ಹತ್ತಿ-ಕಡಲೆ ಬೆಳೆಯಲು ಪ್ರೋತ್ಸಾಹಿಸಿ


Team Udayavani, Jun 20, 2018, 3:39 PM IST

vijayapuara-2.jpg

ವಿಜಯಪುರ: ಬೆಲೆ ಕುಸಿತದಿಂದ ರೈತರನ್ನು ಕಂಗೆಡಿಸಿರುವ ತೊಗರಿ ಬೆಳೆ ಸರ್ಕಾರಕ್ಕೆ ತಲೆ ನೋವು ತಂದಿದೆ. ಹೀಗಾಗಿ ಪರ್ಯಾವಾಗಿ ಹತ್ತಿ ಹಾಗೂ ಕಡಲೆ ಸೇರಿದಂತೆ ಪರ್ಯಾಯ ಬೆಳೆ ಬೆಳೆಯಲು ರೈತರನ್ನು ಪ್ರೋತ್ಸಾಹಿಸಲು ಕ್ರಮ ಕೈಗೊಳ್ಳಬೇಕು. ತೊಟಗಾರಿಕೆ ಬೆಳೆಗಾರರನ್ನು ಉತ್ತೇಜಿಸಲು ರಫ್ತು ಅವಕಾಶಗಳ ಕುರಿತು ರೈತರಿಗೆ ಸ್ಪಷ್ಟ ಮಾಹಿತಿ ನೀಡುವಂತೆ ಆರೋಗ್ಯ ಸಚಿವ ಶಿವಾನಂದ ಪಾಟೀಲ ಸೂಚಿಸಿದರು.

ಸಚಿವರಾದ ಬಳಿಕ ಮೊದಲ ಬಾರಿಗೆ ನಗರದ ಜಿಪಂ ಸಭಾಂಗಣದಲ್ಲಿ ಮಂಗಳವಾರ ತೋಟಗಾರಿಕೆ ಸಚಿವ ಎಂ.ಸಿ. ಮನಗೂಳಿ ಅವರೊಂದಿಗೆ ಜಿಲ್ಲೆಯ ಪ್ರಗತಿ ಪರಿಶೀಲನೆ ನಡೆಸಿದ ಅವರು, ನಿರೀಕ್ಷೆ ಮೀರಿ ತೊಗರಿ ಬೆಳೆ ಬೆಳೆದು ಏಕಕಾಲಕ್ಕೆ ಮಾರುಕಟ್ಟೆಗೆ ಬಂದಾಗ ಬೆಲೆ ಕುಸಿತವಾಗಿ ಸಮಸ್ಯೆ ತಂದೊಡ್ಡಿತು.

ಹೀಗಾಗಿ ರೈತರನ್ನು ಆರ್ಥಿಕ ಸಬಲೀಕರಣಕ್ಕೆ ಪರ್ಯಾಯ ಬೆಳೆಗೆ ಪ್ರೇರಣೆ ನೀಡಲು ಯೋಜನೆ ರೂಪಿಸಬೇಕು. ಇದಕ್ಕಾಗಿ ಕೃಷಿ, ತೋಟಗಾರಿಕೆ ಇಲಾಖೆ ಮಾತ್ರವಲ್ಲ, ಬಾಗಲಕೋಟೆ ತೋಟಗಾರಿಕೆ ಕೃಷಿ ಮಹಾವಿದ್ಯಾಲಯದ ತಜ್ಞರೊಂದಿಗೆ ಜಂಟಿ ಕಾರ್ಯಕ್ರಮ ರೂಪಿಸಲು ಸೂಚಿಸಿದರು.

ತೊಗರಿ ಬೆಳೆಯ ಬೆಲೆ ಕುಸಿತ ಹಾಗೂ ಬೆಂಬಲ ಬೆಲೆಯಲ್ಲಿ ಖರೀದಿ ಸೇರಿದಂತೆ ಇಡಿ ವ್ಯವಸ್ಥೆಯಲ್ಲಿ ಅಧಿಕಾರಿಗಳ ದೂರದೃಷ್ಟಿ ಇಲ್ಲದ ನಡೆಯೂ ಸಮಸ್ಯೆ ಗಂಭೀರ ಸ್ವರೂಪ ಪಡೆದು ಸರ್ಕಾರವನ್ನು ಇಕ್ಕಟ್ಟಿಗೆ ಸಿಲುಕಿಸಿತು. ತೊಗರಿ ಬೆಳೆ ವಿಷಯದಲ್ಲಿ ಅಧಿಕಾರಿಗಳ ಕಾರ್ಯವೈಖರಿಗೆ ಸಚಿವ ಶಿವಾನಂದ ಅತೃಪ್ತಿ ವ್ಯಕ್ತಪಡಿಸಿದರು.

ತೊಗರಿ ಬೆಳೆಗಾರರ ಪರಿಶ್ರಮ ಮಧ್ಯವರ್ತಿಗಳ ಪಾಲಾಗಲು ಅಧಿಕಾರಿಗಳೇ ಕಾರಣ. ತೊಗರಿ ಖರೀದಿ ಮಾಡಿದ ರೈತರಿಗೆ ಇನ್ನೂ ಹಣ ನೀಡಿಲ್ಲ, ರೈತರು ಕೇಳಿದರೆ ಸ್ಪಷ್ಟ ಉತ್ತರ ನೀಡುತ್ತಿಲ್ಲ ಎಂದು ತೋಟಗಾರಿಕೆ ಸಚಿವ ಎಂ.ಸಿ. ಮನಗೂಳಿ ಅಸಮಾಧಾನ ವ್ಯಕ್ತಪಡಿಸಿದರು.

ಈ ಹಂತದಲ್ಲಿ ಸಚಿವರ ಅಸಮಾಧಾನಕ್ಕೆ ಪ್ರತಿಕ್ರಿಯೆ ನೀಡಿದ ಜಂಟಿ ಕೃಷಿ ನಿರ್ದೇಶಕ ಮಂಜುನಾಥ, ರೈತರಿಂದ ತೋಗರಿ ಖರೀದಿ ಮಾಡಿದ್ದಕ್ಕೆ ಸರ್ಕಾರ 160 ಕೋಟಿ ರೂ. ಬಿಲ್‌ನಲ್ಲಿ 138 ಕೋಟಿ ರೂ. ಹಣ ರೈತರ ಬ್ಯಾಂಕ್‌ ಖಾತೆಗೆ ನೇರವಾಗಿ ಈಗಾಗಲೇ ಜಮೆಯಾಗಿದ್ದು, 22 ಕೋಟಿ ರೂ. ಬಾಕಿ ಪಾವತಿಸಬೇಕಿದೆ ಎಂದು ವಿವರಿಸಿದರು.

ಈ ಹಂತದಲ್ಲಿ ಪರ್ಯಾಯ ಬೆಳೆ ಬೆಳೆಗೆ ಸಲಹೆ ನೀಡಿದ ಸಚಿವ ಶಿವಾನಂದ ಪಾಟೀಲ, ತೊಗರಿ ಬೆಳಗೆ ಪರ್ಯಾವಾಗಿ
ಆರ್ಥಿಕ ಅಭಿವೃದ್ಧಿಗಾಗಿ ವಾಣಿಜ್ಯ ಬೆಳೆ ಬೆಳೆಯಲು ಅದರಲ್ಲೂ, ಈ ಹಿಂದೆ ಹತ್ತಿ ಬೆಳೆಯುವ ಸಾಂಪ್ರದಾಯಿಕ ಕ್ಷೇತ್ರ ಇರುವ ಸಿಂದಗಿ, ವಿಜಯಪುರ ತಾಲೂಕಿನ ರೈತರನ್ನು ಪ್ರೇರೇಪಿಸಬೇಕು. ಇದಕ್ಕಾಗಿ ರೈತರ ಮನವೊಲಿಕೆ ಕಾರ್ಯಕ್ರಮ ರೂಪಿಸಿ ಕನಿಷ್ಠ 1 ಲಕ್ಷ ಹೆಕ್ಟೇರ್‌ ಪ್ರದೇಶದಲ್ಲಿ ಹತ್ತಿ, ಕಡಲೆ ಬೆಳೆ ಬೆಳೆಗೆ ಪ್ರೇರೇಪಿಸಿ ಎಂದು
ಸೂಚಿಸಿದರು.

ಬಿತ್ತನೆ ಹಂಗಾಮಿನ ರೈತರ ಧಾವಂತವನ್ನು ಅವಕಾಶವಾದಿ ತನಕ್ಕೆ ಬಳಸಿಕೊಂಡು ಕಳಪೆ ಬೀಜ, ನಕಲಿ ರಸಗೊಬ್ಬರ, ಕ್ರಿಮಿನಾಶಕ ಪೂರೈಕೆ ಮಾಡುವ ವಂಚಕರ ವಿಷಯದಲ್ಲಿ ಕಠಿಣ ಕ್ರಮ ಕೈಗೊಳ್ಳಬೇಕು ಎಂದು ಸೂಚಿಸಿದರು.

ಇದಕ್ಕೆ ಕೃಷಿ ಜಿಂಟಿ ನಿರ್ದೇಶಕ ಮಂಜುನಾಥ, ಕಳೆದ ವರ್ಷ ಇಂಥ ಪ್ರಕರಣಗಳು ಕಂಡು ಬಂದಾಗ ಪೊಲೀಸ್‌ ದೂರು
ದಾಖಲಿಸಿ ಕ್ರಮ ಕೈಗೊಳ್ಳಲಾಗಿದೆ ಎಂದು ಸಮಜಾಯಿಸಿ ನೀಡಲು ಮುಂದಾದಾಗ, ಒಂದು ಪ್ರಕರಣದಲ್ಲೂ ವಂಚಕರಿಗೆ ಶಿಕ್ಷೆ ಆಗಿಲ್ಲ ಎಂದು ಅಧಿಕಾರಿಗಳ ಕಾರ್ಯವೈಖರಿಗೆ ಆಕ್ಷೇಪ ವ್ಯಕ್ತಪಡಿಸಿದರು.

ಜಿಲ್ಲೆಯಲ್ಲಿ ಆಲಿಕಲ್ಲು, ಅತಿವೃಷ್ಟಿಯಿಂದ ಆಗಿರುವ ತೋಟಗಾರಿಕೆ ಬೆಳೆ ಹಾನಿ ವಿವರ ನೀಡಿದ ತೋಟಗಾರಿಕಾ ಇಲಾಖೆ ಉಪನಿರ್ದೇಶಕ ಕುಮಾರಸ್ವಾಮಿ, ಆಲಿಕಲ್ಲು ಮಳೆಯಿಂದ 305.5 ಹೆಕ್ಟೇರ್‌ ಹಾಗೂ ಅತಿವೃಷ್ಟಿಯಿಂದಾಗಿ 767 ಹೆಕ್ಟೇರ್‌ ಬೆಳೆ ಹಾನಿಯಾಗಿದೆ. ಉಳ್ಳಾಗಡ್ಡಿಗೆ 13,500 ಪ್ರತಿ ಹೆಕ್ಟೇರ್‌ಗೆ ಹಾಗೂ ಉಳಿದ ತೋಟಗಾರಿಕಾ ಬೆಳೆಗಳಿಗೆ ಪ್ರತಿ ಹೆಕ್ಟೇರ್‌ಗೆ 18 ಸಾವಿರ ರೂ. ಪರಿಹಾರ ವಿತರಿಸಲಾಗಿದೆ ಎಂದು ವಿವರಿಸಿದರು.

ತೋಟಗಾರಿಕಾ ಸಚಿವ ಎಂ.ಸಿ. ಮನಗೂಳಿ, ಕಬ್ಬು ಬೆಳೆಗಾರರ ಹಿಂಬಾಕಿ ಪಾವತಿಗೆ ಜಿಲ್ಲಾಡಳಿತ ಕ್ರಮ ಕೈಗೊಳ್ಳುವಂತೆ ಸೂಚಿಸಿ, ಸೂಕ್ತ ಮಾಹಿತಿ ಇಲ್ಲದೇ ಅಧಿಕಾರಿಗಳು ಪ್ರಗತಿ ಪರಿಶೀಲನೆ ಸಭೆಗೆ ಆಗಮಿಸದಂತೆ ತಾಕೀತು ಮಾಡಿದರು.  ಜಿಲ್ಲೆಯಲ್ಲಿ ಹನಿ ನೀರಾವರಿ ಯೋಜನೆ ಅನುಷ್ಠಾನದ ವಿಷಯದಲ್ಲಿ ಇಲಾಖೆ ಹಾಗೂ ಅನುಷ್ಠಾನ ಸಂಸ್ಥೆಗಳ ನಡೆ ಕುರಿತು ಅನುಮಾನ ಮೂಡುವಂತಿದೆ. ಮತ್ತೂಂದೆಡೆ ಜಿಲ್ಲೆಯಲ್ಲಿ ರಾಜ್ಯದಲ್ಲೇ ಅಧಿಕ ಪ್ರಮಾಣದಲ್ಲಿ ದ್ರಾಕ್ಷಿ, ಲಿಂಬೆ ಬೆಳೆ ಬೆಳೆಯುತ್ತಿದ್ದರೂ ರೈತರಿಗೆ ರಫ್ತು ವಹಿವಾಟಿನ ಕುರಿತು ಮಾಹಿತಿ ನೀಡಬೇಕು. ಇದಕ್ಕಾಗಿ ಕೃಷಿ, ತೋಟಗಾರಿಕೆ ಇಲಾಖೆ ಹಾಗೂ ವಿಶ್ವವಿದ್ಯಾಲಯಗಳು ಜಂಟಿಯಾಗಿ ಈ ವಿಷಯದಲ್ಲಿ ಸ್ಪಷ್ಟ ಮಾಹಿತಿ ಸಹಿತ ಯೋಜನೆ ರೂಪಿಸುವಂತೆ ಸೂಚಿಸಿದರು. 

ಅಧಿಕಾರಿಗಳ ಮಧ್ಯೆ ಇರುವ ಸಮನ್ವಯ ಕೊರತೆಹಾಗೂ ನಿರಾಸಕ್ತಿ ಪರಿಣಾಮ ಸರ್ಕಾರ ಬಡವರಿಗಾಗಿ ರೂಪಿಸುವ ಕೃಷಿ, ತೋಟಗಾರಿಕೆ ಕಾರ್ಯಕ್ರಮಗಳು ಕೆಲವೇ ರೈತರನ್ನು ತಲುಪುತ್ತಿವೆ. ಹೀಗಾಗಿ ಎಲ್ಲ ರೈತರನ್ನು ತಲುಪುವಂತೆ ಜಾಗೃತಿ ಕಾರ್ಯಕ್ರಮ ರೂಪಿಸುವಂತೆ ನಿರ್ದೇಶನ ನೀಡಿದರು. ಇದಕ್ಕೂ ಮೊದಲು ಸಚಿವರಾಗಿ ಮೊದಲ ಬಾರಿಗೆ ಕೆಡಿಪಿ ಸಭೆಗೆ ಆಗಮಿಸಿದ ಆರೋಗ್ಯ ಸಚಿವ ಶಿವಾನಂದ ಪಾಟೀಲ ಹಾಗೂ ತೋಟಗಾರಿಕೆ ಸಚಿವ ಎಂ.ಸಿ. ಮನಗೂಳಿ ಅವರನ್ನು ಜಿಲ್ಲಾಧಿಕಾರಿ ಎಸ್‌.ಬಿ. ಶೆಟ್ಟೆಣ್ಣವರ ಸನ್ಮಾನಿಸಿ ಬರಮಾಡಿಕೊಂಡರು. ಜಿಪಂ ಸಿಇಒ
ಸುಂದರೇಶಬಾಬು ಇದ್ದರು.

ಟಾಪ್ ನ್ಯೂಸ್

Manipura: ಮತಗಟ್ಟೆ ಮೇಲೆ ಗುಂಡಿನ ದಾಳಿ… ದಿಕ್ಕಾ ಪಾಲಾಗಿ ಓಡಿದ ಮತದಾರರು

Manipura: ಮತಗಟ್ಟೆ ಮೇಲೆ ಗುಂಡಿನ ದಾಳಿ… ದಿಕ್ಕಾ ಪಾಲಾಗಿ ಓಡಿದ ಮತದಾರರು

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ

Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ

Tour: 9 ದಿನ 4,800 ಕಿ.ಮೀ ಪ್ರಯಾಣ-ಅಡ್ವೆಂಚರ್‌ ಬೈಕ್‌ನಲ್ಲಿ 64ರ ಹಿರಿಯರ ಸಾಹಸ ಯಾನ

Tour: 9 ದಿನ 4,800 ಕಿ.ಮೀ ಪ್ರಯಾಣ-ಅಡ್ವೆಂಚರ್‌ ಬೈಕ್‌ನಲ್ಲಿ 64ರ ಹಿರಿಯರ ಸಾಹಸ ಯಾನ

ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ

ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ

Mangaluru: ಬೈಕ್ ಡಿಕ್ಕಿಯಾಗಿ ರಸ್ತೆಗೆ ಬಿದ್ದ ಕಾರ್ಮಿಕನ ಮೇಲೆ ಹರಿದ ಟ್ಯಾಂಕರ್

Mangaluru: ಬೈಕ್ ಡಿಕ್ಕಿಯಾಗಿ ರಸ್ತೆಗೆ ಬಿದ್ದ ಕಾರ್ಮಿಕನ ಮೇಲೆ ಹರಿದ ಟ್ಯಾಂಕರ್

Lok Sabha 1 Phase: ನಿತಿನ್‌ ಗಡ್ಕರಿ ಟು ಕನಿಮೋಳಿ..ಮೊದಲ ಹಂತದ ಘಟಾನುಘಟಿ ಅಭ್ಯರ್ಥಿಗಳು…

Lok Sabha 1 Phase: ನಿತಿನ್‌ ಗಡ್ಕರಿ ಟು ಕನಿಮೋಳಿ..ಮೊದಲ ಹಂತದ ಘಟಾನುಘಟಿ ಅಭ್ಯರ್ಥಿಗಳು…


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Vijayapura: ಸಿಡಿಲು ಬಡಿದು ಓರ್ವನಿಗೆ ಗಾಯ, ಮೂರು ಜಾನುವಾರು ಸಾವು

Vijayapura: ಸಿಡಿಲು ಬಡಿದು ಓರ್ವನಿಗೆ ಗಾಯ, ಮೂರು ಜಾನುವಾರು ಸಾವು

ganihara

Vijayapura; ವಿಕಸಿತ ಭಾರತದಲ್ಲಾಗಿರುವ ಅಭಿವೃದ್ಧಿ ಏನು: ಕೆಪಿಸಿಸಿ ವಕ್ತಾರ ಗಣಿಹಾರ ಪ್ರಶ್ನೆ

Bengaluru ಗ್ರಾಮಾಂತರದಲ್ಲಿ ಕಾಂಗ್ರೆಸ್‌ 500 ಕೋಟಿ ರೂ. ಖರ್ಚು’

Bengaluru ಗ್ರಾಮಾಂತರದಲ್ಲಿ ಕಾಂಗ್ರೆಸ್‌ 500 ಕೋಟಿ ರೂ. ಖರ್ಚು’

Congress ಗೆ ದೇಶದಲ್ಲಿ 40 ಸ್ಥಾನ ಸಿಗೋದು ಕಷ್ಟ, ರಾಜ್ಯದಲ್ಲಿ ಬಿಜೆಪಿಗೆ 28 ಸ್ಥಾನ ಸ್ಪಷ್ಟ

Congress ಗೆ ದೇಶದಲ್ಲಿ 40 ಸ್ಥಾನ ಸಿಗೋದು ಕಷ್ಟ, ರಾಜ್ಯದಲ್ಲಿ ಬಿಜೆಪಿಗೆ 28 ಸ್ಥಾನ ಸ್ಪಷ್ಟ

2018ರಲ್ಲಿ ನಡೆದ ಬಾಲ್ಯ ವಿವಾಹ ಪ್ರಕರಣ: 7 ಜನರಿಗೆ ಕಠಿಣ ಶಿಕ್ಷೆ ವಿಧಿಸಿದ ನ್ಯಾಯಾಲಯ

2018ರಲ್ಲಿ ನಡೆದ ಬಾಲ್ಯ ವಿವಾಹ ಪ್ರಕರಣ: 7 ಜನರಿಗೆ ಕಠಿಣ ಶಿಕ್ಷೆ ವಿಧಿಸಿದ ನ್ಯಾಯಾಲಯ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

17-uv-fusion

Holi: ಹೋಳಿ ಹುಣ್ಣಿಮೆ ಹಿನ್ನೆಲೆ

Manipura: ಮತಗಟ್ಟೆ ಮೇಲೆ ಗುಂಡಿನ ದಾಳಿ… ದಿಕ್ಕಾ ಪಾಲಾಗಿ ಓಡಿದ ಮತದಾರರು

Manipura: ಮತಗಟ್ಟೆ ಮೇಲೆ ಗುಂಡಿನ ದಾಳಿ… ದಿಕ್ಕಾ ಪಾಲಾಗಿ ಓಡಿದ ಮತದಾರರು

16-fusion

UV Fusion: ಎಳೆಯರಿಗೂ ಒಂದಿಷ್ಟು ಸಮಯ ಮೀಸಲಿಡೋಣ

15-uv-fusion

Time management: ತಂತ್ರಜ್ಞಾನ ಯುಗದಲ್ಲಿ ಸಮಯ ನಿರ್ವಹಣೆ ಮುಖ್ಯ

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.