ಉದ್ಯಾನ ವೀಕ್ಷಣೆಗೆ ಬಂದ ಜನಸಾಗರ


Team Udayavani, Jun 18, 2018, 11:24 AM IST

vijayapura-1.jpg

ಆಲಮಟ್ಟಿ: ಜೀವನದ ಜಂಜಾಟದಲ್ಲಿ ಒಮ್ಮೆಯಾದರೂ ಪ್ರವಾಸಿ ತಾಣ ಸಸ್ಯಕಾಶಿ ಆಲಮಟ್ಟಿಯನ್ನು ನೋಡಿ ಕಣ್ತುಂಬಿಕೊಳ್ಳಬೇಕು ಎಂದು ನಿತ್ಯ ಸಾವಿರಾರು ಜನ ಆಲಮಟ್ಟಿಗೆ ಆಗಮಿಸುತ್ತಾರೆ. ರಂಜಾನ್‌ ಆಚರಿಸಿದ ಮುಸ್ಲಿಂ ಬಾಂಧವರು ಶನಿವಾರ ಮಧ್ಯಾಹ್ನದಿಂದ ಪಟ್ಟಣದ ವಿವಿಧ ಉದ್ಯಾನ ವೀಕ್ಷಿಸಲು ಆಗಮಿಸಿದ್ದು ಕಳೆದ ಬಾರಿಗಿಂತ ಈ ಬಾರಿ ಹೆಚ್ಚು ಜನ ಬಂದಿದ್ದು ವಿಶೇಷವಾಗಿತ್ತು.

ರಂಜಾನ್‌ ಹಬ್ಬ ಆಚರಿಸಿದ ಮಹಾರಾಷ್ಟ್ರ ಹಾಗೂ ರಾಜ್ಯದ ವಿವಿಧ ಜಿಲ್ಲೆಯ ಸಾವಿರಾರು ಮುಸ್ಲಿಂ ಬಾಂಧವರು ಪಟ್ಟಣಕ್ಕೆ ಆಗಮಿಸಿ ವಿವಿಧ ಉದ್ಯಾನಗಳನ್ನು ವೀಕ್ಷಿಸಿ ಕಣ್ಮನ ತುಂಬಿಕೊಂಡರು. ರವಿವಾರ ಬೆಳಗ್ಗೆಯಿಂದ ಸಂಜೆವರೆಗೆ ಸಾವಿರಾರು ಮಹಿಳೆಯರು, ಮಕ್ಕಳು, ವಯೋವೃದ್ಧರು, ಯುವಕರೆನ್ನದೇ ಎಲ್ಲ ವಯೋಮಾನದವರೂ ಆಗಮಿಸಿ ಇಲ್ಲಿಯ ರಾಕ್‌ ಉದ್ಯಾನ, ಲವ-ಕುಶ ಉದ್ಯಾನ, ಗೋಪಾಲ ಕೃಷ್ಣ ಉದ್ಯಾನ ವೀಕ್ಷಿಸಿ ಸಂಜೆ ಸಂಗೀತ ನೃತ್ಯ ಕಾರಂಜಿ ನೋಡಿದರು.

ವಿಜಯಪುರ, ಬಾಗಲಕೋಟೆ, ಗದಗ, ಕಲಬುರಗಿ, ಕೊಪ್ಪಳ ಹಾಗೂ ಸೊಲ್ಲಾಪುರ ಸೇರಿದಂತೆ ವಿವಿಧ ಗ್ರಾಮೀಣ ಹಾಗೂ ಪಟ್ಟಣ ಪ್ರದೇಶಗಳಿಂದ ಪ್ರವಾಸಿಗರು ಆಟೋ, ಕಾರು, ರೈಲು, ಬಸ್‌, ಲಾರಿ, ದ್ವಿಚಕ್ರ ವಾಹನಗಳ ಮೂಲಕ
ಆಗಮಿಸುತ್ತಿರುವುದು ಕಂಡು ಬಂತು.

ರಾಕ್‌ ಉದ್ಯಾನದ ವಿವಿಧ ಮರಗಳ ಕೆಳಗೆ ಸೇರಿದ್ದ ಸಾವಿರಾರು ಸಂಖ್ಯೆ ಪ್ರವಾಸಿಗರು ತಾವು ಕಟ್ಟಿಕೊಂಡು
ತಂದಿರುವ ಸಿಹಿ ಭೋಜನ ಸವಿಯುತ್ತಿರುವುದು ಎಲ್ಲೆಡೆ ಕಂಡು ಬಂತು. ರಾಕ್‌ ಉದ್ಯಾನವನದ ಪ್ರವೇಶ ದ್ವಾರದಲ್ಲಿ ಟಿಕೇಟ್‌ ಪಡೆಯಲು ಜನರ ಸರದಿ ಸಾಲು ಅತಿ ಉದ್ದವಾಗಿತ್ತು. ಮಧ್ಯಾಹ್ನದ ನಂತರ ಉದ್ಯಾನಕ್ಕೆ ಆಗಮಿಸುವ ಪ್ರವಾಸಿಗರ ಸಂಖ್ಯೆಯಲ್ಲಿ ಹೆಚ್ಚಾಗಿರುವುದರಿಂದ ಪ್ರವಾಸಿಗರು ಟಿಕೆಟ್‌ ಪಡೆಯಲು ಹರಸಾಹಸ ಮಾಡುತ್ತಿದ್ದರು.

ಬಿರಿಯಾನಿ ಬಲು ಜೋರು: ಪಟ್ಟಣದ ವಿವಿಧ ಉದ್ಯಾನಗಳನ್ನು ವೀಕ್ಷಿಸಲು ವಿವಿಧ ಮೂಲೆಗಳಿಂದ ಆಗಮಿಸಿದ್ದ ಮುಸ್ಲಿಂ ಬಾಂಧವರ ವಿಶೇಷ ಖಾದ್ಯವಾದ ಬಿರಿಯಾನಿ ಅನ್ನದ ಅಂಗಡಿಗಳು ರಾಷ್ಟ್ರೀಯ ಹೆದ್ದಾರಿ ಪಕ್ಕದಲ್ಲಿ ತೆರೆದಿದ್ದು ಜನ ಜನದಟ್ಟಣೆ ಹೆಚ್ಚಾಗಿತ್ತು. ಪ್ರವಾಸಿಗರ ಸಂಖ್ಯೆ ಪ್ರತಿ ವರ್ಷಕ್ಕಿಂತಲೂ ಈ ಬಾರಿ ಹೆಚ್ಚಾಗಿತ್ತು, ಸಹಜವಾಗಿ ಪ್ರವಾಸಿಗರು ತಮಗೆ ಬೇಕಾದ ಸಾಮಗ್ರಿ ಖರೀದಿಸುತ್ತಿರುವುದರಿಂದ ಹುಡುಗರ ಆಟಿಕೆ ಸಾಮಾನು, ಕುರುಕಲು ತಿಂಡಿ, ಐಸ್‌ಕ್ರೀಂ, ಹಣ್ಣಿನ ವ್ಯಾಪಾರ, ಹಣ್ಣಿನ ಜ್ಯೂಸ್‌, ಕಬ್ಬಿನ ರಸ, ಫೋಟೋ ತೆಗೆಯಿಸಿಕೊಳ್ಳುವವರು, ಆಲಮಟ್ಟಿ ಜಲಾಶಯ ಹಾಗೂ ಉದ್ಯಾನವನಗಳ, ವಿಜಯಪುರದ ಗತವೈಭವ ಸಾರುವ ಫೋಟೋಗಳನ್ನು ಖರೀದಿಸಿ ಹಾಗೂ ನೀರಿನ ಬಾಟಲಿ ವ್ಯಾಪಾರ ಜೋರಾಗಿತ್ತು ಎನ್ನುತ್ತಾರೆ ಮಂಜುನಾಥ ಹಿರೇಮಠ ಹಾಗೂ ಅಂದಾನಿ ತೋಳಮಟ್ಟಿ.

ಜನದಟ್ಟಣೆ: ವಿವಿಧ ಜಿಲ್ಲೆ ಹಾಗೂ ಗ್ರಾಮೀಣ ಪ್ರದೇಶಗಳಿಂದ ಉದ್ಯಾನ ವೀಕ್ಷಿಸಲು ಆಗಮಿಸಿದ್ದ ಪ್ರವಾಸಿಗರಿಂದ ರವಿವಾರ ರಾಕ್‌ ಉದ್ಯಾನದಿಂದ 1,25,130 ರೂ., ಗೋಪಾಲಕೃಷ್ಣ ಉದ್ಯಾನದಿಂದ 25,150 ರೂ., ಲವಕುಶ ಉದ್ಯಾನದಿಂದ 18,010 ರೂ. ಸೇರಿದಂತೆ ಒಟ್ಟು 1,68,290 ರೂ. ಕೆಬಿಜೆಎನ್‌ ಎಲ್‌ಗೆ ಜಮಾ ಆಗಿದೆ. 

ಪ್ರತಿ ಸಲದಂತೆ ಈ ಬಾರಿಯೂ ಜನ ಹೆಚ್ಚು ಆಗಮಿಸುತ್ತಿದ್ದಾರೆ ಅವರ ಮೂಲಭೂತ ಸೌಕರ್ಯಗಳಿಗಾಗಿ ವಿಶೇಷ ಆದ್ಯತೆ ನೀಡಲಾಗಿದ್ದು, ಪ್ರವಾಸಿಗರಿಗೆ ಮಾಹಿತಿ ಹಾಗೂ ಉದ್ಯಾನಗಳ ರಕ್ಷಣೆಗಾಗಿ ಅರಣ್ಯ ಉಪ ಸಂರಕ್ಷಣಾಧಿಕಾರಿ ಹಾಗೂ ನಾಲ್ವರು ಅರಣ್ಯಾಧಿಕಾರಿಗಳು, 10 ಸಿಬ್ಬಂದಿ ಹಾಗೂ 50 ದಿನಗೂಲಿ ನೌಕರರು ಸೇರಿದಂತೆ 65 ಜನರನ್ನು ರಾಕ್‌ ಉದ್ಯಾನಕ್ಕೆ ಅರಣ್ಯ ಇಲಾಖೆಯಿಂದ  ನಿಯುಕ್ತಿಗೊಳಿಸಲಾಗಿತ್ತು.

ಬಸವನಬಾಗೇವಾಡಿ ಸಿಪಿಐ ಕರುಣೇಶಗೌಡ ನೇತೃತ್ವದಲ್ಲಿ ಆಲಮಟ್ಟಿ, ನಿಡಗುಂದಿ, ಮನಗೂಳಿ, ಕೊಲ್ಹಾರ, ಬಸವನಬಾಗೇವಾಡಿ ಠಾಣೆಗಳ ಒಟ್ಟು 6 ಪಿಎಸ್‌ಐ, 6 ಎಎಸ್‌ಐ ಹಾಗೂ 45 ಪೊಲೀಸ್‌ ಸಿಬ್ಬಂದಿ ಮತ್ತು 2 ಡಿಎಆರ್‌ ತುಕಡಿ, ರಾಜ್ಯ ಕೈಗಾರಿಕಾ ಭದ್ರತಾ ಪಡೆಯ ನಾಲ್ವರು ಪಿಎಸೈ, 55 ಪೊಲೀಸ್‌ ಸಿಬ್ಬಂದಿ ಸೇರಿ ಅಗತ್ಯ ಭದ್ರತಾ ವ್ಯವಸ್ಥೆ ಕಲ್ಪಿಸಿದ್ದರು ಎನ್ನುತ್ತಾರೆ ವಲಯ ಅರಣ್ಯಾಧಿಕಾರಿ ಮಹೇಶ ಪಾಟೀಲ.

ಟಾಪ್ ನ್ಯೂಸ್

Thirthahalli; ಬಿಜೆಪಿಯಿಂದ ಶ್ರೀಮಂತರ ಓಲೈಕೆ ; ಕಿಮ್ಮ‌ನೆ ರತ್ನಾಕರ್

Thirthahalli; ಬಿಜೆಪಿಯಿಂದ ಶ್ರೀಮಂತರ ಓಲೈಕೆ ; ಕಿಮ್ಮ‌ನೆ ರತ್ನಾಕರ್

1-aaaaaa

BJP ಮೋದಿ ಮಾಡೆಲ್ ಹೆಸರಿನಲ್ಲಿ ಚೊಂಬಿನ ಮಾಡೆಲ್ ನೀಡಿದೆ: ಸುರ್ಜೇವಾಲ

1-weqwewqe

Davangere: 10 ರೂ.ಗಳ ನಾಣ್ಯ ರೂಪದಲ್ಲಿ 25 ಸಾವಿರ ರೂ. ಠೇವಣಿ ಕಟ್ಟಿದ ಅಭ್ಯರ್ಥಿ!

Exam

CET ಸುಗಮವಾಗಿ ನಡೆದಿದೆ: ಆಕ್ಷೇಪಣೆ ಸಲ್ಲಿಕೆಗೆ ಏ.27ರವರೆಗೆ ಅವಕಾಶ

1-wwqwqe

BJP ಶ್ರೀರಾಮುಲು, ಗಾಯತ್ರಿ ಸಿದ್ದೇಶ್ವರ್ ಈಗಾಗಲೇ ಗೆದ್ದಿದ್ದಾರೆ: ಜನಾರ್ದನ ರೆಡ್ಡಿ

Outrage over mistakes in CET exam question paper; Request for mercy marks

CET ಪರೀಕ್ಷೆ ಪ್ರಶ್ನೆಪತ್ರಿಕೆಯಲ್ಲಿ ಲೋಪಕ್ಕೆ ಆಕ್ರೋಶ; ಕೃಪಾಂಕಕ್ಕೆ ಆಗ್ರಹ

1-qweeweq

Viral video; ಯಾರಿವರು ಇಶಾ ಅರೋರಾ? ಮತದಾನದ ದಿನ ಭಾರಿ ಸುದ್ದಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Outrage over mistakes in CET exam question paper; Request for mercy marks

CET ಪರೀಕ್ಷೆ ಪ್ರಶ್ನೆಪತ್ರಿಕೆಯಲ್ಲಿ ಲೋಪಕ್ಕೆ ಆಕ್ರೋಶ; ಕೃಪಾಂಕಕ್ಕೆ ಆಗ್ರಹ

Vijayapura; ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಕುಸಿದಿದೆ : ಸಂಸದ ಜಿಗಜಿಣಗಿ

Vijayapura; ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಕುಸಿದಿದೆ : ಸಂಸದ ಜಿಗಜಿಣಗಿ

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!

Vijayapura: ಸಿಡಿಲು ಬಡಿದು ಓರ್ವನಿಗೆ ಗಾಯ, ಮೂರು ಜಾನುವಾರು ಸಾವು

Vijayapura: ಸಿಡಿಲು ಬಡಿದು ಓರ್ವನಿಗೆ ಗಾಯ, ಮೂರು ಜಾನುವಾರು ಸಾವು

ganihara

Vijayapura; ವಿಕಸಿತ ಭಾರತದಲ್ಲಾಗಿರುವ ಅಭಿವೃದ್ಧಿ ಏನು: ಕೆಪಿಸಿಸಿ ವಕ್ತಾರ ಗಣಿಹಾರ ಪ್ರಶ್ನೆ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Thirthahalli; ಬಿಜೆಪಿಯಿಂದ ಶ್ರೀಮಂತರ ಓಲೈಕೆ ; ಕಿಮ್ಮ‌ನೆ ರತ್ನಾಕರ್

Thirthahalli; ಬಿಜೆಪಿಯಿಂದ ಶ್ರೀಮಂತರ ಓಲೈಕೆ ; ಕಿಮ್ಮ‌ನೆ ರತ್ನಾಕರ್

1-aaaaaa

BJP ಮೋದಿ ಮಾಡೆಲ್ ಹೆಸರಿನಲ್ಲಿ ಚೊಂಬಿನ ಮಾಡೆಲ್ ನೀಡಿದೆ: ಸುರ್ಜೇವಾಲ

1-weqwewqe

Davangere: 10 ರೂ.ಗಳ ನಾಣ್ಯ ರೂಪದಲ್ಲಿ 25 ಸಾವಿರ ರೂ. ಠೇವಣಿ ಕಟ್ಟಿದ ಅಭ್ಯರ್ಥಿ!

Minchu

Bidar; ಬಿರುಗಾಳಿ‌ ಸಹಿತ ಭಾರಿ ಮಳೆ :ಸಿಡಿಲು ಬಡಿದು‌ ರೈತ ಸಾವು

1-wewqewqe

Kalaburgi: ಮಹಿಳೆಯ ಬಾತ್ ರೂಮ್ ವಿಡಿಯೋ ರೆಕಾರ್ಡ್ ಮಾಡಿದ ಸೆಕ್ಯೂರಿಟಿ ಗಾರ್ಡ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.