸಮಾಧಿಗೆ ನಮಿಸಿದ ಆಲಗೂರ

Vijayapura; ನಾಮಪತ್ರ ಸಲ್ಲಿಕೆಗೆ ಮುನ್ನ ಬಿ.ಎಂ.ಪಾಟೀಲ ಸಮಾಧಿಗೆ ನಮಿಸಿದ ಆಲಗೂರ

MUST WATCH

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

udayavani youtube

ಕೇಕ್ ಪ್ರಿಯರಿಗೆ ಹೇಳಿ ಮಾಡಿಸಿದ ಜಾಗ ಔರಾ .

udayavani youtube

ಶ್ರೀ ವೈಷ್ಣವಿ ದುರ್ಗಾ ದೇವಾಲಯ

udayavani youtube

ಟೈಟನ್ ಕಂಪೆನಿಯ Xylys ವಾಚ್ ವಿಶೇಷತೆಗಳೇನು ?

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

ಹೊಸ ಸೇರ್ಪಡೆ

IPL 2024; ಮುಂಬೈ ಪಂದ್ಯದ ಟಾಸ್ ಕಳ್ಳಾಟ ಬಿಚ್ಚಿಟ್ಟ ಆರ್ ಸಿಬಿ ನಾಯಕ ಫಾಫ್| Video

IPL 2024; ಮುಂಬೈ ಪಂದ್ಯದ ಟಾಸ್ ಕಳ್ಳಾಟ ಬಿಚ್ಚಿಟ್ಟ ಆರ್ ಸಿಬಿ ನಾಯಕ ಫಾಫ್| Video

Salman Khan: ನಟ ಸಲ್ಮಾನ್‌ ಖಾನ್‌ ನಿವಾಸದ ಮೇಲೆ ಗುಂಡಿನ ದಾಳಿ; ಇಬ್ಬರ ಬಂಧನ

Salman Khan: ನಟ ಸಲ್ಮಾನ್‌ ಖಾನ್‌ ನಿವಾಸದ ಮೇಲೆ ಗುಂಡಿನ ದಾಳಿ; ಇಬ್ಬರ ಬಂಧನ

RCBsvSRH; ಚಿನ್ನಸ್ವಾಮಿಯಲ್ಲಿ ರೆಕಾರ್ಡ್ಸ್ ಸುರಿಮಳೆ; ದಾಖಲೆಗಳ ವಿವರ ಇಲ್ಲಿದೆ

RCBsvSRH; ಚಿನ್ನಸ್ವಾಮಿಯಲ್ಲಿ ರೆಕಾರ್ಡ್ಸ್ ಸುರಿಮಳೆ; ದಾಖಲೆಗಳ ವಿವರ ಇಲ್ಲಿದೆ

Bus Falls From Bridge In Odisha’s Jajpur

Jajpur; ಸೇತುವೆಯಿಂದ ಬಿದ್ದ ಬಸ್; ಐವರು ಸಾವು, ಹಲವರಿಗೆ ಗಾಯ

‘Please sell the RCB team to someone else’; Tennis star appeal

IPL 2024; ‘ದಯವಿಟ್ಟು ಆರ್ ಸಿಬಿ ತಂಡವನ್ನು ಬೇರೆಯವರಿಗೆ ಮಾರಿ ಬಿಡಿ’; ಟೆನ್ನಿಸ್ ತಾರೆ ಮನವಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.