ಹಣದ ಡ್ರಾ ಮಿತಿ ಹೆಚ್ಚಳಕ್ಕೆ ಆಗ್ರಹ


Team Udayavani, Jun 21, 2018, 4:43 PM IST

vijayapura-2.jpg

ನಾಲತವಾಡ: ಸ್ಥಳಿಯ ಸಿಂಡಿಕೇಟ್‌ ಬ್ಯಾಂಕ್‌ ಶಾಖೆಯಲ್ಲಿ ಗ್ರಾಹಕರಿಗೆ ವಿತರಿಸುವ ಹಣದ ಮಿತಿ 
ಹೆಚ್ಚಳಕ್ಕೆ ಆಗ್ರಹಿಸಿ ಸ್ಥಳಿಯ ಮಲ್ಲಿಕಾರ್ಜುನ ಸ್ಥಾವರಮಠ ನೇತೃತ್ವದಲ್ಲಿ ಅಡತಿ ಹಾಗೂ ಇತರೇ ವರ್ತಕರು ಶಾಖಾ ವ್ಯವಸ್ಥಾಪಕ ಎಸ್‌.ಎಂ. ಬೂದಿಹಾಳ ಅವರಿಗೆ ಮನವಿ  ಸಲ್ಲಿಸಿದರು.

ನೋಟ್‌ಬ್ಯಾನ್‌ ನಂತರ ಬ್ಯಾಂಕ್‌ನಲ್ಲಿ ಅವಶ್ಯಕತೆಗನುಗುಣವಾಗಿ ಹಣ ಪಡೆಯಲು ಗ್ರಾಹಕರಿಗೆ ತೀವ್ರ ತೊಂದರೆಯಾಗಿದೆ. ಪಟ್ಟಣ ಸುಮಾರು 20 ಸಾವಿರ ಜನಸಂಖ್ಯೆಯೊಂದಿಗೆ 41 ಹಳ್ಳಿ ವ್ಯಾಪ್ತಿಯಿದೆ. ಈ ಭಾಗದಲ್ಲಿ ಹೆಚ್ಚಿನ ಪ್ರಮಾಣದಲ್ಲಿ ರೈತರೇ ಇರುವ ಪರಿಣಾಮ ಕೃಷಿ ಚಟುವಟಿಕೆ ಕೂಲಿಕಾರರಿಗೆ ಹಣ ಕೊಡಲು ಮಾಲೀಕರಿಗೆ ತೊಂದರೆಯಾಗಿದೆ. ನಿತ್ಯ ಬ್ಯಾಂಕ್‌ನಲ್ಲೇ ಕಾಲ ಕಳೆಯುವ ಸ್ಥಿತಿ ನಿರ್ಮಾಣವಾಗಿದೆ ಎಂದು ಮನವಿಯಲ್ಲಿ ಒತ್ತಾಯಿಸಿದ್ದಾರೆ. 

ಕೇವಲ 5ರಿಂದ 10ಸಾವಿರ ರೂ. ಮಿತಿಯನ್ನು ಸರಳೀಕರಣಗೊಳಿಸಿ ಹೆಚ್ಚಿನ ಪ್ರಮಾಣದಲ್ಲಿ ಹಣ ಡ್ರಾ
ಮಾಡಿಕೊಳ್ಳಲು ವ್ಯವಸ್ಥೆ ಮಾಡಬೇಕು. ಸದಾ ಮುಚ್ಚಿರುವ ಎಟಿಎಂ 24 ಗಂಟೆ ಸೇವೆಗೊಳಪಡಿಸಬೇಕು. ಇತರೇ ಖಾಸಗಿ ಬ್ಯಾಂಕ್‌ಗಳಿಗೆ ಹೋಲಿಸಲಾಗಿ ಹೆಚ್ಚಿನ ಪ್ರಮಾಣದಲ್ಲಿ ಖಾಸಗಿ ಬ್ಯಾಂಕಿನಲ್ಲಿ ಹಣ ಕೊಡುತ್ತಿದ್ದಾರೆ. ಶೀಘ್ರವೇ ಸಿಂಡಿಕೇಟ್‌ ಬ್ಯಾಂಕ್‌ನಲ್ಲಿ ಗ್ರಾಹಕರ ಬೇಡಿಕೆಗನುಗುಣವಾಗಿ ಹಣ ವಿತರಿಸಬೇಕು. 15 ದಿನಗಳಲ್ಲಿ ಬೇಡಿಕೆ ಈಡೇರಿಸಬೇಕು ಎಂದು ಒತ್ತಾಯಿಸಿದ್ದಾರೆ.

ಮನವಿ ಸ್ವೀಕರಿಸಿದ ವ್ಯವಸ್ಥಾಪಕ ಎಸ್‌.ಎಂ. ಬೂದಿಹಾಳ ಮಾತನಾಡಿ, ಎಟಿಎಂ ನಲ್ಲಿ ಸುಮಾರು 20 ಲಕ್ಷಗಟ್ಟಲೇ
ಹಾಕುತ್ತಿದ್ದೇವೆ. ಬೇಗನೆ ಡ್ರಾ ಮಾಡಿಕೊಳ್ಳುತ್ತಿದ್ದರ ಪರಿಣಾಮ ಹಣ ಕೊರತೆ ಉಂಟಾಗುತ್ತದೆ. ಮೇಲಧಿಕಾರಿಗಳ ಗಮನಕ್ಕೆ ತಂದು 15 ದಿನದೊಳಗೆ ಸರಿಪಡಿಸುವ ಭರವಸೆ ನೀಡಿದರು.

ವರ್ತಕರಾದ ಮಲ್ಲಿಕಾರ್ಜುನ ಸ್ಥಾವರಮಠ, ಉಮೇಶ ಇಲಕಲ್‌, ಚಂದ್ರು ಗಂಗನಗೌಡ, ಸುಭಾಸ ಡಿಗ್ಗಿ, ವೀರೇಶ
ಇಲಕಲ್‌, ಎ.ಎಚ್‌. ಹಣಗಿ, ಕೆ.ಐ. ಖತೀಬ, ಎಸ್‌.ಪಿ. ಜೋಶಿ, ಬಿ.ಎಂ. ಹುಡೇದ, ವೀರೇಶ ಕಂದಗಲ್‌, ಬಿ.ವೈ.
ಜೈನಾಪುರ, ಶಶಿ ಕಂದಗಲ್‌, ಕೆ.ಪಿ. ಕೊಣ್ಣೂರ, ಅಬ್ದುಲಗನಿ ಅವಟಿ (ದೇಸಾಯಿ), ಬಿ.ಕೆ. ಅವಟಿ, ಎನ್‌.ಎ. ಕಂದಗಲ್‌
ಇದ್ದರು. 

ಟಾಪ್ ನ್ಯೂಸ್

1-wqeqqwe

Vote; ಕರ್ನಾಟಕ ಮೊದಲ ಹಂತ: ಶೇಕಡಾವಾರು ಮತದಾನದ ವಿವರ

voter

Chamarajanagar; ಮತದಾನ ಮಾಡಬೇಕೋ ಬೇಡವೋ ಎಂದು EVM ಗಳೇ ಧ್ವಂಸ !

1-wqeqewqe

EVM ಕುರಿತು ಸುಪ್ರೀಂ ತೀರ್ಪು ಪ್ರತಿಪಕ್ಷಗಳಿಗೆ ಕಪಾಳ ಮೋಕ್ಷ: ಪ್ರಧಾನಿ ಮೋದಿ

militry

Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ

shettar

Minority ತುಷ್ಟೀಕರಣದಿಂದ ನೇಹಾಳ ಹತ್ಯೆಯಾಗಿದೆ :ಜಗದೀಶ್ ಶೆಟ್ಟರ್

1-adasdsad

Davanagere; ಪ್ರಧಾನಿ ಮೋದಿ ರ್‍ಯಾಲಿಗೆ ಅನುಮತಿ ನೀಡಬಾರದು:ಕಾಂಗ್ರೆಸ್ ಮನವಿ

2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್‍ಯಾಂಕ್‌ ಪಡೆದ ತೀರ್ಥಹಳ್ಳಿಯ ಸುಚಿಂತ್

2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್‍ಯಾಂಕ್‌ ಪಡೆದ ತೀರ್ಥಹಳ್ಳಿಯ ಸುಚಿಂತ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-asaa

Vijaypura:ರಾಹುಲ್ ಗಾಂಧಿ ನಿರ್ಗಮಿಸುವಾಗ ವೇದಿಕೆಗೆ ಬಂದ ಸಿದ್ದರಾಮಯ್ಯ

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್

13-

Muddebihal: ಅಪರಿಚಿತ ವಾಹನ ಡಿಕ್ಕಿ: ಯುವಕ ಸಾವು

Vijayapura; Complaint to Election Commission against Yatnal: Shivananda Patil

Vijayapura; ಯತ್ನಾಳ್ ವಿರುದ್ಧ ಚುನಾವಣಾ ಆಯೋಗಕ್ಕೆ ದೂರು: ಶಿವಾನಂದ ಪಾಟೀಲ

Vijayapura; ಚುನಾವಣಾ ಬಾಂಡ್ ತನಿಖೆಯಾದರೆ ಮೋದಿ ಜೈಲಿಗೆ: ಎಂ.ಬಿ. ಪಾಟೀಲ್

Vijayapura; ಚುನಾವಣಾ ಬಾಂಡ್ ತನಿಖೆಯಾದರೆ ಮೋದಿ ಜೈಲಿಗೆ: ಎಂ.ಬಿ. ಪಾಟೀಲ್

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-wqeqqwe

Vote; ಕರ್ನಾಟಕ ಮೊದಲ ಹಂತ: ಶೇಕಡಾವಾರು ಮತದಾನದ ವಿವರ

voter

Chamarajanagar; ಮತದಾನ ಮಾಡಬೇಕೋ ಬೇಡವೋ ಎಂದು EVM ಗಳೇ ಧ್ವಂಸ !

1-wqeqewqe

EVM ಕುರಿತು ಸುಪ್ರೀಂ ತೀರ್ಪು ಪ್ರತಿಪಕ್ಷಗಳಿಗೆ ಕಪಾಳ ಮೋಕ್ಷ: ಪ್ರಧಾನಿ ಮೋದಿ

militry

Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ

shettar

Minority ತುಷ್ಟೀಕರಣದಿಂದ ನೇಹಾಳ ಹತ್ಯೆಯಾಗಿದೆ :ಜಗದೀಶ್ ಶೆಟ್ಟರ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.