ಅಭಿವೃದ್ಧಿಗೆ ಪ್ರಾಮಾಣಿಕ ಪ್ರಯತ್ನ


Team Udayavani, Jun 12, 2018, 11:07 AM IST

vij-2.jpg

ಸಿಂದಗಿ: ಮತ ಹಾಕಿ ನೀವು ನನ್ನ ಗೆಲ್ಲಿಸಿದ್ದಿರಿ ನಿಮ್ಮ ಋಣ ತೀರಿಸಲು ಕ್ಷೇತ್ರದ ಅಭಿವೃದ್ಧಿಗೆ ಪ್ರಾಮಾಣಿಕ ಸೇವೆ ಸಲ್ಲಿಸುತ್ತೇನೆ ಎಂದು ನೂತನ ತೋಟಗಾರಿಕೆ ಸಚಿವರಾಗಿ ಎಂ.ಸಿ. ಮನಗೂಳಿ ಹೇಳಿದರು. ಸೋಮವಾರ ಪಟ್ಟಣದ ಅನಂದ ಚಿತ್ರಮಂದಿರದಲ್ಲಿ ಜೆಡಿಎಸ್‌ ಪಕ್ಷದ ಕಾರ್ಯಕರ್ತರು ಹಾಗೂ ಎಂ.ಸಿ. ಮನಗೂಳಿ ಅವರ ಅಭಿಮಾನಿಗಳು ಹಮ್ಮಿಕೊಂಡಿದ್ದ ಸನ್ಮಾನ ಸಮಾರಂಭದಲ್ಲಿ ಸನ್ಮಾನ ಸ್ವೀಕರಿಸಿ ಅವರು ಮಾತನಾಡಿದರು.

ನಾನು ಕೃಷಿಯಲ್ಲಿ ಡಿಪ್ಲೋಮಾ ಪಾಸಾಗಿ 15 ವರ್ಷ ಕೃಷಿ ಇಲಾಖೆಯಲ್ಲಿ ಸೇವೆ ಸಲ್ಲಿಸಿದ್ದೇನೆ. ರೈತರ ಒಡನಾಡಿಯಾಗಿ ಬದುಕು ಸಾಗಿಸಿದ್ದೇನೆ. ಆಗ ರೈತರ ಮತ್ತು ಜನ ಸಾಮಾನ್ಯರ ಕಷ್ಟಗಳನ್ನು ಅರಿತೇನು. ಅವರ ಕಷ್ಟಗಳಿಗೆ ಸ್ಪಂದಿಸಿಲು ರಾಜಕೀಯ ಪ್ರವೇಶಿಸಿದ ನಂತರ ರಾಜಕೀಯ ಜೀವನ ನಿಮಗೆಲ್ಲರಿಗೂ ಗೊತ್ತು. ರೈತರ ಮೇಲಿನ ನನ್ನ ಕಾಳಜಿ ಗುರುತಿಸಿ ನಮ್ಮ ನಾಯಕರಾದ ಎಚ್‌.ಡಿ. ದೇವೇಗೌಡ ಹಾಗೂ ಮುಖ್ಯಮಂತ್ರಿ ಎಚ್‌.ಡಿ. ಕುಮಾರಸ್ವಾಮಿ ತೋಟಗಾರಿಕೆ ಇಲಾಖೆ ಕ್ಯಾಬಿನೇಟ್‌ ಸಚಿವ ಸ್ಥಾನ ನೀಡುವ ಮೂಲಕ ರೈತರ ಸೇವೆಗೆ ಹೆಚ್ಚಿನ ಅವಕಾಶ ನೀಡಿದ್ದಾರೆ ಎಂದರು.

ಜಿಲ್ಲೆ ಬರಗಾಲ ಪ್ರದೇಶವಾಗಿದೆ. ಈ ಭಾಗದಲ್ಲಿ ಬೆಳೆಯುವ ದ್ರಾಕ್ಷಿ, ದಾಳಿಂಬೆ, ನಿಂಬೆ ಮುಂತಾದ ತೋಟಗಾರಿಕೆ ಬೆಳೆಗಳ ಅಭಿವೃದ್ಧಿಗೆ ಶ್ರಮಿಸುತ್ತೇನೆ. ತೋಟಗಾರಿಕೆ ಬೆಳೆ ಬೆಳೆಯುವ ರೈತರ ಸಂಕಷ್ಟಗಳು ಅರಿತಿದ್ದೇನೆ. ವಿಜಯಪುರ ಜಿಲ್ಲೆಯಲ್ಲದೇ ರಾಜ್ಯದ ರೈತರ ಸಂಕಷ್ಟಗಳಿಗೆ ಸ್ಪಂದಿಸುವ ಮೂಲಕ ನನಗೆ ಸೇವೆ ಸಲ್ಲಿಸಲು ನೀಡಿದ ಅವಕಾಶವನ್ನು ಪ್ರಾಮಾಣಿಕವಾಗಿ ಮಾಡುತ್ತೇನೆ ಎಂದರು.

ಕ್ಷೇತ್ರದಲ್ಲಿ ಇನ್ನು ಹೆಚ್ಚು ತೋಟಗಾರಿಕೆ ಬೆಳೆ ಬೆಳೆಯಲು ಪ್ರೋತ್ಸಾಹ ನೀಡುತ್ತೇನೆ. ಹೆಚ್ಚಿನ ಅಧ್ಯಯನಕ್ಕಾಗಿ ಇಸ್ರೇಲ್‌ ದೇಶಕ್ಕೆ ಕಳುಹಿಸುತ್ತೇನೆ. ಅಲ್ಲಿ ಕಡಿಮೆ ನೀರಿನಲ್ಲಿ ಹೆಚ್ಚು ಬೆಳೆ ಇಳುವರಿಗೆ ತೆಗೆಯುವ ಪದ್ಧತಿ ಅಧ್ಯಯನ ಮಾಡಲು ಕಳುಹಿಸಲಾಗುವುದು. ತೋಟಗಾರಿಕೆ ಇಲಾಖೆ ಜವಾಬ್ದಾರಿ ಹೆಚ್ಚಿದೆ. ಇಲಾಖೆಯಲ್ಲಿ ರೈತರಿಗೆ ಸಿಗುವ ಸೌಲಭ್ಯ, ಸಬ್ಸಿಡಿ ಮುಂತಾದ ಮಾಹಿತಿ ಅಧ್ಯಯನ ಮಾಡಿ ಎಲ್ಲವನ್ನು ರೈತರಿಗೆ ತಲುಪಿಸುತ್ತೇನೆ ಎಂದರು. 

ನನ್ನ ದೇಹಕ್ಕೆ ವಯಸ್ಸಾಗಿರಬಹುದು ಕೆಲಸ ಮಾಡುವ ಮನಸ್ಸಿಗೆ ವಯಸ್ಸಾಗಿಲ್ಲ. ಅಧಿಕಾರದ ಅವಧಿಯಲ್ಲಿ ಮನೆಯಲ್ಲಿ ಕುಳಿತುಕೊಳ್ಳುವುದಿಲ್ಲ. ಕ್ಯಾಬಿನೇಟ್‌ ಸಚಿವ ಸ್ಥಾನ ಸಿಕ್ಕಿರುವುದರಿಂದ ಹೆಚ್ಚು ಸಂಚಾರ, ಸಭೆಗಳಿಗೆ ಹಾಜರಾತಿ ಇರುವುದು ಹೆಚ್ಚಿರುತ್ತದೆ. ಇದರ ಮಧ್ಯದಲ್ಲಿ ಕ್ಷೇತ್ರದ ಪ್ರತಿ ಹೋಬಳಿಯಲ್ಲಿ ಒಂದೊಂದು ದಿನ ಇದ್ದು ವ್ಯಾಪ್ತಿಯಲ್ಲಿ ಬರುವ ಹಳ್ಳಿಗಳ ಜನರ ಸಮಸ್ಯೆಗಳಿಗೆ ಸ್ಪಂದಿಸುತ್ತೇನೆ ಎಂದರು.

ನನಗೆ ಸಲ್ಲಿಸಿದ ಸನ್ಮಾನ ಮತದಾರರಿಗೆ ಮತ್ತು ಪಕ್ಷದ ಕಾರ್ಯಕರ್ತರಿಗೆ ಸಲ್ಲುತ್ತದೆ. ಅವರ ಶ್ರಮದ ಫಲವಾಗಿ ನಾನು ಇಂದು ನಿಮ್ಮ ಮುಂದೆ ಸಚಿವನಾಗಿ ನಿಂತಿದ್ದೇನೆ. ಚುನಾವಣೆ ಫಲಿತಾಂಶದ ನಂತರ ನಿರಂತರ ತಿರುಗಾಟದಲ್ಲಿನ ದಣಿವಿನ ಮಧ್ಯದಲ್ಲಿ ನಾನು ಸಿಂದಗಿ ಪಟ್ಟಣಕ್ಕೆ ಬಂದಿದ್ದೇನೆ. ಕಾರ್ಯಕ್ರಮದಲ್ಲಿ ಸೇರಿದ ಜನಸ್ತೋಮ ನೋಡಿ ನನ್ನ ದಣಿವು ಮಾಯವಾಗಿ ಉತ್ಸಾಹ ತುಂಬಿದೆ ಎಂದರು.

ಮನಗೂಳಿ ಮನೆತನದ ಮೇಲೆ ಇಟ್ಟಿರುವ ವಿಶ್ವಾಸ ನಾವು ಎಂದು ಕಳೆದುಕೊಳ್ಳುವುದಿಲ್ಲ. ನಿಮ್ಮ ಆಶೀರ್ವಾದ ಸದಾ ಮನಗೂಳಿ ಮನೆತನದ ಮೇಲೆ ಇರಲಿ. ನನ್ನ ಮಗ ಅಶೋಕ ಮನಗೂಳಿ ಮೇಲೆ ನಿಮ್ಮ ಆಶೀರ್ವಾದವಿರಲಿ ಎಂದು ಕೋರಿದರು. 

ನನ್ನ ಅಧಿಕಾರದ ಅವಧಿಯಲ್ಲಿ ಮಧ್ಯವರ್ತಿಗಳಿಗೆ ಅವಕಾಶ ನೀಡುವುದಿಲ್ಲ. ನಿಮ್ಮ ಸಮಸ್ಯೆಗಳಿಗೆ ನಾನು ನೇರವಾಗಿ ಸ್ಪಂದಿ ಸುತ್ತೇನೆ. ನಿಮ್ಮ 2 ಭಾವಚಿತ್ರಗಳು, ಆಧಾರ್‌ ಕಾರ್ಡ್‌ ಝರಾಕ್ಸ್‌ ಪ್ರತಿಯೊಂದಿಗೆ ಮೊಬೈಲ್‌ ನಂ. ನೀಡಿ. ನಿಮಗೆ ಗುರುತಿನ ಚೀಟಿ ನೀಡಲಾಗುವುದು. ಯಾವುದೇ ಇಲಾಖೆ ಕೆಲಸವಿರಲಿ ಅಧಿಕಾರಿಗಳನ್ನು ಕರೆಸಿ ನಿಮ್ಮ ಕೆಲಸ ಮಾಡುತ್ತೇನೆ. ನಿಮ್ಮಿಂದ ಯಾವುದೇ ಫಲಾಪೇಕ್ಷೆ ಪಡೆಯದೇ ಕೆಲಸ ಮಾಡುವ ಮೂಲಕ ನಿಮ್ಮ ಋಣತೀರಿಸಲಾಗುವುದು ಎಂದರು.

ಮಾಜಿ ಸಚಿವ ಬಿ.ಎಸ್‌. ಪಾಟೀಲ (ಸಾಸನೂರ) ಅವರ ಅಗಲಿಕೆ ನಮಗೆ ದುಖಃ ತಂದಿದೆ. ಅವುರ ನನ್ನ ಒಡನಾಡಿ. ನನಗಿಂತ 3 ವರ್ಷ ದೊಡ್ಡವರು. ಅವರ ಆತ್ಮಕ್ಕೆ ಶಾಂತಿ ಸಿಗಲಿ ಎಂದು ಸಂತಾಪ ಸೂಚಿಸಿದರು. ಶಿವಪ್ಪಗೌಡ ಬಿರಾದಾರ, ಗುರಣ್ಣಗೌಡ ಬಿರದಾರ ನಾಗಾವಿ ಬಿ.ಕೆ., ತಮ್ಮನಗೌಡ ಪಾಟೀಲ, ಧರ್ಮಪತ್ನಿ ಸಿದ್ದಮ್ಮ ಮನಗೂಳಿ, ಅಶೋಕ ಮನಗೂಳಿ, ಡಾ| ಮುತ್ತು ಮನಗೂಳಿ, ಸಿದ್ದರಾಮ ಪಾಟೀಲ, ಉಮೇಶ ಜೋಗುರ, ರಾಜಶೇಖರ ಕೂಚಬಾಳ, ಅರವಿಂದ ಹಂಗರಗಿ, ಸಿದ್ದಣ್ಣ ಚೌಧರಿ ಕನ್ನೊಳ್ಳಿ, ಶೈಲಾ ಸ್ಥಾವರಮಠ, ಯಾಕೂಬ ನಾಟೀಕಾರ, ಮುತ್ತು ಮುಂಡೇವಾಡಗಿ, ಮುತ್ತು ಸೊನ್ನದ, ಸಲಿಂ ಜುಮನಾಳ, ರಮೇಶ ಹೂಗಾರ, ಅರವಿಂದ ಹೂಗಾರ, ಶಂಕರ ಹೂಗಾರ
ಸೇರಿದಂತೆ ಕ್ಷೇತ್ರದ ಮತದಾರರು, ಅಭಿಮಾನಿಗಳು, ಪಕ್ಷದ ಕಾರ್ಯಕರ್ತರು ಇದ್ದರು.

ಟಾಪ್ ನ್ಯೂಸ್

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Veerappa Moily ಬಿಜೆಪಿ ವಿರುದ್ಧ ಅಸಮಾಧಾನ ಜ್ವಾಲಾಮುಖಿ ಸ್ಫೋಟ

Veerappa Moily ಬಿಜೆಪಿ ವಿರುದ್ಧ ಅಸಮಾಧಾನ ಜ್ವಾಲಾಮುಖಿ ಸ್ಫೋಟ

ಮತದಾರರ ಚೀಟಿಯಲ್ಲಿ ಕ್ಯುಆರ್‌ ಕೋಡ್‌! ಮಂಗಳೂರು ದಕ್ಷಿಣ-ಉತ್ತರದಲ್ಲಿ ಅನುಷ್ಠಾನ

ಮತದಾರರ ಚೀಟಿಯಲ್ಲಿ ಕ್ಯುಆರ್‌ ಕೋಡ್‌! ಮಂಗಳೂರು ದಕ್ಷಿಣ-ಉತ್ತರದಲ್ಲಿ ಅನುಷ್ಠಾನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

13-

Muddebihal: ಅಪರಿಚಿತ ವಾಹನ ಡಿಕ್ಕಿ: ಯುವಕ ಸಾವು

Vijayapura; Complaint to Election Commission against Yatnal: Shivananda Patil

Vijayapura; ಯತ್ನಾಳ್ ವಿರುದ್ಧ ಚುನಾವಣಾ ಆಯೋಗಕ್ಕೆ ದೂರು: ಶಿವಾನಂದ ಪಾಟೀಲ

Vijayapura; ಚುನಾವಣಾ ಬಾಂಡ್ ತನಿಖೆಯಾದರೆ ಮೋದಿ ಜೈಲಿಗೆ: ಎಂ.ಬಿ. ಪಾಟೀಲ್

Vijayapura; ಚುನಾವಣಾ ಬಾಂಡ್ ತನಿಖೆಯಾದರೆ ಮೋದಿ ಜೈಲಿಗೆ: ಎಂ.ಬಿ. ಪಾಟೀಲ್

1-wqqw

Vijayapura: ಬಿರುಗಾಳಿ-ಸಿಡಿಲ ಅಬ್ಬರದ ಮಳೆಯ ಅವಾಂತರ

Lok Sabha Polls; ಎ. 26: ವಿಜಯಪುರಕ್ಕೆ ರಾಹುಲ್‌ ಗಾಂಧಿ 

Lok Sabha Polls; ಎ. 26: ವಿಜಯಪುರಕ್ಕೆ ರಾಹುಲ್‌ ಗಾಂಧಿ 

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.