ಕಟ್ಟಡ ಕಾಮಗಾರಿಗೆ ಮುಕ್ತಿ ಎಂದು?


Team Udayavani, Jun 19, 2018, 4:25 PM IST

vijayapura3.jpg

ನಾಲತವಾಡ: ಅಧಿಕಾರಿಗಳ ಹಾಗೂ ಗುತ್ತಿಗೆದಾರರ ಮನಸೋ ಇಚ್ಚೆ ಕಾಮಗಾರಿ ಪರಿಣಾಮ ಸ್ಥಳೀಯ ಸರಕಾರಿ ಉದ್ಯೋಗ ಹಾಗೂ ತರಬೇತಿ ಕೇಂದ್ರದ ಐಟಿಐ ವಿಭಾಗದ ಎರಡು ಕೊಠಡಿಗಳ ನಿರ್ಮಾಣ ಶುರುವಾಗಿ 4 ವರ್ಷವಾದರೂ ಇನ್ನೂ ಉದ್ಘಾಟನೆ ಭಾಗ್ಯ ಕಂಡಿಲ್ಲ.

 ಸ್ಥಳೀಯ ಸರಕಾರಿ ಮಹಿಳಾ  ಐಟಿಐ ಕಾಲೇಜಿಗೆ ಸಂಬಂಧಿಸಿದ ಫಿಟ್ಟರ್‌ ಮತ್ತು ಎಲೆಕ್ಟ್ರಿಕಲ್‌ ತರಬೇತಿಗೆಂದು ವಿಶಾಲ ಕೊಠಡಿಗಳ ನಿರ್ಮಾಣಕ್ಕೆ ಲೋಕೋಪಯೋಗಿ ಇಲಾಖೆಯಿಂದು 38 ಲಕ್ಷ ರೂ. ಮಂಜೂರಾಗಿದೆ. 2014ರಲ್ಲೇ ಭೂಮಿ ಪೂಜೆಯೊಂದಿಗೆ ಕಟ್ಟಡ ಕಾಮಗಾರಿ ಕೈಗೊಳ್ಳಲಾಗಿದೆ. ದುರಂತವೆಂದರೆ 4 ವರ್ಷಗಳು ಕಳೆದರೂ ಇನ್ನೂ ಪೂರ್ಣಗೊಂಡಿಲ್ಲ. ಸುತ್ತಲೂ ಗಿಡ ಗಂಟಿಗಳು ತಲೆ ಎತ್ತಿವೆ.

ಮೂವರು ಗುತ್ತಿಗೆದಾರರು: ಕಾಮಗಾರಿ ಪೂರ್ಣಗೊಳಿಸಲು ಕೆಲ ತೊಂದರೆಗಳು ಬಂದ ಹಿನ್ನೆಲೆ 38 ಲಕ್ಷದ ಕಾಮಗಾರಿಗೆ ಒಟ್ಟು ಮೂವರು ಗುತ್ತಿಗೆದಾರರು ಕೈ ಹಾಕಿದರೂ ಈವರೆಗೂ ಪೂರ್ಣಗೊಳ್ಳುವ ಮುಹೂರ್ತ ಮಾತ್ರ ಕೂಡಿ ಬರುತ್ತಿಲ್ಲ. ಪರಿಣಾಮ ನೂತನ ಕೊಠಡಿಯಲ್ಲಿ ತರಬೇತಿ ಪಡೆಯಬೇಕು ಎಂದು ಕೊಂಡಿದ್ದ ವಿದ್ಯಾರ್ಥಿಗಳಿಗೆ ನಿರಾಶೆಯುಂಟಾಗಿದೆ.

ಅರ್ಧಕ್ಕೆ ನಿಂತ ಕೆಲಸ: ಒಟ್ಟು ಎರಡು ಪ್ರತ್ಯೇಕ ವಿಶಾಲ ಕೊಠಡಿಗಳನ್ನು ನಿರ್ಮಿಸಲಾಗಿದೆ. ಕಿಟಿಗಳನ್ನು ಅಳವಡಿಸಿದ್ದು
ಪ್ರಮುಖವಾಗಿ ಶೆಟರ್ ಅಳವಡಿಸಿಲ್ಲ, ವಿದ್ಯುತ್‌ ಸಂಪರ್ಕ ಕಲ್ಪಿಸಿಲ್ಲ. ತರಬೇತಿ ಕೇಂದ್ರಗಳು ಸದ್ಯ ಹಂದಿ ನಾಯಿಗಳ
ತಾಣವಾಗಿದೆ. ಒಂದು ವರ್ಷದಲ್ಲೇ ಕಾಮಗಾರಿ ಮುಗಿಸುವ ನಿಯಮ ಇತ್ತು ಎಂದು ಹೇಳಲಾಗಿದ್ದು ಮೊದಲ ಬಾರಿಗೆ ಗುತ್ತಿಗೆ ಪಡೆದ ಗುತ್ತಿಗೆದಾರರು ಮರಣ ಹೊಂದಿದ ಪರಿಣಾಮ ಬೇರೆಯವರಿಗೆ ನಿರ್ಮಿಸಲು ಗುತ್ತಿಗೆ ಕೊಡಲಾಗಿದೆ ಎಂದು ಅಧಿಕಾರಿಗಳು ಹೇಳುತ್ತಿದ್ದು ಈವರೆಗೂ ಕಟ್ಟಡ ಕಾಮಗಾರಿ ಪೂರ್ಣಗೊಳ್ಳದಿರುವುದು ದುರಂತ ಎನ್ನಬಹುದು. 

ಕಟ್ಟಡ ಕಾಮಗಾರಿಯಲ್ಲಿ ಗುತ್ತಿಗೆದಾರರೊಬ್ಬರ ಮರಣದ ನಂತರ ಕಾಮಗಾರಿ ವಿಳಂಬಗೊಂಡಿದೆ. ಇತರೆ ಇಬ್ಬರಿಗೆ ಗುತ್ತಿಗೆ ಕೊಟ್ಟರೂ ಪೂರ್ಣಗೊಳಿಸಲು ಗುತ್ತಿಗೆದಾರರು ಹಿಂದೇಟು ಹಾಕುತ್ತಿದ್ದು ಅವರಿಗೆ ನೋಟಿಸ್‌ ನೀಡಲಾಗುವುದು.

ಅರುಣ ಪಾಟೀಲ, ಎಇಇ ಪಿಬ್ಲುಡಿ, ಮುದ್ದೇಬಿಹಾಳ

4 ವರ್ಷದಿಂದ ಗುತ್ತಿಗೆದಾರರ ಹಾಗೂ ಅಧಿಕಾರಿಗಳಿಗೆ ಶೀಘ್ರ ಕಟ್ಟಡ ಮುಗಿಸಿ ಕೊಡಿ ಎಂದು ಹೇಳಿ ಸಾಕಾಗಿದೆ. ಈಗಾಗಲೇ ಎಇಇ ಅವರಿಗೆ ಮತ್ತೇ ಪತ್ರ ಬರೆದಿದ್ದೇನೆ. ಇನ್ನೇನೆ ಇದ್ದರೂ ಈ ವಿಳಂಬಕ್ಕೆ ಮೇಲಾಧಿಕಾರಿಗಳ ಗಮನಕ್ಕೆ ತರುತ್ತೇನೆ. ಆದಷ್ಟು ಬೇಗನೆ ಪೂರ್ಣಗೊಳಿಸಲು ಒತ್ತಡ ತರುತ್ತೇನೆ.

 ಪಿ.ಎಚ್‌. ಮಸೂತಿ, ಪ್ರಾಚಾರ್ಯರರು, ಸರಕಾರಿ ಐಟಿಐ ನಾಲತವಾಡ

ಟಾಪ್ ನ್ಯೂಸ್

voter

Chamarajanagar; ಮತದಾನ ಮಾಡಬೇಕೋ ಬೇಡವೋ ಎಂದು EVM ಗಳೇ ಧ್ವಂಸ !

1-wqeqewqe

EVM ಕುರಿತು ಸುಪ್ರೀಂ ತೀರ್ಪು ಪ್ರತಿಪಕ್ಷಗಳಿಗೆ ಕಪಾಳ ಮೋಕ್ಷ: ಪ್ರಧಾನಿ ಮೋದಿ

militry

Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ

shettar

Minority ತುಷ್ಟೀಕರಣದಿಂದ ನೇಹಾಳ ಹತ್ಯೆಯಾಗಿದೆ :ಜಗದೀಶ್ ಶೆಟ್ಟರ್

1-adasdsad

Davanagere; ಪ್ರಧಾನಿ ಮೋದಿ ರ್‍ಯಾಲಿಗೆ ಅನುಮತಿ ನೀಡಬಾರದು:ಕಾಂಗ್ರೆಸ್ ಮನವಿ

2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್‍ಯಾಂಕ್‌ ಪಡೆದ ತೀರ್ಥಹಳ್ಳಿಯ ಸುಚಿಂತ್

2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್‍ಯಾಂಕ್‌ ಪಡೆದ ತೀರ್ಥಹಳ್ಳಿಯ ಸುಚಿಂತ್

1-wewqewqewq

Belthangady: ಬಾಂಜಾರು ಮಲೆಯಲ್ಲಿ ದಾಖಲೆ ಶೇ.100 ಮತದಾನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-asaa

Vijaypura:ರಾಹುಲ್ ಗಾಂಧಿ ನಿರ್ಗಮಿಸುವಾಗ ವೇದಿಕೆಗೆ ಬಂದ ಸಿದ್ದರಾಮಯ್ಯ

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್

13-

Muddebihal: ಅಪರಿಚಿತ ವಾಹನ ಡಿಕ್ಕಿ: ಯುವಕ ಸಾವು

Vijayapura; Complaint to Election Commission against Yatnal: Shivananda Patil

Vijayapura; ಯತ್ನಾಳ್ ವಿರುದ್ಧ ಚುನಾವಣಾ ಆಯೋಗಕ್ಕೆ ದೂರು: ಶಿವಾನಂದ ಪಾಟೀಲ

Vijayapura; ಚುನಾವಣಾ ಬಾಂಡ್ ತನಿಖೆಯಾದರೆ ಮೋದಿ ಜೈಲಿಗೆ: ಎಂ.ಬಿ. ಪಾಟೀಲ್

Vijayapura; ಚುನಾವಣಾ ಬಾಂಡ್ ತನಿಖೆಯಾದರೆ ಮೋದಿ ಜೈಲಿಗೆ: ಎಂ.ಬಿ. ಪಾಟೀಲ್

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

voter

Chamarajanagar; ಮತದಾನ ಮಾಡಬೇಕೋ ಬೇಡವೋ ಎಂದು EVM ಗಳೇ ಧ್ವಂಸ !

1-wqeqewqe

EVM ಕುರಿತು ಸುಪ್ರೀಂ ತೀರ್ಪು ಪ್ರತಿಪಕ್ಷಗಳಿಗೆ ಕಪಾಳ ಮೋಕ್ಷ: ಪ್ರಧಾನಿ ಮೋದಿ

militry

Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ

shettar

Minority ತುಷ್ಟೀಕರಣದಿಂದ ನೇಹಾಳ ಹತ್ಯೆಯಾಗಿದೆ :ಜಗದೀಶ್ ಶೆಟ್ಟರ್

1-adasdsad

Davanagere; ಪ್ರಧಾನಿ ಮೋದಿ ರ್‍ಯಾಲಿಗೆ ಅನುಮತಿ ನೀಡಬಾರದು:ಕಾಂಗ್ರೆಸ್ ಮನವಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.